ETV Bharat / state

ಉಪ ಚುನಾವಣಾ ಫಲಿತಾಂಶ ಗಮನಿಸಿ ಸೋನಿಯಾ ಭೇಟಿಯಾಗಲು ಮೂಲ ಕಾಂಗ್ರೆಸಿಗರ ನಿರ್ಧಾರ

author img

By

Published : Dec 8, 2019, 8:15 PM IST

ಉಪಚುನಾವಣೆ ಫಲಿತಾಂಶ ಬಂದ ಬಳಿಕ ಸೋನಿಯಾ ಗಾಂಧಿ ಭೇಟಿ ಮಾಡಲು ರಾಜ್ಯದ ಮೂಲ ಕಾಂಗ್ರೆಸಿಗರು ನಿರ್ಧರಿಸಿದ್ದಾರೆ ಎಂದು ಹೇಳಲಾಗ್ತಿದೆ.

Congress leaders took decision to meet Sonia Gandhi after by election result
ಉಪ ಚುನಾವಣಾ ಫಲಿತಾಂಶ ಗಮನಿಸಿ ಸೋನಿಯಾ ಗಾಂಧಿ ಭೇಟಿಯಾಗಲು ಮೂಲ ಕಾಂಗ್ರೆಸ್ ನಾಯಕರ ನಿರ್ಧಾರ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಬಂದ ಬಳಿಕ ಸೋನಿಯಾ ಗಾಂಧಿ ಭೇಟಿ ಮಾಡಲು ರಾಜ್ಯದ ಮೂಲ ಕಾಂಗ್ರೆಸಿಗರು ನಿರ್ಧರಿಸಿದ್ದಾರೆ ಎನ್ನಲಾಗ್ತಿದೆ.

ಉಪಚುನಾವಣಾ ಫಲಿತಾಂಶ ಪಕ್ಷಕ್ಕೆ ವ್ಯತಿರಿಕ್ತವಾಗಿ ಬಂದರೆ ಎಲ್ಲಾ ಮೂಲ ಕಾಂಗ್ರೆಸಿಗರು ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಮಾತನಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಇದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ವಿರುದ್ಧ ದೂರುಗಳನ್ನು ನೀಡುವ ಸಾಧ್ಯತೆ ಇದೆ. ದೂರಿನಲ್ಲಿ ಮುಖ್ಯವಾಗಿ ಕೆ.ಸಿ. ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರ ಮಾತನ್ನು ಬಿಟ್ಟರೆ ನಮ್ಮ ಹಿರಿಯ ನಾಯಕರ ಅಭಿಪ್ರಾಯವನ್ನು ಕೇಳುತ್ತಿಲ್ಲ ಎಂದು ದೂರಲು ನಿರ್ಧರಿಸಿದ್ದಾರೆ. ಜೊತೆಗೆ ನಮ್ಮ ಸಲಹೆ ಸೂಚನೆಗಳನ್ನು ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪ ಸಹ ಆ ದೂರಿನಲ್ಲಿದೆ.

ಉಪಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಮ್ಮನ್ನು ಒಂದು ಮಾತು ಸಭೆಗೆ ಕರೆದಿಲ್ಲ. ಜೊತೆಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಆದಷ್ಟು ಬೇಗ ಬದಲಾವಣೆ ಮಾಡಬೇಕು. ಪಕ್ಷದ ಪದಾಧಿಕಾರಿಗಳನ್ನು ಕೂಡ ಆದಷ್ಟು ಬೇಗ ನೇಮಿಸಬೇಕು. ಮೂಲ, ವಲಸಿಗ ಕಾಂಗ್ರೆಸಿಗರು ಎಂಬ ಮಾತುಗಳು ದಿನೇ ದಿನೇ ಪಕ್ಷದ ಒಳಗೆ ಹೆಚ್ಚಾಗುತ್ತಿವೆ. ಇದು ಮಾಧ್ಯಮಗಳಲ್ಲೂ ನಿರಂತರವಾಗಿ ಬಿತ್ತರವಾಗುತ್ತಿದೆ ಎಂಬ ಅಂಶವನ್ನು ಕೂಡ ಹೈಕಮಾಂಡ್ ಗಮನಕ್ಕೆ ತರಲಿದ್ದಾರೆ.

ಮೂಲ ಕಾಂಗ್ರೆಸಿಗರ ತಂಡದಲ್ಲಿ ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ, ಬಿ.ಕೆ ಹರಿಪ್ರಸಾದ್, ರೆಹಮಾನ್ ಖಾನ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಸೇರಿದಂತೆ ಹಲವು ಹಿರಿಯ ನಾಯಕರು ಇದ್ದಾರೆ. ಹೈಕಮಾಂಡ್​ಗೆ ಈ ರೀತಿಯಲ್ಲಿ ದೂರು ನೀಡಲು ಇವರೆಲ್ಲ ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ. ನಾಳೆ ವಿಧಾನಸಭೆ ಉಪಚುನಾವಣೆಯ 15 ಕ್ಷೇತ್ರಗಳ ಫಲಿತಾಂಶ ಗಮನಿಸಿ ದಿಲ್ಲಿಗೆ ಯಾವಾಗ ತೆರಳುವುದು ಎಂಬ ಕುರಿತು ನಿರ್ಧಾರ ಕೈಗೊಳ್ಳಲು ಮೂಲ ಕಾಂಗ್ರೆಸ್ ನಾಯಕರು ಒಂದೆಡೆ ಸೇರಿ ಸಭೆ ನಡೆಸುವ ಸಾಧ್ಯತೆ ಇದೆ ಎಂದು. ಬೆಂಗಳೂರಿನ ಯಾವುದಾದರೂ ನಾಯಕರ ನಿವಾಸ ಇಲ್ಲವೇ ಹೋಟೆಲ್​ನಲ್ಲಿ ಸಭೆ ನಡೆಸಲು ಯೋಚಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಉಪಚುನಾವಣೆ ಫಲಿತಾಂಶ ಬಂದ ಬಳಿಕ ಸೋನಿಯಾ ಗಾಂಧಿ ಭೇಟಿ ಮಾಡಲು ರಾಜ್ಯದ ಮೂಲ ಕಾಂಗ್ರೆಸಿಗರು ನಿರ್ಧರಿಸಿದ್ದಾರೆ ಎನ್ನಲಾಗ್ತಿದೆ.

ಉಪಚುನಾವಣಾ ಫಲಿತಾಂಶ ಪಕ್ಷಕ್ಕೆ ವ್ಯತಿರಿಕ್ತವಾಗಿ ಬಂದರೆ ಎಲ್ಲಾ ಮೂಲ ಕಾಂಗ್ರೆಸಿಗರು ಎಐಸಿಸಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಮಾತನಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಇದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ವಿರುದ್ಧ ದೂರುಗಳನ್ನು ನೀಡುವ ಸಾಧ್ಯತೆ ಇದೆ. ದೂರಿನಲ್ಲಿ ಮುಖ್ಯವಾಗಿ ಕೆ.ಸಿ. ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರ ಮಾತನ್ನು ಬಿಟ್ಟರೆ ನಮ್ಮ ಹಿರಿಯ ನಾಯಕರ ಅಭಿಪ್ರಾಯವನ್ನು ಕೇಳುತ್ತಿಲ್ಲ ಎಂದು ದೂರಲು ನಿರ್ಧರಿಸಿದ್ದಾರೆ. ಜೊತೆಗೆ ನಮ್ಮ ಸಲಹೆ ಸೂಚನೆಗಳನ್ನು ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪ ಸಹ ಆ ದೂರಿನಲ್ಲಿದೆ.

ಉಪಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಮ್ಮನ್ನು ಒಂದು ಮಾತು ಸಭೆಗೆ ಕರೆದಿಲ್ಲ. ಜೊತೆಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಆದಷ್ಟು ಬೇಗ ಬದಲಾವಣೆ ಮಾಡಬೇಕು. ಪಕ್ಷದ ಪದಾಧಿಕಾರಿಗಳನ್ನು ಕೂಡ ಆದಷ್ಟು ಬೇಗ ನೇಮಿಸಬೇಕು. ಮೂಲ, ವಲಸಿಗ ಕಾಂಗ್ರೆಸಿಗರು ಎಂಬ ಮಾತುಗಳು ದಿನೇ ದಿನೇ ಪಕ್ಷದ ಒಳಗೆ ಹೆಚ್ಚಾಗುತ್ತಿವೆ. ಇದು ಮಾಧ್ಯಮಗಳಲ್ಲೂ ನಿರಂತರವಾಗಿ ಬಿತ್ತರವಾಗುತ್ತಿದೆ ಎಂಬ ಅಂಶವನ್ನು ಕೂಡ ಹೈಕಮಾಂಡ್ ಗಮನಕ್ಕೆ ತರಲಿದ್ದಾರೆ.

ಮೂಲ ಕಾಂಗ್ರೆಸಿಗರ ತಂಡದಲ್ಲಿ ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ, ಬಿ.ಕೆ ಹರಿಪ್ರಸಾದ್, ರೆಹಮಾನ್ ಖಾನ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಸೇರಿದಂತೆ ಹಲವು ಹಿರಿಯ ನಾಯಕರು ಇದ್ದಾರೆ. ಹೈಕಮಾಂಡ್​ಗೆ ಈ ರೀತಿಯಲ್ಲಿ ದೂರು ನೀಡಲು ಇವರೆಲ್ಲ ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ. ನಾಳೆ ವಿಧಾನಸಭೆ ಉಪಚುನಾವಣೆಯ 15 ಕ್ಷೇತ್ರಗಳ ಫಲಿತಾಂಶ ಗಮನಿಸಿ ದಿಲ್ಲಿಗೆ ಯಾವಾಗ ತೆರಳುವುದು ಎಂಬ ಕುರಿತು ನಿರ್ಧಾರ ಕೈಗೊಳ್ಳಲು ಮೂಲ ಕಾಂಗ್ರೆಸ್ ನಾಯಕರು ಒಂದೆಡೆ ಸೇರಿ ಸಭೆ ನಡೆಸುವ ಸಾಧ್ಯತೆ ಇದೆ ಎಂದು. ಬೆಂಗಳೂರಿನ ಯಾವುದಾದರೂ ನಾಯಕರ ನಿವಾಸ ಇಲ್ಲವೇ ಹೋಟೆಲ್​ನಲ್ಲಿ ಸಭೆ ನಡೆಸಲು ಯೋಚಿಸಲಾಗಿದೆ ಎಂದು ತಿಳಿದುಬಂದಿದೆ.

Intro:newsBody:ಚುನಾವಣಾ ಫಲಿತಾಂಶ ಗಮನಿಸಿ ಸೋನಿಯಾ ಭೇಟಿಯಾಗಲು ಮೂಲ ಕಾಂಗ್ರೆಸ್ ನಾಯಕರ ನಿರ್ಧಾರ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಬಂದ ಬಳಿಕ ಸೋನಿಯಾ ಗಾಂಧಿ ಭೇಟಿ ಮಾಡಲು ರಾಜ್ಯದ ಮೂಲ ಕಾಂಗ್ರೆಸಿಗರು ನಿರ್ಧರಿಸಿದ್ದಾರೆ.
ಉಪಚುನಾವಣಾ ಫಲಿತಾಂಶ ಪಕ್ಷಕ್ಕೆ ವ್ಯತಿರಿಕ್ತವಾಗಿ ಬಂದರೆ ಎಲ್ಲಾ ಮೂಲ ಕಾಂಗ್ರೆಸಿಗರು ತಮ್ಮ ಹೈಕಮಾಂಡ್ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಮಾತನಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಇದೆ.
ಕಾಂಗ್ರೆಸ್ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ , ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ವಿರುದ್ಧ ಸಾಲು ಸಾಲು ದೂರುಗಳನ್ನು ನೀಡುವ ಸಾಧ್ಯತೆ ಇದೆ. ದೂರಿನಲ್ಲಿ ಅತ್ಯಂತ ಮುಖ್ಯವಾಗಿ ಕೆ ಸಿ ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರ ಮಾತನ್ನು ಬಿಟ್ಟರೆ ನಮ್ಮ ಹಿರಿಯ ನಾಯಕರ ಅಭಿಪ್ರಾಯವನ್ನು ಕೇಳುತ್ತಿಲ್ಲ ಎಂದು ದೂರಲು ನಿರ್ಧರಿಸಿದ್ದಾರೆ. ಜೊತೆಗೆ ನಮ್ಮ ಸಲಹೆ ಸೂಚನೆಗಳನ್ನು ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಲು ತೀರ್ಮಾನಿಸಿದ್ದಾರೆ.
ಉಪಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಮ್ಮನ್ನು ಒಂದು ಮಾತು ಸಭೆಗೆ ಕರೆದಿಲ್ಲ. ಅವರಿಗೆ ಯಾರು ಆಪ್ತರಿದ್ದಾರೋ ಅವರ ಹೆಸರುಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ರು. ಫಲಿತಾಂಶ ಈ ರೀತಿಯಲ್ಲಿ ಬರುವುದಕ್ಕೆ ಸಿದ್ದರಾಮಯ್ಯ , ಕೆ ಸಿ ವೇಣುಗೋಪಾಲ್ ಅವರೇ ಮುಖ್ಯ ಕಾರಣ ಎಂದು ಸಾಲು ಸಾಲು ದೂರು ನೀಡಲು ನಿರ್ಧರಿಸಿದ್ದಾರೆ.
ಜೊತೆಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಆದಷ್ಟು ಬೇಗ ಬದಲಾವಣೆ ಮಾಡಬೇಕು. ಪಕ್ಷದ ಪದಾಧಿಕಾರಿಗಳನ್ನು ಕೂಡ ಆದಷ್ಟು ಬೇಗ ನೇಮಿಸಬೇಕು. ಮೂಲ, ವಲಸಿಗ ಕಾಂಗ್ರೆಸಿಗರು ಎಂಬ ಮಾತುಗಳು ದಿನೇ ದಿನೇ ಪಕ್ಷದ ಒಳಗೆ ಹೆಚ್ಚಾಗುತ್ತಿವೆ ಇದು ಮಾಧ್ಯಮಗಳಲ್ಲು ನಿರಂರವಾಗಿ ಹೆಚ್ಚು ಬಿತ್ತರವಾಗುತ್ತಿದೆ ಎಂಬ ಅಂಶವನ್ನು ಕೂಡ ಹೈಕಮಾಂಡ್ ಗಮನಕ್ಕೆ ತರಲು ಮೂಲ ಕಾಂಗ್ರೆಸ್ಸಿಗರು ನಿರ್ಧರಿಸಿದ್ದಾರೆ.
ಮೂಲ ಕಾಂಗ್ರೆಸ್ಸಿಗರ ತಂಡದಲ್ಲಿ ಮಾಜಿ ಸಂಸದ ಕೆ ಎಚ್ ಮುನಿಯಪ್ಪ, ಬಿಕೆ ಹರಿಪ್ರಸಾದ್, ರೆಹಮಾನ್ ಖಾನ್ ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಸೇರಿದಂತೆ ಹಲವು ಹಿರಿಯ ನಾಯಕರು ಇದ್ದಾರೆ. ಹೈಕಮಾಂಡ್ ಗೆ ಈ ರೀತಿಯಲ್ಲಿ ದೂರು ನೀಡಲು ಇವರೆಲ್ಲ ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ. ನಾಳೆ ವಿಧಾನಸಭೆ ಉಪಚುನಾವಣೆ 15 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ. ಮಧ್ಯಾಹ್ನದ ಹೊತ್ತಿಗೆ ಕಾಂಗ್ರೆಸ್ನ ಪರಿಸ್ಥಿತಿ ಏನು ಎನ್ನುವುದು ಅರಿವಾಗಲಿದೆ. ಇದನ್ನು ಗಮನಿಸಿ ದಿಲ್ಲಿಗೆ ಯಾವಾಗ ತೆರಳುವುದು ಎಂಬ ಕುರಿತು ನಿರ್ಧಾರ ಕೈಗೊಳ್ಳಲು ಮೂಲ ಕಾಂಗ್ರೆಸ್ ನಾಯಕರು ಒಂದೆಡೆ ಸೇರಿ ಸಭೆ ನಡೆಸುವ ಸಾಧ್ಯತೆ ಇದೆ. ಬೆಂಗಳೂರಿನ ಯಾವುದಾದರೂ ನಾಯಕರ ನಿವಾಸ ಇಲ್ಲವೇ ಹೋಟೆಲ್ನಲ್ಲಿ ಸಭೆ ನಡೆಸಲು ಯೋಚಿಸಲಾಗಿದೆ.
ಮತ್ತೊಮ್ಮೆ ಸಿದ್ದರಾಮಯ್ಯ ನಾಯಕತ್ವವನ್ನು ಪ್ರಶ್ನಿಸುವ ಕಾರ್ಯಕ್ಕೆ ಕೆಲ ಮೂಲ ಕಾಂಗ್ರೆಸ್ಸಿಗರು ಮುಂದಾಗಿದ್ದು ಇದರಲ್ಲಿ ಎಷ್ಟರಮಟ್ಟಿಗೆ ಸಫಲತೆ ಕಾಣಲಿದ್ದಾರೆ ಎನ್ನುವುದಕ್ಕೆ ಕಾಲವೇ ಉತ್ತರಿಸಲಿದೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.