ETV Bharat / state

ಅನರ್ಹ ಶಾಸಕರ ಕ್ಷೇತ್ರಗಳನ್ನು ಗೆಲ್ಲೋಕೆ ಕಾಂಗ್ರೆಸ್​ ಭರ್ಜರಿ​​​​​ ರಣತಂತ್ರ!

author img

By

Published : Sep 14, 2019, 2:00 PM IST

17 ಅನರ್ಹ ಶಾಸಕರ ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳ ಕುರಿತು ಸರಣಿ ಸಭೆ ಹಾಗೂ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಸೇರಿ ಚರ್ಚಿಲಾಯಿತು.

ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾದ 17 ಶಾಸಕರ ಅನರ್ಹತೆಯಿಂದ ತೆರವಾಗಿರುವ ಎಲ್ಲಾ ಕ್ಷೇತ್ರಗಳನ್ನೂ ಗೆಲ್ಲಲು ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಅಗತ್ಯ ಬಿದ್ದರೆ ಬಿಜೆಪಿ ಹಾಗೂ ಜೆಡಿಎಸ್​​​​ನಿಂದ ಪ್ರಭಾವಿ ನಾಯಕರನ್ನು ಸೆಳೆಯಲು ಮುಂದಾಗಿದೆ ಎನ್ನಲಾಗಿದೆ.

Congress ready for by-election
ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ನಗರದ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಬೆಳಗ್ಗಿಯಿಂದ ಸಂಜೆಯವರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮೊದಲ ಹಂತದಲ್ಲಿ 11 ವಿಧಾನಸಭೆ ಕ್ಷೇತ್ರಗಳ ಮುಖಂಡರ ಜೊತೆ ರಾಜ್ಯ ಕಾಂಗ್ರೆಸ್ ನಾಯಕರು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಅನರ್ಹ ಶಾಸಕರ ಕ್ಷೇತ್ರಗಳ ಪೈಕಿ ಚಿಕ್ಕಬಳ್ಳಾಪುರ, ಕೆಆರ್ ಪೇಟೆ, ಹುಣಸೂರು, ಮಸ್ಕಿ, ಯಲ್ಲಾಪುರ, ಗೋಕಾಕ್, ಅಥಣಿ, ಕಾಗವಾಡ, ಹಿರೇಕೆರೂರು, ರಾಣೇಬೆನ್ನೂರು ಹಾಗೂ ಬಳ್ಳಾರಿಯ ವಿಜಯನಗರ ವಿಧಾನಸಭಾ ಕ್ಷೇತ್ರಗಳ ಮುಖಂಡರ ಜೊತೆ ಸಭೆ ನಡೆಯಲಿದೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ಶಿವಶಂಕರ ರೆಡ್ಡಿ, ಚಿಕ್ಕಬಳ್ಳಾಪುರ ಸುಧಾಕರ್ ರಾಜೀನಾಮೆಯಿಂದ ತೆರವಾಗಿದೆ. ಅಭ್ಯರ್ಥಿ ಆಯ್ಕೆ‌ ಬಗ್ಗೆ ಸಲಹೆ ನೀಡಿದ್ದಾರೆ. ಪಕ್ಷ ಸಂಘಟನೆಯ ಬಗ್ಗೆಯೂ ಸಲಹೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ. ಗೆಲ್ಲುವಂತಹ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದರು.

ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪರ್ಯಾಯ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗುತ್ತಿದೆ ಎಂದರು.

ಸುಪ್ರೀಂಕೋರ್ಟ್​ನಲ್ಲಿ ಅನರ್ಹ ಶಾಸಕರ ವಿಚಾರಣೆ ಶೀಘ್ರವೇ ಬರಲಿದ್ದು, ಆದಷ್ಟು ಬೇಗ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಎಲ್ಲ ರೀತಿಯ ಸಿದ್ಧತೆ ಆರಂಭಿಸಿವೆ ಎನ್ನಲಾಗಿದೆ.

ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾದ 17 ಶಾಸಕರ ಅನರ್ಹತೆಯಿಂದ ತೆರವಾಗಿರುವ ಎಲ್ಲಾ ಕ್ಷೇತ್ರಗಳನ್ನೂ ಗೆಲ್ಲಲು ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಅಗತ್ಯ ಬಿದ್ದರೆ ಬಿಜೆಪಿ ಹಾಗೂ ಜೆಡಿಎಸ್​​​​ನಿಂದ ಪ್ರಭಾವಿ ನಾಯಕರನ್ನು ಸೆಳೆಯಲು ಮುಂದಾಗಿದೆ ಎನ್ನಲಾಗಿದೆ.

Congress ready for by-election
ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ನಗರದ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಬೆಳಗ್ಗಿಯಿಂದ ಸಂಜೆಯವರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮೊದಲ ಹಂತದಲ್ಲಿ 11 ವಿಧಾನಸಭೆ ಕ್ಷೇತ್ರಗಳ ಮುಖಂಡರ ಜೊತೆ ರಾಜ್ಯ ಕಾಂಗ್ರೆಸ್ ನಾಯಕರು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಅನರ್ಹ ಶಾಸಕರ ಕ್ಷೇತ್ರಗಳ ಪೈಕಿ ಚಿಕ್ಕಬಳ್ಳಾಪುರ, ಕೆಆರ್ ಪೇಟೆ, ಹುಣಸೂರು, ಮಸ್ಕಿ, ಯಲ್ಲಾಪುರ, ಗೋಕಾಕ್, ಅಥಣಿ, ಕಾಗವಾಡ, ಹಿರೇಕೆರೂರು, ರಾಣೇಬೆನ್ನೂರು ಹಾಗೂ ಬಳ್ಳಾರಿಯ ವಿಜಯನಗರ ವಿಧಾನಸಭಾ ಕ್ಷೇತ್ರಗಳ ಮುಖಂಡರ ಜೊತೆ ಸಭೆ ನಡೆಯಲಿದೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ಶಿವಶಂಕರ ರೆಡ್ಡಿ, ಚಿಕ್ಕಬಳ್ಳಾಪುರ ಸುಧಾಕರ್ ರಾಜೀನಾಮೆಯಿಂದ ತೆರವಾಗಿದೆ. ಅಭ್ಯರ್ಥಿ ಆಯ್ಕೆ‌ ಬಗ್ಗೆ ಸಲಹೆ ನೀಡಿದ್ದಾರೆ. ಪಕ್ಷ ಸಂಘಟನೆಯ ಬಗ್ಗೆಯೂ ಸಲಹೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ. ಗೆಲ್ಲುವಂತಹ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದರು.

ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪರ್ಯಾಯ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗುತ್ತಿದೆ ಎಂದರು.

ಸುಪ್ರೀಂಕೋರ್ಟ್​ನಲ್ಲಿ ಅನರ್ಹ ಶಾಸಕರ ವಿಚಾರಣೆ ಶೀಘ್ರವೇ ಬರಲಿದ್ದು, ಆದಷ್ಟು ಬೇಗ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಎಲ್ಲ ರೀತಿಯ ಸಿದ್ಧತೆ ಆರಂಭಿಸಿವೆ ಎನ್ನಲಾಗಿದೆ.

Intro:newsBody:ಅನರ್ಹ ಶಾಸಕರ ಕ್ಷೇತ್ರ ಗೆಲ್ಲೋಕೆ ಕಾಂಗ್ರೆಸ್ ರಣತಂತ್ರ, ಆರು ಕ್ಷೇತ್ರಗಳ ಸರಣಿ ಸಭೆ ಆರಂಭ

ಬೆಂಗಳೂರು: ಇಂದು ಅನರ್ಹರ ಕ್ಷೇತ್ರಗಳ ಮುಖಂಡರ ಜೊತೆ ಸಭೆ ಕಾಂಗ್ರೆಸ್ ಕಚೇರಿಯಲ್ಲಿ ಆರಂಭವಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ ಆರಂಭವಾಗಿದೆ.
ಚಿಕ್ಕಬಳ್ಳಾಪುರ, ಹಿರೇಕೆರೂರು, ರಾಣೆಬೆನ್ನೂರು, ಹುಣಸೂರು, ಮಸ್ಕಿ, ಕೆ.ಆರ್ ಪೇಟೆ ಕ್ಷೇತ್ರಗಳ ಮುಖಂಡರ ಸಭೆ ನಡೆಯಲಿದ್ದು ಸದ್ಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸಭೆ ಆರಂಭವಾಗಿದೆ.
ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪರ್ಯಾಯ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
ಉಪಚುನಾವಣೆ ಎದುರಾಗುವ ಸಾಧ್ಯತೆ ಹಿನ್ನೆಲೆ ಹೆಚ್ಚು ಕ್ಷೇತ್ರ ಗೆಲ್ಲೋಕೆ ಕೈ ನಾಯಕರ ರಣತಂತ್ರ ಹೆಣೆದಿದೆ.
ಹಲೋ ನಿನ್ನೆಯಷ್ಟೇ ಅನರ್ಹ ಶಾಸಕರು ಬೆಂಗಳೂರಿನಲ್ಲಿ ಸಭೆ ಸೇರಿ ಚರ್ಚಿಸಿದ ಇಂದು ಕಾಂಗ್ರೆಸ್ ಪಕ್ಷ ಕೂಡ ಸಭೆ ನಡೆಸುತ್ತಿದೆ. ಈ ಎಲ್ಲಾ ಬೆಳವಣಿಗೆ ಗಮನಿಸುತ್ತಿದ್ದರೆ ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ವಿಚಾರಣೆ ಶೀಘ್ರವೇ ಬರಲಿದ್ದು ಆದಷ್ಟು ಬೇಗ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ ಎಂಬ ಸನ್ನಿವೇಶ ಗೋಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಸರ್ವ ರೀತಿಯ ಸಿದ್ಧತೆ ಆರಂಭಿಸಿದ್ದು, ಕಾಂಗ್ರೆಸ್ ನಾಯಕರು ಇಂದು ಆರು ಕ್ಷೇತ್ರಗಳ ಮುಖಂಡರ ಸಭೆ ನಡೆಸಲಿದ್ದಾರೆ.
ಚಿಕ್ಕಬಳ್ಳಾಪುರ ಸಭೆ
ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿರುವ ಡಾ ಕೆ ಸುಧಾಕರ್ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದ್ದು, ಸಭೆಯಲ್ಲಿ ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕ ಸಂಪಂಗಿ ಮತ್ತಿತರರು ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಸಂಸದ ವೀರಪ್ಪಮೊಯಿಲಿ ಅವರ ಶಿಷ್ಯ ಆಂಜಿನಪ್ಪ ಅವರನ್ನು ಜೆಡಿಎಸ್ ನಿಂದ ಕಾಂಗ್ರೆಸ್ಗೆ ಮರಳಿ ಕರೆತಂದು ಅಭ್ಯರ್ಥಿ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಶಿಡ್ಲಘಟ್ಟ ಶಾಸಕ ವಿ ಮುನಿಯಪ್ಪ ಹಾಗೂ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸಭೆಯಲ್ಲಿ ಉಪಸ್ಥಿತರಿದ್ದು ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಸಭೆಗೆ ಗೈರು ಹಾಜರಾಗಿದ್ದಾರೆ. ಸಭೆಗೆ ಆಗಮಿಸಲು ಸಾಧ್ಯವಿಲ್ಲ ಎಂದು ಅವರು ಮುಂಚಿತವಾಗಿಯೇ ತಿಳಿಸಿದ್ದಾರೆ ಎನ್ನಲಾಗಿದೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.