ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮೈತ್ರಿ ಸರ್ಕಾರ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿದ್ದರೂ ಕುರುಕ್ಷೇತ್ರ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆಶಿ ತೆರಳಿದ್ದಾರೆ.
ಇನ್ನು ಇಂತಹ ಬಿಗಿ ರಾಜಕೀಯ ಒತ್ತಡದ ನಡುವೆಯೂ ಡಿಕೆಶಿ ಆಡಿಯೋ ಲಾಂಚ್ಗೆ ತೆರಳಿದ್ದು, ಈ ವೇಳೆ ಅವರು ಅತೃಪ್ತ ಶಾಸಕ ಮುನಿರತ್ನ ಅವರ ಮನವೂಲಿಸಿ ರಾಜೀನಾಮೆ ವಾಪಸ್ ಪಡೆಯುವಂತೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಈ ವೇಳೆ ಡಿ.ಕೆ.ಸುರೇಶ್ ಹಾಗೂ ಎಂಎಲ್ಸಿ ರವಿ ಡಿಕೆಶಿಗೆ ಸಾಥ್ ನೀಡಿದ್ದಾರೆ.