ETV Bharat / state

ಸಂಸದ ಹೆಗಡೆಯನ್ನು ಸಮರ್ಥಿಸಿಕೊಂಡ ಸಚಿವ ಜೋಶಿ: ವಿ.ಎಸ್.ಉಗ್ರಪ್ಪ ಆರೋಪ

author img

By

Published : Feb 4, 2020, 4:33 PM IST

ಮಹಾತ್ಮ ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಅನಂತ್ ಕುಮಾರ್ ಹೆಗಡೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸಮರ್ಥಿಸಿಕೊಂಡಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್​.ಉಗ್ರಪ್ಪ ಆರೋಪಿಸಿದ್ದಾರೆ.

Congress upset over Gandhiji's derision: farmer minister ugrappa
ಮಾಜಿ ಸಂಸದ ವಿ.ಎಸ್.ಉಗ್ರಪ್ಪ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಅನಂತ್ ಕುಮಾರ್ ಹೆಗಡೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸಮರ್ಥಿಸಿಕೊಂಡಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್​.ಉಗ್ರಪ್ಪ ಆರೋಪಿಸಿದ್ದಾರೆ.

Congress upset over Gandhiji's derision: farmer minister ugrappa
ಮಾಜಿ ಸಂಸದ ವಿ.ಎಸ್.ಉಗ್ರಪ್ಪ

ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ಸಂಸತ್​ನಲ್ಲಿ ಗಾಂಧೀಜಿ ಕುರಿತ ಹೇಳಿಕೆಗೆ ಹೆಗಡೆ ಕ್ಷಮೆಯಾಚಿಸುತ್ತಾರೆ ಎಂದು ಕೊಂಡಿದ್ದೆವು. ಆದರೆ, ಆ ವಿಷಯ ಪ್ರಸ್ತಾಪವಾಗುತ್ತಿದ್ದಂತೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಗಡೆ ಹಾಗೇ ಹೇಳಿಕೆ ನೀಡಿಲ್ಲ ಎಂದು ಸಮರ್ಥಿಕೊಂಡಿರುವುದು ಬಿಜೆಪಿಯ ಕುಮ್ಮಕ್ಕನ್ನು ಎತ್ತಿತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಸುಮೋಟು ಅಡಿ ಹೆಗಡೆ ವಿರುದ್ಧ ದೂರು ದಾಖಲಿಸಬೇಕು. ಮೊದಲು ಸಂವಿಧಾನದ ಮೇಲೆ ದಾಳಿ, ಈಗ ರಾಷ್ಟ್ರಪಿತ ಗಾಂಧೀಜಿ ಮೇಲೆ ದಾಳಿ ನಡೆಸಿರುವ ಮನುವಾದಿಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಶಾಸಕ ಖಾದರ್, ಸಿದ್ದಗಂಗಾ ಮಠದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ 73 ಸಾವಿರ ಕೆಜಿ ಅಕ್ಕಿ, 36 ಸಾವಿರ ಕೆಜಿ ಗೋಧಿಗೆ ಈಗಿನ ಬಿಜೆಪಿ ಸರ್ಕಾರ ಕತ್ತರಿ ಹಾಕಿದೆ ಎಂದು ಕಿಡಿಕಾರಿದರು.

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಅನಂತ್ ಕುಮಾರ್ ಹೆಗಡೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸಮರ್ಥಿಸಿಕೊಂಡಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್​.ಉಗ್ರಪ್ಪ ಆರೋಪಿಸಿದ್ದಾರೆ.

Congress upset over Gandhiji's derision: farmer minister ugrappa
ಮಾಜಿ ಸಂಸದ ವಿ.ಎಸ್.ಉಗ್ರಪ್ಪ

ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ಸಂಸತ್​ನಲ್ಲಿ ಗಾಂಧೀಜಿ ಕುರಿತ ಹೇಳಿಕೆಗೆ ಹೆಗಡೆ ಕ್ಷಮೆಯಾಚಿಸುತ್ತಾರೆ ಎಂದು ಕೊಂಡಿದ್ದೆವು. ಆದರೆ, ಆ ವಿಷಯ ಪ್ರಸ್ತಾಪವಾಗುತ್ತಿದ್ದಂತೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಗಡೆ ಹಾಗೇ ಹೇಳಿಕೆ ನೀಡಿಲ್ಲ ಎಂದು ಸಮರ್ಥಿಕೊಂಡಿರುವುದು ಬಿಜೆಪಿಯ ಕುಮ್ಮಕ್ಕನ್ನು ಎತ್ತಿತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಸುಮೋಟು ಅಡಿ ಹೆಗಡೆ ವಿರುದ್ಧ ದೂರು ದಾಖಲಿಸಬೇಕು. ಮೊದಲು ಸಂವಿಧಾನದ ಮೇಲೆ ದಾಳಿ, ಈಗ ರಾಷ್ಟ್ರಪಿತ ಗಾಂಧೀಜಿ ಮೇಲೆ ದಾಳಿ ನಡೆಸಿರುವ ಮನುವಾದಿಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಶಾಸಕ ಖಾದರ್, ಸಿದ್ದಗಂಗಾ ಮಠದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ 73 ಸಾವಿರ ಕೆಜಿ ಅಕ್ಕಿ, 36 ಸಾವಿರ ಕೆಜಿ ಗೋಧಿಗೆ ಈಗಿನ ಬಿಜೆಪಿ ಸರ್ಕಾರ ಕತ್ತರಿ ಹಾಕಿದೆ ಎಂದು ಕಿಡಿಕಾರಿದರು.

Intro:newsBody:ಸಂಸತ್ತಿನಲ್ಲೂ ಅನಂತ್ ಕುಮಾರ್ ಹೆಗಡೆ ಪರ ನಿಂತ ಕೇಂದ್ರ ಬಿಜೆಪಿ, ಗಾಂಧಿ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಲಿ: ಉಗ್ರಪ್ಪ

ಬೆಂಗಳೂರು: ಗಾಂಧೀಜಿ ಬಗ್ಗೆ ಅನಂತ್ ಕುಮಾರ್ ಹೆಗಡೆ ಲಘುವಾಗಿ ಮಾತನಾಡಿದ್ದರು. ಇವತ್ತು ಸಂಸತ್ತಿನಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಅಲ್ಲಿನ ಚರ್ಚೆ ನೋಡಿದರೆ ಆಶ್ಚರ್ಯವಾಗ್ತಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಗಾಂಧೀಜಿಯವರ ಹೆಸರನ್ನ ಕೆಡಿಸೋಕೆ ಬಿಜೆಪಿಯವರು ಹೊರಟಿದ್ದಾರೆ. ಅನಂತ್ ಕುಮಾರ್ ಹೆಗಡೆ ಮೂಲಕ ಬಿಜೆಪಿಯವರೇ ಹೇಳಿಸಿದ್ದಾರೆ. ಇವತ್ತು ಕ್ಷಮೆಯಾಚಿಸುತ್ತಾರೆ ಎಂದು ತಿಳಿಸಿದ್ದೆವು. ಆದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನ ಸಮರ್ಥಿಸಿಕೊಳ್ಳುವ ಕಾರ್ಯ ಮಾಡಿದ್ದಾರೆ. ಹೆಗಡೆ ಹಾಗೆ ಹೇಳಿಯೇ ಇಲ್ಲ ಅಂತ ಡಿಫೆಂಡ್ ಮಾಡಿಕೊಂಡಿದ್ದಾರೆ. ಇದನ್ನ ನೋಡಿದರೆ ಬಿಜೆಪಿ ಕುಮ್ಮಕ್ಕು ಸ್ಪಷ್ಟವಾಗಿದೆ. ಗಾಂಧೀಜಿಯನ್ನ ಬಿಜೆಪಿ ಅಪಮಾನ ಮಾಡಿದೆ. ಮತ್ತೊಂದು ಕಡೆ ಅಂಬೇಡ್ಕರ್ ಅವರನ್ನೂ ಅವಮಾನಿಸಿದೆ ಎಂದರು.
ಬಿಜೆಪಿ ರಾಷ್ಟ್ರೀಯ ನಾಯಕ ಬಿ.ಎಲ್.ಸಂತೋಷ್ ಈಗ ಅಸಂತೋಷ್ ಆಗಿದ್ದಾರೆ. ಶೇ.68ರಷ್ಟು ಜನ ಹೊರಗಿನಿಂದ ಬಂದವರು ಅಂತಾರೆ. ಗಾಂಧೀಜಿ, ಅಂಬೇಡ್ಕರ್ ಬಗ್ಗೆ ಮಾತನಾಡಿದವರು ಮನುವಾದಿಗಳು. ಸುಮೋಟು ಅಡಿ ಇವರ ವಿರುದ್ಧ ಕೇಸ್ ದಾಖಲಿಸಬೇಕು. ವಾಲ್ಮೀಕಿ ಸಮುದಾಯಕ್ಕೂ ಅಪಮಾನ ಮಾಡಿದ್ದಾರೆ. ಭಾವನೆಗಳಿಗೆ ಸಂತೋಷ್ ಧಕ್ಕೆ ತಂದಿದ್ದಾರೆ. ಶ್ರೀರಾಮುಲು ಯಾಕೆ ಬಾಯ್ಬಿಡ್ತಿಲ್ಲ ಗೊತ್ತಿಲ್ಲ. ವಾಲ್ಮೀಕಿ ಶ್ರೀಗಳು ಯಾಕೆ ಮಾತನಾಡ್ತಿಲ್ಲ ಗೊತ್ತಿಲ್ಲ ಎಂದು ವಾಲ್ಮೀಕಿ ಬಗ್ಗೆ ಸಂತೋಷ್ ಹೇಳಿಕೆಗೆ ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದಗಂಗಾ ಮಠಕ್ಕೆ ಅನ್ಯಾಯ
ಸಿದ್ದಗಂಗಾ ಮಠದ ಊಟಕ್ಕೂ ಸರ್ಕಾರದ ಕತ್ತರಿ ಹಾಕಿದೆ. ಒಟ್ಟೂ 7359 ವಿದ್ಯಾರ್ಥಿಗಳಿಗೆ ಪೂರೈಕೆಯಾಗುತ್ತಿದ್ದ ಅಕ್ಕಿ 73590 ಕೆಜಿ ಅಕ್ಕಿ, 36795 ಗೋಧಿ ವಿತರಣೆ ಮಾಡುತ್ತಿದ್ದ ಸರ್ಕಾರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ವತಿಯಿಂದ ನೀಡುವ ಕಾರ್ಯ ಮಾಡುತ್ತಿತ್ತು. ದಾಸೋಹ ಯೋಜನೆ ಅಡಿಯಲ್ಲಿ ಸಿದ್ದಗಂಗಾ ಮಠದ ವಿದ್ಯಾರ್ಥಿಗಳಿಗೂ ನೀಡುತ್ತಿದ್ದ ಅಕ್ಕಿ ಗೋಧಿಗೆ ಇಂದಿನ ಬಿಜೆಪಿ ಸರ್ಕಾರ ಕತ್ತರಿ ಹಾಕಿದೆ. ಕಳೆದ ಮೂರು ತಿಂಗಳಿಂದ ಮಠಗಳಿಗೆ ನೀಡುತ್ತಿದ್ದ ಅಕ್ಕಿಗೂ ಕತ್ತರಿ ಹಾಕಿದೆ ಎಂದರು.
ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಯು ಟಿ ಖಾದರ್ ರಿಂದ ದಾಖಲೆ ಬಿಡುಗಡೆ ಮಾಡಿಸಿದರು.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.