ETV Bharat / state

ಸಂಪುಟದಿಂದ ಲಕ್ಷ್ಮಣ ಸವದಿ ಕೈಬಿಡಲು ಆಗ್ರಹ: ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ - BJP office siege

ಲಕ್ಷ್ಮಣ ಸವದಿ ಅವರ ಮೇಲೆ ಅಶ್ಲೀಲ ಚಿತ್ರ ವೀಕ್ಷಿಸಿದ ಗಂಭೀರ ಆರೋಪ ಇದೆ. ಇಂತಹ ವ್ಯಕ್ತಿಗೆ ರಾಜ್ಯದ ಪ್ರಮುಖ ಸ್ಥಾನ ನೀಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಮಹಿಳಾ ಘಟಕದಿಂದ ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಲಾಯಿತು.

ಪ್ರತಿಭಟನೆ
author img

By

Published : Aug 31, 2019, 2:02 PM IST

ಬೆಂಗಳೂರು: ವಿಧಾನಸೌಧದಲ್ಲಿಯೇ ಅಶ್ಲೀಲ ಚಿತ್ರ ವೀಕ್ಷಣೆ ಆರೋಪ‌ ಹೊತ್ತಿರುವ ಲಕ್ಷ್ಮಣ ಸವದಿ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ಕೈಬಿಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ಸದಸ್ಯರು, ಮಲ್ಲೇಶ್ವರಂನ ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿ ರಾಜ್ಯ ಸರ್ಕಾರ ಹಾಗೂ ಲಕ್ಷ್ಮಣ ಸವದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಕ್ಷ್ಮಣ ಸವದಿ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮಹಿಳಾ ಘಟಕ

ಈ ವೇಳೆ ಮಾತಾನಾಡಿದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಪ್ಪಾ ಅಮರನಾಥ್, ಲಕ್ಷ್ಮಣ ಸವದಿ ಅವರ ಮೇಲೆ ಅಶ್ಲೀಲ ಚಿತ್ರ ವೀಕ್ಷಿಸಿದ ಗಂಭೀರ ಆರೋಪ ಇದೆ. ಇಂತಹ ವ್ಯಕ್ತಿಗೆ ರಾಜ್ಯದ ಪ್ರಮುಖ ಸ್ಥಾನ ನೀಡಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದರು.

ಈ ಕೂಡಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದಿಂದ ಅವದಿ ಅವರನ್ನು ಕೈಬಿಡಬೇಕು. ಇಲ್ಲದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಲಕ್ಷ್ಮಣ ಸವದಿ ಅವರಿಗೆ ಉನ್ನತ ಸ್ಥಾನ ನೀಡಿರುವುದನ್ನು ಬಿಜೆಪಿ ಮಹಿಳಾ ನಾಯಕಿಯರಾದ ಶೋಭಾ ಕರಂದ್ಲಾಜೆ, ಮಾಳವಿಕಾ, ತಾರಾ, ಶೃತಿ, ಭಾರತಿ ಶೆಟ್ಟಿ ಖಂಡಿಸಬೇಕು. ಇಲ್ಲದಿದ್ದರೆ ನಾವು ಹೋರಾಟ ಚುರುಕುಗೊಳಿಸುತ್ತೇವೆ. ಪ್ರತಿಯೊಂದಕ್ಕೂ ಕಾಂಗ್ರೆಸ್ ಮಹಿಳಾ ಘಟಕವೇ ಮುಂದೆ ಬರಬೇಕಾ ಅಂತ ಪ್ರಶ್ನಿಸಿದರು.

ನೆರೆ ಸಂತ್ರಸ್ತರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಯಾವುದೇ ಕಾಳಜಿ ಇಲ್ಲ. ಅಷ್ಟೇ ಅಲ್ಲದೆ, ಅವರಿಗೆ ಯಾವುದೇ ನೆರವು ನೀಡಿಲ್ಲ. ನಾವು ಮಾಡಿದ ಕೆಲಸಗಳನ್ನು ಆಡಳಿತದಲ್ಲಿರುವ ಯಡಿಯೂರಪ್ಪ ಅವರು ಮಾಡುತ್ತಿಲ್ಲ ಎಂದು ಆರೋಪ ಮಾಡಿದರು.

ಬಿಜೆಪಿ ನಾಯಕರು, ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಸಂವಿಧಾನಿಕ ಸಂಸ್ಥೆಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ. ಇದನ್ನು ಜನರು ನೇರವಾಗಿ ಗಮನಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಗೆ ಕಿರುಕುಳ ನೀಡುವುದನ್ನು ಈ ಕೂಡಲೇ ನಿಲ್ಲಿಸಬೇಕು ಎಂದರು.

ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಬಿಜೆಪಿ ಭವನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದಾರೆ.

ಬೆಂಗಳೂರು: ವಿಧಾನಸೌಧದಲ್ಲಿಯೇ ಅಶ್ಲೀಲ ಚಿತ್ರ ವೀಕ್ಷಣೆ ಆರೋಪ‌ ಹೊತ್ತಿರುವ ಲಕ್ಷ್ಮಣ ಸವದಿ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ಕೈಬಿಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ಸದಸ್ಯರು, ಮಲ್ಲೇಶ್ವರಂನ ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿ ರಾಜ್ಯ ಸರ್ಕಾರ ಹಾಗೂ ಲಕ್ಷ್ಮಣ ಸವದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಕ್ಷ್ಮಣ ಸವದಿ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮಹಿಳಾ ಘಟಕ

ಈ ವೇಳೆ ಮಾತಾನಾಡಿದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಪ್ಪಾ ಅಮರನಾಥ್, ಲಕ್ಷ್ಮಣ ಸವದಿ ಅವರ ಮೇಲೆ ಅಶ್ಲೀಲ ಚಿತ್ರ ವೀಕ್ಷಿಸಿದ ಗಂಭೀರ ಆರೋಪ ಇದೆ. ಇಂತಹ ವ್ಯಕ್ತಿಗೆ ರಾಜ್ಯದ ಪ್ರಮುಖ ಸ್ಥಾನ ನೀಡಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದರು.

ಈ ಕೂಡಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದಿಂದ ಅವದಿ ಅವರನ್ನು ಕೈಬಿಡಬೇಕು. ಇಲ್ಲದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಲಕ್ಷ್ಮಣ ಸವದಿ ಅವರಿಗೆ ಉನ್ನತ ಸ್ಥಾನ ನೀಡಿರುವುದನ್ನು ಬಿಜೆಪಿ ಮಹಿಳಾ ನಾಯಕಿಯರಾದ ಶೋಭಾ ಕರಂದ್ಲಾಜೆ, ಮಾಳವಿಕಾ, ತಾರಾ, ಶೃತಿ, ಭಾರತಿ ಶೆಟ್ಟಿ ಖಂಡಿಸಬೇಕು. ಇಲ್ಲದಿದ್ದರೆ ನಾವು ಹೋರಾಟ ಚುರುಕುಗೊಳಿಸುತ್ತೇವೆ. ಪ್ರತಿಯೊಂದಕ್ಕೂ ಕಾಂಗ್ರೆಸ್ ಮಹಿಳಾ ಘಟಕವೇ ಮುಂದೆ ಬರಬೇಕಾ ಅಂತ ಪ್ರಶ್ನಿಸಿದರು.

ನೆರೆ ಸಂತ್ರಸ್ತರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಯಾವುದೇ ಕಾಳಜಿ ಇಲ್ಲ. ಅಷ್ಟೇ ಅಲ್ಲದೆ, ಅವರಿಗೆ ಯಾವುದೇ ನೆರವು ನೀಡಿಲ್ಲ. ನಾವು ಮಾಡಿದ ಕೆಲಸಗಳನ್ನು ಆಡಳಿತದಲ್ಲಿರುವ ಯಡಿಯೂರಪ್ಪ ಅವರು ಮಾಡುತ್ತಿಲ್ಲ ಎಂದು ಆರೋಪ ಮಾಡಿದರು.

ಬಿಜೆಪಿ ನಾಯಕರು, ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಸಂವಿಧಾನಿಕ ಸಂಸ್ಥೆಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ. ಇದನ್ನು ಜನರು ನೇರವಾಗಿ ಗಮನಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಗೆ ಕಿರುಕುಳ ನೀಡುವುದನ್ನು ಈ ಕೂಡಲೇ ನಿಲ್ಲಿಸಬೇಕು ಎಂದರು.

ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಬಿಜೆಪಿ ಭವನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದಾರೆ.

Intro:ಲಕ್ಷ್ಮಣ ಸವದಿ ವಜಾಕ್ಕೆ ಆಗ್ರಹ; ಕಾಂಗ್ರೆಸ್ ಮಹಿಳಾ ಘಟಕದಿಂದ ಬಿಜೆಪಿ ಕಚೇರಿ ಮುತ್ತಿಗೆ..

ಬೆಂಗಳೂರು; ವಿಧಾನಸೌಧದಲ್ಲಿಯೇ ಅಶ್ಲೀಲ ಚಿತ್ರ ವೀಕ್ಷಣೆ ಆರೋಪ‌ ಹೊತ್ತಿರುವ ಲಕ್ಷ್ಮಣ ಸವದಿ ಅವರನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೈಬಿಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ಸದಸ್ಯರು, ಮಲ್ಲೇಶ್ವರಂನ ಬಿಜೆಪಿ ಕಚೇರಿ ಮುತ್ತಿಗೆ ಯತ್ನಿಸಿದರು.. ರಾಜ್ಯ ಸರ್ಕಾರ ಹಾಗೂ ಲಕ್ಷ್ಮಣ ಸವದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತಾನಾಡಿದ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಪ್ಪಾ ಅಮರನಾಥ್, ಲಕ್ಷ್ಮಣ ಸವದಿ ಅವರ ಮೇಲೆ ಅಶ್ಲೀಲ ಚಿತ್ರ ವೀಕ್ಷಿಸಿದ ಗಂಭೀರ ಆರೋಪ ಇದೆ.ಇಂತಹ ವ್ಯಕ್ತಿಗೆ ರಾಜ್ಯದ ಪ್ರಮುಖ ಸ್ಥಾನ ನೀಡಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದರು.

ಲಕ್ಷ್ಮಣ ಸವದಿ ಅವರ ಸ್ಥಾನದಿಂದ ಮಹಿಳಾ ವರ್ಗಕ್ಕೆ ಅವಮಾನಕರ. ಹಾಗಾಗಿ, ಈ ಕೂಡಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದಿಂದ ಕೈಬಿಡಬೇಕು.ಇಲ್ಲದಿದ್ದಲ್ಲಿ, ಹೋರಾಟ ತೀವ್ರ ಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಲಕ್ಷ್ಮಣ ಸವದಿ ಅವರಿಗೆ ಉನ್ನತ ಸ್ಥಾನ ನೀಡಿರುವುದನ್ನು ಬಿಜೆಪಿ ಮಹಿಳಾ ನಾಯಕರಾದ ಶೋಭಾ ಕರಂದ್ಲಾಜೆ, ಮಾಳವಿಕಾ, ತಾರಾ, ಶೃತಿ, ಭಾರತಿ ಶೆಟ್ಟಿ ಖಂಡಿಸಬೇಕು. ಇಲ್ಲದಿದ್ದರೆ, ನಾವು ಹೋರಾಟ ಚುರುಕುಗೊಳಿಸುತ್ತೇವೆ. ಪ್ರತಿಯೊಂದಕ್ಕೂ ಕಾಂಗ್ರೆಸ್ ಮಹಿಳಾ ಘಟಕವೇ ಮುಂದೆ ಬರಬೇಕಾ ಅಂತ ತಿಳಿಸಿದರು...

ಅತಿವೃಷ್ಟಿ, ನೆರೆ ಸಂತ್ರಸ್ತರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಯಾವುದೇ ಕಾಳಜಿ ಇಲ್ಲ. ಅಷ್ಟೇ ಅಲ್ಲದೆ, ಅವರಿಗೆ ಯಾವುದೇ ನೆರವು ನೀಡಿಲ್ಲ‌. ನಾವು ಮಾಡಿದ ಕೆಲಸಗಳನ್ನು ಆಡಳಿತದಲ್ಲಿರುವ ಯಡಿಯೂರಪ್ಪ ಅವರು ಮಾಡುತ್ತಿಲ್ಲ ಎಂದು ಆರೋಪ ಮಾಡಿದರು.

ಬಿಜೆಪಿ ನಾಯಕರು, ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಸಂವಿಧಾನಿಕ ಸಂಸ್ಥೆಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ.ಇದನ್ನು ಜನರು ನೇರವಾಗಿ ಗಮನಿಸುತ್ತಿದ್ದಾರೆ, ಡಿ.ಕೆ.ಶಿವಕುಮಾರ್ ಅವರಿಗೆ ಕಿರುಕುಳ ನೀಡುವುದು ಈ ಕೂಡಲೇ ನಿಲ್ಲಿಸಬೇಕು ಎಂದರು.

ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಬಿಜೆಪಿ ಭವನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಬಿಜೆಪಿ ಕಚೇರಿ ಮುತ್ತಿಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ವಾಹನದಲ್ಲಿ ಕರೆದೊಯಿದರು..

Byte- ಪುಷ್ಪ ಅಮರನಾಥ್, ಅಧ್ಯಕ್ಷೆ, ಕೆಪಿಸಿಸಿ ಮಹಿಳಾ ಘಟಕ

KN_BNG_01_CONGRESS_PROTEST_script_7201801Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.