ETV Bharat / state

ಬಿಬಿಎಂಪಿ ಅಧಿಕಾರಿಯಿಂದ ಕಿರುಕುಳ ಆರೋಪ: ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ - ಬೆಂಗಳೂರು ಬ್ಯಾಡರಹಳ್ಳಿ ಪೊಲೀಸ್ ಠಾಣೆ

ಗಿರೀಶ್ (36) ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಜಯನಗರದ ಬಿಬಿಎಂಪಿ ಅಕೌಂಟ್ ಸೂಪರಿಂಡೆಂಟ್ ಉಷಾ ಬಳಿ ಜಯನಗರ ಪಾರ್ಕ್ ನಿರ್ವಹಣೆಯ ಗುತ್ತಿಗೆ ನೀಡುವಂತೆ ಗಿರೀಶ್ ಕೇಳಿದ್ದ. ಈ ವೇಳೆ ಅವರು ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

dfed
ಗುತ್ತಿಗೆದಾರನಿಂದ ಆತ್ಮಹತ್ಯೆ ಯತ್ನ
author img

By

Published : Jun 16, 2020, 11:34 PM IST

ಬೆಂಗಳೂರು: ಬಿಬಿಎಂಪಿ ಮಹಿಳಾ ಅಕೌಂಟ್ಸ್ ಸೂಪರಿಂಡೆಂಟ್ ಕಿರುಕುಳ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಗಿರೀಶ್ (36) ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಜಯನಗರದ ಬಿಬಿಎಂಪಿ ಅಕೌಂಟ್ ಸೂಪರಿಂಡೆಂಟ್ ಉಷಾ ಬಳಿ ಜಯನಗರ ಪಾರ್ಕ್ ನಿರ್ವಹಣೆಯ ಗುತ್ತಿಗೆ ನೀಡುವಂತೆ ಗಿರೀಶ್ ಕೇಳಿದ್ದ. ಈ ವೇಳೆ ಅವರು ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಆತ ತನ್ನ ಕಾರಿನ ದಾಖಲೆಗಳನ್ನು ನೀಡಿದ್ದ ಆದರೆ ಕಳೆದ ಒಂದು ವಾರದಿಂದ ಉಷಾ ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಷ್ಟು ಮಾತ್ರವಲ್ಲದೇ ಹಣ ನೀಡಲು ನಿರಾಕರಿಸಿದಕ್ಕೆ ಗಿರೀಶ್ ವಿರುದ್ದ ‌ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಆರೋಪವಿದೆ. ಹೀಗಾಗಿ ಸದ್ಯ ದೈಹಿಕ ಹಾಗೂ ಮಾನಸಿಕ ಹಿಂಸೆ ತಾಳಲಾರದೆ ಗುತ್ತಿಗೆದಾರ ಕಾರಿನಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐರ್​ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಬೆಂಗಳೂರು: ಬಿಬಿಎಂಪಿ ಮಹಿಳಾ ಅಕೌಂಟ್ಸ್ ಸೂಪರಿಂಡೆಂಟ್ ಕಿರುಕುಳ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಗಿರೀಶ್ (36) ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಜಯನಗರದ ಬಿಬಿಎಂಪಿ ಅಕೌಂಟ್ ಸೂಪರಿಂಡೆಂಟ್ ಉಷಾ ಬಳಿ ಜಯನಗರ ಪಾರ್ಕ್ ನಿರ್ವಹಣೆಯ ಗುತ್ತಿಗೆ ನೀಡುವಂತೆ ಗಿರೀಶ್ ಕೇಳಿದ್ದ. ಈ ವೇಳೆ ಅವರು ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಆತ ತನ್ನ ಕಾರಿನ ದಾಖಲೆಗಳನ್ನು ನೀಡಿದ್ದ ಆದರೆ ಕಳೆದ ಒಂದು ವಾರದಿಂದ ಉಷಾ ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಷ್ಟು ಮಾತ್ರವಲ್ಲದೇ ಹಣ ನೀಡಲು ನಿರಾಕರಿಸಿದಕ್ಕೆ ಗಿರೀಶ್ ವಿರುದ್ದ ‌ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಆರೋಪವಿದೆ. ಹೀಗಾಗಿ ಸದ್ಯ ದೈಹಿಕ ಹಾಗೂ ಮಾನಸಿಕ ಹಿಂಸೆ ತಾಳಲಾರದೆ ಗುತ್ತಿಗೆದಾರ ಕಾರಿನಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐರ್​ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.