ETV Bharat / state

ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರ ಸಂಘ: ಜುಲೈ 15ರೊಳಗೆ ಹಣ ಬಿಡುಗಡೆಗೆ ಗಡುವು

author img

By

Published : Jul 6, 2023, 10:15 PM IST

ತಡೆ ಹಿಡಿದಿರುವ ಬಿಲ್​ಗಳ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ಎಚ್ಚರಿಕೆ ಕೊಟ್ಟಿದೆ.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ

ಬೆಂಗಳೂರು : ರಾಜ್ಯ ಈ ಬಾರಿ ಕಾಂಗ್ರೆಸ್​ ಪಕ್ಷ ಸ್ಪಷ್ಟ ಬಹುಮತ ಪಡೆದು ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಡೆ ಹಿಡಿದಿರುವ ಕಾಮಗಾರಿ ಬಿಲ್​ಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರವನ್ನು ಒತ್ತಾಯಿಸಿದೆ. ಸಂಘ ಒತ್ತಾಯಿಸಿರುವುದು ಮಾತ್ರವಲ್ಲದೇ, ಜುಲೈ 15ರೊಳಗೆ ಹಣ ಬಿಡುಗಡೆ ಮಾಡಲು ವಿಫಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ನೀಡಿದೆ.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪ್ರಕಟಣೆ
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪ್ರಕಟಣೆ

ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾಮಗಾರಿಗಳ ಬಿಲ್​ಗಳನ್ನು ತಡೆಹಿಡಿಯಲಾಗಿತ್ತು. ಇದೇ ವಿಚಾರವಾಗಿ ರಾಜ್ಯ ಗುತ್ತಿಗೆದಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಿಲ್ ಮೊತ್ತವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದೆ. ಕಳೆದ ಒಂದು ವಾರದ ಹಿಂದೆಷ್ಟೇ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳ ನಿಯೋಗ ಸಿದ್ದರಾಮಯ್ಯ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಜೂ.23 ರಂದು ಭೇಟಿಯಾಗಿ ಗುತ್ತಿಗೆದಾರರ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿತ್ತು.

ಸಂಘದ ಮನವಿಯನ್ನು ಪುರಸ್ಕರಿಸಿ ಬಿಲ್​ಗಳ ಬಿಡುಗಡೆಗೆ ಜೂ.28 ರಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ, ಈ ಆದೇಶ ಹೊರಡಿಸಿ ಒಂದು ವಾರ ಕಳೆದರೂ ಹಣ ಬಿಡುಗಡೆ ಮಾಡುತ್ತಿಲ್ಲ. ಒಂದೂವರ ತಿಂಗಳಿಂದ ಹಣ ಬಿಡುಗಡೆ ಮಾಡದೇ ಇರುವುದರಿಂದ ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಕಣ್ಣೊರೆಸುವ ತಂತ್ರವನ್ನು ಕೈ ಬಿಟ್ಟು ಆದಷ್ಟೂ ಬೇಗನ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಸಂಘದವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಕಾಲಮಿತಿಯೊಳಗೆ 22 ಸಾವಿರ ಕೋಟಿ ರೂ. ಹಣ ಬಿಡುಗಡೆಗೆ ರಾಜ್ಯ ಗುತ್ತಿಗೆದಾರರ ಸಂಘ ಒತ್ತಾಯ

ಒಂದು ವೇಳೆ ಜುಲೈ 15ರೊಳಗೆ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ. ಹಣ ಬಿಡುಗಡೆ ವಿಳಂಬ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಅಧಿಕಾರಿಗಳು ತಮಗೆ ಯಾವುದೇ ಮಾಹಿತಿ ಬಂದಿರುವುದಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೂವರೆ ತಿಂಗಳಾದರೂ ಬಿಲ್ ಪಾವತಿಯಾಗದ ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಸಂಘ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಲ್​ಗಳ ನೈಜತೆಯನ್ನು ಪರಿಶೀಲಿಸಿ ನಿಯಮಾನುಸಾರವೇ ಖಾತ್ರಿಪಡಿಸಿಕೊಂಡು ಸಂಬಂಧಪಟ್ಟ ಇಲಾಖಾ ಸಚಿವರ ಅನುಮೋದನ ಪಡೆದು ಹಣ ಬಿಡುಗಡೆ ಮಾಡಿ. ನಮ್ಮ ಗುತ್ತಿಗೆದಾರರ ಅಭ್ಯಂತರ ಇರುವುದಿಲ್ಲ. ಗುತ್ತಿಗೆದಾರರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಹಣವನ್ನು ನೀಡದ ಸತಾಯಿಸುವುದು ಜನಪರ ಕಾಳಜಿಯುಳ್ಳ ಸರ್ಕಾರದ ಲಕ್ಷಣವಾಗಿರುವುದಿಲ್ಲ. ಸರ್ಕಾರ ಕೂಡಲೇ ಮತ್ತೂಮ್ಮೆ ಹಣ ಬಿಡುಗಡೆ ಮಾಡಲು ಸೂಚನೆ ನೀಡಬೇಕೆಂದು ಕೋರುತ್ತೇವೆ. ಒಂದು ವೇಳೆ ಜುಲೈ 15ರೊಳಗೆ ಹಣ ಬಿಡುಗಡೆ ಮಾಡಲು ವಿಫಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ನಮ್ಮ ಮೇಲೆ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರು ಇನ್ಮುಂದೆ 40 ಪರ್ಸೆಂಟ್ ಕಡಿಮೆ ಬಿಡ್ ಮಾಡಿ: ಬೊಮ್ಮಾಯಿ‌ ಸವಾಲು

ಬೆಂಗಳೂರು : ರಾಜ್ಯ ಈ ಬಾರಿ ಕಾಂಗ್ರೆಸ್​ ಪಕ್ಷ ಸ್ಪಷ್ಟ ಬಹುಮತ ಪಡೆದು ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಡೆ ಹಿಡಿದಿರುವ ಕಾಮಗಾರಿ ಬಿಲ್​ಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರವನ್ನು ಒತ್ತಾಯಿಸಿದೆ. ಸಂಘ ಒತ್ತಾಯಿಸಿರುವುದು ಮಾತ್ರವಲ್ಲದೇ, ಜುಲೈ 15ರೊಳಗೆ ಹಣ ಬಿಡುಗಡೆ ಮಾಡಲು ವಿಫಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ನೀಡಿದೆ.

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪ್ರಕಟಣೆ
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪ್ರಕಟಣೆ

ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾಮಗಾರಿಗಳ ಬಿಲ್​ಗಳನ್ನು ತಡೆಹಿಡಿಯಲಾಗಿತ್ತು. ಇದೇ ವಿಚಾರವಾಗಿ ರಾಜ್ಯ ಗುತ್ತಿಗೆದಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಿಲ್ ಮೊತ್ತವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದೆ. ಕಳೆದ ಒಂದು ವಾರದ ಹಿಂದೆಷ್ಟೇ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳ ನಿಯೋಗ ಸಿದ್ದರಾಮಯ್ಯ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಜೂ.23 ರಂದು ಭೇಟಿಯಾಗಿ ಗುತ್ತಿಗೆದಾರರ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿತ್ತು.

ಸಂಘದ ಮನವಿಯನ್ನು ಪುರಸ್ಕರಿಸಿ ಬಿಲ್​ಗಳ ಬಿಡುಗಡೆಗೆ ಜೂ.28 ರಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ, ಈ ಆದೇಶ ಹೊರಡಿಸಿ ಒಂದು ವಾರ ಕಳೆದರೂ ಹಣ ಬಿಡುಗಡೆ ಮಾಡುತ್ತಿಲ್ಲ. ಒಂದೂವರ ತಿಂಗಳಿಂದ ಹಣ ಬಿಡುಗಡೆ ಮಾಡದೇ ಇರುವುದರಿಂದ ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಕಣ್ಣೊರೆಸುವ ತಂತ್ರವನ್ನು ಕೈ ಬಿಟ್ಟು ಆದಷ್ಟೂ ಬೇಗನ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಸಂಘದವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಕಾಲಮಿತಿಯೊಳಗೆ 22 ಸಾವಿರ ಕೋಟಿ ರೂ. ಹಣ ಬಿಡುಗಡೆಗೆ ರಾಜ್ಯ ಗುತ್ತಿಗೆದಾರರ ಸಂಘ ಒತ್ತಾಯ

ಒಂದು ವೇಳೆ ಜುಲೈ 15ರೊಳಗೆ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ. ಹಣ ಬಿಡುಗಡೆ ವಿಳಂಬ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಅಧಿಕಾರಿಗಳು ತಮಗೆ ಯಾವುದೇ ಮಾಹಿತಿ ಬಂದಿರುವುದಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೂವರೆ ತಿಂಗಳಾದರೂ ಬಿಲ್ ಪಾವತಿಯಾಗದ ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಸಂಘ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಲ್​ಗಳ ನೈಜತೆಯನ್ನು ಪರಿಶೀಲಿಸಿ ನಿಯಮಾನುಸಾರವೇ ಖಾತ್ರಿಪಡಿಸಿಕೊಂಡು ಸಂಬಂಧಪಟ್ಟ ಇಲಾಖಾ ಸಚಿವರ ಅನುಮೋದನ ಪಡೆದು ಹಣ ಬಿಡುಗಡೆ ಮಾಡಿ. ನಮ್ಮ ಗುತ್ತಿಗೆದಾರರ ಅಭ್ಯಂತರ ಇರುವುದಿಲ್ಲ. ಗುತ್ತಿಗೆದಾರರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಹಣವನ್ನು ನೀಡದ ಸತಾಯಿಸುವುದು ಜನಪರ ಕಾಳಜಿಯುಳ್ಳ ಸರ್ಕಾರದ ಲಕ್ಷಣವಾಗಿರುವುದಿಲ್ಲ. ಸರ್ಕಾರ ಕೂಡಲೇ ಮತ್ತೂಮ್ಮೆ ಹಣ ಬಿಡುಗಡೆ ಮಾಡಲು ಸೂಚನೆ ನೀಡಬೇಕೆಂದು ಕೋರುತ್ತೇವೆ. ಒಂದು ವೇಳೆ ಜುಲೈ 15ರೊಳಗೆ ಹಣ ಬಿಡುಗಡೆ ಮಾಡಲು ವಿಫಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ನಮ್ಮ ಮೇಲೆ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರು ಇನ್ಮುಂದೆ 40 ಪರ್ಸೆಂಟ್ ಕಡಿಮೆ ಬಿಡ್ ಮಾಡಿ: ಬೊಮ್ಮಾಯಿ‌ ಸವಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.