ಬೆಂಗಳೂರು: ಮಹಾಮಾರಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಗರದ ಎಲ್ಲಾ ಕ್ಲಬ್ ಹಾಗೂ ಪಬ್ಗಳ ಬಂದ್ಗೆ ಸರ್ಕಾರ ಆದೇಶ ಹೊರಡಿಸಿದೆ.
ಜನ ಸೇರುವಂತಹ ಎಲ್ಲಾ ಸಭೆ,ಸಮಾರಂಭ ರದ್ದುಗೊಳಿಸಿ ಒಂದು ವಾರ ಯಾವುದೇ ಕಾರ್ಯಕ್ರಮ ಮಾಡದಂತೆ ಬಂದ್ ಮಾಡಲು ಆದೇಶ ಹೊರಡಿಸಿದ್ದು, ಇಂದು ಸಂಜೆಯಿಂದಲೇ ಆದೇಶ ಜಾರಿಗೆ ಬರುವ ಸಾಧ್ಯತೆಯಿದೆ. ಪ್ರಮುಖವಾಗಿ ಎಂ.ಜಿ.ರಸ್ತೆ, ಬಿಗ್ರೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ ಸೇರಿದಂತೆ ರಾಜಧಾನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಬ್, ಕ್ಲಬ್ಗಳು ಬಂದ್ ಮಾಡುವ ಸಾಧ್ಯತೆಯಿದೆ.
ಈಗಾಗಲೇ ತೆರೆದಿರುವ ಐಷರಾಮಿ ಬಾರ್ಗಳು ಮುಚ್ಚಲು ಸಿದ್ಧತೆ ನಡೆಸುತ್ತಿದ್ದು, ಕೆಲವೆಡೆ ಸ್ವಯಂಪ್ರೇರಿತವಾಗಿ ಕ್ಲಬ್, ಪಬ್ ಮಾಲೀಕರು ವಹಿವಾಟು ಸ್ಥಗಿತಗೊಳಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.