ETV Bharat / state

ತರಕಾರಿ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದವನಿಗೆ ಕೊರೊನಾ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಆತಂಕ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮಲ್ಲೇಶ್ವರಂ ವಾರ್ಡ್​ನಲ್ಲಿ ವ್ಯಕ್ತಿಗೆ ಸೋಂಕು ತಗುಲಿ ಆತಂಕ ಸೃಷ್ಟಿಸಿದೆ.

author img

By

Published : May 29, 2020, 4:29 PM IST

dswdd
ತರಕಾರಿ ಮಾರುವವನಿಗೆ ವಕ್ಕರಿಸಿದ ಕೊರೊನಾ

ಬೆಂಗಳೂರು: ತರಕಾರಿ ಮಾರುಕಟ್ಟೆ, ಎಪಿಎಂಸಿಯಲ್ಲಿ ದುಡಿಯುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ನಗರದಲ್ಲಿ ಭೀತಿ ಹುಟ್ಟಿಸಿದೆ.

ಮಲ್ಲೇಶ್ವರಂ ವಾರ್ಡ್ ವ್ಯಾಪ್ತಿಗೆ ಬರುವ ಯಶವಂತಪುರದ ನಿವಾಸಿ 48 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಲಾಕ್​ಡೌನ್ ಬಳಿಕ ಯಶವಂತಪುರದ ಎಪಿಎಂಸಿ ಮಾರುಕಟ್ಟೆಯನ್ನು ಆನೇಕಲ್​ಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಗೆ ಹೋಗಿ ಈ ವ್ಯಕ್ತಿ ಕೆಲಸ ಮಾಡುತ್ತಿದ್ದ. ತೀವ್ರ ಜ್ವರ, ಕೆಮ್ಮು, ಶೀತ ಕಾಣಿಸಿಕೊಂಡ ಹಿನ್ನೆಲೆ ಇಎಸ್ಐ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಯ ಪತ್ನಿ ಹಾಗೂ ಮಗ ಇಬ್ಬರನ್ನೂ ಕ್ವಾರಂಟೈನ್ ಮಾಡಲಾಗಿದೆ. ಈತನ ಮನೆ ಮುಂದಿನ ರಸ್ತೆಯನ್ನು ಕಂಟೇನ್ಮೆಂಟ್​​ ಮಾಡಲಾಗಿದೆ. ಈತನ ಸಂಪರ್ಕಿತರು, ಎಪಿಎಂಸಿಯಲ್ಲಿ ಪ್ರತಿನಿತ್ಯ ಭೇಟಿಯಾಗುತ್ತಿದ್ದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಲ್ಲೇಶ್ವರಂ ವಾರ್ಡ್​ನಲ್ಲಿ ಈವರೆಗೆ ಒಟ್ಟು ನಾಲ್ಕು ಪಾಸಿಟಿವ್ ಪ್ರಕರಣ ದಾಖಲಾಗಿವೆ.

ಬೆಂಗಳೂರು: ತರಕಾರಿ ಮಾರುಕಟ್ಟೆ, ಎಪಿಎಂಸಿಯಲ್ಲಿ ದುಡಿಯುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ನಗರದಲ್ಲಿ ಭೀತಿ ಹುಟ್ಟಿಸಿದೆ.

ಮಲ್ಲೇಶ್ವರಂ ವಾರ್ಡ್ ವ್ಯಾಪ್ತಿಗೆ ಬರುವ ಯಶವಂತಪುರದ ನಿವಾಸಿ 48 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಲಾಕ್​ಡೌನ್ ಬಳಿಕ ಯಶವಂತಪುರದ ಎಪಿಎಂಸಿ ಮಾರುಕಟ್ಟೆಯನ್ನು ಆನೇಕಲ್​ಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಗೆ ಹೋಗಿ ಈ ವ್ಯಕ್ತಿ ಕೆಲಸ ಮಾಡುತ್ತಿದ್ದ. ತೀವ್ರ ಜ್ವರ, ಕೆಮ್ಮು, ಶೀತ ಕಾಣಿಸಿಕೊಂಡ ಹಿನ್ನೆಲೆ ಇಎಸ್ಐ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಯ ಪತ್ನಿ ಹಾಗೂ ಮಗ ಇಬ್ಬರನ್ನೂ ಕ್ವಾರಂಟೈನ್ ಮಾಡಲಾಗಿದೆ. ಈತನ ಮನೆ ಮುಂದಿನ ರಸ್ತೆಯನ್ನು ಕಂಟೇನ್ಮೆಂಟ್​​ ಮಾಡಲಾಗಿದೆ. ಈತನ ಸಂಪರ್ಕಿತರು, ಎಪಿಎಂಸಿಯಲ್ಲಿ ಪ್ರತಿನಿತ್ಯ ಭೇಟಿಯಾಗುತ್ತಿದ್ದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಲ್ಲೇಶ್ವರಂ ವಾರ್ಡ್​ನಲ್ಲಿ ಈವರೆಗೆ ಒಟ್ಟು ನಾಲ್ಕು ಪಾಸಿಟಿವ್ ಪ್ರಕರಣ ದಾಖಲಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.