ETV Bharat / state

ಕೊರೊನಾ ಸಂಕಷ್ಟ.. ವಕೀಲ ಸಮುದಾಯಕ್ಕೆ ಮುಖ್ಯ ನ್ಯಾಯಮೂರ್ತಿ ಮನವಿ

ಕೊರೊನಾ ಸೋಂಕಿನ ನಡುವೆ ಕೋರ್ಟ್ ಸಿಬ್ಬಂದಿ ಅತ್ಯಂತ ಒತ್ತಡದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಜೆ ತಮ್ಮ ಮನವಿ ಪತ್ರದಲ್ಲಿ ವಿವರಿಸಿದ್ದಾರೆ. ಇಷ್ಟೆಲ್ಲ ಸವಾಲುಗಳ ನಡುವೆಯೂ ನ್ಯಾಯಾಲಯ ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವಿಚಾರಣೆಗೆ ನಿಗದಿಪಡಿಸುವುದು ಅಸಾಧ್ಯ..

author img

By

Published : Jul 28, 2020, 10:21 PM IST

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಪರಿಸ್ಥಿತಿಯಲ್ಲಿ ನ್ಯಾಯಾಂಗ ವ್ಯವಸ್ಥೆ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ವಕೀಲರು ತುರ್ತು ಪ್ರಕರಣಗಳನ್ನಷ್ಟೇ ವಿಚಾರಣೆಗೆ ನಿಗದಿಪಡಿಸಲು ಕೋರಿ ಮನವಿ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ಅವರು ಮನವಿ ಮಾಡಿದ್ದಾರೆ.

ಹೈಕೋರ್ಟ್​ನ ಬೆಂಗಳೂರು ಪ್ರಧಾನ ಪೀಠದ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 25 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ. 45 ಮಂದಿ ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಈವರೆಗೆ 7 ನ್ಯಾಯಾಂಗ ಅಧಿಕಾರಿಗಳಿಗೆ ಸೋಂಕು ತಗುಲಿದ್ದು, 74 ಜನ ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ. 54 ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದ್ದು, 139 ಮಂದಿ ಕ್ವಾರಂಟೈನ್​ನಲ್ಲಿದ್ದಾರೆ.

ಕೊರೊನಾ ಸೋಂಕಿನ ನಡುವೆ ಕೋರ್ಟ್ ಸಿಬ್ಬಂದಿ ಅತ್ಯಂತ ಒತ್ತಡದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಜೆ ತಮ್ಮ ಮನವಿ ಪತ್ರದಲ್ಲಿ ವಿವರಿಸಿದ್ದಾರೆ. ಇಷ್ಟೆಲ್ಲ ಸವಾಲುಗಳ ನಡುವೆಯೂ ನ್ಯಾಯಾಲಯ ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವಿಚಾರಣೆಗೆ ನಿಗದಿಪಡಿಸುವುದು ಅಸಾಧ್ಯ. ಆದ್ದರಿಂದ, ವಕೀಲರು ಸೋಂಕು ನಿಯಂತ್ರಣಕ್ಕೆ ಬರುವವರೆ ಸಹಕಾರ ನೀಡಬೇಕು.

ಒಂದು ವೇಳೆ ತುರ್ತು ಪರಿಹಾರದ ಅಗತ್ಯವಿದ್ದರೆ ಅಥವಾ ಕಾಯಲಾಗದ ಪರಿಸ್ಥಿತಿ ಇದ್ದರೆ ಮಾತ್ರ ತುರ್ತು ಪ್ರಕರಣಗಳನ್ನು ಮಾತ್ರ ವಿಚಾರಣೆಗೆ ನಿಗದಿಪಡಿಸಲು ಕೋರಿ ಅರ್ಜಿ ಸಲ್ಲಿಸಬೇಕು ಎಂದು ಸಿಜೆ ವಕೀಲ ಸಮುದಾಯಕ್ಕೆ ಮನವಿ ಮಾಡಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಪರಿಸ್ಥಿತಿಯಲ್ಲಿ ನ್ಯಾಯಾಂಗ ವ್ಯವಸ್ಥೆ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ವಕೀಲರು ತುರ್ತು ಪ್ರಕರಣಗಳನ್ನಷ್ಟೇ ವಿಚಾರಣೆಗೆ ನಿಗದಿಪಡಿಸಲು ಕೋರಿ ಮನವಿ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ಅವರು ಮನವಿ ಮಾಡಿದ್ದಾರೆ.

ಹೈಕೋರ್ಟ್​ನ ಬೆಂಗಳೂರು ಪ್ರಧಾನ ಪೀಠದ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 25 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ. 45 ಮಂದಿ ಕ್ವಾರಂಟೈನ್​ಗೆ ಒಳಗಾಗಿದ್ದಾರೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಈವರೆಗೆ 7 ನ್ಯಾಯಾಂಗ ಅಧಿಕಾರಿಗಳಿಗೆ ಸೋಂಕು ತಗುಲಿದ್ದು, 74 ಜನ ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ. 54 ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದ್ದು, 139 ಮಂದಿ ಕ್ವಾರಂಟೈನ್​ನಲ್ಲಿದ್ದಾರೆ.

ಕೊರೊನಾ ಸೋಂಕಿನ ನಡುವೆ ಕೋರ್ಟ್ ಸಿಬ್ಬಂದಿ ಅತ್ಯಂತ ಒತ್ತಡದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಜೆ ತಮ್ಮ ಮನವಿ ಪತ್ರದಲ್ಲಿ ವಿವರಿಸಿದ್ದಾರೆ. ಇಷ್ಟೆಲ್ಲ ಸವಾಲುಗಳ ನಡುವೆಯೂ ನ್ಯಾಯಾಲಯ ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವಿಚಾರಣೆಗೆ ನಿಗದಿಪಡಿಸುವುದು ಅಸಾಧ್ಯ. ಆದ್ದರಿಂದ, ವಕೀಲರು ಸೋಂಕು ನಿಯಂತ್ರಣಕ್ಕೆ ಬರುವವರೆ ಸಹಕಾರ ನೀಡಬೇಕು.

ಒಂದು ವೇಳೆ ತುರ್ತು ಪರಿಹಾರದ ಅಗತ್ಯವಿದ್ದರೆ ಅಥವಾ ಕಾಯಲಾಗದ ಪರಿಸ್ಥಿತಿ ಇದ್ದರೆ ಮಾತ್ರ ತುರ್ತು ಪ್ರಕರಣಗಳನ್ನು ಮಾತ್ರ ವಿಚಾರಣೆಗೆ ನಿಗದಿಪಡಿಸಲು ಕೋರಿ ಅರ್ಜಿ ಸಲ್ಲಿಸಬೇಕು ಎಂದು ಸಿಜೆ ವಕೀಲ ಸಮುದಾಯಕ್ಕೆ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.