ಬೆಂಗಳೂರು: ರಾಜ್ಯದಲ್ಲಿ ಇಂದು 4,537 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ 59,652ಕ್ಕೆ ಸೋಂಕಿತರ ಸಂಖ್ಯೆ ಏರಿದೆ. 24 ಗಂಟೆಯಲ್ಲಿ 93 ಜನರು ಕೊರೊನಾಗೆ ಬಲಿಯಾಗಿದ್ದು, ಇಲ್ಲಿಯವರೆಗೆ 1,240 ಮಂದಿ ಮೃತಪಟ್ಟಿದ್ದಾರೆ.
ವಿಜಯಪುರ: ಜಿಲ್ಲೆಯಲ್ಲಿ ಇಂದು ಕೊರೊನಾ ರಣಕೇಕೆ ಹಾಕಿದ್ದು, ಇದೇ ಮೊದಲ ಬಾರಿ ಒಂದೇ ದಿನ 176 ಪ್ರಕರಣ ದೃಢಪಡುವ ಮೂಲಕ ದಾಖಲೆ ಬರೆದಿದೆ. ಇಲ್ಲಿಯವರೆಗೆ ಒಟ್ಟು ಸೋಂಕಿತರ ಸಂಖ್ಯೆ 1,414ಕ್ಕೆ ಏರಿಕೆಯಾಗಿದೆ. 103 ಗುಣಮುಖರಾಗಿದ್ದು, ಒಟ್ಟು 906 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
![corona updates in karnataka](https://etvbharatimages.akamaized.net/etvbharat/prod-images/kn-vjp-04-175-ve-av-7202140_18072020210421_1807f_1595086461_133.png)
ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 13 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಎರಡು ದಿನಗಳಲ್ಲಿ ಒಟ್ಟು 48 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಸೋಂಕಿತರ ಸಂಖ್ಯೆ 629ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 243 ಜನರು ಗುಣಮುಖರಾಗಿದ್ದಾರೆ. ಒಟ್ಟು 357 ಸಕ್ರಿಯ ಪ್ರಕರಣಗಳಿವೆ.
ಚಿತ್ರದುರ್ಗ: ಜಿಲ್ಲೆಯಲ್ಲಿಂದು 23 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಒಟ್ಟು 354 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 23 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇದುವರೆಗೆ ಮೂವರು ಮೃತಪಟ್ಟಿದ್ದು, ಸೋಂಕಿತರ ಪೈಕಿ ಈಗಾಗಲೆ 103 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 93 ಸಕ್ರಿಯ ಪ್ರಕರಣಗಳು ಇವೆ.
ಧಾರವಾಡ: ಜಿಲ್ಲೆಯಲ್ಲಿ ಇಂದು ಒಂದೇ ದಿನ 186 ಜನರಿಗೆ ಸೋಂಕು ತಗುಲಿದ್ದು, ಇದರಿಂದ ಸೋಂಕಿತರ ಸಂಖ್ಯೆ 1917ಕ್ಕೆ ಏರಿಕೆಯಾಗಿದೆ. ಒಂದೇ ದಿನ ಕೊರೊನಾದಿಂದ 6 ಜನ ಸೋಂಕಿತರು ಮೃತಪಟ್ಟಿದ್ದು, ಇದರಿಂದ ಮೃತರ ಸಂಖ್ಯೆ 58ಕ್ಕೇರಿದೆ. ಇಂದು ಕೂಡಾ 50 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 643 ಜನ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 1,216 ಸಕ್ರೀಯ ಪ್ರಕರಣಗಳಿವೆ.
ಬೆಳಗಾವಿ: ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಮೆರೆದಿದ್ದು, ಮೂವರನ್ನು ಬಲಿ ಪಡೆದು 137 ಜನರಿಗೆ ಸೋಂಕು ವಕ್ಕರಿಸಿದೆ. ಜಿಲ್ಲೆಯಲ್ಲಿ ಕೊರೊನಾಗೆ ಈವರೆಗೂ 24 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 926ಕ್ಕೇರಿಕೆಯಾಗಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಿಂದ ಇಂದು 27 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 404 ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಸದ್ಯ 498 ಕೊರೊನಾ ಪಾಸಿಟಿವ್ ಸಕ್ರಿಯ ಕೇಸ್ಗಳಿವೆ.
![corona updates in karnataka](https://etvbharatimages.akamaized.net/etvbharat/prod-images/kn-bgm-05-18-corona-137-positive-7201786_18072020205203_1807f_1595085723_332.jpg)
ಶಿವಮೊಗ್ಗ: ಇಂದು 49 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು ಒಂದೇ ದಿನ 83 ಜನ ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದಾರೆ. ಇದುವರೆಗೂ ಒಟ್ಟು 400 ಜನ ಗುಣಮುಖರಾಗಿದ್ದಾರೆ. ಇಂದು ಕೊರೊನಾದಿಂದ ಒಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 397 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ರುದ್ರತಾಂಡವ ಮುಂದುವರೆದಿದ್ದು, ಇಂದು ಐವರನ್ನು ಕೊರೊನಾ ಸೋಂಕು ಬಲಿ ಪಡೆದಿದೆ. ಇದರೊಂದಿಗೆ ಮೃತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ 4 ಮತ್ತು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ವೃದ್ಧೆಯೊಬ್ಬಳು ಸೇರಿದಂತೆ ಐದು ಜನ ಮೃತಪಟ್ಟಿದ್ದಾರೆ. ಇಂದು 82 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 124 ಜನ ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 2,674ಕ್ಕೆ ಹಾಗೂ ಗುಣಮುಖರಾದವರ ಸಂಖ್ಯೆ 1,691ಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆ 43 ಹಾಗೂ ಸದ್ಯ 949 ಆ್ಯಕ್ಟಿವ್ ಪ್ರಕರಣಗಳಿವೆ.
![corona updates in karnataka](https://etvbharatimages.akamaized.net/etvbharat/prod-images/kn-klb-04-corona-five-death-7208086_18072020211720_1807f_1595087240_1066.png)
ಮೈಸೂರು: ಇಂದು 101 ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಒಟ್ಟಾರೆ ಸಕ್ರಿಯ ಸೋಂಕಿತರ ಸಂಖ್ಯೆ 880ಕ್ಕೆ ಏರಿದೆ. ಕೊರೊನಾ ಸೋಂಕಿತರ ಸಂಪರ್ಕದಿಂದ 32 ಮಂದಿಗೆ, ಐಎಲ್ಐ 37, ಅಂತರ್ ಜಿಲ್ಲೆ ಪ್ರಯಾಣ ಮಾಡಿದ 18 ಮಂದಿಗೆ, ಎಸ್ಎಆರ್ಐನಿಂದ 9 ಮಂದಿಗೆ, ರೋಗ ಲಕ್ಷಣಗಳುಳ್ಳ 5 ಮಂದಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ, 101 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ತೀವ್ರ ಉಸಿರಾಟದ ತೊಂದರೆಯಿಂದ ಇಬ್ಬರು ಮೃತಪಟ್ಟರೆ, ಗುಣಮುಖರಾದ 24 ಮಂದಿ ಡಿಸ್ಚಾಜ್೯ ಆಗಿದ್ದಾರೆ. 880 ಸಕ್ರಿಯ ಪ್ರಕರಣಗಳಿದ್ದು, 59 ಮಂದಿ ಈವರೆಗೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![corona updates in karnataka](https://etvbharatimages.akamaized.net/etvbharat/prod-images/kn-mys-05-corona-vis-ka10003_18072020203822_1807f_1595084902_109.jpg)
ಬಸವಕಲ್ಯಾಣ: ನಗರ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಇಂದು 17 ಹೊಸ ಪ್ರಕರಣಗಳು ಧೃಡಪಟ್ಟಿವೆ. ತಾಲೂಕಿನಲ್ಲಿ ಇದುವರೆಗೆ ಸೋಂಕು ಪೀಡಿತರ ಸಂಖ್ಯೆ 322ಕ್ಕೆ ತಲುಪಿದ್ದು, ಈ ಪೈಕಿ 250ಕ್ಕೂ ಅಧಿಕ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ನಗರದಲ್ಲಿ 9 ಜನ, ಗ್ರಾಮೀಣ ಭಾಗದ 8 ಜನರಿಗೆ ಸೋಂಕು ವಕ್ಕರಿಸಿದೆ.
ಮಂಡ್ಯ: ಜಿಲ್ಲೆಯಲ್ಲಿ ಕೊರೊನಾಗೆ ನಿವೃತ್ತ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ. ಮಂಡ್ಯ ತಾಲ್ಲೂಕಿನಲ್ಲೇ ಇಬ್ಬರ ಬಲಿಯಾಗಿದೆ. 42 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಮಂಡ್ಯ 19, ಮದ್ದೂರು 15, ಶ್ರೀರಂಗಪಟ್ಟಣ 4, ಪಾಂಡವಪುರ 3 ಹಾಗೂ ಕೆ.ಆರ್.ಪೇಟೆ ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿವೆ.
ರಾಯಚೂರು: ಜಿಲ್ಲೆಯಲ್ಲಿ 16 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 964ಕ್ಕೆ ತಲುಪಿದೆ. ರಾಯಚೂರು 9, ಮಾನ್ವಿ 1, ಸಿಂಧನೂರು ತಾಲೂಕಿನಲ್ಲಿ 6 ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ 570 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 381 ಸಕ್ರಿಯ ಪ್ರಕರಣಗಳಿವೆ.
ರಾಮನಗರ: ಜಿಲ್ಲೆಯಲ್ಲಿ 14 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 428ಕ್ಕೆ ಏರಿಕೆಯಾಗಿದೆ. ಚನ್ನಪಟ್ಟಣ 3, ಮಾಗಡಿ 5, ಕನಕಪುರ 5, ರಾಮನಗರ ತಾಲೂಕಿನಲ್ಲಿ 1 ಪ್ರಕರಣ ದಾಖಲಾಗಿವೆ. ಸೋಂಕಿತರನ್ನ ಚಿಕಿತ್ಸೆಗಾಗಿ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 30 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.