ETV Bharat / state

ಹುಲಿ ಉಗುರು ಪೆಂಡೆಂಟ್​ ಪ್ರಕರಣ: ವರ್ತೂರು ಸಂತೋಷ್​​ಗೆ ಷರತ್ತುಬದ್ಧ ಜಾಮೀನು ಮಂಜೂರು

author img

By ETV Bharat Karnataka Team

Published : Oct 27, 2023, 4:46 PM IST

ಹುಲಿ ಉಗುರು ಪೆಂಡೆಂಟ್​ ಧರಿಸಿರುವ ಪ್ರಕರಣದಲ್ಲಿ ಬಂಧಿತನಾಗಿದ್ದ ಕನ್ನಡ ಬಿಗ್​ಬಾಸ್ ರಿಯಾಲಿಟಿ ಶೋ ಸ್ಫರ್ಧಿ ವರ್ತೂರು ಸಂತೋಷ್​ಗೆ ಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ.

court-granted-conditional-bail-to-varthur-santhosh
ವರ್ತೂರು ಸಂತೋಷ್​​ಗೆ ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದ ಮೇಲೆ ಅರಣ್ಯ ಅಧಿಕಾರಿಗಳಿಂದ ಬಂಧಿತನಾಗಿದ್ದ ಕನ್ನಡ ಬಿಗ್​ಬಾಸ್ ರಿಯಾಲಿಟಿ ಶೋ ಸ್ಫರ್ಧಿ ವರ್ತೂರ್ ಸಂತೋಷ್​ಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಾಲ್ಕು ಸಾವಿರ ನಗದು ಭದ್ರತೆ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ತಿಳಿಸಿ, ನಗರದ 2ನೇ ಎಸಿಜೆಎಂ ನ್ಯಾಯಾಲಯವು ಜಾಮೀನು ನೀಡಿತು.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸಂತೋಷ್ ಇಂದು ಸಂಜೆಯೊಳಗೆ ಬಿಡುಗಡೆ ಆಗುವ ಸಾಧ್ಯತೆಯಿದೆ. ವರ್ತೂರು ಸಂತೋಷ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ್ದ ಎರಡನೇ ಎಸಿಜೆಎಂ ನ್ಯಾಯಾಲಯವು ಇಂದಿಗೆ ಆದೇಶ ಕಾಯ್ದಿರಿಸಿತ್ತು. ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರ್ಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು‌ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ್ದರು.

ಹುಲಿ ಉಗುರು ಪೆಂಡೆಂಟ್ ಹೊಂದಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುವಾಗಲೇ ಸಂತೋಷ್​ನನ್ನು ಬಂಧಿಸಿದ್ದರು. ಈ ವೇಳೆ ಸಂತೋಷ್ ಧರಿಸಿದ್ದ ಹುಲಿ ಉಗುರು ವಶಕ್ಕೆ ಪಡೆದುಕೊಂಡಿದ್ದರು. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನ ಆಗುತ್ತಿದ್ದಂತೆ ಸಂತೋಷ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿ ಆಕ್ಷೇಪಣಾ ಅರ್ಜಿಯನ್ನು ಕಳೆದ ಬುಧವಾರ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿತ್ತು. ಬಳಿಕ ಆಕ್ಷೇಪಣಾ ಅರ್ಜಿ ಸಲ್ಲಿಸದೆ ಒಂದು ದಿನ ಕಾಲಾವಕಾಶ ಪಡೆದ ಸರ್ಕಾರಿ ಅಭಿಯೋಜಕರು ನಿನ್ನೆಯಷ್ಟೇ ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ ಮಾಡಿದ್ದರು.

ಆರೋಪಿ ಪರ ವಾದ ಮಂಡಿಸಿದ್ದ ವಕೀಲ ಕೆ.ಎನ್.ನಟರಾಜ್​ ಮಾಧ್ಯಮಗಳೊಂದಿಗೆ ಮಾತನಾಡಿ, ''ಕೃಷಿ ಕುಟುಂಬದ ಹಿನ್ನೆಲೆ ಹೊಂದಿರುವ ಸಂತೋಷ್‌ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ. ಹುಲಿ‌ ಉಗುರಿನ‌‌ ಡಾಲರ್ ಧರಿಸಿರುವ ಆರೋಪದಡಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನನ್ನ‌ ಕಕ್ಷಿದಾರರನ್ನು ವೀರಪ್ಪನ್ ರೀತಿಯಲ್ಲಿ ನಡೆಸಿಕೊಂಡಿದ್ದಾರೆ. ಹುಲಿ ಉಗುರು ಪೆಂಡೆಂಟ್ ಹೊಂದಿರುವ ನಟ, ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿರುವ ಅಧಿಕಾರಿಗಳು ಸಂತೋಷ್ ಬಂಧನಕ್ಕೂ ಮುನ್ನ ಯಾಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಪ್ರಶ್ನಿಸಿದ್ದರು. ಹೊಸೂರು ಮೂಲದ ವ್ಯಕ್ತಿಯೋರ್ವನಿಂದ ಸಂತೋಷ್ ಅವರು ಹುಲಿ ಉಗುರು ಖರೀದಿ ಮಾಡಿದ್ದಾರೆ ಎಂಬುದು ಉಹಾಪೋಹವಾಗಿದೆ. ಸಂತೋಷ್ ಮನೆಯಲ್ಲಿ ಮೊದಲಿನಿಂದಲೂ ಹುಲಿ ಉಗುರು ಇತ್ತು" ಎಂದು ತಿಳಿಸಿದ್ದರು‌.

ಇದನ್ನೂ ಓದಿ: ಹುಲಿ ಉಗುರು ಡಾಲರ್ ಧರಿಸಿದ ಆರೋಪ: ನಾಳೆಗೆ ಸಂತೋಷ್​ನ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದ ಮೇಲೆ ಅರಣ್ಯ ಅಧಿಕಾರಿಗಳಿಂದ ಬಂಧಿತನಾಗಿದ್ದ ಕನ್ನಡ ಬಿಗ್​ಬಾಸ್ ರಿಯಾಲಿಟಿ ಶೋ ಸ್ಫರ್ಧಿ ವರ್ತೂರ್ ಸಂತೋಷ್​ಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಾಲ್ಕು ಸಾವಿರ ನಗದು ಭದ್ರತೆ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ತಿಳಿಸಿ, ನಗರದ 2ನೇ ಎಸಿಜೆಎಂ ನ್ಯಾಯಾಲಯವು ಜಾಮೀನು ನೀಡಿತು.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸಂತೋಷ್ ಇಂದು ಸಂಜೆಯೊಳಗೆ ಬಿಡುಗಡೆ ಆಗುವ ಸಾಧ್ಯತೆಯಿದೆ. ವರ್ತೂರು ಸಂತೋಷ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ್ದ ಎರಡನೇ ಎಸಿಜೆಎಂ ನ್ಯಾಯಾಲಯವು ಇಂದಿಗೆ ಆದೇಶ ಕಾಯ್ದಿರಿಸಿತ್ತು. ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರ್ಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು‌ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ್ದರು.

ಹುಲಿ ಉಗುರು ಪೆಂಡೆಂಟ್ ಹೊಂದಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುವಾಗಲೇ ಸಂತೋಷ್​ನನ್ನು ಬಂಧಿಸಿದ್ದರು. ಈ ವೇಳೆ ಸಂತೋಷ್ ಧರಿಸಿದ್ದ ಹುಲಿ ಉಗುರು ವಶಕ್ಕೆ ಪಡೆದುಕೊಂಡಿದ್ದರು. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನ ಆಗುತ್ತಿದ್ದಂತೆ ಸಂತೋಷ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿ ಆಕ್ಷೇಪಣಾ ಅರ್ಜಿಯನ್ನು ಕಳೆದ ಬುಧವಾರ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿತ್ತು. ಬಳಿಕ ಆಕ್ಷೇಪಣಾ ಅರ್ಜಿ ಸಲ್ಲಿಸದೆ ಒಂದು ದಿನ ಕಾಲಾವಕಾಶ ಪಡೆದ ಸರ್ಕಾರಿ ಅಭಿಯೋಜಕರು ನಿನ್ನೆಯಷ್ಟೇ ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ ಮಾಡಿದ್ದರು.

ಆರೋಪಿ ಪರ ವಾದ ಮಂಡಿಸಿದ್ದ ವಕೀಲ ಕೆ.ಎನ್.ನಟರಾಜ್​ ಮಾಧ್ಯಮಗಳೊಂದಿಗೆ ಮಾತನಾಡಿ, ''ಕೃಷಿ ಕುಟುಂಬದ ಹಿನ್ನೆಲೆ ಹೊಂದಿರುವ ಸಂತೋಷ್‌ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ. ಹುಲಿ‌ ಉಗುರಿನ‌‌ ಡಾಲರ್ ಧರಿಸಿರುವ ಆರೋಪದಡಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನನ್ನ‌ ಕಕ್ಷಿದಾರರನ್ನು ವೀರಪ್ಪನ್ ರೀತಿಯಲ್ಲಿ ನಡೆಸಿಕೊಂಡಿದ್ದಾರೆ. ಹುಲಿ ಉಗುರು ಪೆಂಡೆಂಟ್ ಹೊಂದಿರುವ ನಟ, ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿರುವ ಅಧಿಕಾರಿಗಳು ಸಂತೋಷ್ ಬಂಧನಕ್ಕೂ ಮುನ್ನ ಯಾಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಪ್ರಶ್ನಿಸಿದ್ದರು. ಹೊಸೂರು ಮೂಲದ ವ್ಯಕ್ತಿಯೋರ್ವನಿಂದ ಸಂತೋಷ್ ಅವರು ಹುಲಿ ಉಗುರು ಖರೀದಿ ಮಾಡಿದ್ದಾರೆ ಎಂಬುದು ಉಹಾಪೋಹವಾಗಿದೆ. ಸಂತೋಷ್ ಮನೆಯಲ್ಲಿ ಮೊದಲಿನಿಂದಲೂ ಹುಲಿ ಉಗುರು ಇತ್ತು" ಎಂದು ತಿಳಿಸಿದ್ದರು‌.

ಇದನ್ನೂ ಓದಿ: ಹುಲಿ ಉಗುರು ಡಾಲರ್ ಧರಿಸಿದ ಆರೋಪ: ನಾಳೆಗೆ ಸಂತೋಷ್​ನ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.