ETV Bharat / state

ಇಸ್ರೇಲ್ ಪ್ರಧಾನಿಗೆ ಕೋವಿಡ್ ಪಾಸಿಟಿವ್: ಪ್ರಧಾನಿ ಮೋದಿ ರಾಜ್ಯ ಪ್ರವಾಸ ರದ್ದು

author img

By

Published : Mar 28, 2022, 8:15 PM IST

ಇಸ್ರೇಲ್​ ಪ್ರಧಾನಿ ನಫ್ತಾಲಿ ಬೆನೆಟ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಪ್ರವಾಸ ರದ್ದಾಗಿದೆ. ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಬೇಕಿತ್ತು.

Covid positives to Israeli PM
ಇಸ್ರೇಲ್ ಪ್ರಧಾನಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕೋವಿಡ್​​ ಸೋಂಕು ತಗುಲಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದಾಗಿದೆ.​ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಏಪ್ರಿಲ್​ 5 ರಂದು ಮೋದಿ ರಾಜ್ಯಕ್ಕೆ ಆಗಮಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ಪ್ರವಾಸ ರದ್ದುಗೊಂಡಿರುವ ಹಿನ್ನೆಲೆ ಮತ್ತೊಂದು ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಏ. 5 ರಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಆದ್ರೆ ನಫ್ತಾಲಿ ಬೆನೆಟ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆ ಮೋದಿ ರಾಜ್ಯ ಭೇಟಿ ರದ್ದುಗೊಂಡಿದೆ‌.

ಇದನ್ನೂ ಓದಿ: SSLC ಪರೀಕ್ಷೆ: 20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು.. ಹಿಜಾಬ್​ ತೆಗೆಯದ ಮೇಲ್ವಿಚಾರಕಿ ಅಮಾನತು

ಏಪ್ರಿಲ್ 5 ರಂದು 3 ಕಾರ್ಯಕ್ರಮಗಳಲ್ಲಿ ಮೋದಿ ಮತ್ತು ಬೆನೆಟ್ ಪಾಲ್ಗೊಳ್ಳಬೇಕಿತ್ತು. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಟಾಟಾ ಸಹಭಾಗಿತ್ವದಲ್ಲಿ ಮೇಲ್ದರ್ಜೆಗೇರಿಸಿದ 150 ಐಟಿಐ ಕಾಲೇಜುಗಳ ಉದ್ಘಾಟನೆ ಮತ್ತು ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಇದೀಗ ನಿಗದಿತ ಪ್ರವಾಸ ರದ್ದುಗೊಂಡಿದೆ.

ಬೆಂಗಳೂರು: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕೋವಿಡ್​​ ಸೋಂಕು ತಗುಲಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದಾಗಿದೆ.​ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಏಪ್ರಿಲ್​ 5 ರಂದು ಮೋದಿ ರಾಜ್ಯಕ್ಕೆ ಆಗಮಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ಪ್ರವಾಸ ರದ್ದುಗೊಂಡಿರುವ ಹಿನ್ನೆಲೆ ಮತ್ತೊಂದು ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಏ. 5 ರಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಆದ್ರೆ ನಫ್ತಾಲಿ ಬೆನೆಟ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆ ಮೋದಿ ರಾಜ್ಯ ಭೇಟಿ ರದ್ದುಗೊಂಡಿದೆ‌.

ಇದನ್ನೂ ಓದಿ: SSLC ಪರೀಕ್ಷೆ: 20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು.. ಹಿಜಾಬ್​ ತೆಗೆಯದ ಮೇಲ್ವಿಚಾರಕಿ ಅಮಾನತು

ಏಪ್ರಿಲ್ 5 ರಂದು 3 ಕಾರ್ಯಕ್ರಮಗಳಲ್ಲಿ ಮೋದಿ ಮತ್ತು ಬೆನೆಟ್ ಪಾಲ್ಗೊಳ್ಳಬೇಕಿತ್ತು. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಟಾಟಾ ಸಹಭಾಗಿತ್ವದಲ್ಲಿ ಮೇಲ್ದರ್ಜೆಗೇರಿಸಿದ 150 ಐಟಿಐ ಕಾಲೇಜುಗಳ ಉದ್ಘಾಟನೆ ಮತ್ತು ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಇದೀಗ ನಿಗದಿತ ಪ್ರವಾಸ ರದ್ದುಗೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.