ETV Bharat / state

ಕೊರೊನಾ ರೂಪಾಂತರ ವೈರಾಣು ಭೀತಿ : ಮುಂಜಾಗ್ರತಾ ಕ್ರಮದ ಕುರಿತು ಸರ್ಕಾರಕ್ಕೆ ವರದಿ ನೀಡಿದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ

author img

By

Published : Dec 23, 2020, 6:41 AM IST

ಬ್ರಿಟನ್​​ನಲ್ಲಿ ಕೊರೊನಾ ರೂಪಾಂತರ ವೈರಾಣು ಪತ್ತೆಯಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಕೋವಿಡ್ ಕಟ್ಟುನಿಟ್ಟಾದ ಮಾರ್ಗಸೂಚಿಯನ್ನು ಹೊರಡಿಸಿದೆ.

Covid Technical Advisory Committee Given Report to Government About New Coronavirus Strain
ಸಿಎಂ ಸಭೆ

ಬೆಂಗಳೂರು: ಕೊರೊನಾ ರೂಪಾಂತರ ವೈರಾಣು ಭೀತಿ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರ್ಚುವಲ್ ಸಭೆ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ.

ಬ್ರಿಟನ್​​ನಲ್ಲಿ ಕೊರೊನಾ ರೂಪಾಂತರ ವೈರಾಣು ಪತ್ತೆಯಾದ ನಂತರ ರಾಜ್ಯಕ್ಕೆ ಬ್ರಿಟನ್​​ನಿಂದ ಪ್ರಯಾಣಿಕರು ಆಗಮಿಸಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತು ವರದಿ ನೀಡಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೂಚನೆ ನೀಡಿದ್ದರು. ಅದರಂತೆ ವಿಡಿಯೋ ಕಾನ್ಸರೆನ್ಸ್‌ ಮೂಲಕ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ವೈರಾಣು ತಜ್ಞ ಡಾ. ರವಿ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ನಿರ್ದೇಶಕ ಡಾ. ನಾಗರಾಜ್ ಮತ್ತಿತರ ಸದಸ್ಯರ ಜೊತೆ ಸಭೆ ನಡೆಸಿದರು.

ರೂಪಾಂತರ ವೈರಾಣು ಹಬ್ಬುವಿಕೆ ತೀವ್ರವಾಗಿದೆ, ಹಾಗಾಗಿ ಕೋವಿಡ್ ಮಾರ್ಗಸೂಚಿಯಂತೆ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಆಗಾಗ ಕೈಗಳಿಗೆ ಸ್ಯಾನಿಟೈಸರ್ ಹಾಕುವುದನ್ನು ತಪ್ಪದೆ ಪಾಲಿಸಬೇಕು. ಇರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ.

ಇದನ್ನೂ ಓದಿ : ಕೊರೊನಾ ರೂಪಾಂತರ ತಡೆಗೆ ಸರ್ಕಾರದೊಂದಿಗೆ ಸಹಕರಿಸಿ; ಸಿಎಂ ಮನವಿ

ಹೊಸ ವರ್ಷದಿಂದ ಶಾಲೆಗಳ ಆರಂಭಕ್ಕೆ ಸರ್ಕಾರ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಪಟ್ಟಂತೆಯೂ ಸಮಿತಿ ಚರ್ಚೆ ನಡೆಸಿ ಸಲಹೆಯನ್ನು ಸರ್ಕಾರಕ್ಕೆ ನೀಡಿದೆ ಎನ್ನಲಾಗುತ್ತಿದೆ.

ಸದ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ವರದಿಯನ್ನು ಆರೋಗ್ಯ ಸಚಿವ ಡಾ.ಸುಧಾಕರ್​​ಗೆ ನೀಡಿದ್ದು, ವರದಿಯನ್ನು ಸಿಎಂಗೆ ನೀಡಲಿದ್ದಾರೆ. ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ತಾಂತ್ರಿಕ ವರದಿ ಕುರಿತು ಚರ್ಚೆ ನಡೆಸಿ ವರದಿಯನುಸಾರ ಮುಂದಿನ ಕ್ರಮಕ್ಕೆ ಆದೇಶ ನೀಡಲಿದ್ದಾರೆ.

ಬೆಂಗಳೂರು: ಕೊರೊನಾ ರೂಪಾಂತರ ವೈರಾಣು ಭೀತಿ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರ್ಚುವಲ್ ಸಭೆ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ.

ಬ್ರಿಟನ್​​ನಲ್ಲಿ ಕೊರೊನಾ ರೂಪಾಂತರ ವೈರಾಣು ಪತ್ತೆಯಾದ ನಂತರ ರಾಜ್ಯಕ್ಕೆ ಬ್ರಿಟನ್​​ನಿಂದ ಪ್ರಯಾಣಿಕರು ಆಗಮಿಸಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತು ವರದಿ ನೀಡಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೂಚನೆ ನೀಡಿದ್ದರು. ಅದರಂತೆ ವಿಡಿಯೋ ಕಾನ್ಸರೆನ್ಸ್‌ ಮೂಲಕ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ವೈರಾಣು ತಜ್ಞ ಡಾ. ರವಿ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ನಿರ್ದೇಶಕ ಡಾ. ನಾಗರಾಜ್ ಮತ್ತಿತರ ಸದಸ್ಯರ ಜೊತೆ ಸಭೆ ನಡೆಸಿದರು.

ರೂಪಾಂತರ ವೈರಾಣು ಹಬ್ಬುವಿಕೆ ತೀವ್ರವಾಗಿದೆ, ಹಾಗಾಗಿ ಕೋವಿಡ್ ಮಾರ್ಗಸೂಚಿಯಂತೆ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಆಗಾಗ ಕೈಗಳಿಗೆ ಸ್ಯಾನಿಟೈಸರ್ ಹಾಕುವುದನ್ನು ತಪ್ಪದೆ ಪಾಲಿಸಬೇಕು. ಇರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ.

ಇದನ್ನೂ ಓದಿ : ಕೊರೊನಾ ರೂಪಾಂತರ ತಡೆಗೆ ಸರ್ಕಾರದೊಂದಿಗೆ ಸಹಕರಿಸಿ; ಸಿಎಂ ಮನವಿ

ಹೊಸ ವರ್ಷದಿಂದ ಶಾಲೆಗಳ ಆರಂಭಕ್ಕೆ ಸರ್ಕಾರ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಪಟ್ಟಂತೆಯೂ ಸಮಿತಿ ಚರ್ಚೆ ನಡೆಸಿ ಸಲಹೆಯನ್ನು ಸರ್ಕಾರಕ್ಕೆ ನೀಡಿದೆ ಎನ್ನಲಾಗುತ್ತಿದೆ.

ಸದ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ವರದಿಯನ್ನು ಆರೋಗ್ಯ ಸಚಿವ ಡಾ.ಸುಧಾಕರ್​​ಗೆ ನೀಡಿದ್ದು, ವರದಿಯನ್ನು ಸಿಎಂಗೆ ನೀಡಲಿದ್ದಾರೆ. ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ತಾಂತ್ರಿಕ ವರದಿ ಕುರಿತು ಚರ್ಚೆ ನಡೆಸಿ ವರದಿಯನುಸಾರ ಮುಂದಿನ ಕ್ರಮಕ್ಕೆ ಆದೇಶ ನೀಡಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.