ETV Bharat / state

ಸಿಎಎ-ಎನ್​​ಆರ್​ಸಿ ವಿರೋಧಿಸಿ ಜ. 8ರಂದು ಭಾರತ್​ ಬಂದ್​ಗೆ ಸಿಪಿಐ ಕರೆ​ - CPA rally against CAA-NRC

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​ಸಿ) ವಿರುದ್ಧ ಜನವರಿ 1ರಿಂದ 7ರವರೆಗೆ ಎಡಪಕ್ಷಗಳು ದೇಶಾದ್ಯಂತ ರ‍್ಯಾಲಿ ನಡೆಸಲಿದ್ದು, ಜನವರಿ 8ರಂದು ಭಾರತ್​​ ಬಂದ್​ ಮಾಡಲಿದ್ದೇವೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜ ತಿಳಿಸಿದ್ದಾರೆ.

Strike from CPI on January 8th
ಸಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜ ಮಾಹಿತಿ ನೀಡಿದರು
author img

By

Published : Dec 27, 2019, 4:48 PM IST

ಬೆಂಗಳೂರು: ಡಿಸೆಂಬರ್ 25ರಂದು ನಗರದ ಸಿಪಿಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜ ಪ್ರತಿಕ್ರಿಯಿಸಿದ್ದಾರೆ.

ಸಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜ

ಮಲ್ಲೇಶ್ವರಂನ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ನಮ್ಮ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಲು ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಘಟನೆಯನ್ನು ಸೂಕ್ತ ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​ಸಿ) ವಿರುದ್ಧ ಜನವರಿ 1ರಿಂದ 7ರವರೆಗೆ ಎಡಪಕ್ಷಗಳು ದೇಶಾದ್ಯಂತ ರ‍್ಯಾಲಿ ನಡೆಸಲಿದ್ದು, ಜನವರಿ 8ರಂದು ಭಾರತ ಬಂದ್​ ಮಾಡಲಿದ್ದೇವೆ ಎಂದರು. ಎಡ ಪಕ್ಷಗಳು ಹಮ್ಮಿಕೊಂಡಿರುವ ಬಂದ್​ಗೆ ಈಗಾಗಲೇ ವಿವಿಧ ಸಂಘ-ಸಂಸ್ಥೆಗಳು ಹಾಗೂ ಕಾರ್ಮಿಕ ಸಮೂಹಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದರು.

ಈ ವೇಳೆ ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಬೆಂಗಳೂರು: ಡಿಸೆಂಬರ್ 25ರಂದು ನಗರದ ಸಿಪಿಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜ ಪ್ರತಿಕ್ರಿಯಿಸಿದ್ದಾರೆ.

ಸಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜ

ಮಲ್ಲೇಶ್ವರಂನ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ನಮ್ಮ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಲು ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಘಟನೆಯನ್ನು ಸೂಕ್ತ ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್​ಆರ್​ಸಿ) ವಿರುದ್ಧ ಜನವರಿ 1ರಿಂದ 7ರವರೆಗೆ ಎಡಪಕ್ಷಗಳು ದೇಶಾದ್ಯಂತ ರ‍್ಯಾಲಿ ನಡೆಸಲಿದ್ದು, ಜನವರಿ 8ರಂದು ಭಾರತ ಬಂದ್​ ಮಾಡಲಿದ್ದೇವೆ ಎಂದರು. ಎಡ ಪಕ್ಷಗಳು ಹಮ್ಮಿಕೊಂಡಿರುವ ಬಂದ್​ಗೆ ಈಗಾಗಲೇ ವಿವಿಧ ಸಂಘ-ಸಂಸ್ಥೆಗಳು ಹಾಗೂ ಕಾರ್ಮಿಕ ಸಮೂಹಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದರು.

ಈ ವೇಳೆ ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Intro:Body:ಜನವರಿ 1 ರಿಂದ 7ರ ವರೆಗೆ ಸಿ ಎ ಎ ಹಾಗೂ ಎನ್ ಆರ್ ಸಿ ವಿರುದ್ಧ ರಾಲಿ; ಜನವರಿ 8 ಭಾರತ ಸ್ಟ್ರೈಕ್: ಸಿ ಪಿ ಐ


ಬೆಂಗಳೂರು: ಡಿಸೆಂಬರ್ 25ರಂದು ನಗರದ ಸಿ ಪಿ ಐ ಕಚೇರಿಯಲ್ಲಿ ಕೆಲ ಕಿಡಿಗೇಡಿಗಳು ಕಚೇರಿಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ ಘಟನೆಗೆ ಇಂದು ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ ರಾಜ ಸುದ್ದಿಗೋಷ್ಠಿ ಕರೆದಿದ್ದರು.


ಮಲ್ಲೇಶ್ವರಂನ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಡಿ ರಾಜ, ನಮ್ಮ ಕಚೇರಿಯ ಮೇಲೆ ಬಂದ ಕಿಡಿಗೇಡಿಗಳು ನನ್ನ ಪ್ರಕಾರ ಆರೆಸ್ಸೆಸ್ ಹಾಗೂ ಬಿಜೆಪಿ ಪಕ್ಷದವರು ಆಗಿರುತ್ತಾರೆ ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಈ ಘಟನೆಯ ಕಾನೂನು ತನಿಖೆ ಮಾಡಬೇಕು ಹಾಗೂ ತಪ್ಪಿತಸ್ಥರನ್ನು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಮಾಡಿದರು.


ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಜನವರಿ ಒಂದರಿಂದ ಏಳರವರೆಗೆ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ವಿರೋಧಿಸಿ ಎಡಪಕ್ಷಗಳು ದೇಶಾದ್ಯಂತ ರಾಲಿ ಮಾಡಲಿದೆ ಹಾಗೂ ಜನವರಿ ಎಂಟರಂದು ರೈತರು ಪಡುತ್ತಿರುವ ಕಷ್ಟಗಳನ್ನು ಸರ್ಕಾರದ ಕಿವಿ ಮುಟ್ಟಿಸಲು ಭಾರತ್ ಸ್ಟ್ರೈಕ್ ಮಾಡಲಿದ್ದೇವೆ ಎಂದು ತಿಳಿಸಿದರು.


ಎಡಪಕ್ಷಗಳು ಹಮ್ಮಿಕೊಂಡಿರುವ ಸ್ಟ್ರೈಕ್ ಬೆಂಬಲವನ್ನು ಸಾಕಷ್ಟು ಸಂಘ-ಸಂಸ್ಥೆಗಳು ಹಾಗೂ ಕಾರ್ಮಿಕ ಸಮೂಹಗಳು ಕೈ ಜೋಡಿಸಿವೆ ಎಂದು ಇವರು ಹೇಳಿದರು. ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ಬಗ್ಗೆ ಕಿಡಿಕಾರಿದ ಇವರು ಕೇಂದ್ರಸರ್ಕಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ನಿರ್ದೇಶನ ನೀಡುತ್ತಿದೆ ಇದು ಸಂವಿಧಾನದ ವಿರುದ್ಧ ಬಿಜೆಪಿ ಸರ್ಕಾರ ಸಂವಿಧಾನವನ್ನು ತಳ್ಳಿಹಾಕಿ ವಿಚಾರಧಾರೆಯನ್ನು ಭಾರತದ ಪ್ರಜೆಗಳ ಮೇಲೆ ಹೇರುತ್ತಿದ್ದಾರೆ ಇದು ಅಪಾಯಕಾರಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.


ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ವಿರುದ್ಧ ಆಗುತ್ತಿರುವ ಪ್ರತಿಭಟನೆಗೆ ಸೂಕ್ತ ನಾಯಕ ಇದ್ದಾರಾ ಎಂಬ ಈಟಿವಿ ಭಾರತ ಪ್ರಶ್ನೆಗೆ ಉತ್ತರಿಸಿದ ಇವರು ಹೌದು ಸೂಕ್ತ ನಾಯಕ ಸದ್ಯಕ್ಕೆ ಇಲ್ಲ ಆದರೆ ಕಾಲಕ್ರಮೇಣ ನಾಯಕರು ಚಳುವಳಿಗಳಿಂದ ಬೆಳೆಯುತ್ತಾರೆ ಎಂದು ಸ್ಪಷ್ಟೀಕರಣ ನೀಡಿದರು.


ಸುದ್ದಿಗೋಷ್ಠಿಯಲ್ಲಿ ಸಿ ಪಿ ಐ ಪಕ್ಷದ ಕರ್ನಾಟಕ ಕಾರ್ಯದರ್ಶಿ ಸಾತಿ ಸುಂದರೇಶ್, ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಂಡಿದ್ದರುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.