ETV Bharat / state

ಗ್ಯಾಸ್​ ಪೈಪ್​​ಲೈನ್​​ಗೆ ಹಾನಿಯಾದರೆ ಕ್ರಿಮಿನಲ್ ಕೇಸ್:  ಭಾಸ್ಕರ್ ರಾವ್ ಎಚ್ಚರಿಕೆ

author img

By

Published : Dec 24, 2019, 8:15 PM IST

Updated : Dec 24, 2019, 8:35 PM IST

ಗೇಲ್ ಗ್ಯಾಸ್ ಪೈಪ್‌ಲೈನ್ ಸೇರಿ ಇನ್ನಿತರ ವಸ್ತುಗಳಿಗೆ ಹಾನಿಯುಂಟು ಮಾಡುವ ದೂರುಗಳು ಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ತಿಳಿಸಿದರು.

Criminal case registration if gale gas pipeline material is damaged: Bhaskar Rao
ಗ್ಯಾಸ್​ ಪೈಪ್​​ಲೈನ್​​ಗೆ ಹಾನಿಯಾದರೆ ಕ್ರಿಮಿನಲ್ ಕೇಸ್:  ಭಾಸ್ಕರ್ ರಾವ್ ಎಚ್ಚರಿಕೆ

ಬೆಂಗಳೂರು: ಗೇಲ್ ಗ್ಯಾಸ್ ಪೈಪ್‌ಲೈನ್ ಸೇರಿ ಇನ್ನಿತರ ವಸ್ತುಗಳಿಗೆ ಹಾನಿಯುಂಟು ಮಾಡುವ ದೂರುಗಳು ಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಎಚ್ಚರಿಕೆ ನೀಡಿದ್ದಾರೆ.

ಗೇಲ್ ಗ್ಯಾಸ್ ಪೈಪ್ ಲೈನ್ ವಸ್ತುಗಳಿಗೆ ಹಾನಿಯುಂಟು ಮಾಡಿದರೆ ಕ್ರಿಮಿನಲ್ ಕೇಸ್ ದಾಖಲು: ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಇಂದು ಗೇಲ್ ಗ್ಯಾಸ್ ಲಿಮಿಟೆಡ್​​ನಿಂದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಗ್ಯಾಸ್ ವಿತರಣೆ ಕುರಿತ ‘ಸುರಕ್ಷತಾ ಜಾಗೃತಿ ಕಾರ್ಯಾಗಾರ'ದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಾಸ್ಕರ್‌ರಾವ್ ಉದ್ಯಾನನಗರಿ ಬೆಂಗಳೂರಿನಲ್ಲಿ ನೈಸರ್ಗಿಕ ಅನಿಲ ಪೈನ್ ಲೈನ್ ಅಳವಡಿಕೆ ಕಾರ್ಯ ವೇಗವಾಗಿ ನಡೆಯುತ್ತಿದೆ. ಆದರೆ ಇದರ ನಡುವೆ ಗೇಲ್ ಗ್ಯಾಸ್ ಪೈಪ್‌ಲೈನ್ ಸೇರಿ ಇನ್ನಿತರ ವಸ್ತುಗಳಿಗೆ ಹಾನಿಯುಂಟು ಮಾಡುವವರ ವಿರುದ್ಧ ದೂರುಗಳು ಹೆಚ್ಚಾಗುತ್ತಿದೆ. ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದರು.

ಮನೆ- ಮನೆಗಳಿಗೆ ಗ್ಯಾಸ್ ಪೂರೈಕೆ ಮಾಡುವ ಯೋಜನೆ ಸಾಕಷ್ಟು ಸವಾಲಿನದು. ಅದನ್ನು ಗೇಲ್ ಗ್ಯಾಸ್ ಸಂಸ್ಥೆ ಉತ್ತಮವಾಗಿ ಅನುಷ್ಠಾನಗೊಳಿಸುತ್ತಿದೆ. ಆದರೆ, ಕೆಲವೆಡೆ ಖಾಸಗಿ ವ್ಯಕ್ತಿಗಳು ನಡೆಸುತ್ತಿರುವ ಕಾಮಗಾರಿಗಳಿಂದಾಗಿ ಗ್ಯಾಸ್ ಪೈಪ್‌ಗಳಿಗೆ ಹಾನಿಯಾಗುತ್ತಿದೆ ಎಂಬ ದೂರುಗಳಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆಯೆಂದು ತಿಳಿಸಿದರು.

ಬೆಂಗಳೂರು: ಗೇಲ್ ಗ್ಯಾಸ್ ಪೈಪ್‌ಲೈನ್ ಸೇರಿ ಇನ್ನಿತರ ವಸ್ತುಗಳಿಗೆ ಹಾನಿಯುಂಟು ಮಾಡುವ ದೂರುಗಳು ಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಎಚ್ಚರಿಕೆ ನೀಡಿದ್ದಾರೆ.

ಗೇಲ್ ಗ್ಯಾಸ್ ಪೈಪ್ ಲೈನ್ ವಸ್ತುಗಳಿಗೆ ಹಾನಿಯುಂಟು ಮಾಡಿದರೆ ಕ್ರಿಮಿನಲ್ ಕೇಸ್ ದಾಖಲು: ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಇಂದು ಗೇಲ್ ಗ್ಯಾಸ್ ಲಿಮಿಟೆಡ್​​ನಿಂದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಗ್ಯಾಸ್ ವಿತರಣೆ ಕುರಿತ ‘ಸುರಕ್ಷತಾ ಜಾಗೃತಿ ಕಾರ್ಯಾಗಾರ'ದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಾಸ್ಕರ್‌ರಾವ್ ಉದ್ಯಾನನಗರಿ ಬೆಂಗಳೂರಿನಲ್ಲಿ ನೈಸರ್ಗಿಕ ಅನಿಲ ಪೈನ್ ಲೈನ್ ಅಳವಡಿಕೆ ಕಾರ್ಯ ವೇಗವಾಗಿ ನಡೆಯುತ್ತಿದೆ. ಆದರೆ ಇದರ ನಡುವೆ ಗೇಲ್ ಗ್ಯಾಸ್ ಪೈಪ್‌ಲೈನ್ ಸೇರಿ ಇನ್ನಿತರ ವಸ್ತುಗಳಿಗೆ ಹಾನಿಯುಂಟು ಮಾಡುವವರ ವಿರುದ್ಧ ದೂರುಗಳು ಹೆಚ್ಚಾಗುತ್ತಿದೆ. ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದರು.

ಮನೆ- ಮನೆಗಳಿಗೆ ಗ್ಯಾಸ್ ಪೂರೈಕೆ ಮಾಡುವ ಯೋಜನೆ ಸಾಕಷ್ಟು ಸವಾಲಿನದು. ಅದನ್ನು ಗೇಲ್ ಗ್ಯಾಸ್ ಸಂಸ್ಥೆ ಉತ್ತಮವಾಗಿ ಅನುಷ್ಠಾನಗೊಳಿಸುತ್ತಿದೆ. ಆದರೆ, ಕೆಲವೆಡೆ ಖಾಸಗಿ ವ್ಯಕ್ತಿಗಳು ನಡೆಸುತ್ತಿರುವ ಕಾಮಗಾರಿಗಳಿಂದಾಗಿ ಗ್ಯಾಸ್ ಪೈಪ್‌ಗಳಿಗೆ ಹಾನಿಯಾಗುತ್ತಿದೆ ಎಂಬ ದೂರುಗಳಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆಯೆಂದು ತಿಳಿಸಿದರು.

Intro:ಗೇಲ್ ಗ್ಯಾಸ್ ಪೈಪ್ ಲೈನ್ ವಸ್ತುಗಳಿಗೆ ಹಾನಿಯುಂಟು ಮಾಡಿದರೆ ಕ್ರಿಮಿನಲ್ ಕೇಸ್ ದಾಖಲು; ಪೊಲೀಸ್ ಆಯುಕ್ತ ಭಾಸ್ಕರ್ ರಾವ್..‌

ಬೆಂಗಳೂರು: ಉದ್ಯಾನನಗರೀ ಬೆಂಗಳೂರಿನಲ್ಲಿ ನೈಸರ್ಗಿಕ ಅನಿಲ ಪೈನ್ ಲೈನ್ ಅಳವಡಿಕೆ ಕಾರ್ಯ ವೇಗವಾಗಿ ನಡೆಯುತ್ತಿದೆ. ಆದರೆ ಇದರ ನಡುವೆ ಗೇಲ್ ಗ್ಯಾಸ್ ಪೈಪ್‌ಲೈನ್ ಸೇರಿ ಇನ್ನಿತರ ವಸ್ತುಗಳಿಗೆ ಹಾನಿಯುಂಟು ಮಾಡುವವರ ವಿರುದ್ಧ ದೂರುಗಳು ಹೆಚ್ಚಾಗುತ್ತಿದೆ..‌

ಹೀಗಾಗಿ ಇಂತಹ ದೂರುಗಳು ಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ತಿಳಿಸಿದ್ದರು..ಇಂದು ಗೇಲ್ ಗ್ಯಾಸ್ ಲಿಮಿಟೆಡ್ ವತಿಯಿಂದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಗ್ಯಾಸ್ ವಿತರಣೆ ಕುರಿತ ‘ಸುರಕ್ಷತಾ ಜಾಗೃತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮನೆ- ಮನೆಗಳಿಗೆ ಗ್ಯಾಸ್ ಪೂರೈಕೆ ಮಾಡುವ ಯೋಜನೆ ಸಾಕಷ್ಟು ಸವಾಲಿನದು. ಅದನ್ನು ಗೇಲ್ ಗ್ಯಾಸ್ ಸಂಸ್ಥೆ ಉತ್ತಮವಾಗಿ ಅನುಷ್ಠಾನಗೊಳಿಸುತ್ತಿದೆ. ಆದರೆ, ಕೆಲವೆಡೆ ಖಾಸಗಿ ವ್ಯಕ್ತಿಗಳು ನಡೆಸುತ್ತಿರುವ ಕಾಮಗಾರಿಗಳಿಂದಾಗಿ ಗ್ಯಾಸ್ ಪೈಪ್‌ಗಳಿಗೆ ಹಾನಿಯಾಗುತ್ತಿದೆ ಎಂಬ ದೂರುಗಳಿವೆ. ಅಂತಹ ಸಂದರ್ಭದಲ್ಲಿ ಗೇಲ್ ಸಂಸ್ಥೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೆ, ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ಇನ್ನು ಪೊಲೀಸ್ ಸಿಬ್ಬಂದಿಗಳಿಗಾಗಿ ನಗರದ ವಿವಿಧೆಡೆ 2 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಅವುಗಳ ಉದ್ಘಾಟನೆ ಮಾಡಬೇಕಿದೆ, ನಂತರ ಎಲ್ಲ ಮನೆಗಳಿಗೂ ಗೇಲ್ ಗ್ಯಾಸ್ ಸಂಪರ್ಕ ಒದಗಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು..‌.

ಇನ್ನು ಇದೇ ವೇಳೆ ಕಾರ್ಯಾಗಾರದಲ್ಲಿ ಎಂಟು ಸಂಸ್ಥೆಗಳ ಪ್ರಮುಖ ಪ್ರತಿನಿಧಿಗಳು, ಗೇಲ್ ಬೆಂಗಳೂರು ವಿಭಾಗದ ಪ್ರಧಾನ ವ್ಯವಸ್ಥಾಪಕ ವಿವೇಕ್ ಡಬ್ಲ್ಯೂ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

KN_BNG_2_GAS_SAFETY_SCRIPT_7201801Body:..Conclusion:..
Last Updated : Dec 24, 2019, 8:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.