ETV Bharat / state

ದಲಿತರ ಮೇಲೆ ಕಾಂಗ್ರೆಸ್ ಗೆ ಇರುವುದು ಬರೀ ಮೊಸಳೆ ಕಣ್ಣೀರು: ಸಚಿವ ಅಶೋಕ್ ಆರೋಪ

ದಲಿತ ಶಾಸಕನ ಮನೆ ಮೇಲೆ ದಾಳಿ ಆಗಿ ಕೊಲೆ ಯತ್ನ ನಡೆದಿತ್ತು. ಆದರೆ, ಘಟನೆಗೆ ಕಾರಣ ಆದವರನ್ನು ಬಂಧಿಸಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಾಗಲಿ ಅಥವಾ ಇತರ ಕಾಂಗ್ರೆಸ್ ನಾಯಕರಾಗಲಿ ಪ್ರತಿಭಟನೆ ಮಾಡಲಿಲ್ಲ ಎಂದು ಕಂದಾಯ ಸಚಿವ ಆರ್​.ಅಶೋಕ್​​ ವಾಗ್ದಾಳಿ ನಡೆಸಿದರು.

author img

By

Published : Nov 17, 2020, 2:04 PM IST

Updated : Nov 17, 2020, 5:31 PM IST

r-ashok
ಸಚಿವ ಆರ್​.ಅಶೋಕ್​​

ಬೆಂಗಳೂರು: ದಲಿತರ ಮೇಲೆ ಕಾಂಗ್ರೆಸ್​ಗೆ ಇರುವುದು ಬರೀ ಮೊಸಳೆ ಕಣ್ಣೀರು ಎನ್ನುವುದು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಸಾಬೀತಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬೆಂಬಲ ನೀಡಿ, ನ್ಯಾಯ ಕೊಡಿಸಿ ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಕಾಂಗ್ರೆಸ್ ನಾಯಕರ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದರೂ ಕಾಂಗ್ರೆಸ್ ಸಹಾಯ ಮಾಡಲಿಲ್ಲ ಎಂದರು.

ಕಂದಾಯ ಸಚಿವ ಆರ್​.ಅಶೋಕ್ ಮಾತನಾಡಿದರು

ಕಾಂಗ್ರೆಸ್ ನಾಯಕರು ಮಾಜಿ ಮೇಯರ್ ಸಂಪತ್ ರಾಜ್ ಪರವೋ ಅಥವಾ ತಮ್ಮದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಪರವೋ ಹೇಳಬೇಕು ಎಂದು ಟೀಕಿಸಿದರು.

ದಲಿತ ಶಾಸಕನ ಮನೆ ಮೇಲೆ ದಾಳಿ ಆಗಿ ಕೊಲೆ ಮಾಡುವ ಪ್ರಯತ್ನ ನಡೆದಿತ್ತು. ಆದರೆ, ಘಟನೆಗೆ ಕಾರಣ ಆದವರನ್ನು ಬಂಧಿಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯವರಾಗಲಿ ಅಥವಾ ಇತರ ಕಾಂಗ್ರೆಸ್ ನಾಯಕರಾಗಲಿ ಪ್ರತಿಭಟನೆ ಮಾಡಲಿಲ್ಲ ಎಂದು ಆರೋಪಿಸಿದರು.

ಕೇಂದ್ರದಿಂದ 577 ಕೋಟಿ ನೆರವು : ಕೇಂದ್ರದಿಂದ ಅಲ್ಪ ನೆರೆ ಪರಿಹಾರ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರ ಸರ್ಕಾರ ಸದ್ಯ 577 ಕೋಟಿ ರೂ. ಪರಿಹಾರ ಕೊಟ್ಟಿದೆ. ಹಾಗಾಗಿ, ಕೇಂದ್ರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಕೇಂದ್ರ ಮತ್ತೊಂದು‌ ಕಂತಿನ‌ ಪರಿಹಾರ ಕೊಡಲಿದೆ. ಮತ್ತಷ್ಟು ಪರಿಹಾರಕ್ಕೆ ಮನವಿ ಮಾಡುತ್ತೇವೆ ಎಂದ ಅವರು, ನೆರೆ ಪೀಡಿತ ಜಿಲ್ಲೆಗಳಲ್ಲಿ ಮನೆ ಕಳೆದುಕೊಂಡವರು ಪರಿಹಾರ ಪಡೆದಿಲ್ಲ. ಇನ್ನೂ ಕೆಲ ಕಂತಿನ ಪರಿಹಾರ ಪಡೆದಿಲ್ಲ. ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಸಂತ್ರಸ್ತರು ನೆರೆ ಪರಿಹಾರ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಬೆಂಗಳೂರು: ದಲಿತರ ಮೇಲೆ ಕಾಂಗ್ರೆಸ್​ಗೆ ಇರುವುದು ಬರೀ ಮೊಸಳೆ ಕಣ್ಣೀರು ಎನ್ನುವುದು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಸಾಬೀತಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬೆಂಬಲ ನೀಡಿ, ನ್ಯಾಯ ಕೊಡಿಸಿ ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಕಾಂಗ್ರೆಸ್ ನಾಯಕರ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದರೂ ಕಾಂಗ್ರೆಸ್ ಸಹಾಯ ಮಾಡಲಿಲ್ಲ ಎಂದರು.

ಕಂದಾಯ ಸಚಿವ ಆರ್​.ಅಶೋಕ್ ಮಾತನಾಡಿದರು

ಕಾಂಗ್ರೆಸ್ ನಾಯಕರು ಮಾಜಿ ಮೇಯರ್ ಸಂಪತ್ ರಾಜ್ ಪರವೋ ಅಥವಾ ತಮ್ಮದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಪರವೋ ಹೇಳಬೇಕು ಎಂದು ಟೀಕಿಸಿದರು.

ದಲಿತ ಶಾಸಕನ ಮನೆ ಮೇಲೆ ದಾಳಿ ಆಗಿ ಕೊಲೆ ಮಾಡುವ ಪ್ರಯತ್ನ ನಡೆದಿತ್ತು. ಆದರೆ, ಘಟನೆಗೆ ಕಾರಣ ಆದವರನ್ನು ಬಂಧಿಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯವರಾಗಲಿ ಅಥವಾ ಇತರ ಕಾಂಗ್ರೆಸ್ ನಾಯಕರಾಗಲಿ ಪ್ರತಿಭಟನೆ ಮಾಡಲಿಲ್ಲ ಎಂದು ಆರೋಪಿಸಿದರು.

ಕೇಂದ್ರದಿಂದ 577 ಕೋಟಿ ನೆರವು : ಕೇಂದ್ರದಿಂದ ಅಲ್ಪ ನೆರೆ ಪರಿಹಾರ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರ ಸರ್ಕಾರ ಸದ್ಯ 577 ಕೋಟಿ ರೂ. ಪರಿಹಾರ ಕೊಟ್ಟಿದೆ. ಹಾಗಾಗಿ, ಕೇಂದ್ರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಕೇಂದ್ರ ಮತ್ತೊಂದು‌ ಕಂತಿನ‌ ಪರಿಹಾರ ಕೊಡಲಿದೆ. ಮತ್ತಷ್ಟು ಪರಿಹಾರಕ್ಕೆ ಮನವಿ ಮಾಡುತ್ತೇವೆ ಎಂದ ಅವರು, ನೆರೆ ಪೀಡಿತ ಜಿಲ್ಲೆಗಳಲ್ಲಿ ಮನೆ ಕಳೆದುಕೊಂಡವರು ಪರಿಹಾರ ಪಡೆದಿಲ್ಲ. ಇನ್ನೂ ಕೆಲ ಕಂತಿನ ಪರಿಹಾರ ಪಡೆದಿಲ್ಲ. ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಸಂತ್ರಸ್ತರು ನೆರೆ ಪರಿಹಾರ ಪಡೆದುಕೊಳ್ಳುವಂತೆ ಮನವಿ ಮಾಡಿದರು.

Last Updated : Nov 17, 2020, 5:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.