ETV Bharat / state

ಕರ್ಫ್ಯೂ ನಿಯಮ ಕಟ್ಟುನಿಟ್ಟಾಗಿ ದಾವಣಗೆರೆ ಜಿಲ್ಲೆಯಾದ್ಯಂತ ಜಾರಿಯಾಗಬೇಕು: ಸಚಿವ ಬಸವರಾಜ

author img

By

Published : Apr 28, 2021, 2:19 PM IST

ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದಾವಣಗೆರೆ ಜಿಲ್ಲಾಡಳಿತದೊಂದಿಗೆ ನಡೆಸಿದ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಸಚಿವರು, ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

Byrathi basavaraj
Byrathi basavaraj

ಬೆಂಗಳೂರು: ಸರ್ಕಾರ ಘೋಷಣೆ ಮಾಡಿರುವ ಕರ್ಫ್ಯೂ ನಿಯಮವನ್ನು ಕಟ್ಟುನಿಟ್ಟಾಗಿ ಜಿಲ್ಲೆಯಾದ್ಯಂತ ಪಾಲಿಸುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಗೆ ಹೊರ ಭಾಗದಿಂದ ಬಂದವರಿಗೆ ಕೋವಿಡ್-19 ಲಕ್ಷಣವಿದ್ದಲ್ಲಿ ತಕ್ಷಣವೇ ಪರೀಕ್ಷೆ ಮಾಡಿ ಅವರನ್ನು ಫಲಿತಾಂಶ ಬರುವವರೆಗೆ ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ನೋಡಿಕೊಳ್ಳಬೇಕು. ಇದು ಆರೋಗ್ಯ ಇಲಾಖೆಯ ಪ್ರಮುಖ ಜವಾಬ್ದಾರಿ ಎಂದು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ (ಭೈರತಿ) ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದಾವಣಗೆರೆ ಜಿಲ್ಲಾಡಳಿತದೊಂದಿಗೆ ನಡೆಸಿದ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಸಚಿವರು, ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕೋವಿಡ್ ಸೆಂಟರ್ ಹಾಗೂ ಆಸ್ಪತ್ರೆಗಳಿಗೆ ಶಿಫ್ಟ್ ಪ್ರಕಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಿ, ಅವರಿಂದ ಪ್ರತನಿತ್ಯ ವರದಿ ಪಡೆಯಬೇಕು. ಸರ್ಕಾರದಿಂದ ಆದೇಶವಾಗಿರುವ ಬಿಗಿ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೆಲವೊಂದಕ್ಕೆ ಸರ್ಕಾರ ಪರವಾನಗಿ ನೀಡಿದ್ದು, ಅಂತಹ ಕಾರ್ಯಗಳಿಗೆ ತೊಂದರೆಯಾಗದಂತೆಯೂ ನೋಡಿಕೊಳ್ಳಬೇಕು. ಪೊಲೀಸ್ ಇಲಾಖೆಗೆ ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಗೃಹರಕ್ಷಕ ದಳದ ಸಿಬ್ಬಂದಿಯ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇವರನ್ನು ಬಳಸಿಕೊಂಡು ಕಠಿಣ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಬಯಲು ಪ್ರದೇಶದಲ್ಲಿ ಮಾರುಕಟ್ಟೆ ಸ್ಥಳಾವಕಾಶ ಕಲ್ಪಿಸಿ: ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಜನಜಂಗುಳಿಯಾಗುವ ಸಾಧ್ಯತೆ ಇರುತ್ತೆ. ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಿ, ಎಲ್ಲಿಯೂ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಒಂದೇ ಕಡೆ ಮಾರುಕಟ್ಟೆ ಇದ್ದರೆ ಜನರು ಅನಿವಾರ್ಯವಾಗಿ ಸೇರಬೇಕಾಗುತ್ತದೆ. ಹಾಗಾಗಿ ದಾವಣಗೆರೆಯ ಹೂರವಲಯದಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲೆಯಲ್ಲಿ ಒಂದು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್‍ಗಾಗಿ ಮೀಸಲಿರಿಸಿ. ಯಾವುದೇ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಇದ್ದಲ್ಲಿ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಿ. ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಹಾಗೂ ಹೋಬಳಿ ಮಟ್ಟದಲ್ಲಿ ಆಂಬುಲೆನ್ಸ್ ಇರುವಂತೆ ನೋಡಿಕೊಳ್ಳಲು ಹೇಳಿದರು.

ಜಿಲ್ಲೆಯಲ್ಲಿ ರೆಮ್​ಡೆಸಿವರ್ ಮತ್ತು ಆಕ್ಸಿಜನ್ ಕೊರತೆ ಇಲ್ಲದಂತೆ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ತಕ್ಷಣವೇ ತರಿಸಿಕೊಳ್ಳಲು ಮುಂಚಿತವಾಗಿ ಅಗತ್ಯ ಕ್ರಮ ತೆಗೆದುಕೊಂಡಿರಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಟೆಸ್ಟಿಂಗ್ ಮಾಡಿಸಬೇಕು. ಟೆಸ್ಟಿಂಗ್ ಫಲಿತಾಂಶ ಬರುವವರೆಗೆ ಅವರೆಲ್ಲರನ್ನು ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ನೋಡಿಕೊಳ್ಳಬೇಕು. ಅಂತವರು ಎಲ್ಲಿಯೂ ಓಡಾಡದಂತೆ ನೋಡಿಕೊಳ್ಳುವ ಜವಾಬ್ದಾರಿ ಆರೋಗ್ಯ ಇಲಾಖೆಯದ್ದು ಎಂದು ಎಚ್ಚರಿಸಿದರು.

ಕರ್ಫ್ಯೂನಿಂದಾಗಿ ಬೆಂಗಳೂರು ನಗರದಿಂದ ದಾವಣಗೆರೆ ಜಿಲ್ಲೆಯ ನಾನಾ ಭಾಗಗಳಿಗೆ ಬಂದ ಜನರ ಬಗ್ಗೆ ಮಾಹಿತಿ ಪಡೆದು ಕೊರೊನಾ ಸೋಂಕು ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿ ಎಂದು ಎಲ್ಲಾ ತಾಲೂಕಿನ ತಹಶೀಲ್ದಾರರಿಗೆ ಸೂಚನೆ ನೀಡಿದರು.

ಕೋವಿಡ್ ಲಸಿಕೆ ಅಭಾವದ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಸೆಳೆದಾಗ, ಮುಖ್ಯಮಂತ್ರಿಗಳು ಮತ್ತು ಅರೋಗ್ಯ ಸಚಿವರೊಂದಿಗೆ ಮಾತನಾಡಿ ಕಳಿಸಿಕೂಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಜನರಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಮಾಡಬೇಕು. ಆಟೋದಲ್ಲಿ ಪಟ್ಟಣ ಪ್ರದೇಶ ಹಾಗೂ ಗ್ರಾಮಗಳಿಗೆ ತೆರಳಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಬೇಕು. ಜೊತೆಗೆ ಕೊರೊನಾ ಲಕ್ಷಣ ಕಂಡುಬಂದಲ್ಲಿ ತಕ್ಷಣವೇ ತಪಾಸಣೆಗೆ ಒಳಪಡುವಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬೆಂಗಳೂರು: ಸರ್ಕಾರ ಘೋಷಣೆ ಮಾಡಿರುವ ಕರ್ಫ್ಯೂ ನಿಯಮವನ್ನು ಕಟ್ಟುನಿಟ್ಟಾಗಿ ಜಿಲ್ಲೆಯಾದ್ಯಂತ ಪಾಲಿಸುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಗೆ ಹೊರ ಭಾಗದಿಂದ ಬಂದವರಿಗೆ ಕೋವಿಡ್-19 ಲಕ್ಷಣವಿದ್ದಲ್ಲಿ ತಕ್ಷಣವೇ ಪರೀಕ್ಷೆ ಮಾಡಿ ಅವರನ್ನು ಫಲಿತಾಂಶ ಬರುವವರೆಗೆ ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ನೋಡಿಕೊಳ್ಳಬೇಕು. ಇದು ಆರೋಗ್ಯ ಇಲಾಖೆಯ ಪ್ರಮುಖ ಜವಾಬ್ದಾರಿ ಎಂದು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ (ಭೈರತಿ) ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದಾವಣಗೆರೆ ಜಿಲ್ಲಾಡಳಿತದೊಂದಿಗೆ ನಡೆಸಿದ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಸಚಿವರು, ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕೋವಿಡ್ ಸೆಂಟರ್ ಹಾಗೂ ಆಸ್ಪತ್ರೆಗಳಿಗೆ ಶಿಫ್ಟ್ ಪ್ರಕಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಿ, ಅವರಿಂದ ಪ್ರತನಿತ್ಯ ವರದಿ ಪಡೆಯಬೇಕು. ಸರ್ಕಾರದಿಂದ ಆದೇಶವಾಗಿರುವ ಬಿಗಿ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೆಲವೊಂದಕ್ಕೆ ಸರ್ಕಾರ ಪರವಾನಗಿ ನೀಡಿದ್ದು, ಅಂತಹ ಕಾರ್ಯಗಳಿಗೆ ತೊಂದರೆಯಾಗದಂತೆಯೂ ನೋಡಿಕೊಳ್ಳಬೇಕು. ಪೊಲೀಸ್ ಇಲಾಖೆಗೆ ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಗೃಹರಕ್ಷಕ ದಳದ ಸಿಬ್ಬಂದಿಯ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇವರನ್ನು ಬಳಸಿಕೊಂಡು ಕಠಿಣ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಬಯಲು ಪ್ರದೇಶದಲ್ಲಿ ಮಾರುಕಟ್ಟೆ ಸ್ಥಳಾವಕಾಶ ಕಲ್ಪಿಸಿ: ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಜನಜಂಗುಳಿಯಾಗುವ ಸಾಧ್ಯತೆ ಇರುತ್ತೆ. ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಿ, ಎಲ್ಲಿಯೂ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಒಂದೇ ಕಡೆ ಮಾರುಕಟ್ಟೆ ಇದ್ದರೆ ಜನರು ಅನಿವಾರ್ಯವಾಗಿ ಸೇರಬೇಕಾಗುತ್ತದೆ. ಹಾಗಾಗಿ ದಾವಣಗೆರೆಯ ಹೂರವಲಯದಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲೆಯಲ್ಲಿ ಒಂದು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್‍ಗಾಗಿ ಮೀಸಲಿರಿಸಿ. ಯಾವುದೇ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಇದ್ದಲ್ಲಿ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಿ. ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಹಾಗೂ ಹೋಬಳಿ ಮಟ್ಟದಲ್ಲಿ ಆಂಬುಲೆನ್ಸ್ ಇರುವಂತೆ ನೋಡಿಕೊಳ್ಳಲು ಹೇಳಿದರು.

ಜಿಲ್ಲೆಯಲ್ಲಿ ರೆಮ್​ಡೆಸಿವರ್ ಮತ್ತು ಆಕ್ಸಿಜನ್ ಕೊರತೆ ಇಲ್ಲದಂತೆ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ತಕ್ಷಣವೇ ತರಿಸಿಕೊಳ್ಳಲು ಮುಂಚಿತವಾಗಿ ಅಗತ್ಯ ಕ್ರಮ ತೆಗೆದುಕೊಂಡಿರಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಟೆಸ್ಟಿಂಗ್ ಮಾಡಿಸಬೇಕು. ಟೆಸ್ಟಿಂಗ್ ಫಲಿತಾಂಶ ಬರುವವರೆಗೆ ಅವರೆಲ್ಲರನ್ನು ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ನೋಡಿಕೊಳ್ಳಬೇಕು. ಅಂತವರು ಎಲ್ಲಿಯೂ ಓಡಾಡದಂತೆ ನೋಡಿಕೊಳ್ಳುವ ಜವಾಬ್ದಾರಿ ಆರೋಗ್ಯ ಇಲಾಖೆಯದ್ದು ಎಂದು ಎಚ್ಚರಿಸಿದರು.

ಕರ್ಫ್ಯೂನಿಂದಾಗಿ ಬೆಂಗಳೂರು ನಗರದಿಂದ ದಾವಣಗೆರೆ ಜಿಲ್ಲೆಯ ನಾನಾ ಭಾಗಗಳಿಗೆ ಬಂದ ಜನರ ಬಗ್ಗೆ ಮಾಹಿತಿ ಪಡೆದು ಕೊರೊನಾ ಸೋಂಕು ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿ ಎಂದು ಎಲ್ಲಾ ತಾಲೂಕಿನ ತಹಶೀಲ್ದಾರರಿಗೆ ಸೂಚನೆ ನೀಡಿದರು.

ಕೋವಿಡ್ ಲಸಿಕೆ ಅಭಾವದ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಸೆಳೆದಾಗ, ಮುಖ್ಯಮಂತ್ರಿಗಳು ಮತ್ತು ಅರೋಗ್ಯ ಸಚಿವರೊಂದಿಗೆ ಮಾತನಾಡಿ ಕಳಿಸಿಕೂಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಜನರಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಮಾಡಬೇಕು. ಆಟೋದಲ್ಲಿ ಪಟ್ಟಣ ಪ್ರದೇಶ ಹಾಗೂ ಗ್ರಾಮಗಳಿಗೆ ತೆರಳಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಬೇಕು. ಜೊತೆಗೆ ಕೊರೊನಾ ಲಕ್ಷಣ ಕಂಡುಬಂದಲ್ಲಿ ತಕ್ಷಣವೇ ತಪಾಸಣೆಗೆ ಒಳಪಡುವಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.