ETV Bharat / state

ಡಿ ಕೆ ಶಿವಕುಮಾರ್ ದೆಹಲಿ ಟೂರ್; ವರಿಷ್ಠರೊಂದಿಗೆ ವಿವಿಧ ವಿಚಾರಗಳ ಚರ್ಚೆ

author img

By

Published : Sep 3, 2022, 9:42 AM IST

ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಇಂದು ನಾಳೆ ಡಿಕೆಶಿವಕುಮಾರ್ ದೆಹಲಿ ಟೂರ್ ಕೈಗೊಂಡಿದ್ದು ವರಿಷ್ಠರೊಂದಿಗೆ ವಿವಿಧ ವಿಚಾರಗಳ ಚರ್ಚೆ ಎರಡು ದಿನಗಳ ಕಾಲ ಮಾಡಲಿದ್ದಾರೆ.

D K Shivakumar Delhi visit
ಡಿ ಕೆ ಶಿವಕುಮಾರ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಎರಡು ದಿನ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ದೆಹಲಿಗೆ ತೆರಳುತ್ತಿರುವ ಡಿ ಕೆ ಶಿವಕುಮಾರ್, ದೆಹಲಿಯಲ್ಲಿ ಎಐಸಿಸಿ ನಾಯಕರ ಭೇಟಿಮಾಡಿ ಸಮಾಲೋಚನೆ ನಡೆಸಲಿದ್ದಾರೆ. ಇದಲ್ಲದೇ ನಾಳೆ ಎಐಸಿಸಿ ವತಿಯಿಂದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ವಾರಾಂತ್ಯದಲ್ಲಿ ದಿಲ್ಲಿಗೆ ತೆರಳಿರುವ ಡಿಕೆಶಿ ವರಿಷ್ಠರ ಭೇಟಿ ಸಂದರ್ಭ ಹಲವು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಪಕ್ಷ ಬಲವರ್ಧನೆ, ಭಾರತ ಜೋಡೋ ಯಾತ್ರೆಯ ಯಶಸ್ಸು, ಮುಂಬರುವ ವಿಧಾನಸಭೆ ಚುನಾವಣೆಗೆ ಕೈಗೊಂಡಿರುವ ಸಿದ್ಧತೆ, ಬಿಬಿಎಂಪಿ ಚುನಾವಣೆ ಗೆಲುವಿಗೆ ಹೆಣೆದಿರುವ ತಂತ್ರಗಾರಿಕೆ, ಕಾಂಗ್ರೆಸ್ ಪಕ್ಷದ ಸದಸ್ಯತ್ವ ಹೆಚ್ಚಳ ಮತ್ತು ಕಾರ್ಯಕರ್ತರ ನೈತಿಕ ಬಲವರ್ಧನೆಗೆ ಕೈಗೊಂಡಿರುವ ಕ್ರಮ, ಕೆಪಿಸಿಸಿ ವಿವಿಧ ವಿಭಾಗಗಳಿಗೆ ಮುಖ್ಯಸ್ಥರ ನೇಮಕ ಹಾಗೂ ಬದಲಾವಣೆ, ಹೊಸದಾಗಿ ನೇಮಕಗೊಂಡಿರುವ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳಿಗೆ ವಹಿಸಿರುವ ಜವಾಬ್ದಾರಿ, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಸರ್ಕಾರದ ವಿರುದ್ಧದ ಹೋರಾಟಗಳ ವಿಷಯವನ್ನು ಪಕ್ಷದ ವರಿಷ್ಠರಿಗೆ ವಿವರಿಸಲಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಇನ್ನಷ್ಟು ಉತ್ತಮ ಬಾಂಧವ್ಯ ವೃದ್ಧಿಸಿಕೊಂಡು ಪಕ್ಷ ಬಲವರ್ಧನೆಗೆ ಶ್ರಮಿಸುವಂತೆ ಎಐಸಿಸಿ ವರಿಷ್ಠರು ಡಿ ಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ. ಈ ವಿಚಾರವಾಗಿಯೂ ಸಹ ಇನ್ನಷ್ಟು ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಕಾಶ ಕರ್ನಾಟಕದಲ್ಲಿ ಮಾತ್ರವಿದೆ. ಈ ಅವಕಾಶವನ್ನ ಸದ್ಬಳಕೆ ಮಾಡಿಕೊಳ್ಳಿ. ಸಾಧ್ಯವಾದಷ್ಟು ಜನರೊಂದಿಗೆ ಬೆರೆಯಿರಿ ಮತ್ತು ಜನಪರ ಕಾರ್ಯಗಳನ್ನು ಕೈಗೊಳ್ಳಿ ಎಂದು ಕಾಂಗ್ರೆಸ್ ನಾಯಕರು ಸೂಚಿಸಿದ್ದು, ಈ ವಿಚಾರವಾಗಿ ಡಿಕೆಶಿ ಒಂದಿಷ್ಟು ಚರ್ಚೆ ನಡೆಸಲಿದ್ದಾರೆ.

ರಾಹುಲ್ ಗಾಂಧಿ ರಾಷ್ಟ್ರದ ಐಕ್ಯತೆಗೋಸ್ಕರ ಕೈಗೊಂಡಿರುವ ಭಾರತ ಜೋಡೋ ಯಾತ್ರೆ, ಉತ್ತರ ಭಾರತದಲ್ಲಿ ನಿರೀಕ್ಷಿತ ಸಫಲತೆ ಕಾಣುವುದು ಅನುಮಾನವಾಗಿದೆ. ದಕ್ಷಿಣ ಭಾರತದಲ್ಲಿ ಅದರಲ್ಲೂ ಕರ್ನಾಟಕ ಕೇರಳ ರಾಜ್ಯಗಳಲ್ಲಿ ಪಾದಯಾತ್ರೆ ಯಶಸ್ವಿ ಆಗಬೇಕಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಹಾಗೂ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನವನ್ನು ಗೆಲ್ಲುವ ನಿರೀಕ್ಷೆ ಹೊಂದಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ದೀರ್ಘಾವಧಿ ಪಾದಯಾತ್ರೆ ನಡೆಸಲಿದೆ.

ಭಾರತ ಜೋಡೋ ಪಾದಯಾತ್ರೆ ಮೂಲಕ ಇನ್ನಷ್ಟು ಜನರಿಗೆ ಹತ್ತಿರವಾಗಲು ರಾಹುಲ್ ಗಾಂಧಿ ತೀರ್ಮಾನಿಸಿದ್ದು, ಅದಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಸಹಕಾರವನ್ನು ನಿರೀಕ್ಷಿಸಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷರ ಭೇಟಿ ಸಂದರ್ಭ ಕರ್ನಾಟಕದಲ್ಲಿ ಯಾವುದೇ ಕಾಂಗ್ರೆಸ್ ನಾಯಕರು ಪಕ್ಷ ಬಿಡುವ ಹಾಗೂ ಪಕ್ಷದ ವಿರುದ್ಧ ದನಿ ಎತ್ತುವ ಸನ್ನಿವೇಶ ನಿರ್ಮಾಣವಾಗದಂತೆ ನೋಡಿಕೊಳ್ಳುವಂತೆ ಡಿ ಕೆ ಶಿವಕುಮಾರ್​ಗೆ ಪಕ್ಷದ ವರಿಷ್ಠರು ಇಂದು ಸೂಚನೆ ನೀಡುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ :ಮುರುಘಾ ಶ್ರೀ ಮೇಲಿನ ದೂರಿನ ಬಗ್ಗೆ ತನಿಖೆಯಾಗಿ ಸತ್ಯಾಂಶ ಹೊರಬರಬೇಕು: ಸಿದ್ದರಾಮಯ್ಯ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಎರಡು ದಿನ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ದೆಹಲಿಗೆ ತೆರಳುತ್ತಿರುವ ಡಿ ಕೆ ಶಿವಕುಮಾರ್, ದೆಹಲಿಯಲ್ಲಿ ಎಐಸಿಸಿ ನಾಯಕರ ಭೇಟಿಮಾಡಿ ಸಮಾಲೋಚನೆ ನಡೆಸಲಿದ್ದಾರೆ. ಇದಲ್ಲದೇ ನಾಳೆ ಎಐಸಿಸಿ ವತಿಯಿಂದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ವಾರಾಂತ್ಯದಲ್ಲಿ ದಿಲ್ಲಿಗೆ ತೆರಳಿರುವ ಡಿಕೆಶಿ ವರಿಷ್ಠರ ಭೇಟಿ ಸಂದರ್ಭ ಹಲವು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಪಕ್ಷ ಬಲವರ್ಧನೆ, ಭಾರತ ಜೋಡೋ ಯಾತ್ರೆಯ ಯಶಸ್ಸು, ಮುಂಬರುವ ವಿಧಾನಸಭೆ ಚುನಾವಣೆಗೆ ಕೈಗೊಂಡಿರುವ ಸಿದ್ಧತೆ, ಬಿಬಿಎಂಪಿ ಚುನಾವಣೆ ಗೆಲುವಿಗೆ ಹೆಣೆದಿರುವ ತಂತ್ರಗಾರಿಕೆ, ಕಾಂಗ್ರೆಸ್ ಪಕ್ಷದ ಸದಸ್ಯತ್ವ ಹೆಚ್ಚಳ ಮತ್ತು ಕಾರ್ಯಕರ್ತರ ನೈತಿಕ ಬಲವರ್ಧನೆಗೆ ಕೈಗೊಂಡಿರುವ ಕ್ರಮ, ಕೆಪಿಸಿಸಿ ವಿವಿಧ ವಿಭಾಗಗಳಿಗೆ ಮುಖ್ಯಸ್ಥರ ನೇಮಕ ಹಾಗೂ ಬದಲಾವಣೆ, ಹೊಸದಾಗಿ ನೇಮಕಗೊಂಡಿರುವ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳಿಗೆ ವಹಿಸಿರುವ ಜವಾಬ್ದಾರಿ, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಸರ್ಕಾರದ ವಿರುದ್ಧದ ಹೋರಾಟಗಳ ವಿಷಯವನ್ನು ಪಕ್ಷದ ವರಿಷ್ಠರಿಗೆ ವಿವರಿಸಲಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಇನ್ನಷ್ಟು ಉತ್ತಮ ಬಾಂಧವ್ಯ ವೃದ್ಧಿಸಿಕೊಂಡು ಪಕ್ಷ ಬಲವರ್ಧನೆಗೆ ಶ್ರಮಿಸುವಂತೆ ಎಐಸಿಸಿ ವರಿಷ್ಠರು ಡಿ ಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ. ಈ ವಿಚಾರವಾಗಿಯೂ ಸಹ ಇನ್ನಷ್ಟು ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಕಾಶ ಕರ್ನಾಟಕದಲ್ಲಿ ಮಾತ್ರವಿದೆ. ಈ ಅವಕಾಶವನ್ನ ಸದ್ಬಳಕೆ ಮಾಡಿಕೊಳ್ಳಿ. ಸಾಧ್ಯವಾದಷ್ಟು ಜನರೊಂದಿಗೆ ಬೆರೆಯಿರಿ ಮತ್ತು ಜನಪರ ಕಾರ್ಯಗಳನ್ನು ಕೈಗೊಳ್ಳಿ ಎಂದು ಕಾಂಗ್ರೆಸ್ ನಾಯಕರು ಸೂಚಿಸಿದ್ದು, ಈ ವಿಚಾರವಾಗಿ ಡಿಕೆಶಿ ಒಂದಿಷ್ಟು ಚರ್ಚೆ ನಡೆಸಲಿದ್ದಾರೆ.

ರಾಹುಲ್ ಗಾಂಧಿ ರಾಷ್ಟ್ರದ ಐಕ್ಯತೆಗೋಸ್ಕರ ಕೈಗೊಂಡಿರುವ ಭಾರತ ಜೋಡೋ ಯಾತ್ರೆ, ಉತ್ತರ ಭಾರತದಲ್ಲಿ ನಿರೀಕ್ಷಿತ ಸಫಲತೆ ಕಾಣುವುದು ಅನುಮಾನವಾಗಿದೆ. ದಕ್ಷಿಣ ಭಾರತದಲ್ಲಿ ಅದರಲ್ಲೂ ಕರ್ನಾಟಕ ಕೇರಳ ರಾಜ್ಯಗಳಲ್ಲಿ ಪಾದಯಾತ್ರೆ ಯಶಸ್ವಿ ಆಗಬೇಕಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಹಾಗೂ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನವನ್ನು ಗೆಲ್ಲುವ ನಿರೀಕ್ಷೆ ಹೊಂದಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ದೀರ್ಘಾವಧಿ ಪಾದಯಾತ್ರೆ ನಡೆಸಲಿದೆ.

ಭಾರತ ಜೋಡೋ ಪಾದಯಾತ್ರೆ ಮೂಲಕ ಇನ್ನಷ್ಟು ಜನರಿಗೆ ಹತ್ತಿರವಾಗಲು ರಾಹುಲ್ ಗಾಂಧಿ ತೀರ್ಮಾನಿಸಿದ್ದು, ಅದಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಸಹಕಾರವನ್ನು ನಿರೀಕ್ಷಿಸಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷರ ಭೇಟಿ ಸಂದರ್ಭ ಕರ್ನಾಟಕದಲ್ಲಿ ಯಾವುದೇ ಕಾಂಗ್ರೆಸ್ ನಾಯಕರು ಪಕ್ಷ ಬಿಡುವ ಹಾಗೂ ಪಕ್ಷದ ವಿರುದ್ಧ ದನಿ ಎತ್ತುವ ಸನ್ನಿವೇಶ ನಿರ್ಮಾಣವಾಗದಂತೆ ನೋಡಿಕೊಳ್ಳುವಂತೆ ಡಿ ಕೆ ಶಿವಕುಮಾರ್​ಗೆ ಪಕ್ಷದ ವರಿಷ್ಠರು ಇಂದು ಸೂಚನೆ ನೀಡುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ :ಮುರುಘಾ ಶ್ರೀ ಮೇಲಿನ ದೂರಿನ ಬಗ್ಗೆ ತನಿಖೆಯಾಗಿ ಸತ್ಯಾಂಶ ಹೊರಬರಬೇಕು: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.