ETV Bharat / state

ಯಾರ್‍ಯಾರೋ ಮೆಂಟಲ್​ಗಳು ಏನೇನೋ ಮಾತಾಡ್ತಾರೆ: ರಮೇಶ್ ಜಾರಕಿಹೊಳಿಗೆ ಡಿಕೆಶಿ ಟಾಂಗ್ - ರಮೇಶ್ ಜಾರಕಿಹೊಳಿಗೆ ಡಿಕೆಶಿ ಟಾಂಗ್

ಯಾರೆಲ್ಲಾ ಏನೆಲ್ಲಾ ಮಾತನಾಡುತ್ತಿದ್ದಾರೆ ಅನ್ನೋದನ್ನು ಗಮನಿಸುತ್ತಿದ್ದೇನೆ. ಯಾರೆಲ್ಲಾ ಯಾವೆಲ್ಲಾ ಸಭೆ ಮಾಡುತ್ತಿದ್ದಾರೆ ಎಂಬುದೂ ನನಗೆ ಚೆನ್ನಾಗಿ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗರಂ ಆಗಿ ಹೇಳಿದರು.

D k Shivkumar talking about Ramesh jarakiholi
ರಮೇಶ್ ಜಾರಕಿಹೊಳಿಗೆ ಡಿಕೆಶಿ ಟಾಂಗ್
author img

By

Published : Jun 5, 2020, 5:03 PM IST

ಬೆಂಗಳೂರು: ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಬರುತ್ತೇನೆ ಎಂಬ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಯಾರ್‍ಯಾರೋ ಮೆಂಟಲ್​ಗಳು ಏನೇನೋ ಮಾತನಾಡುತ್ತಾರೆ. 30,40,50 ಅಂತಾ ಕಡ್ಲೆಪುರಿ ವ್ಯಾಪಾರ ಮಾಡ್ತಾರೆ. ನಮ್ಮ ಶಾಸಕರಿಗೆ ಅಗೌರವ ಮಾಡೋದು ಬೇಡ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ನಂತರ ಮಾತು ಮುಂದುವರೆಸಿ, ಯಾರೆಲ್ಲಾ ಏನೆಲ್ಲಾ ಮಾತನಾಡುತ್ತಿದ್ದಾರೆ ಗಮನಿಸುತ್ತಿದ್ದೇನೆ. ಯಾರೆಲ್ಲಾ ಯಾವೆಲ್ಲಾ ಸಭೆ ಮಾಡುತ್ತಿದ್ದಾರೆ ಅನ್ನೋದು ನನಗೆ ಚೆನ್ನಾಗಿ ಗೊತ್ತು. ಯಾವ ಹೋಟೆಲ್​ನಲ್ಲಿ ಸಭೆ ಮಾಡಿದ್ದಾರೆ? ಯಾರನ್ನು ಕಾಯ್ತಾ ಕುಳಿತುಕೊಂಡಿದ್ರು? ಎಲ್ಲವೂ ಗೊತ್ತು. ನಿನ್ನೆ ರಾತ್ರಿ ಏನು ಸಭೆ, ಎಲ್ಲಿ ಆಗಿದೆ, ಯಾವ ಹೋಟೆಲ್​ನಲ್ಲಿ ನಡೆದಿದೆ ಅವೆಲ್ಲವೂ ತಿಳಿದಿದೆ. ನಾವೇನೂ ಸುಮ್ನೆ ಕುಳಿತಿಲ್ಲ, ನಮಗೆ ಬೇರೆಯವರ ವಿಚಾರ ಬೇಡ. ನಾವುಂಟು ನಮ್ಮ ಮನೆ ಉಂಟು, ನಾವುಂಟು ನಮ್ಮ ಶಾಸಕರು ಉಂಟು ಎಂದು ತಿಳಿಸಿದರು.ಖರ್ಗೆಗೆ ರಾಜ್ಯಸಭೆ ಟಿಕೆಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ರಾಷ್ಟ್ರೀಯ ನಾಯಕರು ಎಲ್ಲರೂ ಸೇರಿ ಚರ್ಚೆ ಮಾಡಿ ತೆಗೆದುಕೊಂಡ ತೀರ್ಮಾನ ಎಂದರು.
ಜೆಡಿಎಸ್‌ಗೆ ರಾಜ್ಯಸಭೆ ಚುನಾವಣೆ ವೇಳೆ ಬೆಂಬಲಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೂ ನಮ್ಮ ಬಳಿ ಬೆಂಬಲ ಕೇಳಿಲ್ಲ. ಪಕ್ಷದ ಅಧ್ಯಕ್ಷನಾಗಿ ನನ್ನನ್ನ ಯಾರು ಬೆಂಬಲ ಕೇಳಿಲ್ಲ. ರಾಷ್ಟ್ರೀಯ ಮಟ್ಟದ ನಾಯಕರು ಈ ಬಗ್ಗೆ ತೀರ್ಮಾನ ಮಾಡ್ತಾರೆ. ಪಕ್ಷಗಳ ಸಿದ್ಧಾಂತ ವಿಚಾರದ ಮೇಲೆ ನಮ್ಮ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡ್ತಾರೆ ಎಂದು ವಿವರಿಸಿದರು.
ಹಲವರು ಸ್ಥಳೀಯ ನಾಯಕರು ‌ನಮ್ಮ ಪಕ್ಷ ಸೇರಲು ಬಯಸಿದ್ದಾರೆ. ಅವರು ಪಕ್ಷಕ್ಕೆ ಕೆಲಸ‌ ಮಾಡಬೇಕು. ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ ಎಂದರು.
ಪರಿಸರ ದಿನಾಚರಣೆ:
ವಿಶ್ವ ಪರಿಸರ ದಿನದ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಆವರಣದಲ್ಲಿ ಗಿಡ ನೆಟ್ಟು ಪರಿಸರ ದಿನಾಚರಣೆ ಆಚರಿಸಿದರು.

ಬೆಂಗಳೂರು: ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಬರುತ್ತೇನೆ ಎಂಬ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಯಾರ್‍ಯಾರೋ ಮೆಂಟಲ್​ಗಳು ಏನೇನೋ ಮಾತನಾಡುತ್ತಾರೆ. 30,40,50 ಅಂತಾ ಕಡ್ಲೆಪುರಿ ವ್ಯಾಪಾರ ಮಾಡ್ತಾರೆ. ನಮ್ಮ ಶಾಸಕರಿಗೆ ಅಗೌರವ ಮಾಡೋದು ಬೇಡ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ನಂತರ ಮಾತು ಮುಂದುವರೆಸಿ, ಯಾರೆಲ್ಲಾ ಏನೆಲ್ಲಾ ಮಾತನಾಡುತ್ತಿದ್ದಾರೆ ಗಮನಿಸುತ್ತಿದ್ದೇನೆ. ಯಾರೆಲ್ಲಾ ಯಾವೆಲ್ಲಾ ಸಭೆ ಮಾಡುತ್ತಿದ್ದಾರೆ ಅನ್ನೋದು ನನಗೆ ಚೆನ್ನಾಗಿ ಗೊತ್ತು. ಯಾವ ಹೋಟೆಲ್​ನಲ್ಲಿ ಸಭೆ ಮಾಡಿದ್ದಾರೆ? ಯಾರನ್ನು ಕಾಯ್ತಾ ಕುಳಿತುಕೊಂಡಿದ್ರು? ಎಲ್ಲವೂ ಗೊತ್ತು. ನಿನ್ನೆ ರಾತ್ರಿ ಏನು ಸಭೆ, ಎಲ್ಲಿ ಆಗಿದೆ, ಯಾವ ಹೋಟೆಲ್​ನಲ್ಲಿ ನಡೆದಿದೆ ಅವೆಲ್ಲವೂ ತಿಳಿದಿದೆ. ನಾವೇನೂ ಸುಮ್ನೆ ಕುಳಿತಿಲ್ಲ, ನಮಗೆ ಬೇರೆಯವರ ವಿಚಾರ ಬೇಡ. ನಾವುಂಟು ನಮ್ಮ ಮನೆ ಉಂಟು, ನಾವುಂಟು ನಮ್ಮ ಶಾಸಕರು ಉಂಟು ಎಂದು ತಿಳಿಸಿದರು.ಖರ್ಗೆಗೆ ರಾಜ್ಯಸಭೆ ಟಿಕೆಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ರಾಷ್ಟ್ರೀಯ ನಾಯಕರು ಎಲ್ಲರೂ ಸೇರಿ ಚರ್ಚೆ ಮಾಡಿ ತೆಗೆದುಕೊಂಡ ತೀರ್ಮಾನ ಎಂದರು.
ಜೆಡಿಎಸ್‌ಗೆ ರಾಜ್ಯಸಭೆ ಚುನಾವಣೆ ವೇಳೆ ಬೆಂಬಲಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೂ ನಮ್ಮ ಬಳಿ ಬೆಂಬಲ ಕೇಳಿಲ್ಲ. ಪಕ್ಷದ ಅಧ್ಯಕ್ಷನಾಗಿ ನನ್ನನ್ನ ಯಾರು ಬೆಂಬಲ ಕೇಳಿಲ್ಲ. ರಾಷ್ಟ್ರೀಯ ಮಟ್ಟದ ನಾಯಕರು ಈ ಬಗ್ಗೆ ತೀರ್ಮಾನ ಮಾಡ್ತಾರೆ. ಪಕ್ಷಗಳ ಸಿದ್ಧಾಂತ ವಿಚಾರದ ಮೇಲೆ ನಮ್ಮ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡ್ತಾರೆ ಎಂದು ವಿವರಿಸಿದರು.
ಹಲವರು ಸ್ಥಳೀಯ ನಾಯಕರು ‌ನಮ್ಮ ಪಕ್ಷ ಸೇರಲು ಬಯಸಿದ್ದಾರೆ. ಅವರು ಪಕ್ಷಕ್ಕೆ ಕೆಲಸ‌ ಮಾಡಬೇಕು. ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ ಎಂದರು.
ಪರಿಸರ ದಿನಾಚರಣೆ:
ವಿಶ್ವ ಪರಿಸರ ದಿನದ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಆವರಣದಲ್ಲಿ ಗಿಡ ನೆಟ್ಟು ಪರಿಸರ ದಿನಾಚರಣೆ ಆಚರಿಸಿದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.