ETV Bharat / state

ದಸರಾ ಬೊಂಬೆ ನಿನ್ನನು ನೋಡಲು.. ಚಿತ್ರಕಲಾ ಪರಿಷತ್​ನಲ್ಲಿ ವಿಶೇಷ ವಸ್ತುಪ್ರದರ್ಶನ

author img

By

Published : Sep 14, 2019, 5:28 PM IST

ದಸರಾ ಹಬ್ಬದ ಅಲಂಕಾರಿಕ ವಸ್ತುಗಳ ವಸ್ತುಪ್ರದರ್ಶನ ಅರ್ಬನ್‌ ಬಜಾರ್​ನಲ್ಲಿ ನಡೆಯುತ್ತಿದೆ. ಸೆಪ್ಟಂಬರ್ 22 ರ ವರೆಗೆ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ವಸ್ತುಪ್ರದರ್ಶನವಿರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಚಿತ್ರಕಲಾ ಪರಿಷತ್​ನಲ್ಲಿ ದಸರಾ ಗೊಂಬೆ ಮಾರಾಟ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ದಸರಾ ವಿಶೇಷವಾಗಿ ಬೊಂಬೆಗಳು ಹಾಗು ವಿವಿಧ ರೀತಿಯ ಅಲಂಕಾರಿಕ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಲಾಗಿದೆ.

ದಸರಾ ಹಬ್ಬದ ಅಲಂಕಾರಿಕ ವಸ್ತುಗಳ ವಸ್ತುಪ್ರದರ್ಶನ ನಡೆಯುವ ಅರ್ಬನ್‌ ಬಜಾರ್​ಗೆ ಮಾಜಿ ಸಚಿವೆ ರಾಣಿ ಸತೀಶ್‌ ಹಾಗೂ ನಟಿ ಅದ್ವಿತಿ ಶೆಟ್ಟಿ ಚಾಲನೆ ನೀಡಿದರು. ಈ ಮೇಳ ಸೆಪ್ಟೆಂಬರ್‌ 13 ರಿಂದ 22 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಏರ್ಪಾಡಾಗಿದೆ.

ಚಿತ್ರಕಲಾ ಪರಿಷತ್​ನಲ್ಲಿ ದಸರಾ ಗೊಂಬೆ ಮಾರಾಟ

ನಾಡ ಹಬ್ಬ ದಸರಾ ಆಚರಣೆಗೆ ಬೇಕಾದ ಬೊಂಬೆಗಳು ಹಾಗೂ ಇನ್ನಿತರೆ ಅಲಂಕಾರಿಕ ಮತ್ತು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರ ಕಲಾಕೃತಿಗಳು ಒಂದೇ ವೇದಿಕೆಯಡಿ ದೊರೆಯುವ ವ್ಯವಸ್ಥೆ ಮಾಡಲಾಗಿದೆ. ತರಹೇವಾರಿ ಆಕರ್ಷಕ ಸೀರೆಗಳು, ಅಲಂಕಾರಿಕ ವಸ್ತುಗಳು ಸೇರಿದಂತೆ ಕಲಾಕೃತಿಗಳು ಮಾರಾಟಕ್ಕೆ ದೊರೆಯುವುದು ಬಹಳ ವಿಶೇಷವಾಗಿದೆ ಎಂದು ರಾಣಿ ಸತೀಶ್ ಹೇಳಿದರು.

ನಟಿ ಅದ್ವಿತ ಶೆಟ್ಟಿ ಮಾತನಾಡಿ, ಒಂದೇ ಕಡೆ ವಿಶಿಷ್ಟ ರೀತಿಯ ಸಾಮಗ್ರಿಗಳು ದೊರೆಯುವ ವ್ಯವಸ್ಥೆಯನ್ನು ಅರ್ಬನ್‌ ಬಜಾರ್‌ ಮಾಡಿದೆ. ಇಂತಹ ಕಲಾಕೃತಿಗಳೂ ಹಾಗೂ ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಪ್ರದರ್ಶನಗಳು ಆಗಾಗ್ಗೆ ನಡೆಯುತ್ತಿರಬೇಕು. ಇಲ್ಲಿ ಪ್ರದರ್ಶನಕ್ಕಿಟ್ಟಿರುವ ದಸರಾ ಬೊಂಬೆಗಳ ಅಂದ ನೋಡಲು ಎರಡು ಕಣ್ಣು ಸಾಲದು ಎಂದು ಹರ್ಷ ವ್ಯಕ್ತಪಡಿಸಿದ್ರು.

ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ದಸರಾ ಬೊಂಬೆಗಳು. ಎಲ್ಲಾ ರೀತಿಯ ಹಾಗೂ ವಿಭಿನ್ನ ಆಯಾಮದ ಗೊಂಬೆಗಳನ್ನು ಗ್ರಾಹಕರು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಸಾಮಗ್ರಿಗಳನ್ನೂ ಇಲ್ಲಿ ಕೊಳ್ಳಬಹುದಾಗಿದೆ. 100 ಕ್ಕೂ ಹೆಚ್ಚು ಮಳಿಗೆಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರು ತಮ್ಮ ಕುಸುರಿ ಕಲೆಯನ್ನು ಪ್ರದರ್ಶನಕ್ಕಿಟ್ಟಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿದೆ.

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ದಸರಾ ವಿಶೇಷವಾಗಿ ಬೊಂಬೆಗಳು ಹಾಗು ವಿವಿಧ ರೀತಿಯ ಅಲಂಕಾರಿಕ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಲಾಗಿದೆ.

ದಸರಾ ಹಬ್ಬದ ಅಲಂಕಾರಿಕ ವಸ್ತುಗಳ ವಸ್ತುಪ್ರದರ್ಶನ ನಡೆಯುವ ಅರ್ಬನ್‌ ಬಜಾರ್​ಗೆ ಮಾಜಿ ಸಚಿವೆ ರಾಣಿ ಸತೀಶ್‌ ಹಾಗೂ ನಟಿ ಅದ್ವಿತಿ ಶೆಟ್ಟಿ ಚಾಲನೆ ನೀಡಿದರು. ಈ ಮೇಳ ಸೆಪ್ಟೆಂಬರ್‌ 13 ರಿಂದ 22 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಏರ್ಪಾಡಾಗಿದೆ.

ಚಿತ್ರಕಲಾ ಪರಿಷತ್​ನಲ್ಲಿ ದಸರಾ ಗೊಂಬೆ ಮಾರಾಟ

ನಾಡ ಹಬ್ಬ ದಸರಾ ಆಚರಣೆಗೆ ಬೇಕಾದ ಬೊಂಬೆಗಳು ಹಾಗೂ ಇನ್ನಿತರೆ ಅಲಂಕಾರಿಕ ಮತ್ತು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರ ಕಲಾಕೃತಿಗಳು ಒಂದೇ ವೇದಿಕೆಯಡಿ ದೊರೆಯುವ ವ್ಯವಸ್ಥೆ ಮಾಡಲಾಗಿದೆ. ತರಹೇವಾರಿ ಆಕರ್ಷಕ ಸೀರೆಗಳು, ಅಲಂಕಾರಿಕ ವಸ್ತುಗಳು ಸೇರಿದಂತೆ ಕಲಾಕೃತಿಗಳು ಮಾರಾಟಕ್ಕೆ ದೊರೆಯುವುದು ಬಹಳ ವಿಶೇಷವಾಗಿದೆ ಎಂದು ರಾಣಿ ಸತೀಶ್ ಹೇಳಿದರು.

ನಟಿ ಅದ್ವಿತ ಶೆಟ್ಟಿ ಮಾತನಾಡಿ, ಒಂದೇ ಕಡೆ ವಿಶಿಷ್ಟ ರೀತಿಯ ಸಾಮಗ್ರಿಗಳು ದೊರೆಯುವ ವ್ಯವಸ್ಥೆಯನ್ನು ಅರ್ಬನ್‌ ಬಜಾರ್‌ ಮಾಡಿದೆ. ಇಂತಹ ಕಲಾಕೃತಿಗಳೂ ಹಾಗೂ ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಪ್ರದರ್ಶನಗಳು ಆಗಾಗ್ಗೆ ನಡೆಯುತ್ತಿರಬೇಕು. ಇಲ್ಲಿ ಪ್ರದರ್ಶನಕ್ಕಿಟ್ಟಿರುವ ದಸರಾ ಬೊಂಬೆಗಳ ಅಂದ ನೋಡಲು ಎರಡು ಕಣ್ಣು ಸಾಲದು ಎಂದು ಹರ್ಷ ವ್ಯಕ್ತಪಡಿಸಿದ್ರು.

ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ದಸರಾ ಬೊಂಬೆಗಳು. ಎಲ್ಲಾ ರೀತಿಯ ಹಾಗೂ ವಿಭಿನ್ನ ಆಯಾಮದ ಗೊಂಬೆಗಳನ್ನು ಗ್ರಾಹಕರು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಸಾಮಗ್ರಿಗಳನ್ನೂ ಇಲ್ಲಿ ಕೊಳ್ಳಬಹುದಾಗಿದೆ. 100 ಕ್ಕೂ ಹೆಚ್ಚು ಮಳಿಗೆಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರು ತಮ್ಮ ಕುಸುರಿ ಕಲೆಯನ್ನು ಪ್ರದರ್ಶನಕ್ಕಿಟ್ಟಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿದೆ.

Intro:Body:ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ದಸರಾ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ.
ದಸರಾ ಹಬ್ಬದ ಆಲಂಕಾರಿಕ ವಸ್ತುಗಳ ವಸ್ತುಪ್ರದರ್ಶನ ಅರ್ಬನ್‌ ಬಜಾರ್‌ ಗೆ ಮಾಜಿ ಸಚಿವೆ ರಾಣೀ ಸತೀಶ್‌ ಹಾಗೂ ನಟಿ ಅದ್ವಿತಿ ಶೆಟ್ಟಿ ಚಾಲನೆ ನೀಡಿದರು. ಈ ಮೇಳ ಸೆಪ್ಟೆಂಬರ್‌ 13 ರಿಂದ 22 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಯೋಜಿಸಲಾಗಿರುವ ಕರ್ನಾಟಕ ರಾಜ್ಯದ ನಾಡ ಹಬ್ಗ ದಸರಾದ ಆಲಂಕಾರಕ್ಕೆ ಹಾಗೂ ಹಬ್ಬಕ್ಕೆ ಬೇಕಾದ ವಸ್ತುಗಳ ವಸ್ತುಪ್ರದರ್ಶನ ಅರ್ಬನ್‌ ಬಜಾರ್‌ ಇದಾಗಿದೆ.
ನಮ್ಮ ನಾಡ ಹಬ್ಬ ದಸರಾ ಆಚರಣೆಗೆ ಬೇಕಾದ ಬೊಂಬೆಗಳು, ಹಾಗೂ ಇನ್ನಿತರೆ ಆಲಂಕಾರಿಕ ಮತ್ತು ದೇಶ ದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರ ಕಲಾಕೃತಿಗಳು ಒಂದೇ ವೇದಿಕೆಯ ಅಡಿಯಲ್ಲಿ ದೊರೆಯುವ ವ್ಯವಸ್ಥೆ ಮಾಡಿರುವುದು ಬಹಳ ಆಕರ್ಷಣೀಯ. ಥರ ಥರದ ಸೀರೆಗಳು, ಆಲಂಕಾರಿಕ ವಸ್ತುಗಳು ಸೇರಿದಂತೆ ಕಲಾಕೃತಿಗಳು ದೊರೆಯುವುದು ಬಹಳ ವಿಶೇಷವಾಗಿದೆ ಎಂದು ರಾಣಿ ಸತೀಶ್ ಹೇಳಿದರು.
ನಟಿ ಅದ್ವಿತ ಶೆಟ್ಟಿ ಮಾತನಾಡಿ, ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಸಾಮಗ್ರಿಗಳು ದೊರೆಯುವ ವ್ಯವಸ್ಥೆಯನ್ನು ಅರ್ಬನ್‌ ಬಜಾರ್‌ ಮಾಡಿದೆ. ಇಂತಹ ಕಲಾಕೃತಿಗಳೂ ಹಾಗೂ ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಪ್ರದರ್ಶನಗಳು ಆಗಾಗ್ಗೆ ನಡೆಯುತ್ತಿರುಬೇಕು. ಇಲ್ಲಿ ಪ್ರದರ್ಶನಕ್ಕೆ ಇಟ್ಟಿರುವ ದಸರಾ ಬೊಂಬೆಗಳ ಅಂದ ನೋಡಲು ಎರಡು ಕಣ್ಣು ಸಾಲದು ಎಂದು ಹೇಳಿದರು.
ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ದಸರಾ ಗೊಂಬೆಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ಆಯಾಮದ ಗೊಂಬೆಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ.
100 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ ಎಂದು ಹೇಳಿದರು.
ಸೆಪ್ಟೆಂಬರ್‌ 13 ರಿಂದ 22 ರ ವರೆಗೆ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಈ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.