ETV Bharat / state

ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ

ರಾಜಧಾನಿ ಸೇರಿದಂತೆ ರಾಜ್ಯದೆಲ್ಲೆಡೆ ಕೊರೊನಾ ಸೋಂಕು ಮತ್ತೆ ಸ್ಫೋಟಗೊಳ್ಳುತ್ತಿದೆ. ಆದ್ರೆ ಬೆಂಗಳೂರಲ್ಲಿ ಮತ್ತೆ ಸರ್ಕಾರದಿಂದ ಲಾಕ್​ಡೌನ್ ಮಾಡುವ ಸಾಧ್ಯತೆ ಇದೆಯಾ ಎನ್ನುವ ಗೊಂದಲಕ್ಕೆ ಡಿಸಿಎಂ ಅಶ್ವತ್ಥ್​​ನಾರಾಯಣ್​ ತೆರೆ ಎಳೆದಿದ್ದಾರೆ. ಯಾವುದೇ ಕಾರಣಕ್ಕೂ ಲಾಕ್​ಡೌನ್ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

author img

By

Published : Jun 22, 2020, 1:50 PM IST

Updated : Jun 22, 2020, 3:56 PM IST

DCM ashwath narayan
ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಯಾವುದೇ ಕಾರಣಕ್ಕೂ ಲಾಕ್​ಡೌನ್ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್​​ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ರಾಜಧಾನಿ ಸೇರಿದಂತೆ ರಾಜ್ಯದೆಲ್ಲೆಡೆ ಕೊರೊನಾ ಸೋಂಕು ಮತ್ತೆ ಸ್ಫೋಟಗೊಳ್ಳುತ್ತಿದೆ. ಹೀಗಾಗಿ ಬೆಂಗಳೂರಲ್ಲಿ ಮತ್ತೆ ಸರ್ಕಾರದಿಂದ ಲಾಕ್​ಡೌನ್ ಮಾಡುವ ಸಾಧ್ಯತೆ ಇದೆಯಾ ಗೊಂದಲಕ್ಕೆ ಡಿಸಿಎಂ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಕಾರಣಕ್ಕೂ ಲಾಕ್​ಡೌನ್ ಇರುವುದಿಲ್ಲ ಎಂದಿದ್ದಾರೆ.

ಕೊರೊನಾ ವೈರಸ್ ನಮ್ಮ ಜೊತೆಯಲ್ಲೇ ಇರುತ್ತದೆ. ಕೋಟಿ ಕೋಟಿ ವೈರಸ್​ಗಳ ಹಾಗೆ ಕೊರೊನಾ ವೈರಸ್ ಕೂಡ ಒಂದು. ಜ್ವರ, ಕೆಮ್ಮು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಕೂಡಲೇ ಚಿಕಿತ್ಸೆ ಪಡೆದರೆ ಉತ್ತಮ, ಜೊತೆಗೆ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಂಡರೆ ಕೊರೊನಾದಿಂದ ದೂರ ಇರಬಹುದು ಎಂದು ಸಲಹೆ ನೀಡಿದರು.

ಹೊರ ರಾಜ್ಯದವರಿಂದಲೇ ಹೆಚ್ಚು ಸೋಂಕು ಬಂದಿದೆ. ಕೊರೊನಾ ವೈರಸ್ ಎದುರಿಸಲು ನಾವು ಸಿದ್ಧರಿದ್ದೇವೆ. ಮೊದಲು ಲಾಕ್​ಡೌನ್ ಆದ ವೇಳೆ ಅಷ್ಟೊಂದು ಸಿದ್ಧತೆಗಳಿರಲಿಲ್ಲ. ಆದರೆ ಇದೀಗ ಅಗತ್ಯ ಸಿದ್ಧತೆಗಳಾಗಿವೆ.‌ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದರು.

ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ

ಸೋಂಕಿತರಿಗೆ ಶೇ. 5 ರಿಂದ ಶೇ. 7 ರಷ್ಟು ಮಾತ್ರ ಕೋವಿಡ್ 19 ಆಸ್ಪತ್ರೆ ಬೆಡ್ ಬೇಕಾಗುತ್ತದೆ. ಉಳಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕನಕಪುರದಲ್ಲಿ ಡಿ. ಕೆ. ಶಿವಕುಮಾರ್ ಲಾಕ್​ಡೌನ್ ಘೋಷಣೆ ಮಾಡಿದ್ದಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಹಾಗೆ ಆದೇಶ ಮಾಡಲು ಬರುವುದಿಲ್ಲ. ಡಿ‌ಕೆಶಿ ಬಗ್ಗೆ ಮಾತನಾಡಲು ಹೊರಟರೆ ಎಪಿಸೋಡ್​​ಗಳೇ ಆಗುತ್ತವೆ ಎಂದು ಟಾಂಗ್ ನೀಡಿದರು.

ಲಾಕ್​ಡೌನ್ ಮಾಡುವ ಬಗ್ಗೆ ಡಿ.ಕೆ. ಶಿವಕುಮಾರ್ ಅವರು ಸರ್ಕಾರಕ್ಕೆ ಸಲಹೆ ಕೊಡಬಹುದಷ್ಟೇ. ಅವರೇ ತೀರ್ಮಾನ ಮಾಡಲು ಬರುವುದಿಲ್ಲ ಎಂದರು.

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಯಾವುದೇ ಕಾರಣಕ್ಕೂ ಲಾಕ್​ಡೌನ್ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್​​ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ರಾಜಧಾನಿ ಸೇರಿದಂತೆ ರಾಜ್ಯದೆಲ್ಲೆಡೆ ಕೊರೊನಾ ಸೋಂಕು ಮತ್ತೆ ಸ್ಫೋಟಗೊಳ್ಳುತ್ತಿದೆ. ಹೀಗಾಗಿ ಬೆಂಗಳೂರಲ್ಲಿ ಮತ್ತೆ ಸರ್ಕಾರದಿಂದ ಲಾಕ್​ಡೌನ್ ಮಾಡುವ ಸಾಧ್ಯತೆ ಇದೆಯಾ ಗೊಂದಲಕ್ಕೆ ಡಿಸಿಎಂ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಕಾರಣಕ್ಕೂ ಲಾಕ್​ಡೌನ್ ಇರುವುದಿಲ್ಲ ಎಂದಿದ್ದಾರೆ.

ಕೊರೊನಾ ವೈರಸ್ ನಮ್ಮ ಜೊತೆಯಲ್ಲೇ ಇರುತ್ತದೆ. ಕೋಟಿ ಕೋಟಿ ವೈರಸ್​ಗಳ ಹಾಗೆ ಕೊರೊನಾ ವೈರಸ್ ಕೂಡ ಒಂದು. ಜ್ವರ, ಕೆಮ್ಮು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಕೂಡಲೇ ಚಿಕಿತ್ಸೆ ಪಡೆದರೆ ಉತ್ತಮ, ಜೊತೆಗೆ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಂಡರೆ ಕೊರೊನಾದಿಂದ ದೂರ ಇರಬಹುದು ಎಂದು ಸಲಹೆ ನೀಡಿದರು.

ಹೊರ ರಾಜ್ಯದವರಿಂದಲೇ ಹೆಚ್ಚು ಸೋಂಕು ಬಂದಿದೆ. ಕೊರೊನಾ ವೈರಸ್ ಎದುರಿಸಲು ನಾವು ಸಿದ್ಧರಿದ್ದೇವೆ. ಮೊದಲು ಲಾಕ್​ಡೌನ್ ಆದ ವೇಳೆ ಅಷ್ಟೊಂದು ಸಿದ್ಧತೆಗಳಿರಲಿಲ್ಲ. ಆದರೆ ಇದೀಗ ಅಗತ್ಯ ಸಿದ್ಧತೆಗಳಾಗಿವೆ.‌ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದರು.

ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ

ಸೋಂಕಿತರಿಗೆ ಶೇ. 5 ರಿಂದ ಶೇ. 7 ರಷ್ಟು ಮಾತ್ರ ಕೋವಿಡ್ 19 ಆಸ್ಪತ್ರೆ ಬೆಡ್ ಬೇಕಾಗುತ್ತದೆ. ಉಳಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕನಕಪುರದಲ್ಲಿ ಡಿ. ಕೆ. ಶಿವಕುಮಾರ್ ಲಾಕ್​ಡೌನ್ ಘೋಷಣೆ ಮಾಡಿದ್ದಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಹಾಗೆ ಆದೇಶ ಮಾಡಲು ಬರುವುದಿಲ್ಲ. ಡಿ‌ಕೆಶಿ ಬಗ್ಗೆ ಮಾತನಾಡಲು ಹೊರಟರೆ ಎಪಿಸೋಡ್​​ಗಳೇ ಆಗುತ್ತವೆ ಎಂದು ಟಾಂಗ್ ನೀಡಿದರು.

ಲಾಕ್​ಡೌನ್ ಮಾಡುವ ಬಗ್ಗೆ ಡಿ.ಕೆ. ಶಿವಕುಮಾರ್ ಅವರು ಸರ್ಕಾರಕ್ಕೆ ಸಲಹೆ ಕೊಡಬಹುದಷ್ಟೇ. ಅವರೇ ತೀರ್ಮಾನ ಮಾಡಲು ಬರುವುದಿಲ್ಲ ಎಂದರು.

Last Updated : Jun 22, 2020, 3:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.