ETV Bharat / state

ಜನರ ನಿರೀಕ್ಷೆಗೆ ತಕ್ಕಂತೆ 'ಬ್ರ್ಯಾಂಡ್ ಬೆಂಗಳೂರು' ಯೋಜನೆಯಲ್ಲಿ ಅಭಿವೃದ್ಧಿಯ ನೀಲನಕ್ಷೆ ಸಿದ್ದಪಡಿಸಲಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್

author img

By ETV Bharat Karnataka Team

Published : Oct 9, 2023, 5:12 PM IST

Updated : Oct 9, 2023, 6:47 PM IST

ಹಲವು ಸಮಸ್ಯೆಗಳನ್ನು ಹೊತ್ತು ಕುಳಿತಿರುವ ಸಿಲಿಕಾನ್​ ಸಿಟಿ, ಭವಿಷ್ಯದಲ್ಲಿ ಹೇಗಿರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

DCM DK Shivakumar's response on Brand  Bengaluru
ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಮಾತು
ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಮಾತು

ಬೆಂಗಳೂರು: ನಾಗರಿಕರ ಧ್ವನಿಯೇ ನಮ್ಮ ಸರ್ಕಾರದ ಧ್ವನಿ. ಹೀಗಾಗಿ 'ಬ್ರ್ಯಾಂಡ್ ಬೆಂಗಳೂರು' ಯೋಜನೆಯಲ್ಲಿ ನಗರದ ಜನರ ಅಭಿಪ್ರಾಯ ಸಂಗ್ರಹಿಸಿ, ಅವರ ನಿರೀಕ್ಷೆಗೆ ತಕ್ಕಂತೆ ನಾವು ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಿದ್ದಪಡಿಸಲಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 'ಬ್ರ್ಯಾಂಡ್ ಬೆಂಗಳೂರು' ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್, ಬೆಂಗಳೂರಿಗೆ ಅಂಟಿರುವ ಗಾರ್ಬೇಜ್ ಸಿಟಿ, ಟ್ರಾಫಿಕ್ ಸಿಟಿ ಎಂಬ ಕಳಂಕವನ್ನು ತೊಡೆದು ಹಾಕುತ್ತೇವೆ. ಪ್ರತಿ ರಸ್ತೆಯಲ್ಲಿ ಕ್ಯೂಆರ್ ಕೋಡ್ ಹಾಕಿ ಅಲ್ಲಿನ ಕಾಮಗಾರಿ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡುತ್ತೇವೆ. ಜನರಿಗೆ ಆ ರಸ್ತೆಯ ಕಾಮಗಾರಿ ಕುರಿತು ಪಾರದರ್ಶಕ ಮಾಹಿತಿ ನೀಡಲಿದ್ದೇವೆ ಎಂದು ಹೇಳಿದರು.

ಬಿಬಿಎಂಪಿ ಚುನಾವಣೆಗೆ 225 ವಾರ್ಡ್​​ ಮಾಡಲಾಗಿದೆ. ವಾರ್ಡ್ ಸಮಿತಿ ಇಲ್ಲದ ಕಾರಣ ಜನರು ಕೆಲವು ಸಲಹೆ ನೀಡಿದ್ದಾರೆ. ಪಾರ್ಕ್, ಆಟದ ಮೈದಾನಗಳ ಮೇಲುಸ್ತುವಾರಿಯನ್ನು ಸ್ಥಳೀಯರಿಗೆ ನೀಡಿ ಎಂದು ಹೇಳಿದ್ದಾರೆ. ಈ ಬಗ್ಗೆ ನಾನು ಎಲ್ಲ ಶಾಸಕರ ಜೊತೆ ಚರ್ಚೆ ಮಾಡುತ್ತೇನೆ. ಇದರಲ್ಲಿ ಯಾವುದೇ ಪಕ್ಷದವರಾದರೂ ಸದಸ್ಯರಿಲ್ಲದ ನಾಗರಿಕ ಸಮೂಹಕ್ಕೆ ಜವಾಬ್ದಾರಿ ವಹಿಸಲು ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು.

ನಾನು ಬಹಳ ಉತ್ಸುಕನಾಗಿ ಬೆಂಗಳೂರು ನಗರಾಭಿವೃದ್ಧಿಯ ಜವಾಬ್ದಾರಿಯನ್ನು ವಹಿಸಿದ್ದೇನೆ. ಈ ಹಿಂದೆ ಕೂಡ ಎಸ್ ಎಂ ಕೃಷ್ಣ ಅವರ ಕಾಲದಲ್ಲಿ ನಗರಾಭಿವದ್ಧಿ ಸಚಿವಾನಾಗಿದ್ದಾಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಿಎಂಐಸಿಪಿ ರಸ್ತೆ ಯೋಜನೆಗೆ ಸಹಿ ಹಾಕಲಾಗಿತ್ತು. ಜೆ.ಹೆಚ್ ಪಟೇಲರ ಅವಧಿಯಲ್ಲಿ ಬೆಂಗಳೂರಿನಲ್ಲಿ ಮೋನೋ ರೈಲು ತರಲು ನಿರ್ಧರಿಸಲಾಗಿತ್ತು. ನಾನು ಹಾಗೂ ಅನಂತಕುಮಾರ್ ಚರ್ಚೆ ನಡೆಸಿ ಬೇರೆ ಬೇರೆ ಕಡೆ ಹೋಗಿ ಅಧ್ಯಯನ ಮಾಡಿ ನಂತರ ದೆಹಲಿ ಮಾದರಿಯಂತೆ ಮೆಟ್ರೋ ರೈಲು ಜಾರಿಗೆ ತಂದೆವು ಎಂದು ನೆನೆದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬ್ರ್ಯಾಂಡ್ ಬೆಂಗಳೂರು ಚಿಂತನ ಮಂಥನ ಕಾರ್ಯಕ್ರಮ
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬ್ರ್ಯಾಂಡ್ ಬೆಂಗಳೂರು ಚಿಂತನ ಮಂಥನ ಕಾರ್ಯಕ್ರಮ

ಇಂದು ಬೈಯಪ್ಪನಹಳ್ಳಿಯಿಂದ ಕೆ.ಆರ್ ಪುರ, ಕೆಂಗೇರಿಯಿಂದ ಚಲ್ಲಘಟ್ಟಕ್ಕೆ ಮೆಟ್ರೋ ಮಾರ್ಗ ಆರಂಭವಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಅವರನ್ನು ಆಹ್ವಾನಿಸಲು ಕಾಲಾವಕಾಶ ಕೇಳಿದ್ದೆವು. ಅವರ ಕಾಲಾವಕಾಶ ಇಲ್ಲದ ಕಾರಣ ಈ ಮಾರ್ಗಗಳ ಉದ್ಘಾಟನೆ ಮಾಡಲಾಗಿದೆ. ಜನರು ಈ ಮಾರ್ಗಗಳಲ್ಲಿ ನಿಶ್ಚಿಂತೆಯಿಂದ ಪ್ರಯಾಣ ಮಾಡಬಹುದಾಗಿದೆ ಎಂದು ಹೇಳಿದರು.

ಬ್ರ್ಯಾಂಡ್ ಬೆಂಗಳೂರು ಯೋಜನೆಗೆ 70 ಸಾವಿರ ಸಲಹೆಗಳು ಬಂದಿವೆ. ಪುಟಾಣಿ ಮಕ್ಕಳಿಂದ ಹಿರಿಯರವರೆಗೂ ಎಲ್ಲಾ ವರ್ಗದವರು ಸಲಹೆ ನೀಡಿದ್ದಾರೆ. ಈ ಬೆಂಗಳೂರು ನಮ್ಮದಲ್ಲ, ಜನರದ್ದು. ರಾಜಕಾರಣಿಗಳು ಅವರದೇ ರೀತಿಯಲ್ಲಿ ಆಲೋಚನೆ ಮಾಡುತ್ತೇವೆ, ಅಧಿಕಾರಿಗಳು ಅವರದೇ ಆದ ರೀತಿಯಲ್ಲಿ ಯೋಚಿಸುತ್ತಾರೆ. ಯೋಜನೆ ಆರಂಭಿಸುವ ಮುನ್ನ ನಾಗರಿಕರ ಅಭಿಪ್ರಾಯ ಮುಖ್ಯ. ಹೀಗಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಈ ಯೋಜನೆ ವಿಚಾರವಾಗಿ ಪಕ್ಷಬೇಧ ಮರೆತು ಬೆಂಗಳೂರಿನ ಶಾಸಕರು, ಸಂಸದರ ಅಭಿಪ್ರಾಯ, ಹಿರಿಯ ನಾಗರಿಕರು, ಸಂಘ ಸಂಸ್ಥೆಗಳು, ಮಕ್ಕಳು ಸೇರಿದಂತೆ ಅಧಿಕಾರಿಗಳ ಸಭೆ ಮಾಡಿದ್ದೇವೆ. ಜನರ ಅಭಿಪ್ರಾಯ ಕ್ರೋಢೀಕರಿಸಿದ ನಂತರ ಬೆಂಗಳೂರನ್ನು ಮುಂದಿನ ದಿನಗಳಲ್ಲಿ ಹೇಗೆ ಮುನ್ನಡೆಸಬೇಕು ಎಂದು ರೂಪುರೇಷೆ ತಯಾರಿಸಲು ತೀರ್ಮಾನಿಸಿದ್ದೇವೆ ಎಂದರು.

ಅಭಿವೃದ್ಧಿಗೆ ಕೂಡ ಆರ್ಥಿಕ ಪರಿಸ್ಥಿತಿ ಗಮನದಲ್ಲಿ ಇಟ್ಟುಕೊಳ್ಳಬೇಕಿದೆ. ನಾವು ನಾಗರಿಕರ ಮೇಲೆ ವಿಶ್ವಾಸ ಇಟ್ಟು ಸ್ವಯಂ ಘೋಷಿತ ಆಸ್ತಿ ತೆರಿಗೆ ಕಟ್ಟಲು ಅವಕಾಶ ನೀಡಿದ್ದೆವು. 1 ಕೋಟಿ 40 ಲಕ್ಷ ಜನ ವಾಸಿಸುವ ಬೆಂಗಳೂರಿನಿಂದ ಕೇವಲ 3 ಸಾವಿರ ಕೋಟಿ ಮಾತ್ರ ಆಸ್ತಿ ತೆರಿಗೆ ಬರುತ್ತಿದೆ. ಇದು ನಾಚಿಕೆ ತರುವ ವಿಚಾರವಾಗಿದೆ. ಈಗ ಬರುತ್ತಿರುವ ಆಸ್ತಿ ತೆರಿಗೆ ಯಾವುದಕ್ಕೂ ಸಾಲುವುದಿಲ್ಲ. ಈ ವ್ಯವಸ್ಥೆಯಲ್ಲಿ ಸಂಪನ್ಮೂಲ ಸೋರಿಕೆ ಆಗುತ್ತಿದೆ. ಇದನ್ನು ಸರಿಪಡಿಸಲು ಮುಂದಾಗಿದ್ದೇವೆ. ಯಾರೂ ಕೂಡ ಹೆಚ್ಚಿನ ತೆರಿಗೆ ಕಟ್ಟುವಂತಿಲ್ಲ. ತಮ್ಮ ಆಸ್ತಿಗೆ ತಕ್ಕಂತೆ ಪ್ರಾಮಾಣಿಕತೆಯಿಂದ ತೆರಿಗೆ ಪಾವತಿ ಮಾಡಬೇಕು. ಪರಿಣಾಮಕಾರಿಯಾಗಿ ತೆರಿಗೆ ಸಂಗ್ರಹಿಸಲು ಕಾರ್ಯಕ್ರಮ ರೂಪಿಸುತ್ತಾರೆ ಎಂದು ಹೇಳಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬ್ರ್ಯಾಂಡ್ ಬೆಂಗಳೂರು ಚಿಂತನ ಮಂಥನ ಕಾರ್ಯಕ್ರಮ
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬ್ರ್ಯಾಂಡ್ ಬೆಂಗಳೂರು ಚಿಂತನ ಮಂಥನ ಕಾರ್ಯಕ್ರಮ

ಬೆಂಗಳೂರಿನಲ್ಲಿ ಮಳೆನೀರು ಹರಿಯದೇ ಪ್ರವಾಹ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಬೆಂಗಳೂರಿನ ಬಗ್ಗೆ ಬಹಳ ಟೀಕೆ ಮಾಡಲಾಗುತ್ತಿತ್ತು. ಸಂಚಾರದಟ್ಟಣೆ ವಿಚಾರದಲ್ಲೂ ಬೇರೆ ನಗರಗಳಿಗಿಂತ ಬೆಂಗಳೂರಿನ ಮೇಲೆ ಕಳಂಕ ಹೋರಿಸಲಾಗಿತ್ತು. ಬೆಂಗಳೂರು ವಿಶ್ವದ ಗಮನದಲ್ಲಿರುವ ಕಾರಣ ಇಲ್ಲಿನ ಸಮಸ್ಯೆ ಹೆಚ್ಚು ಪ್ರಚಾರ ಆಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ವಿವಿಧ ಸಮುದಾಯಗಳ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟು ಅಡಿಪಾಯ ಹಾಕಿಕೊಟ್ಟಿದ್ದರು. ನೆಹರೂ ಅವರ ಕಾಲದಿಂದಲೂ ಅನೇಕ ನಾಯಕರು ಬೆಂಗಳೂರಿನಲ್ಲಿ ಇಸ್ರೋ, ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್, ಹೆಚ್​ಎಎಲ್, ಹೆಚ್ಎಂಟಿ, ಕಾನೂನು ಕಾಲೇಜು ಸೇರಿದಂತೆ ಅನೇಕ ಮಹತ್ತರ ಸಂಸ್ಥೆಯನ್ನು ಸ್ಥಾಪಿಸಿ ನಗರಕ್ಕೆ ಅಡಿಪಾಯ ಹಾಕಿ ಬೆಳೆಸಿದ್ದಾರೆ. ಆದ್ದರಿಂದ ಈ ಬೆಂಗಳೂರನ್ನು ರಕ್ಷಿಸಿ ಬೆಳೆಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ನಾನು ಅಧಿಕಾರಕ್ಕೆ ಬಂದ ನಂತರ ಮಳೆ ನೀರು ಚರಂಡಿ ವ್ಯವಸ್ಥೆ, ಕಸ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಬೇರೆ ರಾಜ್ಯಗಳಲ್ಲಿನ ಮಾದರಿಯನ್ನು ನೋಡಿದ್ದೇನೆ. ಬೆಂಗಳೂರಿನಲ್ಲಿ ಕಸ ನಿರ್ವಹಣೆಯಲ್ಲಿ ಎಲ್ಲಾ ಸರ್ಕಾರಗಳು ಎಡವಿದ್ದೇವೆ. ಎಂಟು ಕಡೆ ಕಸದಿಂದ ಇಂಧನ ಉತ್ಪಾದನೆ ಕೇಂದ್ರ ಆರಂಭಿಸಿದ್ದು ಯಾವುದೂ ಚಾಲ್ತಿಯಲ್ಲಿ ಇಲ್ಲ. ಕೇವಲ ಕಸ ತುಂಬುತ್ತಿದ್ದೇವೆ. ಇದಕ್ಕೆ ಶಾಶ್ವತ ಪರಿಹಾರ ನೀಡಬೇಕಾಗಿದೆ. ಈ ವಿಚಾರದಲ್ಲಿ ಹೈದರಾಬಾದ್, ದೆಹಲಿ, ಚೆನ್ನೈನಲ್ಲಿ ಮಾದರಿಯನ್ನು ಗಮನಿಸಿದ್ದೇನೆ ಎಂದು ತಿಳಿಸಿದರು.

ಸಂಚಾರ ದಟ್ಟಣೆ ಕಡಿಮೆ ಮಾಡಲು ಅನೇಕ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರು ಯೋಜಿತ ನಗರ ಅಲ್ಲ. ಇರುವ ನಗರವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕಿದೆ. ಯಾರಿಗೂ ಸಾರ್ವಜನಿಕ ಸಾರಿಗೆ ಮೇಲೆ ಹೆಚ್ಚು ಅವಲಂಬನೆ ಆಗಲು ಇಷ್ಟವಿಲ್ಲ. ಎಲ್ಲರೂ ಕಾರು, ಬೈಕ್​​ನಲ್ಲಿ ಓಡಾಡಬೇಕು. ಮೆಟ್ರೋ ಬಂದ ನಂತರ ಸ್ವಲ್ಪ ಹೆಚ್ಚು ಓಡಾಟ ಆಗಿದೆ. ಮಹಿಳೆಯರಿಗೆ ನಾವು ಉಚಿತ ಬಸ್ ಪ್ರಯಾಣದ ಅವಕಾಶ ಕೊಟ್ಟ ನಂತರ ಬಸ್​​ನಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮೇಲ್ಸೇತುವೆ ಯೋಜನೆ ಮಾಡಿದ್ದೇವೆ. ಈಗ ಟನಲ್ ರಸ್ತೆ ಮಾಡಲು ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.

ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಮಾತು

ಈಗಾಗಲೇ 8 ಕಂಪನಿಗಳು ಈ ಯೋಜನೆ ಮಾಡಲು ಅರ್ಹತೆ ಪಡೆದಿದ್ದಾರೆ. ಮುಂದಿನ 45 ದಿನಗಳಲ್ಲಿ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಹಂತ ಹಂತವಾಗಿ ಯೋಜನೆ ಜಾರಿ ಮಾಡುತ್ತೇವೆ. ಟನಲ್ ರಸ್ತೆ ಎಲ್ಲೆಲ್ಲಿ ತೆರೆದುಕೊಳ್ಳಲಿದೆ ಎನ್ನುವ ಬಗ್ಗೆ ಚರ್ಚೆ ಆಗುತ್ತಿದೆ. ಅರಮನೆ ಮೈದಾನ ಅಥವಾ ಗಾಲ್ಫ್ ಕೋರ್ಸ್ ಅಥವಾ ರೇಸ್ ಕೋರ್ಸ್​ನಲ್ಲಿ ಮಾಡಬೇಕಿದೆ. ಕಬ್ಬನ್ ಪಾರ್ಕ್​​ ಅಥವಾ ಇತರೆ ಕಡೆಗಳಲ್ಲಿ ಮಾಡಿದರೆ ಪರಿಸರ ನಾಶದ ವಿಚಾರ ಬರುತ್ತದೆ. ಹೀಗಾಗಿ ಸರಿಯಾದ ರೀತಿಯಲ್ಲಿ ಯೋಜನೆ ರೂಪಿಸಲಿದ್ದೇವೆ ಎಂದು ಹೇಳಿದರು.

ರಸ್ತೆ ಗುಂಡಿ ವಿಚಾರದಲ್ಲಿ ಸಂಚಾರಿ ಪೊಲೀಸ್ ಇಲಾಖೆ ಹಾಗೂ ಪಾಲಿಕೆ ಜತೆಗೂಡಿ ಕೆಲಸ ಮಾಡಲಿದೆ. ಸಾರ್ವಜನಿಕರು ರಸ್ತೆಗುಂಡಿ ಬಗ್ಗೆ ಆಯುಕ್ತರಿಗೆ ಮಾಹಿತಿ ನೀಡುವ ಅವಕಾಶ ನೀಡಲಾಗುವುದು. ಜನ ಟ್ರಾಫಿಕ್​​ನಲ್ಲಿ ಕಾಲ ಕಳೆಯುವಂತೆ ಆಗಿದೆ. ಅದನ್ನು ತಪ್ಪಿಸುವುದು ನಮ್ಮ ಗುರಿ. ನಮ್ಮ ಈ ಕಾರ್ಯಕ್ಕೆ ಎಲ್ಲಾ ಶಾಸಕರು ಪಕ್ಷಾತೀತವಾಗಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಇತ್ತೀಚೆಗೆ ಟೆಂಡರ್ ಶ್ಯೂರ್ ರಸ್ತೆಗಳನ್ನು ಪರಿಶೀಲಿಸಿದೆ. ರಸ್ತೆಯಲ್ಲಿ ಅಂಡರ್ ಗ್ರೌಂಡ್​​ನಲ್ಲಿ ಕೆಬಲ್ ಅಳವಡಿಕೆಗೆ ಅವಕಾಶ ನೀಡಿದ್ದರೂ ಎಲ್ಲಾ ಕೇಬಲ್​​ಗಳು ಮೇಲೆಯೇ ನೇತಾಡುತ್ತಿವೆ. ಆ ಮೂಲಕ ಬೆಂಗಳೂರಿನ ಸೌಂದರ್ಯ ಹಾಳು ಮಾಡಲಾಗುತ್ತಿದೆ. ಇದನ್ನು ಸರಿ ಮಾಡಬೇಕು ಎಂದು ಹೇಳಿದರು.

ನನ್ನ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಹಾಗೂ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ಮಾಡುತ್ತೇವೆ. ಎಲ್ಲಾ ಬದಲಾವಣೆಗಳನ್ನು ಒಂದೇ ದಿನದಲ್ಲಿ ಮಾಡಲು ಸಾಧ್ಯವಿಲ್ಲ, ಇದಕ್ಕೆ ಎಲ್ಲಾ ನಾಗರಿಕರ ಸಹಕಾರ ಮುಖ್ಯ ಎಂದು ತಿಳಿಸಿದರು.

ಡಿಕೆಶಿ ತಿಹಾರ್ ಜೈಲಿಗೆ ಹೋದರೂ ಅಚ್ಚರಿ ಇಲ್ಲ, ಮೈತ್ರಿ ಸರ್ಕಾರ ಬೀಳಲು‌ ಅವರೇ ಕಾರಣ ಎಂಬ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಆರೋಪಕ್ಕೆ‌ ನಗುಮುಖದಲ್ಲೇ ತಿರುಗೇಟು ನೀಡಿದ ಡಿಕೆಶಿ, ಅವರು‌ ಏನು ಹೇಳಿದ್ದಾರೆ ಅನ್ನೋದನ್ನು ಮೊದಲು ನೋಡುತ್ತೇನೆ. ಅವರು ದೊಡ್ಡವರು, ಅವರ ಆ ನುಡಿಮುತ್ತುಗಳನ್ನ ನೋಡಿ ಉತ್ತರ ಕೊಡುತ್ತೇನೆ. ಅವರ ಪ್ಲಾನ್ ಏನಿದೆಯೋ ಅದನ್ನು ಹೇಳುತ್ತಿದ್ದಾರೆ. ಏನೆಲ್ಲ ಮಾಡಲು‌ ಸಾಧ್ಯವೋ ಅದನ್ನು ಮಾಡುತ್ತಿದ್ದಾರೆ. ಹಿಂದೆನೂ ಪಾಪ ಮಾಡಿದ್ರಲ್ಲ, ನನ್ನ‌ ತಂಗಿ, ನನ್ನ ತಮ್ಮ, ನನ್ನ‌ ಹೆಂಡ್ತಿ ಮೇಲೆ ಕೇಸ್ ಹಾಕಿದ್ರು. ಹಿಂದೆ ಸಿಎಂ ಆಗಿದ್ದು, ಈಗ ನೆನಪು ಮಾಡಿಕೊಳ್ತಿದ್ದಾರೆ ಎಂದರು.

ಇದನ್ನೂ ಓದಿ: ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರ ರಾಜಕೀಯ ಮಾಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಮಾತು

ಬೆಂಗಳೂರು: ನಾಗರಿಕರ ಧ್ವನಿಯೇ ನಮ್ಮ ಸರ್ಕಾರದ ಧ್ವನಿ. ಹೀಗಾಗಿ 'ಬ್ರ್ಯಾಂಡ್ ಬೆಂಗಳೂರು' ಯೋಜನೆಯಲ್ಲಿ ನಗರದ ಜನರ ಅಭಿಪ್ರಾಯ ಸಂಗ್ರಹಿಸಿ, ಅವರ ನಿರೀಕ್ಷೆಗೆ ತಕ್ಕಂತೆ ನಾವು ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಿದ್ದಪಡಿಸಲಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 'ಬ್ರ್ಯಾಂಡ್ ಬೆಂಗಳೂರು' ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್, ಬೆಂಗಳೂರಿಗೆ ಅಂಟಿರುವ ಗಾರ್ಬೇಜ್ ಸಿಟಿ, ಟ್ರಾಫಿಕ್ ಸಿಟಿ ಎಂಬ ಕಳಂಕವನ್ನು ತೊಡೆದು ಹಾಕುತ್ತೇವೆ. ಪ್ರತಿ ರಸ್ತೆಯಲ್ಲಿ ಕ್ಯೂಆರ್ ಕೋಡ್ ಹಾಕಿ ಅಲ್ಲಿನ ಕಾಮಗಾರಿ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡುತ್ತೇವೆ. ಜನರಿಗೆ ಆ ರಸ್ತೆಯ ಕಾಮಗಾರಿ ಕುರಿತು ಪಾರದರ್ಶಕ ಮಾಹಿತಿ ನೀಡಲಿದ್ದೇವೆ ಎಂದು ಹೇಳಿದರು.

ಬಿಬಿಎಂಪಿ ಚುನಾವಣೆಗೆ 225 ವಾರ್ಡ್​​ ಮಾಡಲಾಗಿದೆ. ವಾರ್ಡ್ ಸಮಿತಿ ಇಲ್ಲದ ಕಾರಣ ಜನರು ಕೆಲವು ಸಲಹೆ ನೀಡಿದ್ದಾರೆ. ಪಾರ್ಕ್, ಆಟದ ಮೈದಾನಗಳ ಮೇಲುಸ್ತುವಾರಿಯನ್ನು ಸ್ಥಳೀಯರಿಗೆ ನೀಡಿ ಎಂದು ಹೇಳಿದ್ದಾರೆ. ಈ ಬಗ್ಗೆ ನಾನು ಎಲ್ಲ ಶಾಸಕರ ಜೊತೆ ಚರ್ಚೆ ಮಾಡುತ್ತೇನೆ. ಇದರಲ್ಲಿ ಯಾವುದೇ ಪಕ್ಷದವರಾದರೂ ಸದಸ್ಯರಿಲ್ಲದ ನಾಗರಿಕ ಸಮೂಹಕ್ಕೆ ಜವಾಬ್ದಾರಿ ವಹಿಸಲು ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು.

ನಾನು ಬಹಳ ಉತ್ಸುಕನಾಗಿ ಬೆಂಗಳೂರು ನಗರಾಭಿವೃದ್ಧಿಯ ಜವಾಬ್ದಾರಿಯನ್ನು ವಹಿಸಿದ್ದೇನೆ. ಈ ಹಿಂದೆ ಕೂಡ ಎಸ್ ಎಂ ಕೃಷ್ಣ ಅವರ ಕಾಲದಲ್ಲಿ ನಗರಾಭಿವದ್ಧಿ ಸಚಿವಾನಾಗಿದ್ದಾಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಿಎಂಐಸಿಪಿ ರಸ್ತೆ ಯೋಜನೆಗೆ ಸಹಿ ಹಾಕಲಾಗಿತ್ತು. ಜೆ.ಹೆಚ್ ಪಟೇಲರ ಅವಧಿಯಲ್ಲಿ ಬೆಂಗಳೂರಿನಲ್ಲಿ ಮೋನೋ ರೈಲು ತರಲು ನಿರ್ಧರಿಸಲಾಗಿತ್ತು. ನಾನು ಹಾಗೂ ಅನಂತಕುಮಾರ್ ಚರ್ಚೆ ನಡೆಸಿ ಬೇರೆ ಬೇರೆ ಕಡೆ ಹೋಗಿ ಅಧ್ಯಯನ ಮಾಡಿ ನಂತರ ದೆಹಲಿ ಮಾದರಿಯಂತೆ ಮೆಟ್ರೋ ರೈಲು ಜಾರಿಗೆ ತಂದೆವು ಎಂದು ನೆನೆದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬ್ರ್ಯಾಂಡ್ ಬೆಂಗಳೂರು ಚಿಂತನ ಮಂಥನ ಕಾರ್ಯಕ್ರಮ
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬ್ರ್ಯಾಂಡ್ ಬೆಂಗಳೂರು ಚಿಂತನ ಮಂಥನ ಕಾರ್ಯಕ್ರಮ

ಇಂದು ಬೈಯಪ್ಪನಹಳ್ಳಿಯಿಂದ ಕೆ.ಆರ್ ಪುರ, ಕೆಂಗೇರಿಯಿಂದ ಚಲ್ಲಘಟ್ಟಕ್ಕೆ ಮೆಟ್ರೋ ಮಾರ್ಗ ಆರಂಭವಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಅವರನ್ನು ಆಹ್ವಾನಿಸಲು ಕಾಲಾವಕಾಶ ಕೇಳಿದ್ದೆವು. ಅವರ ಕಾಲಾವಕಾಶ ಇಲ್ಲದ ಕಾರಣ ಈ ಮಾರ್ಗಗಳ ಉದ್ಘಾಟನೆ ಮಾಡಲಾಗಿದೆ. ಜನರು ಈ ಮಾರ್ಗಗಳಲ್ಲಿ ನಿಶ್ಚಿಂತೆಯಿಂದ ಪ್ರಯಾಣ ಮಾಡಬಹುದಾಗಿದೆ ಎಂದು ಹೇಳಿದರು.

ಬ್ರ್ಯಾಂಡ್ ಬೆಂಗಳೂರು ಯೋಜನೆಗೆ 70 ಸಾವಿರ ಸಲಹೆಗಳು ಬಂದಿವೆ. ಪುಟಾಣಿ ಮಕ್ಕಳಿಂದ ಹಿರಿಯರವರೆಗೂ ಎಲ್ಲಾ ವರ್ಗದವರು ಸಲಹೆ ನೀಡಿದ್ದಾರೆ. ಈ ಬೆಂಗಳೂರು ನಮ್ಮದಲ್ಲ, ಜನರದ್ದು. ರಾಜಕಾರಣಿಗಳು ಅವರದೇ ರೀತಿಯಲ್ಲಿ ಆಲೋಚನೆ ಮಾಡುತ್ತೇವೆ, ಅಧಿಕಾರಿಗಳು ಅವರದೇ ಆದ ರೀತಿಯಲ್ಲಿ ಯೋಚಿಸುತ್ತಾರೆ. ಯೋಜನೆ ಆರಂಭಿಸುವ ಮುನ್ನ ನಾಗರಿಕರ ಅಭಿಪ್ರಾಯ ಮುಖ್ಯ. ಹೀಗಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಈ ಯೋಜನೆ ವಿಚಾರವಾಗಿ ಪಕ್ಷಬೇಧ ಮರೆತು ಬೆಂಗಳೂರಿನ ಶಾಸಕರು, ಸಂಸದರ ಅಭಿಪ್ರಾಯ, ಹಿರಿಯ ನಾಗರಿಕರು, ಸಂಘ ಸಂಸ್ಥೆಗಳು, ಮಕ್ಕಳು ಸೇರಿದಂತೆ ಅಧಿಕಾರಿಗಳ ಸಭೆ ಮಾಡಿದ್ದೇವೆ. ಜನರ ಅಭಿಪ್ರಾಯ ಕ್ರೋಢೀಕರಿಸಿದ ನಂತರ ಬೆಂಗಳೂರನ್ನು ಮುಂದಿನ ದಿನಗಳಲ್ಲಿ ಹೇಗೆ ಮುನ್ನಡೆಸಬೇಕು ಎಂದು ರೂಪುರೇಷೆ ತಯಾರಿಸಲು ತೀರ್ಮಾನಿಸಿದ್ದೇವೆ ಎಂದರು.

ಅಭಿವೃದ್ಧಿಗೆ ಕೂಡ ಆರ್ಥಿಕ ಪರಿಸ್ಥಿತಿ ಗಮನದಲ್ಲಿ ಇಟ್ಟುಕೊಳ್ಳಬೇಕಿದೆ. ನಾವು ನಾಗರಿಕರ ಮೇಲೆ ವಿಶ್ವಾಸ ಇಟ್ಟು ಸ್ವಯಂ ಘೋಷಿತ ಆಸ್ತಿ ತೆರಿಗೆ ಕಟ್ಟಲು ಅವಕಾಶ ನೀಡಿದ್ದೆವು. 1 ಕೋಟಿ 40 ಲಕ್ಷ ಜನ ವಾಸಿಸುವ ಬೆಂಗಳೂರಿನಿಂದ ಕೇವಲ 3 ಸಾವಿರ ಕೋಟಿ ಮಾತ್ರ ಆಸ್ತಿ ತೆರಿಗೆ ಬರುತ್ತಿದೆ. ಇದು ನಾಚಿಕೆ ತರುವ ವಿಚಾರವಾಗಿದೆ. ಈಗ ಬರುತ್ತಿರುವ ಆಸ್ತಿ ತೆರಿಗೆ ಯಾವುದಕ್ಕೂ ಸಾಲುವುದಿಲ್ಲ. ಈ ವ್ಯವಸ್ಥೆಯಲ್ಲಿ ಸಂಪನ್ಮೂಲ ಸೋರಿಕೆ ಆಗುತ್ತಿದೆ. ಇದನ್ನು ಸರಿಪಡಿಸಲು ಮುಂದಾಗಿದ್ದೇವೆ. ಯಾರೂ ಕೂಡ ಹೆಚ್ಚಿನ ತೆರಿಗೆ ಕಟ್ಟುವಂತಿಲ್ಲ. ತಮ್ಮ ಆಸ್ತಿಗೆ ತಕ್ಕಂತೆ ಪ್ರಾಮಾಣಿಕತೆಯಿಂದ ತೆರಿಗೆ ಪಾವತಿ ಮಾಡಬೇಕು. ಪರಿಣಾಮಕಾರಿಯಾಗಿ ತೆರಿಗೆ ಸಂಗ್ರಹಿಸಲು ಕಾರ್ಯಕ್ರಮ ರೂಪಿಸುತ್ತಾರೆ ಎಂದು ಹೇಳಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬ್ರ್ಯಾಂಡ್ ಬೆಂಗಳೂರು ಚಿಂತನ ಮಂಥನ ಕಾರ್ಯಕ್ರಮ
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬ್ರ್ಯಾಂಡ್ ಬೆಂಗಳೂರು ಚಿಂತನ ಮಂಥನ ಕಾರ್ಯಕ್ರಮ

ಬೆಂಗಳೂರಿನಲ್ಲಿ ಮಳೆನೀರು ಹರಿಯದೇ ಪ್ರವಾಹ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಬೆಂಗಳೂರಿನ ಬಗ್ಗೆ ಬಹಳ ಟೀಕೆ ಮಾಡಲಾಗುತ್ತಿತ್ತು. ಸಂಚಾರದಟ್ಟಣೆ ವಿಚಾರದಲ್ಲೂ ಬೇರೆ ನಗರಗಳಿಗಿಂತ ಬೆಂಗಳೂರಿನ ಮೇಲೆ ಕಳಂಕ ಹೋರಿಸಲಾಗಿತ್ತು. ಬೆಂಗಳೂರು ವಿಶ್ವದ ಗಮನದಲ್ಲಿರುವ ಕಾರಣ ಇಲ್ಲಿನ ಸಮಸ್ಯೆ ಹೆಚ್ಚು ಪ್ರಚಾರ ಆಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ವಿವಿಧ ಸಮುದಾಯಗಳ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟು ಅಡಿಪಾಯ ಹಾಕಿಕೊಟ್ಟಿದ್ದರು. ನೆಹರೂ ಅವರ ಕಾಲದಿಂದಲೂ ಅನೇಕ ನಾಯಕರು ಬೆಂಗಳೂರಿನಲ್ಲಿ ಇಸ್ರೋ, ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್, ಹೆಚ್​ಎಎಲ್, ಹೆಚ್ಎಂಟಿ, ಕಾನೂನು ಕಾಲೇಜು ಸೇರಿದಂತೆ ಅನೇಕ ಮಹತ್ತರ ಸಂಸ್ಥೆಯನ್ನು ಸ್ಥಾಪಿಸಿ ನಗರಕ್ಕೆ ಅಡಿಪಾಯ ಹಾಕಿ ಬೆಳೆಸಿದ್ದಾರೆ. ಆದ್ದರಿಂದ ಈ ಬೆಂಗಳೂರನ್ನು ರಕ್ಷಿಸಿ ಬೆಳೆಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ನಾನು ಅಧಿಕಾರಕ್ಕೆ ಬಂದ ನಂತರ ಮಳೆ ನೀರು ಚರಂಡಿ ವ್ಯವಸ್ಥೆ, ಕಸ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಬೇರೆ ರಾಜ್ಯಗಳಲ್ಲಿನ ಮಾದರಿಯನ್ನು ನೋಡಿದ್ದೇನೆ. ಬೆಂಗಳೂರಿನಲ್ಲಿ ಕಸ ನಿರ್ವಹಣೆಯಲ್ಲಿ ಎಲ್ಲಾ ಸರ್ಕಾರಗಳು ಎಡವಿದ್ದೇವೆ. ಎಂಟು ಕಡೆ ಕಸದಿಂದ ಇಂಧನ ಉತ್ಪಾದನೆ ಕೇಂದ್ರ ಆರಂಭಿಸಿದ್ದು ಯಾವುದೂ ಚಾಲ್ತಿಯಲ್ಲಿ ಇಲ್ಲ. ಕೇವಲ ಕಸ ತುಂಬುತ್ತಿದ್ದೇವೆ. ಇದಕ್ಕೆ ಶಾಶ್ವತ ಪರಿಹಾರ ನೀಡಬೇಕಾಗಿದೆ. ಈ ವಿಚಾರದಲ್ಲಿ ಹೈದರಾಬಾದ್, ದೆಹಲಿ, ಚೆನ್ನೈನಲ್ಲಿ ಮಾದರಿಯನ್ನು ಗಮನಿಸಿದ್ದೇನೆ ಎಂದು ತಿಳಿಸಿದರು.

ಸಂಚಾರ ದಟ್ಟಣೆ ಕಡಿಮೆ ಮಾಡಲು ಅನೇಕ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರು ಯೋಜಿತ ನಗರ ಅಲ್ಲ. ಇರುವ ನಗರವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕಿದೆ. ಯಾರಿಗೂ ಸಾರ್ವಜನಿಕ ಸಾರಿಗೆ ಮೇಲೆ ಹೆಚ್ಚು ಅವಲಂಬನೆ ಆಗಲು ಇಷ್ಟವಿಲ್ಲ. ಎಲ್ಲರೂ ಕಾರು, ಬೈಕ್​​ನಲ್ಲಿ ಓಡಾಡಬೇಕು. ಮೆಟ್ರೋ ಬಂದ ನಂತರ ಸ್ವಲ್ಪ ಹೆಚ್ಚು ಓಡಾಟ ಆಗಿದೆ. ಮಹಿಳೆಯರಿಗೆ ನಾವು ಉಚಿತ ಬಸ್ ಪ್ರಯಾಣದ ಅವಕಾಶ ಕೊಟ್ಟ ನಂತರ ಬಸ್​​ನಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮೇಲ್ಸೇತುವೆ ಯೋಜನೆ ಮಾಡಿದ್ದೇವೆ. ಈಗ ಟನಲ್ ರಸ್ತೆ ಮಾಡಲು ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.

ಬ್ರ್ಯಾಂಡ್ ಬೆಂಗಳೂರು ಕುರಿತು ಡಿಸಿಎಂ ಮಾತು

ಈಗಾಗಲೇ 8 ಕಂಪನಿಗಳು ಈ ಯೋಜನೆ ಮಾಡಲು ಅರ್ಹತೆ ಪಡೆದಿದ್ದಾರೆ. ಮುಂದಿನ 45 ದಿನಗಳಲ್ಲಿ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಹಂತ ಹಂತವಾಗಿ ಯೋಜನೆ ಜಾರಿ ಮಾಡುತ್ತೇವೆ. ಟನಲ್ ರಸ್ತೆ ಎಲ್ಲೆಲ್ಲಿ ತೆರೆದುಕೊಳ್ಳಲಿದೆ ಎನ್ನುವ ಬಗ್ಗೆ ಚರ್ಚೆ ಆಗುತ್ತಿದೆ. ಅರಮನೆ ಮೈದಾನ ಅಥವಾ ಗಾಲ್ಫ್ ಕೋರ್ಸ್ ಅಥವಾ ರೇಸ್ ಕೋರ್ಸ್​ನಲ್ಲಿ ಮಾಡಬೇಕಿದೆ. ಕಬ್ಬನ್ ಪಾರ್ಕ್​​ ಅಥವಾ ಇತರೆ ಕಡೆಗಳಲ್ಲಿ ಮಾಡಿದರೆ ಪರಿಸರ ನಾಶದ ವಿಚಾರ ಬರುತ್ತದೆ. ಹೀಗಾಗಿ ಸರಿಯಾದ ರೀತಿಯಲ್ಲಿ ಯೋಜನೆ ರೂಪಿಸಲಿದ್ದೇವೆ ಎಂದು ಹೇಳಿದರು.

ರಸ್ತೆ ಗುಂಡಿ ವಿಚಾರದಲ್ಲಿ ಸಂಚಾರಿ ಪೊಲೀಸ್ ಇಲಾಖೆ ಹಾಗೂ ಪಾಲಿಕೆ ಜತೆಗೂಡಿ ಕೆಲಸ ಮಾಡಲಿದೆ. ಸಾರ್ವಜನಿಕರು ರಸ್ತೆಗುಂಡಿ ಬಗ್ಗೆ ಆಯುಕ್ತರಿಗೆ ಮಾಹಿತಿ ನೀಡುವ ಅವಕಾಶ ನೀಡಲಾಗುವುದು. ಜನ ಟ್ರಾಫಿಕ್​​ನಲ್ಲಿ ಕಾಲ ಕಳೆಯುವಂತೆ ಆಗಿದೆ. ಅದನ್ನು ತಪ್ಪಿಸುವುದು ನಮ್ಮ ಗುರಿ. ನಮ್ಮ ಈ ಕಾರ್ಯಕ್ಕೆ ಎಲ್ಲಾ ಶಾಸಕರು ಪಕ್ಷಾತೀತವಾಗಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಇತ್ತೀಚೆಗೆ ಟೆಂಡರ್ ಶ್ಯೂರ್ ರಸ್ತೆಗಳನ್ನು ಪರಿಶೀಲಿಸಿದೆ. ರಸ್ತೆಯಲ್ಲಿ ಅಂಡರ್ ಗ್ರೌಂಡ್​​ನಲ್ಲಿ ಕೆಬಲ್ ಅಳವಡಿಕೆಗೆ ಅವಕಾಶ ನೀಡಿದ್ದರೂ ಎಲ್ಲಾ ಕೇಬಲ್​​ಗಳು ಮೇಲೆಯೇ ನೇತಾಡುತ್ತಿವೆ. ಆ ಮೂಲಕ ಬೆಂಗಳೂರಿನ ಸೌಂದರ್ಯ ಹಾಳು ಮಾಡಲಾಗುತ್ತಿದೆ. ಇದನ್ನು ಸರಿ ಮಾಡಬೇಕು ಎಂದು ಹೇಳಿದರು.

ನನ್ನ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಹಾಗೂ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ಮಾಡುತ್ತೇವೆ. ಎಲ್ಲಾ ಬದಲಾವಣೆಗಳನ್ನು ಒಂದೇ ದಿನದಲ್ಲಿ ಮಾಡಲು ಸಾಧ್ಯವಿಲ್ಲ, ಇದಕ್ಕೆ ಎಲ್ಲಾ ನಾಗರಿಕರ ಸಹಕಾರ ಮುಖ್ಯ ಎಂದು ತಿಳಿಸಿದರು.

ಡಿಕೆಶಿ ತಿಹಾರ್ ಜೈಲಿಗೆ ಹೋದರೂ ಅಚ್ಚರಿ ಇಲ್ಲ, ಮೈತ್ರಿ ಸರ್ಕಾರ ಬೀಳಲು‌ ಅವರೇ ಕಾರಣ ಎಂಬ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಆರೋಪಕ್ಕೆ‌ ನಗುಮುಖದಲ್ಲೇ ತಿರುಗೇಟು ನೀಡಿದ ಡಿಕೆಶಿ, ಅವರು‌ ಏನು ಹೇಳಿದ್ದಾರೆ ಅನ್ನೋದನ್ನು ಮೊದಲು ನೋಡುತ್ತೇನೆ. ಅವರು ದೊಡ್ಡವರು, ಅವರ ಆ ನುಡಿಮುತ್ತುಗಳನ್ನ ನೋಡಿ ಉತ್ತರ ಕೊಡುತ್ತೇನೆ. ಅವರ ಪ್ಲಾನ್ ಏನಿದೆಯೋ ಅದನ್ನು ಹೇಳುತ್ತಿದ್ದಾರೆ. ಏನೆಲ್ಲ ಮಾಡಲು‌ ಸಾಧ್ಯವೋ ಅದನ್ನು ಮಾಡುತ್ತಿದ್ದಾರೆ. ಹಿಂದೆನೂ ಪಾಪ ಮಾಡಿದ್ರಲ್ಲ, ನನ್ನ‌ ತಂಗಿ, ನನ್ನ ತಮ್ಮ, ನನ್ನ‌ ಹೆಂಡ್ತಿ ಮೇಲೆ ಕೇಸ್ ಹಾಕಿದ್ರು. ಹಿಂದೆ ಸಿಎಂ ಆಗಿದ್ದು, ಈಗ ನೆನಪು ಮಾಡಿಕೊಳ್ತಿದ್ದಾರೆ ಎಂದರು.

ಇದನ್ನೂ ಓದಿ: ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರ ರಾಜಕೀಯ ಮಾಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

Last Updated : Oct 9, 2023, 6:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.