ETV Bharat / state

ಬಸವ ತತ್ವಗಳನ್ನು ಅಳವಡಿಸಿಕೊಳ್ಳಲು ಡಿಸಿಎಂ ಗೋವಿಂದ ಕಾರಜೋಳ ಕರೆ

author img

By

Published : Apr 26, 2020, 1:00 PM IST

ಬಸವಣ್ಣ ಅವರು 900 ವರ್ಷಗಳ ಹಿಂದೆ ವರ್ಗ, ವರ್ಣ, ಜಾತಿ, ಧರ್ಮ, ಲಿಂಗಭೇದಗಳಿಂದ ಮುಕ್ತರಾಗಿ ಮಾನವ ಏಕತೆಯನ್ನು ಸಾಧಿಸಬೇಕು ಎನ್ನುವ ಸಂದೇಶವನ್ನು ಸಾರಿದ್ದರು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದರು.

DCM Govinda Karajola calls for the adoption of Basava principles.
ಬಸವ ತತ್ವಗಳನ್ನು ಅಳವಡಿಸಿಕೊಳ್ಳಲು ಡಿಸಿಎಂ ಗೋವಿಂದ ಕಾರಜೋಳ ಕರೆ

ಬೆಂಗಳೂರು: ಮಹಾ ಮಾನವತಾವಾದಿ, ಜಗಜ್ಯೋತಿ, ವಿಶ್ವಗುರು ಬಸವಣ್ಣ ಅವರ ತತ್ವ-ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಏಕತೆಯನ್ನು ಸಾಧಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಕರೆ ನೀಡಿದರು.

ನಗರದ ಬಸವ ಸಮಿತಿ ಸಭಾಂಗಣದಲ್ಲಿ ಇಂದು ಗ್ಲೋಬಲ್ ಬಸವ ಫೌಂಡೇಷನ್ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣ ಅವರು 900 ವರ್ಷಗಳ ಹಿಂದೆ ವರ್ಗ, ವರ್ಣ, ಜಾತಿ, ಧರ್ಮ, ಲಿಂಗಭೇದಗಳಿಂದ ಮುಕ್ತರಾಗಿ ಮಾನವ ಏಕತೆಯನ್ನು ಸಾಧಿಸಬೇಕೆನ್ನುವ ಸಂದೇಶವನ್ನು ಸಾರಿದ್ದಾರೆ. ಅದಕ್ಕಾಗಿ ಅಪರಿಮಿತವಾಗಿ ಶ್ರಮಿಸುವ ಮಾಡುವ ಹೋರಾಟವನ್ನೇ ಮಾಡಿದ್ದಾರೆ. ಇಡೀ ಪ್ರಪಂಚದ ಯಾವುದೇ ದೇಶದಲ್ಲಿ ದುಡಿಯುವ ವರ್ಗಕ್ಕಾಗಿ, ಕಾಯಕ ಜೀವಿಗಳಿಗಾಗಿ, ನೊಂದವರ ಏಳಿಗೆಗಾಗಿ ಬಸವ ನಾಡಿನಲ್ಲಿ ಹುಟ್ಟಿದ್ದು ಈ ಧರ್ಮ. ಈ ಧರ್ಮವನ್ನು ಉಳಿಸಿ ಬೆಳೆಸಬೇಕು. ಇದು ಪ್ರತಿಯೊಬ್ಬರ ಧರ್ಮವಾಗಬೇಕು. ಬಸವಣ್ಣನವರ ಅವರ ಆದರ್ಶ, ತತ್ವಗಳನ್ನು ಸದಾ ಸ್ಮರಿಸಬೇಕು ಎಂದರು.

ಇದು ಕೇವಲ ಬಸವ ಜಯಂತಿಗೆ ಸೀಮಿತವಾಗಬಾರದು. ಬಸವಣ್ಣ ಅವರ ಆದರ್ಶಗಳು, ಅರ್ಥಪೂರ್ಣವಾದ ಕಾರ್ಯಕ್ರಮಗಳು, ಚಿಂತನೆಗಳು ಇಡೀ ಪ್ರಪಂಚವೇ ಮೆಚ್ಚುವ ಕಾರ್ಯಕ್ರಮಗಳಾಗಿವೆ. ಅಮೆರಿಕಾದ ಸಂಯುಕ್ತ ರಾಷ್ಟ್ರಗಳಲ್ಲಿ ಬಸವಣ್ಣನ ಚಿಂತನೆ, ಕಾರ್ಯಕ್ರಮಗಳಲ್ಲಿ 30ಕ್ಕೂ ಹೆಚ್ಚು ವಚನಗಳು ಅಲ್ಲಿನ ಮಾನವ ಹಕ್ಕುಗಳಾಗಿ ರೂಪುಗೊಂಡಿವೆ. ಮಾನವ ಇತರ ಜೀವಿಗಳು ಮತ್ತು ನಿಸರ್ಗ ಪಾಲನೆಯ ತತ್ವವಾದ ಬಸವ ತತ್ವವನ್ನು ಜನ ಅರಿತು ಅಳವಡಿಸಿಕೊಳ್ಳಬೇಕು ಎಂದು ಡಿಸಿಎಂ ಮನವಿ ಮಾಡಿದರು. ಬಸವ ಜಯಂತಿಯ ಈ ಶುಭ ದಿನದಂದು ಜಗತ್ತು ಕೊರೊನಾ ಮುಕ್ತವಾಗಿ ವಿಶ್ವದೆಲ್ಲೆಡೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ರು.

ಇಂದಿನ ಸಂದರ್ಭಕ್ಕೆ ಅನ್ವಯವಾಗುವ ವಚನವಾದ `ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೇ ಧರೆ ಹತ್ತಿ ಉರಿದಡೆ ನಿಲಲುಬಾರದು` ಎನ್ನುವ ವಚನದ ಸಾರವಾದ ಇಡೀ ವಿಶ್ವವೇ ನಂಜಾದರೆ ಯಾರಿಗೆ ದೂರಬೇಕು ಎಂದು ಬಸವಣ್ಣ ಅವರು ಅಂದೇ ಸೂಚ್ಯವಾಗಿ ಸಂದೇಶವನ್ನು ಸಾರಿದ್ದಾರೆ. ಬಸವ ಜಯಂತಿಯನ್ನು ಎಂದಿನಂತೆ ಇಡೀ ನಾಡಿನಾದ್ಯಂತ ಅರ್ಥಪೂರ್ಣವಾಗಿ ಆಚರಿಸಬೇಕಿತ್ತು. ಆದರೆ ಕೊರೊನಾ ಸೋಂಕಿನಿಂದಾಗಿ ಸರಳವಾಗಿ ಆಚರಿಸಲಾಗಿದೆ. ಎಲ್ಲರೂ ಸರಳವಾಗಿ ಆಚರಿಸಿ, ಬಸವತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬೆಂಗಳೂರು: ಮಹಾ ಮಾನವತಾವಾದಿ, ಜಗಜ್ಯೋತಿ, ವಿಶ್ವಗುರು ಬಸವಣ್ಣ ಅವರ ತತ್ವ-ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಏಕತೆಯನ್ನು ಸಾಧಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಕರೆ ನೀಡಿದರು.

ನಗರದ ಬಸವ ಸಮಿತಿ ಸಭಾಂಗಣದಲ್ಲಿ ಇಂದು ಗ್ಲೋಬಲ್ ಬಸವ ಫೌಂಡೇಷನ್ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣ ಅವರು 900 ವರ್ಷಗಳ ಹಿಂದೆ ವರ್ಗ, ವರ್ಣ, ಜಾತಿ, ಧರ್ಮ, ಲಿಂಗಭೇದಗಳಿಂದ ಮುಕ್ತರಾಗಿ ಮಾನವ ಏಕತೆಯನ್ನು ಸಾಧಿಸಬೇಕೆನ್ನುವ ಸಂದೇಶವನ್ನು ಸಾರಿದ್ದಾರೆ. ಅದಕ್ಕಾಗಿ ಅಪರಿಮಿತವಾಗಿ ಶ್ರಮಿಸುವ ಮಾಡುವ ಹೋರಾಟವನ್ನೇ ಮಾಡಿದ್ದಾರೆ. ಇಡೀ ಪ್ರಪಂಚದ ಯಾವುದೇ ದೇಶದಲ್ಲಿ ದುಡಿಯುವ ವರ್ಗಕ್ಕಾಗಿ, ಕಾಯಕ ಜೀವಿಗಳಿಗಾಗಿ, ನೊಂದವರ ಏಳಿಗೆಗಾಗಿ ಬಸವ ನಾಡಿನಲ್ಲಿ ಹುಟ್ಟಿದ್ದು ಈ ಧರ್ಮ. ಈ ಧರ್ಮವನ್ನು ಉಳಿಸಿ ಬೆಳೆಸಬೇಕು. ಇದು ಪ್ರತಿಯೊಬ್ಬರ ಧರ್ಮವಾಗಬೇಕು. ಬಸವಣ್ಣನವರ ಅವರ ಆದರ್ಶ, ತತ್ವಗಳನ್ನು ಸದಾ ಸ್ಮರಿಸಬೇಕು ಎಂದರು.

ಇದು ಕೇವಲ ಬಸವ ಜಯಂತಿಗೆ ಸೀಮಿತವಾಗಬಾರದು. ಬಸವಣ್ಣ ಅವರ ಆದರ್ಶಗಳು, ಅರ್ಥಪೂರ್ಣವಾದ ಕಾರ್ಯಕ್ರಮಗಳು, ಚಿಂತನೆಗಳು ಇಡೀ ಪ್ರಪಂಚವೇ ಮೆಚ್ಚುವ ಕಾರ್ಯಕ್ರಮಗಳಾಗಿವೆ. ಅಮೆರಿಕಾದ ಸಂಯುಕ್ತ ರಾಷ್ಟ್ರಗಳಲ್ಲಿ ಬಸವಣ್ಣನ ಚಿಂತನೆ, ಕಾರ್ಯಕ್ರಮಗಳಲ್ಲಿ 30ಕ್ಕೂ ಹೆಚ್ಚು ವಚನಗಳು ಅಲ್ಲಿನ ಮಾನವ ಹಕ್ಕುಗಳಾಗಿ ರೂಪುಗೊಂಡಿವೆ. ಮಾನವ ಇತರ ಜೀವಿಗಳು ಮತ್ತು ನಿಸರ್ಗ ಪಾಲನೆಯ ತತ್ವವಾದ ಬಸವ ತತ್ವವನ್ನು ಜನ ಅರಿತು ಅಳವಡಿಸಿಕೊಳ್ಳಬೇಕು ಎಂದು ಡಿಸಿಎಂ ಮನವಿ ಮಾಡಿದರು. ಬಸವ ಜಯಂತಿಯ ಈ ಶುಭ ದಿನದಂದು ಜಗತ್ತು ಕೊರೊನಾ ಮುಕ್ತವಾಗಿ ವಿಶ್ವದೆಲ್ಲೆಡೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ರು.

ಇಂದಿನ ಸಂದರ್ಭಕ್ಕೆ ಅನ್ವಯವಾಗುವ ವಚನವಾದ `ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೇ ಧರೆ ಹತ್ತಿ ಉರಿದಡೆ ನಿಲಲುಬಾರದು` ಎನ್ನುವ ವಚನದ ಸಾರವಾದ ಇಡೀ ವಿಶ್ವವೇ ನಂಜಾದರೆ ಯಾರಿಗೆ ದೂರಬೇಕು ಎಂದು ಬಸವಣ್ಣ ಅವರು ಅಂದೇ ಸೂಚ್ಯವಾಗಿ ಸಂದೇಶವನ್ನು ಸಾರಿದ್ದಾರೆ. ಬಸವ ಜಯಂತಿಯನ್ನು ಎಂದಿನಂತೆ ಇಡೀ ನಾಡಿನಾದ್ಯಂತ ಅರ್ಥಪೂರ್ಣವಾಗಿ ಆಚರಿಸಬೇಕಿತ್ತು. ಆದರೆ ಕೊರೊನಾ ಸೋಂಕಿನಿಂದಾಗಿ ಸರಳವಾಗಿ ಆಚರಿಸಲಾಗಿದೆ. ಎಲ್ಲರೂ ಸರಳವಾಗಿ ಆಚರಿಸಿ, ಬಸವತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.