ETV Bharat / state

ಮುಂಜಾಗ್ರತಾ ಕ್ರಮಕೈಗೊಂಡು ತುರ್ತು ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಡಿಸಿಎಂ ಗೋವಿಂದ ಕಾರಜೋಳ

ಕಲಬುರ್ಗಿ ಹಾಗು ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಸುರಿದಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆದು, ಮುಂಜಾಗ್ರತಾ ಕ್ರಮ ಕೈಗೊಂಡು, ಮನೆ ಹಾನಿಗೊಳಗಾದ ಸಂತ್ರತ್ತರಿಗಾಗಿ ಕಾಳಜಿ ಕೇಂದ್ರ ಸ್ಥಾಪಿಸಿ, ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

author img

By

Published : Oct 15, 2020, 10:18 PM IST

karajola
karajola

ಬೆಂಗಳೂರು: ಕಲಬುರ್ಗಿ ಹಾಗು ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದ್ದು, ಜನತೆ ಸಂಕಷ್ಟದಲ್ಲಿರುವುದನ್ನು ಗಮನಿಸಿ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿ ಪಡೆದು, ಮುಂಜಾಗ್ರತಾ ಕ್ರಮ ಕೈಗೊಂಡು, ಮನೆ ಹಾನಿಗೊಳಗಾದ ಸಂತ್ರತ್ತರಿಗಾಗಿ ಕಾಳಜಿ ಕೇಂದ್ರ ಸ್ಥಾಪಿಸಿ, ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಮಗೆ ಹಾಗೂ ತಮ್ಮ ಇಡೀ ಕುಟುಂಬಕ್ಕೆ ಕೊವಿಡ್-19 ಸೊಂಕು ತಗಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದೇವೆ. ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್‍ನಲ್ಲಿದ್ದೇವೆ. ಅನಿವಾರ್ಯ ಕಾರಣದಿಂದ ನಿನ್ನೆ ತುಮಕೂರು ಜಿಲ್ಲೆಯ ಶಿರಾಕ್ಕೆ ಭೇಟಿ ನೀಡಿದ್ದೆ. ಆದರೆ ಇನ್ನೂ ಮೈಯಲ್ಲಿ ಸುಸ್ತು ಇರುವ ಕಾರಣ ಇನ್ನು ವಿಶ್ರಾಂತಿ ಪಡೆಯಬೇಕಿದ್ದು, ಪ್ರವಾಸ ಕೈಗೊಳ್ಳದಂತೆ ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಿಗೆ ಭೇಟಿ ನೀಡಲಾಗಿಲ್ಲ ಎಂದರು.

ಆದರೆ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಮನೆಹಾನಿಗೊಳಗಾಗಿ ಸಂತ್ರಸ್ತರಾಗಿರುವವರಿಗೆ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ, ಆಹಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪೂರೈಕೆ ಮಾಡುವಂತೆ ಸೂಚಿಸಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾನವ ಹಾನಿ, ಜಾನುವಾರುಗಳ ಹಾನಿ, ಮನೆ ಹಾನಿ, ಬೆಳೆ ಹಾನಿ, ರಸ್ತೆ, ಸೇತುವೆ, ಕಟ್ಟಡ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿ ಕುರಿತು ತ್ವರಿತವಾಗಿ ಸಮೀಕ್ಷೆ ನಡೆಸಿ, ಕೂಡಲೇ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಸಮನ್ವಯತೆಯಿಂದ ಮುಂಜಾಗ್ರತಾ ಕ್ರಮಗಳು ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿರುವುದಾಗಿ ಡಿಸಿಎಂ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮುಂಜಾಗ್ರತಾ ಕ್ರಮಕೈಗೊಂಡು ತ್ವರಿತವಾಗಿ ಪರಿಹಾರವನ್ನು ವಿತರಿಸುವಂತೆ ಸೂಚಿಸಿದ್ದಾರೆ. ಸಾರ್ವಜನಿಕರು, ಸಂತ್ರಸ್ತರು ಆತಂಕಕ್ಕೊಳಗಾಗಬಾರದು. ಸರ್ಕಾರವು ಅವರೊಂದಿಗಿದ್ದು, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ 1822 ಮನೆ ಹಾನಿ:

ಬಾಗಲಕೋಟೆ ಜಿಲ್ಲೆಯಲ್ಲಿ ಆಗಸ್ಟ್ 10ರಿಂದ 15ರವರೆಗೆ ಸಂಭವಿಸಿದ ಅತೀ ಮಳೆಯಿಂದ 1822 ಮನೆಗಳು ಹಾನಿಗೊಳಗಾಗಿದ್ದು, ಜಮಖಂಡಿಯಲ್ಲಿ ಒಂದು ಹಸು ಮೃತಪಟ್ಟಿದೆ. ಬೆಳೆ ಹಾನಿ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

ಆಗಸ್ಟ್ 2020ರಿಂದ ಸೆಪ್ಟೆಂಬರ್ 9ರ ಅವಧಿಯಲ್ಲಿ ಸಂಭವಿಸಿದ ಮಳೆ/ ಭೀಕರ ಪ್ರವಾಹದಿಂದ 31 ಗ್ರಾಮಗಳು ಭಾದಿತಗೊಂಡಿವೆ. ಒಟ್ಟು 270 ಕುಟುಂಬಗಳು ಭಾದಿತಗೊಂಡಿವೆ. 4 ಕಾಳಜಿ ಕೇಂದ್ರಗಳನ್ನು ತೆರೆದು 210 ಜನವರಿಗೆ ಊಟ, ಉಪಹಾರ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಭಾದಿತವಾದ 270 ಕುಟುಂಬಗಳಿಗೆ ತಲಾ 10ಸಾವಿರ ರೂ. ತುರ್ತು ಪರಿಹಾರವನ್ನು ಪಾವತಿಸಲಾಗಿದೆ ಎಮದರು.

ಮುಧೋಳ್ ತಾಲೂಕಿನಲ್ಲಿ ಒಂದು ಜಾನುವಾರು ಮೃತಪಟ್ಟಿದ್ದು, 30 ಸಾವಿರ ರೂ. ಪರಿಹಾರ ಪಾವತಿಸಲಾಗಿದೆ. 34869 ಹೆಕ್ಟರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. 105 ಮನೆಗಳು ಪೂರ್ಣ ಪ್ರಮಾಣದಲ್ಲಿ 26 ಮನೆಗಳು ತೀವ್ರ ಹಾಗೂ 338 ಮನೆಗಳು ಭಾಗಶ: ಹಾನಿಗೊಳಗಾಗಿವೆ. ಮನೆ ಹಾನಿ ಕುರಿತು ಜಂಟಿ ಸಮೀಕ್ಷೆ ಮುಗಿದ 347 ಮನೆ ಹಾನಿ ಬಗ್ಗೆ ಆರ್ ಜಿಹೆಚ್ ಸಿಎಲ್ ತಂತ್ರಾಂಶದಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದರು.

23 ಕೈಮಗ್ಗಳು ಹಾನಿಗೊಳಗಾಗಿವೆ. ಗ್ರಾಮೀಣಾಭಿವೃದ್ಧಿ ಇಲಾಖೆಯ 999 ಕಿ.ಮೀ ರಸ್ತೆ, 19 ಕುಡಿಯುವ ನೀರಿನ ಯೋಜನೆಗಳು ಹಾಗೂ 32 ಸೇತುವೆ ಮತ್ತು ಬಾಂದರುಗಳು ಹಾನಿಯಾಗಿವೆ. ಲೋಕೋಪೊಯೋಗಿ ಇಲಾಖೆ ವ್ಯಾಪ್ತಿಯ 94 ಕಿ.ಮೀ. ರಾಜ್ಯ ಹೆದ್ದಾರಿ, 308 ಕಿ.ಮೀ. ಜಿಲ್ಲಾ ಮುಖ್ಯರಸ್ತೆಗಳು ಹಾಗೂ 54 ಸೇತುವೆಗಳು ಹಾನಿಯಾಗಿವೆ. 43 ಕೆನಾಲ್, 28 ಕೆರೆಗಳು, 15 ಏತನೀರಾವರಿ ಯೋಜನೆಗಳು ಹಾನಿಯಾಗಿವೆ. 1851 ಕಂಬಗಳು, 471 ಟಿ.ಸಿ.ಗಳು 69 ಕಿ.ಮೀ. ವಿದ್ಯುತ್ ಲೈನ್‍ಗಳು ಹಾನಿಯಾಗಿರುತ್ತವೆ. ಒಟ್ಟು 857 ಕೋಟಿ ರೂ. ನಷ್ಟವಾಗಿದೆ ಎಂದು ಪ್ರಾಥಮಿಕ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ಅಧಿಕಾರಿಗಳು ಸಮನ್ವಯತೆಯಿಂದ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಕಲಬುರ್ಗಿ ಹಾಗು ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದ್ದು, ಜನತೆ ಸಂಕಷ್ಟದಲ್ಲಿರುವುದನ್ನು ಗಮನಿಸಿ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿ ಪಡೆದು, ಮುಂಜಾಗ್ರತಾ ಕ್ರಮ ಕೈಗೊಂಡು, ಮನೆ ಹಾನಿಗೊಳಗಾದ ಸಂತ್ರತ್ತರಿಗಾಗಿ ಕಾಳಜಿ ಕೇಂದ್ರ ಸ್ಥಾಪಿಸಿ, ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಮಗೆ ಹಾಗೂ ತಮ್ಮ ಇಡೀ ಕುಟುಂಬಕ್ಕೆ ಕೊವಿಡ್-19 ಸೊಂಕು ತಗಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದೇವೆ. ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್‍ನಲ್ಲಿದ್ದೇವೆ. ಅನಿವಾರ್ಯ ಕಾರಣದಿಂದ ನಿನ್ನೆ ತುಮಕೂರು ಜಿಲ್ಲೆಯ ಶಿರಾಕ್ಕೆ ಭೇಟಿ ನೀಡಿದ್ದೆ. ಆದರೆ ಇನ್ನೂ ಮೈಯಲ್ಲಿ ಸುಸ್ತು ಇರುವ ಕಾರಣ ಇನ್ನು ವಿಶ್ರಾಂತಿ ಪಡೆಯಬೇಕಿದ್ದು, ಪ್ರವಾಸ ಕೈಗೊಳ್ಳದಂತೆ ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಿಗೆ ಭೇಟಿ ನೀಡಲಾಗಿಲ್ಲ ಎಂದರು.

ಆದರೆ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಮನೆಹಾನಿಗೊಳಗಾಗಿ ಸಂತ್ರಸ್ತರಾಗಿರುವವರಿಗೆ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ, ಆಹಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪೂರೈಕೆ ಮಾಡುವಂತೆ ಸೂಚಿಸಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾನವ ಹಾನಿ, ಜಾನುವಾರುಗಳ ಹಾನಿ, ಮನೆ ಹಾನಿ, ಬೆಳೆ ಹಾನಿ, ರಸ್ತೆ, ಸೇತುವೆ, ಕಟ್ಟಡ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿ ಕುರಿತು ತ್ವರಿತವಾಗಿ ಸಮೀಕ್ಷೆ ನಡೆಸಿ, ಕೂಡಲೇ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಸಮನ್ವಯತೆಯಿಂದ ಮುಂಜಾಗ್ರತಾ ಕ್ರಮಗಳು ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿರುವುದಾಗಿ ಡಿಸಿಎಂ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮುಂಜಾಗ್ರತಾ ಕ್ರಮಕೈಗೊಂಡು ತ್ವರಿತವಾಗಿ ಪರಿಹಾರವನ್ನು ವಿತರಿಸುವಂತೆ ಸೂಚಿಸಿದ್ದಾರೆ. ಸಾರ್ವಜನಿಕರು, ಸಂತ್ರಸ್ತರು ಆತಂಕಕ್ಕೊಳಗಾಗಬಾರದು. ಸರ್ಕಾರವು ಅವರೊಂದಿಗಿದ್ದು, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ 1822 ಮನೆ ಹಾನಿ:

ಬಾಗಲಕೋಟೆ ಜಿಲ್ಲೆಯಲ್ಲಿ ಆಗಸ್ಟ್ 10ರಿಂದ 15ರವರೆಗೆ ಸಂಭವಿಸಿದ ಅತೀ ಮಳೆಯಿಂದ 1822 ಮನೆಗಳು ಹಾನಿಗೊಳಗಾಗಿದ್ದು, ಜಮಖಂಡಿಯಲ್ಲಿ ಒಂದು ಹಸು ಮೃತಪಟ್ಟಿದೆ. ಬೆಳೆ ಹಾನಿ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

ಆಗಸ್ಟ್ 2020ರಿಂದ ಸೆಪ್ಟೆಂಬರ್ 9ರ ಅವಧಿಯಲ್ಲಿ ಸಂಭವಿಸಿದ ಮಳೆ/ ಭೀಕರ ಪ್ರವಾಹದಿಂದ 31 ಗ್ರಾಮಗಳು ಭಾದಿತಗೊಂಡಿವೆ. ಒಟ್ಟು 270 ಕುಟುಂಬಗಳು ಭಾದಿತಗೊಂಡಿವೆ. 4 ಕಾಳಜಿ ಕೇಂದ್ರಗಳನ್ನು ತೆರೆದು 210 ಜನವರಿಗೆ ಊಟ, ಉಪಹಾರ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಭಾದಿತವಾದ 270 ಕುಟುಂಬಗಳಿಗೆ ತಲಾ 10ಸಾವಿರ ರೂ. ತುರ್ತು ಪರಿಹಾರವನ್ನು ಪಾವತಿಸಲಾಗಿದೆ ಎಮದರು.

ಮುಧೋಳ್ ತಾಲೂಕಿನಲ್ಲಿ ಒಂದು ಜಾನುವಾರು ಮೃತಪಟ್ಟಿದ್ದು, 30 ಸಾವಿರ ರೂ. ಪರಿಹಾರ ಪಾವತಿಸಲಾಗಿದೆ. 34869 ಹೆಕ್ಟರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. 105 ಮನೆಗಳು ಪೂರ್ಣ ಪ್ರಮಾಣದಲ್ಲಿ 26 ಮನೆಗಳು ತೀವ್ರ ಹಾಗೂ 338 ಮನೆಗಳು ಭಾಗಶ: ಹಾನಿಗೊಳಗಾಗಿವೆ. ಮನೆ ಹಾನಿ ಕುರಿತು ಜಂಟಿ ಸಮೀಕ್ಷೆ ಮುಗಿದ 347 ಮನೆ ಹಾನಿ ಬಗ್ಗೆ ಆರ್ ಜಿಹೆಚ್ ಸಿಎಲ್ ತಂತ್ರಾಂಶದಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದರು.

23 ಕೈಮಗ್ಗಳು ಹಾನಿಗೊಳಗಾಗಿವೆ. ಗ್ರಾಮೀಣಾಭಿವೃದ್ಧಿ ಇಲಾಖೆಯ 999 ಕಿ.ಮೀ ರಸ್ತೆ, 19 ಕುಡಿಯುವ ನೀರಿನ ಯೋಜನೆಗಳು ಹಾಗೂ 32 ಸೇತುವೆ ಮತ್ತು ಬಾಂದರುಗಳು ಹಾನಿಯಾಗಿವೆ. ಲೋಕೋಪೊಯೋಗಿ ಇಲಾಖೆ ವ್ಯಾಪ್ತಿಯ 94 ಕಿ.ಮೀ. ರಾಜ್ಯ ಹೆದ್ದಾರಿ, 308 ಕಿ.ಮೀ. ಜಿಲ್ಲಾ ಮುಖ್ಯರಸ್ತೆಗಳು ಹಾಗೂ 54 ಸೇತುವೆಗಳು ಹಾನಿಯಾಗಿವೆ. 43 ಕೆನಾಲ್, 28 ಕೆರೆಗಳು, 15 ಏತನೀರಾವರಿ ಯೋಜನೆಗಳು ಹಾನಿಯಾಗಿವೆ. 1851 ಕಂಬಗಳು, 471 ಟಿ.ಸಿ.ಗಳು 69 ಕಿ.ಮೀ. ವಿದ್ಯುತ್ ಲೈನ್‍ಗಳು ಹಾನಿಯಾಗಿರುತ್ತವೆ. ಒಟ್ಟು 857 ಕೋಟಿ ರೂ. ನಷ್ಟವಾಗಿದೆ ಎಂದು ಪ್ರಾಥಮಿಕ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ಅಧಿಕಾರಿಗಳು ಸಮನ್ವಯತೆಯಿಂದ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.