ಬೆಂಗಳೂರು : ಡಾ. ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ತುಂಬಾ ಸರಳವಾಗಿ ಹೆಚ್ಚಿನ ಜನಸಂದಣಿ ಸೇರದಂತೆ ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ.
ಕೊರೊನಾ ವೈರಸ್ ನಿಯಂತ್ರಿಸಲು ರಾಷ್ಟ್ರದಾದ್ಯಂತ ಲಾಕ್ಡೌನ್ ಮಾಡಲಾಗಿದೆ. ಸೆಕ್ಷನ್ 144 ಜಾರಿಯಲ್ಲಿರೋದ್ರಿಂದಾಗಿ ಏ.5ರಂದು ಜಗಜೀವನ್ ರಾಮ್ ಮತ್ತು ಏ.14 ರಂದು ಅಂಬೇಡ್ಕರ್ ಜನ್ಮ ದಿನಾಚರಣೆನ್ನು ಸರಳವಾಗಿ ಆಚರಿಸಬೇಕು ಎಂದು ಕರೆ ನೀಡಿದ್ದಾರೆ.
ಕೊರೊನಾ ವೈರಸ್ ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ. ಹಾಗಾಗಿ ಸಾರ್ವಜನಿಕರು, ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಈ ಮಹಾನ್ ಚೇತನರ ಅಭಿಮಾನಿಗಳು, ಅನುಯಾಯಿಗಳು ಸಹಕರಿಸಿ, ಸರಳವಾಗಿ ಜನ್ಮದಿನಾಚರಣೆ ಆಚರಿಸಬೇಕು ಎಂದು ಡಿಸಿಎಂ ಮನವಿ ಮಾಡಿಕೊಂಡಿದ್ದಾರೆ.