ಬೆಂಗಳೂರು: ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಡಿಸಿಎಂ ಲಕ್ಷ್ಮಣ ಸವದಿಯವರ ಜೊತೆಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದೆ.
ಅಷ್ಟೇ ಅಲ್ಲದೇ ಅವರ ಗನ್ಮ್ಯಾನ್ಗೂ ಕೂಡ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ''ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ನನಗೆ ಕ್ವಾರಂಟೈನ್ ಆಗಲು ವೈದ್ಯರು ಸೂಚಿಸಿದ್ದಾರೆ. ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸಿ, ಕ್ವಾರಂಟೈನ್ ಇರಲಿದ್ದೇನೆ'' ಎಂದು ಸವದಿ ತಿಳಿಸಿದ್ದಾರೆ. ಈಗಾಗಲೇ ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದು, ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ ಎಂದು ಪ್ರಕಟಣೆ ಹೊರಡಿಸಿದ್ದಾರೆ.