ETV Bharat / state

'ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬೇಡ' - ನಿನ್ನೆಯ ಸಭೆ ಸಮರ್ಥಿಸಿಕೊಂಡ ಡಿಸಿಎಂ ಸವದಿ

author img

By

Published : Apr 21, 2021, 3:25 PM IST

ಕೋವಿಡ್‍ನಂತಹ ಸಾಂಕ್ರಾಮಿಕ ರೋಗಕ್ಕೆ ಅಂಕುಶ ಹಾಕಲು ಎಲ್ಲರೂ ಸಾಮೂಹಿಕವಾಗಿ ಸಂಘಟಿತರಾಗಿ ಪರಸ್ಪರ ಸಹಕಾರಗಳೊಂದಿಗೆ ಕೈಜೋಡಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಸೂಕ್ತವಾಗಿದೆ. ಹಾಗಾಗಿ ಸರ್ವಪಕ್ಷಗಳ ಸಭೆಯನ್ನು ರಾಜ್ಯಪಾಲರ ನೇತೃತ್ವದಲ್ಲಿ ಏರ್ಪಡಿಸಿದ ಬಗ್ಗೆ ವಿರೋಧ ಪಕ್ಷಗಳ ಮುಖಂಡರ ಟೀಕೆ ಸರಿಯಲ್ಲ.

dcm lakshman savadi
ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಕೋವಿಡ್ 2ನೇ ಅಲೆಯು ನಮ್ಮ ರಾಜ್ಯದಲ್ಲೂ ತೀವ್ರ ಸ್ವರೂಪ ಪಡೆಯುತ್ತಿರುವುದರಿಂದ ರಾಜ್ಯಪಾಲರ ನೇತೃತ್ವದಲ್ಲಿ ಮತ್ತು ಮುಖ್ಯಮಂತ್ರಿಯವರ ಮಾರ್ಗದರ್ಶನದಲ್ಲಿ ಸರ್ವ ಪಕ್ಷಗಳ ಸಭೆ ಏರ್ಪಡಿಸಿದಲ್ಲಿ ಯಾವುದೇ ತಪ್ಪಿಲ್ಲ. ಈ ಬಗ್ಗೆ ಅಪಾರ್ಥ ಕಲ್ಪಿಸುವುದು ಸರಿಯಲ್ಲ ಎಂದು ನಿನ್ನೆ ನಡೆದ ಸಭೆಯನ್ನು ಡಿಸಿಎಂ ಲಕ್ಷ್ಮಣ ಸವದಿ ಸಮರ್ಥಿಸಿಕೊಂಡಿದ್ದಾರೆ.

ಕೋವಿಡ್‍ನಂತಹ ಸಾಂಕ್ರಾಮಿಕ ರೋಗಕ್ಕೆ ಅಂಕುಶ ಹಾಕಲು ಎಲ್ಲರೂ ಸಾಮೂಹಿಕವಾಗಿ ಸಂಘಟಿತರಾಗಿ ಪರಸ್ಪರ ಸಹಕಾರಗಳೊಂದಿಗೆ ಕೈಜೋಡಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಸೂಕ್ತವಾಗಿದೆ. ಹಾಗಾಗಿ ಸರ್ವಪಕ್ಷಗಳ ಸಭೆಯನ್ನು ರಾಜ್ಯಪಾಲರ ನೇತೃತ್ವದಲ್ಲಿ ಏರ್ಪಡಿಸಿದ ಬಗ್ಗೆ ವಿರೋಧ ಪಕ್ಷಗಳ ಮುಖಂಡರ ಟೀಕೆ ಸರಿಯಲ್ಲ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ನಾಡಿನ ಹಿತದೃಷ್ಟಿಯಿಂದ ಸೂಕ್ತ ಮಾರ್ಗದರ್ಶನ ನೀಡುವ ಪರಮೋಚ್ಛ ಅಧಿಕಾರ ರಾಜ್ಯಪಾಲರಿಗೆ ಇದ್ದೇ ಇದೆ. ರಾಜ್ಯಪಾಲ ವಜುಭಾಯಿ ವಾಲಾ ಹಿರಿಯ ಮುತ್ಸದ್ಧಿಗಳಾಗಿದ್ದಾರೆ. ಅಂತವರ ಮಾರ್ಗದರ್ಶನ ಪಡೆಯುವುದರಿಂದ ಪ್ರಸ್ತುತ ಎದುರಾಗಿರುವ ಸಂಕಷ್ಟಗಳನ್ನು ನಿಭಾಯಿಸುವುದು ಸುಲಭವಾಗುತ್ತದೆ. ರಾಜ್ಯಪಾಲರೇ ಈ ಸಭೆಯಲ್ಲಿ ಭಾಗವಹಿಸಿದ್ದರು ಎಂದರೆ ಸಭೆಯ ಮಹತ್ವ ಮತ್ತಷ್ಟು ಹೆಚ್ಚಿದೆ. ಕೋವಿಡ್ ನಿಯಂತ್ರಿಸುವ ಕೇಂದ್ರ ಮತ್ತು ರಾಜ್ಯಗಳ ಪ್ರಯತ್ನದ ನಡುವೆ ಸೂಕ್ತ ಕೊಂಡಿಯಂತೆ ರಾಜ್ಯಪಾಲರು ಕರ್ತವ್ಯ ನಿರ್ವಹಿಸುವುದರಲ್ಲಿ ಯಾವುದೇ ಲೋಪವಿಲ್ಲ. ಇದರಲ್ಲೂ ತಪ್ಪು ಹುಡುಕುವುದನ್ನು ಬಿಟ್ಟು ಸಮಸ್ಯೆ ಪರಿಹರಿಸಿ ಸಾರ್ವಜನಿಕರಿಗೆ ನೆಮ್ಮದಿ ನೀಡುವಂತಹ ಸಕಾರಾತ್ಮಕ ಸಲಹೆ ಸೂಚನೆಗಳನ್ನು ವಿರೋಧ ಪಕ್ಷಗಳು ನೀಡಿದರೆ ಒಳ್ಳೆಯದು ಎಂದು ಸವದಿ ಅಭಿಪ್ರಾಯಪಟ್ಟರು.

ಸಹಕಾರಕ್ಕೆ ಮನವಿ:

ಕೋವಿಡ್ ಮಿತಿ ಮೀರುತ್ತಿರುವ ಹಿನ್ನೆಲೆ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಮತ್ತು ಸಮುದಾಯಕ್ಕೆ ಹರಡದಂತೆ ಮುಂಜಾಗ್ರತೆ ವಹಿಸಲು ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಕೆಲವು ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ. ಆದ್ದರಿಂದ ರಾತ್ರಿ ಕೊರೊನಾ ಕರ್ಫ್ಯೂ ಮತ್ತು ವಾರಾಂತ್ಯದ ಲಾಕ್‍ಡೌನ್‍ನಂತಹ ಗಂಭೀರ ಕ್ರಮಗಳನ್ನು ಕೈಗೊಂಡು ಈ ಪಿಡುಗನ್ನು ಮಟ್ಟಹಾಕಲು ಯತ್ನಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಕೊಂಚ ಅಡಚಣೆಗಳಾದರೂ ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬೇಡ:

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲ ಸಚಿವರ ಒಮ್ಮತ - ಸಹಮತಗಳಿಂದಲೇ ಸಮರ್ಪಕ ನಿರ್ಧಾರಗಳನ್ನು ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿಯೇ ಸರ್ಕಾರಕ್ಕೆ ಕೋವಿಡ್ ನಿಯಂತ್ರಿಸಲು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳುವುದಕ್ಕೆ ಮತ್ತು ಸೂಕ್ತ ಕಾರ್ಯಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತಿದೆ. ಈ ವಿಷಯದಲ್ಲಿ ಯಾರೂ ಕೂಡ “ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು” ಕೊರೊನಾದಂತಹ ವಿಚಾರದಲ್ಲಿ ನಮ್ಮ ಮಂತ್ರಿಮಂಡಲದ ಯಾವುದೇ ಸಚಿವರೂ ನಿರ್ಲಕ್ಷ್ಯ ತೋರಿದ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಸವದಿ ಸ್ಪಷ್ಟಪಡಿಸಿದ್ದಾರೆ.

ಸಾರಿಗೆ ಮಾರ್ಗಸೂಚಿ:

ರಾಜ್ಯದಲ್ಲಿ ಸರ್ಕಾರಿ ಸಾರಿಗೆ ಮತ್ತು ಖಾಸಗಿ ಸಾರಿಗೆ ಸಂಚಾರಕ್ಕೆ ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಯಲ್ಲಿ ನಿಷೇಧ ವಿಧಿಸಿಲ್ಲ, ಆದರೆ, ಸರ್ಕಾರಿ ಮತ್ತು ಖಾಸಗಿ ಬಸ್​​​ಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಶೇಕಡ 50 ರಷ್ಟು ಮಾತ್ರ ಪ್ರಯಾಣಿಕರನ್ನು ಕರೆದೊಯ್ಯಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಕೊರೊನಾ ಹೆಚ್ಚಳ.. ಚಾಮರಾಜನಗರಕ್ಕೆ ಸಚಿವ ಸುರೇಶ್ ಕುಮಾರ್‌ ಭೇಟಿ

ಪ್ರಯಾಣಿಕರು ವಾಹನಗಳಲ್ಲಿ ಸಂಚರಿಸುವ ಸಮಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಪ್ರಯಾಣಿಕರು ಕೋವಿಡ್‍ನ ಗಂಭೀರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ದಯವಿಟ್ಟು ಸಹಕರಿಸಬೇಕೆಂದು ಸವದಿ ಕೋರಿದ್ದಾರೆ.

ಬೆಂಗಳೂರು: ಕೋವಿಡ್ 2ನೇ ಅಲೆಯು ನಮ್ಮ ರಾಜ್ಯದಲ್ಲೂ ತೀವ್ರ ಸ್ವರೂಪ ಪಡೆಯುತ್ತಿರುವುದರಿಂದ ರಾಜ್ಯಪಾಲರ ನೇತೃತ್ವದಲ್ಲಿ ಮತ್ತು ಮುಖ್ಯಮಂತ್ರಿಯವರ ಮಾರ್ಗದರ್ಶನದಲ್ಲಿ ಸರ್ವ ಪಕ್ಷಗಳ ಸಭೆ ಏರ್ಪಡಿಸಿದಲ್ಲಿ ಯಾವುದೇ ತಪ್ಪಿಲ್ಲ. ಈ ಬಗ್ಗೆ ಅಪಾರ್ಥ ಕಲ್ಪಿಸುವುದು ಸರಿಯಲ್ಲ ಎಂದು ನಿನ್ನೆ ನಡೆದ ಸಭೆಯನ್ನು ಡಿಸಿಎಂ ಲಕ್ಷ್ಮಣ ಸವದಿ ಸಮರ್ಥಿಸಿಕೊಂಡಿದ್ದಾರೆ.

ಕೋವಿಡ್‍ನಂತಹ ಸಾಂಕ್ರಾಮಿಕ ರೋಗಕ್ಕೆ ಅಂಕುಶ ಹಾಕಲು ಎಲ್ಲರೂ ಸಾಮೂಹಿಕವಾಗಿ ಸಂಘಟಿತರಾಗಿ ಪರಸ್ಪರ ಸಹಕಾರಗಳೊಂದಿಗೆ ಕೈಜೋಡಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಸೂಕ್ತವಾಗಿದೆ. ಹಾಗಾಗಿ ಸರ್ವಪಕ್ಷಗಳ ಸಭೆಯನ್ನು ರಾಜ್ಯಪಾಲರ ನೇತೃತ್ವದಲ್ಲಿ ಏರ್ಪಡಿಸಿದ ಬಗ್ಗೆ ವಿರೋಧ ಪಕ್ಷಗಳ ಮುಖಂಡರ ಟೀಕೆ ಸರಿಯಲ್ಲ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ನಾಡಿನ ಹಿತದೃಷ್ಟಿಯಿಂದ ಸೂಕ್ತ ಮಾರ್ಗದರ್ಶನ ನೀಡುವ ಪರಮೋಚ್ಛ ಅಧಿಕಾರ ರಾಜ್ಯಪಾಲರಿಗೆ ಇದ್ದೇ ಇದೆ. ರಾಜ್ಯಪಾಲ ವಜುಭಾಯಿ ವಾಲಾ ಹಿರಿಯ ಮುತ್ಸದ್ಧಿಗಳಾಗಿದ್ದಾರೆ. ಅಂತವರ ಮಾರ್ಗದರ್ಶನ ಪಡೆಯುವುದರಿಂದ ಪ್ರಸ್ತುತ ಎದುರಾಗಿರುವ ಸಂಕಷ್ಟಗಳನ್ನು ನಿಭಾಯಿಸುವುದು ಸುಲಭವಾಗುತ್ತದೆ. ರಾಜ್ಯಪಾಲರೇ ಈ ಸಭೆಯಲ್ಲಿ ಭಾಗವಹಿಸಿದ್ದರು ಎಂದರೆ ಸಭೆಯ ಮಹತ್ವ ಮತ್ತಷ್ಟು ಹೆಚ್ಚಿದೆ. ಕೋವಿಡ್ ನಿಯಂತ್ರಿಸುವ ಕೇಂದ್ರ ಮತ್ತು ರಾಜ್ಯಗಳ ಪ್ರಯತ್ನದ ನಡುವೆ ಸೂಕ್ತ ಕೊಂಡಿಯಂತೆ ರಾಜ್ಯಪಾಲರು ಕರ್ತವ್ಯ ನಿರ್ವಹಿಸುವುದರಲ್ಲಿ ಯಾವುದೇ ಲೋಪವಿಲ್ಲ. ಇದರಲ್ಲೂ ತಪ್ಪು ಹುಡುಕುವುದನ್ನು ಬಿಟ್ಟು ಸಮಸ್ಯೆ ಪರಿಹರಿಸಿ ಸಾರ್ವಜನಿಕರಿಗೆ ನೆಮ್ಮದಿ ನೀಡುವಂತಹ ಸಕಾರಾತ್ಮಕ ಸಲಹೆ ಸೂಚನೆಗಳನ್ನು ವಿರೋಧ ಪಕ್ಷಗಳು ನೀಡಿದರೆ ಒಳ್ಳೆಯದು ಎಂದು ಸವದಿ ಅಭಿಪ್ರಾಯಪಟ್ಟರು.

ಸಹಕಾರಕ್ಕೆ ಮನವಿ:

ಕೋವಿಡ್ ಮಿತಿ ಮೀರುತ್ತಿರುವ ಹಿನ್ನೆಲೆ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಮತ್ತು ಸಮುದಾಯಕ್ಕೆ ಹರಡದಂತೆ ಮುಂಜಾಗ್ರತೆ ವಹಿಸಲು ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಕೆಲವು ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ. ಆದ್ದರಿಂದ ರಾತ್ರಿ ಕೊರೊನಾ ಕರ್ಫ್ಯೂ ಮತ್ತು ವಾರಾಂತ್ಯದ ಲಾಕ್‍ಡೌನ್‍ನಂತಹ ಗಂಭೀರ ಕ್ರಮಗಳನ್ನು ಕೈಗೊಂಡು ಈ ಪಿಡುಗನ್ನು ಮಟ್ಟಹಾಕಲು ಯತ್ನಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಕೊಂಚ ಅಡಚಣೆಗಳಾದರೂ ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬೇಡ:

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲ ಸಚಿವರ ಒಮ್ಮತ - ಸಹಮತಗಳಿಂದಲೇ ಸಮರ್ಪಕ ನಿರ್ಧಾರಗಳನ್ನು ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿಯೇ ಸರ್ಕಾರಕ್ಕೆ ಕೋವಿಡ್ ನಿಯಂತ್ರಿಸಲು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳುವುದಕ್ಕೆ ಮತ್ತು ಸೂಕ್ತ ಕಾರ್ಯಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತಿದೆ. ಈ ವಿಷಯದಲ್ಲಿ ಯಾರೂ ಕೂಡ “ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು” ಕೊರೊನಾದಂತಹ ವಿಚಾರದಲ್ಲಿ ನಮ್ಮ ಮಂತ್ರಿಮಂಡಲದ ಯಾವುದೇ ಸಚಿವರೂ ನಿರ್ಲಕ್ಷ್ಯ ತೋರಿದ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಸವದಿ ಸ್ಪಷ್ಟಪಡಿಸಿದ್ದಾರೆ.

ಸಾರಿಗೆ ಮಾರ್ಗಸೂಚಿ:

ರಾಜ್ಯದಲ್ಲಿ ಸರ್ಕಾರಿ ಸಾರಿಗೆ ಮತ್ತು ಖಾಸಗಿ ಸಾರಿಗೆ ಸಂಚಾರಕ್ಕೆ ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಯಲ್ಲಿ ನಿಷೇಧ ವಿಧಿಸಿಲ್ಲ, ಆದರೆ, ಸರ್ಕಾರಿ ಮತ್ತು ಖಾಸಗಿ ಬಸ್​​​ಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಶೇಕಡ 50 ರಷ್ಟು ಮಾತ್ರ ಪ್ರಯಾಣಿಕರನ್ನು ಕರೆದೊಯ್ಯಲು ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಕೊರೊನಾ ಹೆಚ್ಚಳ.. ಚಾಮರಾಜನಗರಕ್ಕೆ ಸಚಿವ ಸುರೇಶ್ ಕುಮಾರ್‌ ಭೇಟಿ

ಪ್ರಯಾಣಿಕರು ವಾಹನಗಳಲ್ಲಿ ಸಂಚರಿಸುವ ಸಮಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಪ್ರಯಾಣಿಕರು ಕೋವಿಡ್‍ನ ಗಂಭೀರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ದಯವಿಟ್ಟು ಸಹಕರಿಸಬೇಕೆಂದು ಸವದಿ ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.