ETV Bharat / state

ಬಿಬಿಎಂಪಿ ಚುನಾವಣೆಗೆ ನೀಡಿದ್ದ ಗಡುವು ನಾಳೆಗೆ ಮುಕ್ತಾಯ: ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ - ಸುಪ್ರೀಂ ಕೋರ್ಟ್​ನಲ್ಲಿ ಶುಕ್ರವಾರ ವಿಚಾರಣೆ

ಬಿಬಿಎಂಪಿ ಚುನಾವಣೆಗೆ ಅಧಿಸೂಚನೆ- ನಾಳೆಗೆ ಗಡುವು ಮುಕ್ತಾಯ- ಸುಪ್ರೀಂನಲ್ಲಿ ರಾಜ್ಯ ಚುನಾವಣಾ ಆಯೋಗದಿಂದ ಆಕ್ಷೇಪಣೆ ಸಲ್ಲಿಕೆ ಸಾಧ್ಯತೆ

ಬಿಬಿಎಂಪಿ
ಬಿಬಿಎಂಪಿ
author img

By

Published : Jul 21, 2022, 3:36 PM IST

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಜುಲೈ 22ರಂದು (ನಾಳೆ) ವಿಚಾರಣೆ ನಡೆಯಲಿದೆ. ಸರ್ಕಾರ ಅಂತಿಮ ಅಧಿಸೂಚನೆಯ ಪ್ರತಿಯನ್ನು ಸಲ್ಲಿಸಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಆಕ್ಷೇಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸುಪ್ರೀಂ ಕೋರ್ಟ್‌ ಎಂಟು ವಾರಗಳಲ್ಲಿ ವಾರ್ಡ್‌ಗಳ ಮರುವಿಂಗಡಣೆ ಮಾಡಿ, ಮೀಸಲಾತಿಯನ್ನು ನಿಗದಿಪಡಿಸಿ, ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಎಂಟು ವಾರಗಳು ಮುಗಿದಿದ್ದು, ಸುಪ್ರೀಂ ಕೋರ್ಟ್‌ ಹಿಂದಿನ ಆದೇಶದಲ್ಲಿ ತಿಳಿಸಿದಂತೆಯೇ ನಾಳೆ ಈ ವಿಷಯವಾಗಿ ವಿಚಾರಣೆ ನಡೆಯಲಿದೆ.

ಬಿಬಿಎಂಪಿಯ 198 ವಾರ್ಡ್‌ಗಳನ್ನು 243 ವಾರ್ಡ್‌ಗಳಾಗಿ ಪುನರ್‌ ವಿಂಗಡಣೆ ಮಾಡಿ, ರಾಜ್ಯ ಸರ್ಕಾರ ಜುಲೈ 14ರಂದು ಅಂತಿಮ ಅಧಿಸೂಚನೆ ಹೊರಡಿಸಿತ್ತು. ಆದರೆ, ವಾರ್ಡ್‌ಗಳ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಧಿಸೂಚನೆ ಹೊರಬಿದ್ದಿಲ್ಲ. ವಾರ್ಡ್​ಗಳ ಮೀಸಲಾತಿ ಬಗ್ಗೆ ವರದಿ ಸಲ್ಲಿಸಲು ನ್ಯಾಯಮೂರ್ತಿ ಭಕ್ಸವತ್ಸಲಂ ನೇತೃತ್ವದ ಸಮಿತಿಯನ್ನು ಸರ್ಕಾರ ರಚಿಸಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್ ಆದೇಶ : ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ಜರುಗುವ ಸಾಧ್ಯತೆ

ಅಂತಿಮ ಅಧಿಸೂಚನೆ ಹೊರಡಿಸದ ರಾಜ್ಯ ಸರ್ಕಾರ: ಸುಪ್ರೀಂ ಕೋರ್ಟ್‌ ಆದೇಶದಂತೆ ನಾವು ರಾಜ್ಯ ಸರ್ಕಾರದ ಅಂತಿಮ ಅಧಿಸೂಚನೆಗೆ ಕಾಯುತ್ತಿದ್ದೇವೆ. ಸರ್ಕಾರ ಈವರೆಗೆ ಯಾವುದೇ ಮಾಹಿತಿ ಅಥವಾ ಅಧಿಸೂಚನೆಯ ಪ್ರತಿಯನ್ನು ನಮಗೆ ನೀಡಿಲ್ಲ. ಹೀಗಾಗಿ ನಮ್ಮ ಆಕ್ಷೇಪವನ್ನು ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ಸಲ್ಲಿಸಲಿದ್ದೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಿ. ಬಸವರಾಜು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಜುಲೈ 22ರಂದು (ನಾಳೆ) ವಿಚಾರಣೆ ನಡೆಯಲಿದೆ. ಸರ್ಕಾರ ಅಂತಿಮ ಅಧಿಸೂಚನೆಯ ಪ್ರತಿಯನ್ನು ಸಲ್ಲಿಸಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಆಕ್ಷೇಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸುಪ್ರೀಂ ಕೋರ್ಟ್‌ ಎಂಟು ವಾರಗಳಲ್ಲಿ ವಾರ್ಡ್‌ಗಳ ಮರುವಿಂಗಡಣೆ ಮಾಡಿ, ಮೀಸಲಾತಿಯನ್ನು ನಿಗದಿಪಡಿಸಿ, ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಎಂಟು ವಾರಗಳು ಮುಗಿದಿದ್ದು, ಸುಪ್ರೀಂ ಕೋರ್ಟ್‌ ಹಿಂದಿನ ಆದೇಶದಲ್ಲಿ ತಿಳಿಸಿದಂತೆಯೇ ನಾಳೆ ಈ ವಿಷಯವಾಗಿ ವಿಚಾರಣೆ ನಡೆಯಲಿದೆ.

ಬಿಬಿಎಂಪಿಯ 198 ವಾರ್ಡ್‌ಗಳನ್ನು 243 ವಾರ್ಡ್‌ಗಳಾಗಿ ಪುನರ್‌ ವಿಂಗಡಣೆ ಮಾಡಿ, ರಾಜ್ಯ ಸರ್ಕಾರ ಜುಲೈ 14ರಂದು ಅಂತಿಮ ಅಧಿಸೂಚನೆ ಹೊರಡಿಸಿತ್ತು. ಆದರೆ, ವಾರ್ಡ್‌ಗಳ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಧಿಸೂಚನೆ ಹೊರಬಿದ್ದಿಲ್ಲ. ವಾರ್ಡ್​ಗಳ ಮೀಸಲಾತಿ ಬಗ್ಗೆ ವರದಿ ಸಲ್ಲಿಸಲು ನ್ಯಾಯಮೂರ್ತಿ ಭಕ್ಸವತ್ಸಲಂ ನೇತೃತ್ವದ ಸಮಿತಿಯನ್ನು ಸರ್ಕಾರ ರಚಿಸಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್ ಆದೇಶ : ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ಜರುಗುವ ಸಾಧ್ಯತೆ

ಅಂತಿಮ ಅಧಿಸೂಚನೆ ಹೊರಡಿಸದ ರಾಜ್ಯ ಸರ್ಕಾರ: ಸುಪ್ರೀಂ ಕೋರ್ಟ್‌ ಆದೇಶದಂತೆ ನಾವು ರಾಜ್ಯ ಸರ್ಕಾರದ ಅಂತಿಮ ಅಧಿಸೂಚನೆಗೆ ಕಾಯುತ್ತಿದ್ದೇವೆ. ಸರ್ಕಾರ ಈವರೆಗೆ ಯಾವುದೇ ಮಾಹಿತಿ ಅಥವಾ ಅಧಿಸೂಚನೆಯ ಪ್ರತಿಯನ್ನು ನಮಗೆ ನೀಡಿಲ್ಲ. ಹೀಗಾಗಿ ನಮ್ಮ ಆಕ್ಷೇಪವನ್ನು ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ಸಲ್ಲಿಸಲಿದ್ದೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಿ. ಬಸವರಾಜು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.