ಬೆಂಗಳೂರು: ಕಳೆದ ಒಂದು ವರ್ಷದಿಂದ ಕೊಡಗಿನಲ್ಲಿ ಸ್ಥಗಿತಗೊಳಿಸಲಾಗಿದ್ದ ಭೂ ಪರಿವರ್ತನೆ ಪುನರಾರಂಭಿಸಲು ಕಂದಾಯ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ನದಿ, ಹಳ್ಳ, ಡ್ರೈನೇಜ್ನಿಂದ 10 ಮೀಟರ್ ದೂರ ಬಫರ್ ಜೋನ್ ಸುತ್ತಮುತ್ತ ಭೂ ಪರಿವರ್ತನೆಗೆ ಅವಕಾಶ ಇಲ್ಲ. ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಇಲ್ಲ. ಡಿಸಿ ಎನ್ಒಸಿ ಪಡೆದ ನಂತರ ಗ್ರಾಮ ಪಂಚಾಯತಿ ಅನುಮತಿ ಪಡೆಯಬೇಕು. ಇನ್ನು ಭೂಕುಸಿತವಾದ ಪ್ರದೇಶಗಳಲ್ಲಿ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಿದರು.
ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ರೆಡ್ ಅಲರ್ಟ್ ಪ್ರದೇಶಗಳ ವರದಿ ನೀಡಲಿದ್ದು, ಅದರ ಆಧಾರದಲ್ಲಿ ಭೂ ಪರಿವರ್ತನೆಗೆ ಅವಕಾಶ ನೀಡಲಾಗುವುದು. ಮುಂದೆ ಕೊಡಗಿನಲ್ಲಿ ಭೂಕುಸಿತ ಆಗದ ರೀತಿಯಲ್ಲಿ ನಿರ್ಬಂಧಿತ ಭೂ ಪರಿವರ್ತನೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಇನ್ನು ಕೊಡಗಿನಲ್ಲಿ ಅನಧಿಕೃತವಾಗಿ ಮನೆ ಕಟ್ಟಿದವರಿಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಅನಧಿಕೃತವಾಗಿ ಮನೆ ಕಟ್ಟಿದವರಿಗೂ ಬಾಡಿಗೆ ಕೊಡಲು ಆದೇಶ ನೀಡಲಾಗಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.