ETV Bharat / state

ದೆಹಲಿ‌ ರೈತರ ಪ್ರತಿಭಟನೆ ಬೆಂಬಲಿಸಿ ರಾಜ್ಯ ರೈತರಿಂದ ಅನಿರ್ದಿಷ್ಟಾವಧಿ ಧರಣಿ

author img

By

Published : Dec 17, 2020, 3:12 PM IST

Updated : Dec 17, 2020, 4:53 PM IST

ದೆಹಲಿ ರೈತರ ಪ್ರತಿಭಟನೆಗೆ ಬೆಂಬಲವಾಗಿ ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟ ಸಮಿತಿಯಿಂದ ಧರಣಿ ಮುಂದುವರೆದಿದೆ. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೇಷರತ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಜ್ಯ ರೈತರಿಂದ ಅನಿರ್ಧಿಷ್ಟಾವಧಿ ಧರಣಿ
ರಾಜ್ಯ ರೈತರಿಂದ ಅನಿರ್ಧಿಷ್ಟಾವಧಿ ಧರಣಿ

ಬೆಂಗಳೂರು: ದೆಹಲಿ ರೈತರಿಗೆ ಬೆಂಬಲವಾಗಿ, ಉಪವಾಸ ಕುಳಿತು ಪ್ರತಿಭಟಿಸುತ್ತಿರುವ ಅನ್ನದಾತರಿಗೆ ಶಕ್ತಿ ತುಂಬುವ ಸಲುವಾಗಿ ರಾಜ್ಯದಲ್ಲಿ ಮತ್ತೆ ರೈತ ಹೋರಾಟ ಬುಧವಾರದಿಂದ ಆರಂಭವಾಗಿದೆ. ರೈತ ಸಂಘಟನೆಗಳು ಒಟ್ಟಾಗಿ ನಗರದ ಮೌರ್ಯ ಸರ್ಕಲ್​ನಲ್ಲಿ ಅನಿರ್ದಿಷ್ಟಾವಧಿ ಧರಣಿ ಮುಂದುವರೆಸಿವೆ.

ದೆಹಲಿ‌ ರೈತರ ಪ್ರತಿಭಟನೆ ಬೆಂಬಲಿಸಿ ರಾಜ್ಯ ರೈತರಿಂದ ಅನಿರ್ದಿಷ್ಟಾವಧಿ ಧರಣಿ

ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟ ಸಮಿತಿಯಿಂದ ಧರಣಿ ಮುಂದುವರೆದಿದೆ. ಕನ್ನಡಪರ ಸಂಘಟನೆಗಳಿಂದಲೂ ಬೆಂಬಲ ವ್ಯಕ್ತವಾಗಿದೆ. ಪ್ರತಿ ದಿನ ಬೆಳಗ್ಗೆಯಿಂದ ಸಂಜೆಯವರೆಗೆ ಮೌರ್ಯ ಸರ್ಕಲ್​ನಲ್ಲಿ ಪ್ರತಿಭಟನೆ ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯ ರೂಪುರೇಷೆ ಬಗ್ಗೆ ಚರ್ಚೆ ನೆಡೆಯುತ್ತಿದ್ದು, ಪ್ರತಿ ದಿನ ಒಂದೊಂದು ಸಂಘಟನೆಗಳ ನೇತೃತ್ವದಲ್ಲಿ ಧರಣಿ ಮಾಡಲಾಗುತ್ತಿದೆ.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೇಷರತ್ ಬೆಂಬಲ ವ್ಯಕ್ತಪಡಿಸಿದರು. ಕೃಷಿ ಸಂಬಂಧಿತ 3 ಕಾನೂನುಗಳು ಹಾಗೂ ವಿದ್ಯುತ್ ಮಸೂದೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಬೇಕು ಎಂದು ಧರಣಿ ಮುಂದುವರೆಸಿದ್ದಾರೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಮಸೂದೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು. ‌ಕೇಂದ್ರ ಸರ್ಕಾರದ ಕೃಷಿ ಸಂಬಂಧಿತ 4 ಕಾಯ್ದೆಗಳನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿ ಮಾಡುವ ಕಾಯ್ದೆಗಳನ್ನು ಕೂಡಲೇ ಜಾರಿಗೆ ತರಬೇಕೆಂದು ಪ್ರತಿಭಟನೆಯಲ್ಲಿ ಅಗ್ರಹಿಸುತ್ತಿದ್ದಾರೆ.‌

ಓದಿ:ಶಿಕ್ಷಕರ ಧರಣಿ ವಾಪಸ್: ಫಲ ನೀಡಿದ ಸಚಿವ ಸಿ.ಸಿ.ಪಾಟೀಲ್ ಮನವೊಲಿಕೆ ಯತ್ನ

ರಾಜ್ಯಮಟ್ಟದ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಈಗಾಗಲೇ ದೆಹಲಿಯಲ್ಲಿ ಲಕ್ಷಾಂತರ ರೈತರು ಇಪತ್ತೊಂದು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನಾಲ್ಕೈದು ಬಾರಿ ಸಭೆ ಮಾಡಿದ್ರೂ ಸಮಸ್ಯೆ ಬಗೆಹರಿಸಿಲ್ಲ. ಈಗಾಗಲೇ ರೈತರು ಎಲ್ಲಾ ಭಾಗಗಳಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಇಡೀ ದೇಶದ ರೈತರಿಗೆ ಶಕ್ತಿ ನೀಡಲು, ಕರ್ನಾಟಕದ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ಒಟ್ಟಾಗಿ ಒಂದೇ ವೇದಿಕೆಯಲ್ಲಿ ಶಕ್ತಿ ತುಂಬುವ ಹೋರಾಟ ಮಾಡುತ್ತಿದ್ದೇವೆ. ಅನಿರ್ದಿಷ್ಟಾವಧಿ ಧರಣಿ ಮುಂದಿವರೆಯಲಿದ್ದು, ರಾಜ್ಯವ್ಯಾಪಿ ವಿಸ್ತರಣೆ ಮಾಡಲಿದ್ದೇವೆ. ಕೇಂದ್ರ ಸರ್ಕಾರ ತನ್ನ ಮೊಂಡುವಾದ ಬಿಟ್ಟು ರೈತರ ಸಮಸ್ಯೆ ಬಗೆಹರಿಸಬೇಕು. ಕಾಯ್ದೆಗಳನ್ನು ವಾಪಸ್​ ಪಡೆಯಬೇಕೆಂದರು.

ಡಿಸೆಂಬರ್ 19 ಹಾಗೂ 24ರಂದು ರೈತರ ಎರಡು ತಂಡಗಳು ದೆಹಲಿಗೆ ತೆರಳಿ ಅಲ್ಲಿನ ರೈತರ ಜೊತೆ ನಿಲ್ಲಲಿದ್ದಾರೆ ಎಂದರು. ‌ರಾಷ್ಟ್ರಮಟ್ಟದಲ್ಲಿ ಐನೂರಕ್ಕೂ ಹೆಚ್ಚು ಸಂಘಟನೆಗಳು ಒಟ್ಟಾಗಿ ಪ್ರತಿಭಟನೆ ಮುಂದುವರೆಸಿದ್ದೇವೆ. ಹೀಗಾಗಿ ರಾಜ್ಯದಲ್ಲೂ ಎರಡು ಮೂರು ಸಂಘಟನೆಗಳು ಒಟ್ಟಾಗಿ ಹೋರಾಟ ಮುಂದುವರೆಸಲಿವೆ. ಆದರೆ ಕೇಂದ್ರ ಸರ್ಕಾರ ಮಾತುಕತೆ ನೆಪದಲ್ಲಿ ರೈತರಿಗೆ ಚಳ್ಳೆಹಣ್ಣು ತಿನ್ನಿಸುವ ಪ್ರಯತ್ನ ಬಿಡಬೇಕು ಎಂದು ಟೀಕಿಸಿದರು.

ಬೆಂಗಳೂರು: ದೆಹಲಿ ರೈತರಿಗೆ ಬೆಂಬಲವಾಗಿ, ಉಪವಾಸ ಕುಳಿತು ಪ್ರತಿಭಟಿಸುತ್ತಿರುವ ಅನ್ನದಾತರಿಗೆ ಶಕ್ತಿ ತುಂಬುವ ಸಲುವಾಗಿ ರಾಜ್ಯದಲ್ಲಿ ಮತ್ತೆ ರೈತ ಹೋರಾಟ ಬುಧವಾರದಿಂದ ಆರಂಭವಾಗಿದೆ. ರೈತ ಸಂಘಟನೆಗಳು ಒಟ್ಟಾಗಿ ನಗರದ ಮೌರ್ಯ ಸರ್ಕಲ್​ನಲ್ಲಿ ಅನಿರ್ದಿಷ್ಟಾವಧಿ ಧರಣಿ ಮುಂದುವರೆಸಿವೆ.

ದೆಹಲಿ‌ ರೈತರ ಪ್ರತಿಭಟನೆ ಬೆಂಬಲಿಸಿ ರಾಜ್ಯ ರೈತರಿಂದ ಅನಿರ್ದಿಷ್ಟಾವಧಿ ಧರಣಿ

ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟ ಸಮಿತಿಯಿಂದ ಧರಣಿ ಮುಂದುವರೆದಿದೆ. ಕನ್ನಡಪರ ಸಂಘಟನೆಗಳಿಂದಲೂ ಬೆಂಬಲ ವ್ಯಕ್ತವಾಗಿದೆ. ಪ್ರತಿ ದಿನ ಬೆಳಗ್ಗೆಯಿಂದ ಸಂಜೆಯವರೆಗೆ ಮೌರ್ಯ ಸರ್ಕಲ್​ನಲ್ಲಿ ಪ್ರತಿಭಟನೆ ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯ ರೂಪುರೇಷೆ ಬಗ್ಗೆ ಚರ್ಚೆ ನೆಡೆಯುತ್ತಿದ್ದು, ಪ್ರತಿ ದಿನ ಒಂದೊಂದು ಸಂಘಟನೆಗಳ ನೇತೃತ್ವದಲ್ಲಿ ಧರಣಿ ಮಾಡಲಾಗುತ್ತಿದೆ.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೇಷರತ್ ಬೆಂಬಲ ವ್ಯಕ್ತಪಡಿಸಿದರು. ಕೃಷಿ ಸಂಬಂಧಿತ 3 ಕಾನೂನುಗಳು ಹಾಗೂ ವಿದ್ಯುತ್ ಮಸೂದೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಬೇಕು ಎಂದು ಧರಣಿ ಮುಂದುವರೆಸಿದ್ದಾರೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಮಸೂದೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು. ‌ಕೇಂದ್ರ ಸರ್ಕಾರದ ಕೃಷಿ ಸಂಬಂಧಿತ 4 ಕಾಯ್ದೆಗಳನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿ ಮಾಡುವ ಕಾಯ್ದೆಗಳನ್ನು ಕೂಡಲೇ ಜಾರಿಗೆ ತರಬೇಕೆಂದು ಪ್ರತಿಭಟನೆಯಲ್ಲಿ ಅಗ್ರಹಿಸುತ್ತಿದ್ದಾರೆ.‌

ಓದಿ:ಶಿಕ್ಷಕರ ಧರಣಿ ವಾಪಸ್: ಫಲ ನೀಡಿದ ಸಚಿವ ಸಿ.ಸಿ.ಪಾಟೀಲ್ ಮನವೊಲಿಕೆ ಯತ್ನ

ರಾಜ್ಯಮಟ್ಟದ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಈಗಾಗಲೇ ದೆಹಲಿಯಲ್ಲಿ ಲಕ್ಷಾಂತರ ರೈತರು ಇಪತ್ತೊಂದು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನಾಲ್ಕೈದು ಬಾರಿ ಸಭೆ ಮಾಡಿದ್ರೂ ಸಮಸ್ಯೆ ಬಗೆಹರಿಸಿಲ್ಲ. ಈಗಾಗಲೇ ರೈತರು ಎಲ್ಲಾ ಭಾಗಗಳಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಇಡೀ ದೇಶದ ರೈತರಿಗೆ ಶಕ್ತಿ ನೀಡಲು, ಕರ್ನಾಟಕದ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ಒಟ್ಟಾಗಿ ಒಂದೇ ವೇದಿಕೆಯಲ್ಲಿ ಶಕ್ತಿ ತುಂಬುವ ಹೋರಾಟ ಮಾಡುತ್ತಿದ್ದೇವೆ. ಅನಿರ್ದಿಷ್ಟಾವಧಿ ಧರಣಿ ಮುಂದಿವರೆಯಲಿದ್ದು, ರಾಜ್ಯವ್ಯಾಪಿ ವಿಸ್ತರಣೆ ಮಾಡಲಿದ್ದೇವೆ. ಕೇಂದ್ರ ಸರ್ಕಾರ ತನ್ನ ಮೊಂಡುವಾದ ಬಿಟ್ಟು ರೈತರ ಸಮಸ್ಯೆ ಬಗೆಹರಿಸಬೇಕು. ಕಾಯ್ದೆಗಳನ್ನು ವಾಪಸ್​ ಪಡೆಯಬೇಕೆಂದರು.

ಡಿಸೆಂಬರ್ 19 ಹಾಗೂ 24ರಂದು ರೈತರ ಎರಡು ತಂಡಗಳು ದೆಹಲಿಗೆ ತೆರಳಿ ಅಲ್ಲಿನ ರೈತರ ಜೊತೆ ನಿಲ್ಲಲಿದ್ದಾರೆ ಎಂದರು. ‌ರಾಷ್ಟ್ರಮಟ್ಟದಲ್ಲಿ ಐನೂರಕ್ಕೂ ಹೆಚ್ಚು ಸಂಘಟನೆಗಳು ಒಟ್ಟಾಗಿ ಪ್ರತಿಭಟನೆ ಮುಂದುವರೆಸಿದ್ದೇವೆ. ಹೀಗಾಗಿ ರಾಜ್ಯದಲ್ಲೂ ಎರಡು ಮೂರು ಸಂಘಟನೆಗಳು ಒಟ್ಟಾಗಿ ಹೋರಾಟ ಮುಂದುವರೆಸಲಿವೆ. ಆದರೆ ಕೇಂದ್ರ ಸರ್ಕಾರ ಮಾತುಕತೆ ನೆಪದಲ್ಲಿ ರೈತರಿಗೆ ಚಳ್ಳೆಹಣ್ಣು ತಿನ್ನಿಸುವ ಪ್ರಯತ್ನ ಬಿಡಬೇಕು ಎಂದು ಟೀಕಿಸಿದರು.

Last Updated : Dec 17, 2020, 4:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.