ETV Bharat / state

ರಾಜ್ಯದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಜವಳಿ ಪಾರ್ಕ್ ಅಭಿವೃದ್ಧಿ: ಸಚಿವ ಶಿವಾನಂದ ಪಾಟೀಲ್ - etv bharat kannada

ಕೋಲಾರದ ಟೊಮೆಟೊ ಮಾರುಕಟ್ಟೆ ವಿಸ್ತರಣೆ ಮಾಡಲು ಜಾಗ ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ.

development-of-textile-park-in-private-partnership-says-minister-sivananda-patil
ರಾಜ್ಯದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಜವಳಿ ಪಾರ್ಕ್ ಅಭಿವೃದ್ಧಿ: ಸಚಿವ ಶಿವಾನಂದ ಪಾಟೀಲ್
author img

By

Published : Jul 14, 2023, 5:52 PM IST

Updated : Jul 14, 2023, 6:12 PM IST

ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣಗೊಳ್ಳುವ ಜವಳಿ ಪಾರ್ಕ್​ಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವುದು ಅನಿವಾರ್ಯ ಎಂದು ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಇಂದು ಪ್ರಶ್ನೋತ್ತರದ ವೇಳೆ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದೆ ಶಿಗ್ಗಾಂವಿ ಮತ್ತು ಕಾರ್ಕಳಕ್ಕೆ 2020-21ನೇ ಸಾಲಿನಲ್ಲಿ ಜವಳಿ ಪಾರ್ಕ್ ಗಳನ್ನು ಮಂಜೂರು ಮಾಡಲಾಗಿತ್ತು. ಶಿಗ್ಗಾಂವಿ ಕ್ಷೇತ್ರದ ಜವಳಿ ಪಾರ್ಕ್​ ಅನ್ನು 50 ಕೋಟಿ ರೂ. ವೆಚ್ಚದಲ್ಲಿ 14 ಎಕರೆಯಷ್ಟು ಅಭಿವೃದ್ಧಿಪಡಿಸಲಾಗಿದೆ. ಆದರೆ, ಕಾರ್ಕಳದ ಪಾರ್ಕ್ ಅಭಿವೃದ್ಧಿಯಾಗಿಲ್ಲ ಎಂದರು.

ಬಹುಶಃ ಆಗಲೇ ಸುನೀಲ್ ಕುಮಾರ್ ಅವರು ಒತ್ತಡ ಹೇರಿದ್ದರೆ ಅಭಿವೃದ್ದಿಯಾಗುತ್ತಿತ್ತು ಅಥವಾ ಮುಖ್ಯಮಂತ್ರಿಯವರ ಗುಡ್ ಬುಕ್ ಲಿಸ್ಟ್​ನಲ್ಲಿ ಬಹುಶಃ ಸುನೀಲ್ ಕುಮಾರ್ ಹೆಸರು ಇರಲಿಲ್ಲ ಎಂದೆನಿಸುತ್ತದೆ ಎಂದು ಕಿಚಾಯಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್, ನಮ್ಮ ಮತ್ತು ಮುಖ್ಯಮಂತ್ರಿಗಳ ನಡುವೆ ಉತ್ತಮ ಸಂಬಂಧವಿದೆ. ನೀವು ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಿಮ್ಮ ಮತ್ತು ಮುಖ್ಯಮಂತ್ರಿಗಳ ನಡುವಿನ ಸಂಬಂಧದ ಬಗ್ಗೆ ಆಲೋಚನೆ ಮಾಡಿ ಎಂದು ಸಲಹೆ ನೀಡಿದ್ದಲ್ಲದೆ, ಕಾರ್ಕಳ ಕ್ಷೇತ್ರದಲ್ಲಿ ಜವಳಿ ಪಾರ್ಕ್​ಗಾಗಿ ಒಂದೇ ಕಡೆ 15 ಎಕರೆ ಜಮೀನು ಒದಗಿಸಲು ಸಾಧ್ಯವಾಗಲಿಲ್ಲ. ಕ್ಷೇತ್ರದಲ್ಲಿ ಬಹುತೇಕ ಕಡೆ ಅರಣ್ಯ ಭೂಮಿ ಇದೆ. ಅದಕ್ಕೆ ಪೂರ್ವಾನುಮತಿ ದೊರೆತಿರಲಿಲ್ಲ . ಹೀಗಾಗಿ ಎರಡು ವರ್ಷ ವಿಳಂಬವಾಯಿತು ಎಂದು ಸಮಜಾಯಿಷಿ ನೀಡಿದರು.

ಜವಳಿ ಪಾರ್ಕ್​ಅನ್ನು ಸರ್ಕಾರದ ವತಿಯಿಂದಲೇ ಅಭಿವೃದ್ದಿಪಡಿಸಬೇಕು. ಖಾಸಗಿಯವರಿಗೆ ಒಪ್ಪಿಸಬಾರದು ಎಂದು ಶಾಸಕರು ಒತ್ತಾಯಿಸಿದರು. ಅದಕ್ಕೆ ಸ್ಪಷ್ಟನೆ ನೀಡಿದ ಸಚಿವರು, ಖಾಸಗಿ ಸಹಭಾಗಿತ್ವ ಅನಿವಾರ್ಯವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಏಳು ಜವಳಿ ಪಾರ್ಕ್​ಗಳನ್ನು ತಲಾ ಸಾವಿರ ಎಕರೆ ಸಾಮರ್ಥ್ಯದಲ್ಲಿ ಅಭಿವೃದ್ಧಿಪಡಿಸುತ್ತಿದೆ. ಅದಕ್ಕೂ ಕೂಡ ಖಾಸಗಿ ಸಹಭಾಗಿತ್ವವನ್ನೇ ಆಶ್ರಯಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಕಳ ಜವಳಿ ಪಾರ್ಕಿಗೆ ಮಾಸ್ಟರ್ ಡೆವಲಪರ್​ಗಳೊಂದಿಗೆ ಚರ್ಚಿಸಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕೋಲಾರದ ಟೊಮೆಟೊ ಮಾರುಕಟ್ಟೆ ವಿಸ್ತರಣೆಗೆ ಕ್ರಮ: ಟೊಮೆಟೊ ಮಾರುಕಟ್ಟೆಯನ್ನು ವಿಸ್ತರಣೆ ಮಾಡಲು ಜಾಗ ಪಡೆದುಕೊಳ್ಳಲು ಕ್ರಮ ಕೈಗೊಳ್ಳುವುದಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು, ಕಾಂಗ್ರೆಸ್ ಸದಸ್ಯ ಕೊತ್ತೂರು ಜಿ.ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದರು. ಇದಕ್ಕೂ ಮುನ್ನ ಪ್ರಶ್ನೆ ಕೇಳಿದ ಶಾಸಕರು, ಕೋಲಾರ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯು ಏಷ್ಯಾದಲ್ಲೇ ಅತಿ ದೊಡ್ಡದಾದ ಟೊಮೆಟೊ ಮಾರುಕಟ್ಟೆಯಾಗಿದೆ. ಆದರೆ ಅದರ ಜಾಗ ಕಿರಿದಾಗಿದ್ದು, ಅಗತ್ಯ ಮೂಲಸೌಲಭ್ಯಗಳಿಲ್ಲ. ತ್ಯಾಜ್ಯ ವಿಲೇವಾರಿಗೆ ಸ್ಥಳವಾಕಾಶ ಇಲ್ಲ ಎಂದು ಸಚಿವರ ಗಮನ ಸೆಳೆದರು.

ಇದಕ್ಕೆ ಉತ್ತರ ನೀಡಿದ ಸಚಿವರು, ಕೋಲಾರ ತಾಲೂಕಿನ ಒಕ್ಕಲೇರಿ ಹೋಬಳಿ ಮಡೇರಹಳ್ಳಿ ಹಾಗೂ ಕಪರಸಿದ್ದನಹಳ್ಳಿಯಲ್ಲಿ ಒಟ್ಟು 37 ಎಕರೆ ಜಮೀನನ್ನು ಟೊಮೆಟೊ ಮಾರುಕಟ್ಟೆಗಾಗಿ ಗುರುತಿಸಲಾಗಿದೆ. ಕೇಂದ್ರ ಅರಣ್ಯ ಸಚಿವಾಲಯದಿಂದ ಅನುಮತಿ ಪಡೆದ ಬಳಿಕ ಮಾರುಕಟ್ಟೆ ಅಭಿವೃದ್ದಿಪಡಿಸಲಾಗುವುದು ಎಂದು ತಿಳಿಸಿದರು. ಜಿಲ್ಲೆಯ ಇತರ ಶಾಸಕರು ಮಧ್ಯಪ್ರವೇಶಿಸಿ ಕಂದಾಯ ಸಚಿವರು ಕೋಲಾರ ಜಿಲ್ಲೆಯವರಾಗಿದ್ದಾರೆ. ಈಗಿರುವ ಜಮೀನಿಗೆ ಅನುಮತಿ ಪಡೆಯಲು ವಿಳಂಬವಾಗಬಹುದು. ಬದಲಿ ಜಾಗ ಗುರುತಿಸಿ ಮಾರುಕಟ್ಟೆ ಅಭಿವೃದ್ದಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ವೇಳೆ ಶಿವಾನಂದ ಪಾಟೀಲ್ ಅವರು ಕಂದಾಯ ಸಚಿವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಅಂಗೀಕಾರ

ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ನಿರ್ಮಾಣಗೊಳ್ಳುವ ಜವಳಿ ಪಾರ್ಕ್​ಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವುದು ಅನಿವಾರ್ಯ ಎಂದು ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಇಂದು ಪ್ರಶ್ನೋತ್ತರದ ವೇಳೆ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದೆ ಶಿಗ್ಗಾಂವಿ ಮತ್ತು ಕಾರ್ಕಳಕ್ಕೆ 2020-21ನೇ ಸಾಲಿನಲ್ಲಿ ಜವಳಿ ಪಾರ್ಕ್ ಗಳನ್ನು ಮಂಜೂರು ಮಾಡಲಾಗಿತ್ತು. ಶಿಗ್ಗಾಂವಿ ಕ್ಷೇತ್ರದ ಜವಳಿ ಪಾರ್ಕ್​ ಅನ್ನು 50 ಕೋಟಿ ರೂ. ವೆಚ್ಚದಲ್ಲಿ 14 ಎಕರೆಯಷ್ಟು ಅಭಿವೃದ್ಧಿಪಡಿಸಲಾಗಿದೆ. ಆದರೆ, ಕಾರ್ಕಳದ ಪಾರ್ಕ್ ಅಭಿವೃದ್ಧಿಯಾಗಿಲ್ಲ ಎಂದರು.

ಬಹುಶಃ ಆಗಲೇ ಸುನೀಲ್ ಕುಮಾರ್ ಅವರು ಒತ್ತಡ ಹೇರಿದ್ದರೆ ಅಭಿವೃದ್ದಿಯಾಗುತ್ತಿತ್ತು ಅಥವಾ ಮುಖ್ಯಮಂತ್ರಿಯವರ ಗುಡ್ ಬುಕ್ ಲಿಸ್ಟ್​ನಲ್ಲಿ ಬಹುಶಃ ಸುನೀಲ್ ಕುಮಾರ್ ಹೆಸರು ಇರಲಿಲ್ಲ ಎಂದೆನಿಸುತ್ತದೆ ಎಂದು ಕಿಚಾಯಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್, ನಮ್ಮ ಮತ್ತು ಮುಖ್ಯಮಂತ್ರಿಗಳ ನಡುವೆ ಉತ್ತಮ ಸಂಬಂಧವಿದೆ. ನೀವು ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಿಮ್ಮ ಮತ್ತು ಮುಖ್ಯಮಂತ್ರಿಗಳ ನಡುವಿನ ಸಂಬಂಧದ ಬಗ್ಗೆ ಆಲೋಚನೆ ಮಾಡಿ ಎಂದು ಸಲಹೆ ನೀಡಿದ್ದಲ್ಲದೆ, ಕಾರ್ಕಳ ಕ್ಷೇತ್ರದಲ್ಲಿ ಜವಳಿ ಪಾರ್ಕ್​ಗಾಗಿ ಒಂದೇ ಕಡೆ 15 ಎಕರೆ ಜಮೀನು ಒದಗಿಸಲು ಸಾಧ್ಯವಾಗಲಿಲ್ಲ. ಕ್ಷೇತ್ರದಲ್ಲಿ ಬಹುತೇಕ ಕಡೆ ಅರಣ್ಯ ಭೂಮಿ ಇದೆ. ಅದಕ್ಕೆ ಪೂರ್ವಾನುಮತಿ ದೊರೆತಿರಲಿಲ್ಲ . ಹೀಗಾಗಿ ಎರಡು ವರ್ಷ ವಿಳಂಬವಾಯಿತು ಎಂದು ಸಮಜಾಯಿಷಿ ನೀಡಿದರು.

ಜವಳಿ ಪಾರ್ಕ್​ಅನ್ನು ಸರ್ಕಾರದ ವತಿಯಿಂದಲೇ ಅಭಿವೃದ್ದಿಪಡಿಸಬೇಕು. ಖಾಸಗಿಯವರಿಗೆ ಒಪ್ಪಿಸಬಾರದು ಎಂದು ಶಾಸಕರು ಒತ್ತಾಯಿಸಿದರು. ಅದಕ್ಕೆ ಸ್ಪಷ್ಟನೆ ನೀಡಿದ ಸಚಿವರು, ಖಾಸಗಿ ಸಹಭಾಗಿತ್ವ ಅನಿವಾರ್ಯವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಏಳು ಜವಳಿ ಪಾರ್ಕ್​ಗಳನ್ನು ತಲಾ ಸಾವಿರ ಎಕರೆ ಸಾಮರ್ಥ್ಯದಲ್ಲಿ ಅಭಿವೃದ್ಧಿಪಡಿಸುತ್ತಿದೆ. ಅದಕ್ಕೂ ಕೂಡ ಖಾಸಗಿ ಸಹಭಾಗಿತ್ವವನ್ನೇ ಆಶ್ರಯಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಕಳ ಜವಳಿ ಪಾರ್ಕಿಗೆ ಮಾಸ್ಟರ್ ಡೆವಲಪರ್​ಗಳೊಂದಿಗೆ ಚರ್ಚಿಸಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕೋಲಾರದ ಟೊಮೆಟೊ ಮಾರುಕಟ್ಟೆ ವಿಸ್ತರಣೆಗೆ ಕ್ರಮ: ಟೊಮೆಟೊ ಮಾರುಕಟ್ಟೆಯನ್ನು ವಿಸ್ತರಣೆ ಮಾಡಲು ಜಾಗ ಪಡೆದುಕೊಳ್ಳಲು ಕ್ರಮ ಕೈಗೊಳ್ಳುವುದಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು, ಕಾಂಗ್ರೆಸ್ ಸದಸ್ಯ ಕೊತ್ತೂರು ಜಿ.ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದರು. ಇದಕ್ಕೂ ಮುನ್ನ ಪ್ರಶ್ನೆ ಕೇಳಿದ ಶಾಸಕರು, ಕೋಲಾರ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯು ಏಷ್ಯಾದಲ್ಲೇ ಅತಿ ದೊಡ್ಡದಾದ ಟೊಮೆಟೊ ಮಾರುಕಟ್ಟೆಯಾಗಿದೆ. ಆದರೆ ಅದರ ಜಾಗ ಕಿರಿದಾಗಿದ್ದು, ಅಗತ್ಯ ಮೂಲಸೌಲಭ್ಯಗಳಿಲ್ಲ. ತ್ಯಾಜ್ಯ ವಿಲೇವಾರಿಗೆ ಸ್ಥಳವಾಕಾಶ ಇಲ್ಲ ಎಂದು ಸಚಿವರ ಗಮನ ಸೆಳೆದರು.

ಇದಕ್ಕೆ ಉತ್ತರ ನೀಡಿದ ಸಚಿವರು, ಕೋಲಾರ ತಾಲೂಕಿನ ಒಕ್ಕಲೇರಿ ಹೋಬಳಿ ಮಡೇರಹಳ್ಳಿ ಹಾಗೂ ಕಪರಸಿದ್ದನಹಳ್ಳಿಯಲ್ಲಿ ಒಟ್ಟು 37 ಎಕರೆ ಜಮೀನನ್ನು ಟೊಮೆಟೊ ಮಾರುಕಟ್ಟೆಗಾಗಿ ಗುರುತಿಸಲಾಗಿದೆ. ಕೇಂದ್ರ ಅರಣ್ಯ ಸಚಿವಾಲಯದಿಂದ ಅನುಮತಿ ಪಡೆದ ಬಳಿಕ ಮಾರುಕಟ್ಟೆ ಅಭಿವೃದ್ದಿಪಡಿಸಲಾಗುವುದು ಎಂದು ತಿಳಿಸಿದರು. ಜಿಲ್ಲೆಯ ಇತರ ಶಾಸಕರು ಮಧ್ಯಪ್ರವೇಶಿಸಿ ಕಂದಾಯ ಸಚಿವರು ಕೋಲಾರ ಜಿಲ್ಲೆಯವರಾಗಿದ್ದಾರೆ. ಈಗಿರುವ ಜಮೀನಿಗೆ ಅನುಮತಿ ಪಡೆಯಲು ವಿಳಂಬವಾಗಬಹುದು. ಬದಲಿ ಜಾಗ ಗುರುತಿಸಿ ಮಾರುಕಟ್ಟೆ ಅಭಿವೃದ್ದಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ವೇಳೆ ಶಿವಾನಂದ ಪಾಟೀಲ್ ಅವರು ಕಂದಾಯ ಸಚಿವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಅಂಗೀಕಾರ

Last Updated : Jul 14, 2023, 6:12 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.