ಹೊಸಪೇಟೆ : ಅನರ್ಹ ಶಾಸಕರು ತಮ್ಮ ಶಾಸಕ ಸ್ಥಾನವನ್ನು ಮಾರಿಕೊಂಡು ರಾಜ್ಯಕ್ಕೆ ಮೋಸ ಮಾಡಿ, ಮತದಾರರಿಗೆ ಅನ್ಯಾಯವೆಸಗಿದ್ದಾರೆ. ಅಂತಹವರನ್ನು ಗೆಲ್ಲಿಸಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ ಹೇಳಿದ್ದಾರೆ.
ಹೊಸಪೇಟೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಮೋಸ ಮಾಡಿದ್ದಾರೆ. ಅವರನ್ನು ಪಕ್ಷ ಯಾವತ್ತು ಕ್ಷಮಿಸಲ್ಲ. ರಾಜ್ಯದಲ್ಲಿ ಉಪಚುನಾವಣೆ ಮಾಡುವಂತಹ ಅವಶ್ಯಕತೆ ಇರಲಿಲ್ಲ ಇವರಿಂದಾಗಿ ಚುನಾವಣೆ ನಡೆಯುತ್ತಿದೆ ಎಂದರು.