ETV Bharat / state

ದಿನೇಶ್​​​ ಗುಂಡೂರಾವ್​​​ ಸುಪ್ರೀಂ ಆದೇಶ ತಿರುಚುತ್ತಿದ್ದಾರೆ: ಬಿಜೆಪಿ

author img

By

Published : Jul 17, 2019, 9:05 PM IST

ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಚಿ ಹೇಳುತ್ತಿದ್ದಾರೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ

ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಚಿ ಹೇಳುವ ಕೆಲಸ ಮಾಡುತ್ತಿದ್ದಾರೆ. ಇದು ಸುಪ್ರೀಂ ಕೋರ್ಟ್ ಆದೇಶಕ್ಕೆ ಮಾಡುತ್ತಿರುವ ಅವಮಾನ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಮಡಾ ರೆಸಾರ್ಟ್​ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸುಪ್ರೀಂ ಕೋರ್ಟಿನ ಆದೇಶ ತಿರುಚಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ ಅಂಶಗಳನ್ನು ಹೇಳುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ದಿನೇಶ್ ಗುಂಡೂರಾವ್ ಸುಪ್ರೀಂ ಆದೇಶ ತಿರುಚುತ್ತಿದ್ದಾರೆ: ಬಿಜೆಪಿ ಖಂಡನೆ

ಕಾಂಗ್ರೆಸ್ - ಜೆಡಿಎಸ್ ನಾಯಕರು ವಿಶ್ವಾಸಮತ ಯಾತನೆಯನ್ನು ಮುಂದೂಡಲು ನೋಡುತ್ತಿದ್ದಾರೆ. ನಿಜವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇದ್ದರೆ ವಿಶ್ವಾಸಮತ ಯಾಚಿಸಬೇಕು. ಇಲ್ಲವಾದರೆ ಅದು ಪ್ರಜಾಪ್ರಭುತ್ವ ವಿರೋಧಿಯಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶ ಧಿಕ್ಕರಿಸಿದಂತಾಗುತ್ತದೆ ಎಂದು ಹೇಳಿದರು.

ಕೆಪಿಜೆಪಿ ಸದಸ್ಯ ಶಂಕರ್​ನನ್ನು ಅನರ್ಹ ಮಾಡಲು ಕಾಂಗ್ರೆಸ್ ಕಾನೂನು ಬಾಹಿರವಾಗಿ ದೂರು ನೀಡಿದೆ. ಮರ್ಜರ್ ಆಗಿಲ್ಲ ಎಂದು ಪಕ್ಷದ ಅಧ್ಯಕ್ಷರು ಸ್ಪೀಕರ್​​ಗೆ ದೂರು ನೀಡಿದ್ದಾರೆ. ಆದರೆ ಶಂಕರ್ ಕೆಪಿಜೆಪಿಯಲ್ಲೇ ಮುಂದುವರೆಯುತ್ತೇನೆಂದು ಹೇಳಿದ್ದಾರೆ. ಕಾಂಗ್ರೆಸ್ ವಾಮಮಾರ್ಗ ಅನುಸರಿಸಬಾರದು. ಇದೇ ರೀತಿ ಮುಂದುವರೆದರೆ ರಾಜ್ಯದ ಜನತೆ ತೀವ್ರವಾಗಿ ವಿರೋಧಿಸುತ್ತಾರೆ ಎಂದು ಎಚ್ಚರಿಸಿದರು.

ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಚಿ ಹೇಳುವ ಕೆಲಸ ಮಾಡುತ್ತಿದ್ದಾರೆ. ಇದು ಸುಪ್ರೀಂ ಕೋರ್ಟ್ ಆದೇಶಕ್ಕೆ ಮಾಡುತ್ತಿರುವ ಅವಮಾನ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಮಡಾ ರೆಸಾರ್ಟ್​ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸುಪ್ರೀಂ ಕೋರ್ಟಿನ ಆದೇಶ ತಿರುಚಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ ಅಂಶಗಳನ್ನು ಹೇಳುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ದಿನೇಶ್ ಗುಂಡೂರಾವ್ ಸುಪ್ರೀಂ ಆದೇಶ ತಿರುಚುತ್ತಿದ್ದಾರೆ: ಬಿಜೆಪಿ ಖಂಡನೆ

ಕಾಂಗ್ರೆಸ್ - ಜೆಡಿಎಸ್ ನಾಯಕರು ವಿಶ್ವಾಸಮತ ಯಾತನೆಯನ್ನು ಮುಂದೂಡಲು ನೋಡುತ್ತಿದ್ದಾರೆ. ನಿಜವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇದ್ದರೆ ವಿಶ್ವಾಸಮತ ಯಾಚಿಸಬೇಕು. ಇಲ್ಲವಾದರೆ ಅದು ಪ್ರಜಾಪ್ರಭುತ್ವ ವಿರೋಧಿಯಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶ ಧಿಕ್ಕರಿಸಿದಂತಾಗುತ್ತದೆ ಎಂದು ಹೇಳಿದರು.

ಕೆಪಿಜೆಪಿ ಸದಸ್ಯ ಶಂಕರ್​ನನ್ನು ಅನರ್ಹ ಮಾಡಲು ಕಾಂಗ್ರೆಸ್ ಕಾನೂನು ಬಾಹಿರವಾಗಿ ದೂರು ನೀಡಿದೆ. ಮರ್ಜರ್ ಆಗಿಲ್ಲ ಎಂದು ಪಕ್ಷದ ಅಧ್ಯಕ್ಷರು ಸ್ಪೀಕರ್​​ಗೆ ದೂರು ನೀಡಿದ್ದಾರೆ. ಆದರೆ ಶಂಕರ್ ಕೆಪಿಜೆಪಿಯಲ್ಲೇ ಮುಂದುವರೆಯುತ್ತೇನೆಂದು ಹೇಳಿದ್ದಾರೆ. ಕಾಂಗ್ರೆಸ್ ವಾಮಮಾರ್ಗ ಅನುಸರಿಸಬಾರದು. ಇದೇ ರೀತಿ ಮುಂದುವರೆದರೆ ರಾಜ್ಯದ ಜನತೆ ತೀವ್ರವಾಗಿ ವಿರೋಧಿಸುತ್ತಾರೆ ಎಂದು ಎಚ್ಚರಿಸಿದರು.

Intro: ದಿನೇಶ್ ಗುಂಡೂರಾವ್ ಸುಪ್ರೀಂ ಆದೇಶ ತಿರುಚುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಸುಪ್ರೀಂ ಕೋರ್ಟ್ ಮದ್ಯಂತರ ಆದೇಶವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಚಿ ಹೇಳುವ ಕೆಲಸ ಮಾಡುತ್ತಿದ್ದಾರೆ ಇದು ಸುಪ್ರೀಂ ಕೋರ್ಟ್ ಆದೇಶಕ್ಕೆ ಮಾಡುತ್ತಿರುವ ಅವಮಾನ ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಮಡ ರೆಸಾರ್ಟ್ ನಲ್ಲಿ ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟಿನ ಬಗ್ಗೆ ಕೀಳು ಮಟ್ಟದ ಮಾತುಗಳನ್ನಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಗೆ ಮಾರಕವಾಗಿರುವ ಅಂಶಗಳನ್ನು ಹೇಳುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ನೋಟೀಸ್ ನೀಡಿಲ್ಲ: ಅತೃಪ್ತ ಶಾಸಕರಿಗೆ ಸ್ಪೀಕರ್ ಇದುವರೆಗೂ ಯಾವುದೇ ನೋಟಿಸ್ ನೀಡಿಲ್ಲ. ಅತೃಪ್ತರು ಪಕ್ಷ ಬಿಟ್ಟಿಲ್ಲ ಅಂತೇಳಿದ್ದಾರೆ. ಇದ್ರಲ್ಲಿ ಆಂಟಿ ಪಾರ್ಟಿ ಆಕ್ಟೀವಿಟಿಸ್ ಗೆ ಪುರಾವೆಗಳಿಲ್ಲ.ಕಮಿಟಿ ನಿರ್ಣಯಗಳನ್ನು ಮಾಡುತ್ತಿಲ್ಲ. ಅವರು ಬೇರೆ ಮಾರ್ಗ ಹುಡಿಕಿದ್ರೆ ಅದು ಕಾನೂನು ಸಂವಿಧಾನದ ವಿರುದ್ದ ದಿನೇಶ್ ಗುಂಡೂರಾವ್ ದಿಕ್ಕು ತಪ್ಪಿಸಬಾರದು

Body:ನಾಳೆ ವಿಶ್ವಾಸ ಮತ ಯಾಚಿಸಲಿ: ಕಾಂಗ್ರೆಸ್ ಜೆಡಿಎಸ್ ನಾಯಕರು ವಿಶ್ವಾಸಮತ ಯಾತನೆಯನ್ನು ಮುಂದೂಡಲು ನೋಡುತ್ತಿದ್ದಾರೆ. ನಿಜವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇದ್ದರೆ ವಿಶ್ವಾಸ ಮತ ಯಾಚಿಸಬೇಕು.ಇಲ್ಲವಾದರೆ ಅದು ಪ್ರಜಾಪ್ರಭುತ್ವ ವಿರೋಧಿಯಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶ ಧಿಕ್ಕರಿಸಿದಂತಾಗುತ್ತದೆ ಎಂದು ಹೇಳಿದರು.

Conclusion: ಕೆಪಿಜೆಪಿ ಸದಸ್ಯ ಶಂಕರ್ ಅವರನ್ನ ಅನರ್ಹ ಮಾಡಲು ಕಾಂಗ್ರೆಸ್ ಕಾನೂನು ಬಾಹಿರವಾಗಿ ದೂರು ನೀಡಿದೆ.ಮರ್ಜರ್ ಆಗಿಲ್ಲ ಎಂದು ಪಕ್ಷದ ಅಧ್ಯಕ್ಷರು ಸ್ಪೀಕರ್ ಗೆ ದೂರು ನೀಡಿದ್ದಾರೆ. ಕೆಪಿಜೆಪಿಯಲ್ಲೆ ಮುಂದುವರೆಯುತ್ತೇನೆ ಎಂದು ಶಂಕರ್ ಹೇಳಿದ್ದಾರೆ. ಕಾಂಗ್ರೆಸ್ ವಾಮಮಾರ್ಗ ಅನುಸರಿಸಬಾರ ಇದೇ ರೀತಿ ಮುಂದುವರೆದರೆ ರಾಜ್ಯದ ಜನತೆ ತೀವ್ರವಾಗಿ ವಿರೋಧಿಸುತ್ತಾರೆ ಎಂದು ಎಚ್ಚರಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.