ETV Bharat / state

ಅನರ್ಹರ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸ್ಪೀಕರ್ ಆದೇಶ ಎತ್ತಿಹಿಡಿಯಲಿದೆ: ಗುಂಡೂರಾವ್ ವಿಶ್ವಾಸ

author img

By

Published : Sep 23, 2019, 4:27 PM IST

ಅನರ್ಹ ಶಾಸಕರ ಅರ್ಜಿ ವಿಚಾರಣೆ ಸಂಬಂಧ ನಾವು ಕೇವಿಯೆಟ್ ಸಲ್ಲಿಸಿದ್ದೆವು. ನಮ್ಮ ವಕೀಲರು ಸ್ಪಷ್ಟ ವಾದ ಮಾಡಲಿದ್ದಾರೆ. ಅನರ್ಹರು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ. ಇದರ ಬಗ್ಗೆ ವಕೀಲರು ವಾದ ಮುಂದಿಡಲಿದ್ದಾರೆ. ಕಾಯ್ದೆಯ ನಿಯಮ ಅನುಷ್ಠಾನವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ದಿನೇಶ್ ಗುಂಡೂರಾವ್

ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನ ಸುಪ್ರೀಂ ಕೋರ್ಟ್​ ಮುಂದೂಡಿದ್ದು, ನಮ್ಮ ವಕೀಲರು ವಾದ ಮಂಡಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ನಗರದಲ್ಲಿ ಸುಪ್ರೀಂ ಕೋರ್ಟ್​ನಿಂದ ಕಾಂಗ್ರೆಸ್​ ನಾಯಕರಿಗೆ ನೋಟಿಸ್ ನೀಡಲಾಗಿರುವ ವಿಚಾರವಾಗಿ ಮಾತನಾಡಿದ ಅವರು, ನಾವು ಕೇವಿಯೆಟ್ ಸಲ್ಲಿಸಿದ್ದೆವು. ಹೀಗಾಗಿ ನಮ್ಮ ವಕೀಲರು ಸ್ಪಷ್ಟ ವಾದ ಮಾಡಲಿದ್ದಾರೆ. ಅನರ್ಹರು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ. ಇದರ ಬಗ್ಗೆ ವಕೀಲರು ವಾದ ಮುಂದಿಡಲಿದ್ದಾರೆ. ಕಾಯ್ದೆಯ ನಿಯಮ ಅನುಷ್ಠಾನವಾಗಬೇಕು ಎಂದರು.

ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

ಉತ್ತಮ ಉದ್ದೇಶದಿಂದ ರಾಜೀವ್ ಗಾಂಧಿ ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದ್ದರು. ಈ ಕಾಯ್ದೆಯನ್ನ ಸ್ಪೀಕರ್ ಎತ್ತಿಹಿಡಿದಿದ್ದಾರೆ. ಜನ ಕೂಡ ಸ್ಪೀಕರ್ ಆದೇಶವನ್ನೇ ಬಯಸಿದ್ದರು. ಹೀಗಾಗಿ ಕೋರ್ಟ್ ಸ್ಪೀಕರ್ ಆದೇಶವನ್ನ ಎತ್ತಿಹಿಡಿಯಲಿದೆ ಎಂಬ ವಿಶ್ವಾಸವಿದೆ. ಚುನಾವಣೆ ಸ್ಪರ್ಧೆ ಬಗ್ಗೆ ಆಯೋಗ ಹೇಳಿರಬಹುದು. ಆದರೆ ಪ್ರಕರಣಕ್ಕೂ, ಆಯೋಗಕ್ಕೂ ಸಂಬಂಧವಿಲ್ಲ. ಆಯೋಗ ಮಧ್ಯಪ್ರವೇಶ ಮಾಡಿದ್ದು ಸರಿಯಲ್ಲ ಎಂದು ಹೇಳಿದರು.

ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರ ಮಾತನಾಡಿದ ಅವರು, ನಾವು ಚುನಾವಣೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇವತ್ತು ಈ ಸಂಬಂಧ ಸಭೆ ಕರೆದಿದ್ದೇವೆ. ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಅದಾದ ಬಳಿಕ ಅಭ್ಯರ್ಥಿ ಆಯ್ಕೆ ನಡೆಸುತ್ತೇವೆ ಎಂದರು.

ಬೆಳಗಾವಿಯಲ್ಲಿ ನಾಳೆ ಪ್ರತಿಭಟನೆ:

ಪ್ರವಾಹ ಸಂತ್ರಸ್ತರ ವಿಚಾರದಲ್ಲಿ ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದ ಹ್ಯೂಸ್ಟನ್ ಕಾರ್ಯಕ್ರಮಕ್ಕೆ ಹೋಗ್ತಾರೆ. ಅಲ್ಲಿನ ಪ್ರವಾಹ ಸಂತ್ರಸ್ತರ ಬಗ್ಗೆ ಸಾಂತ್ವನ ಹೇಳುತ್ತಾರೆ. ಆದರೆ ನಮ್ಮ ರಾಜ್ಯದ ಪ್ರವಾಹ ಪೀಡಿತರ ಬಗ್ಗೆ ಮಾತನಾಡಿಲ್ಲ. ರಾಜ್ಯಕ್ಕೆ ಬರಲಿಲ್ಲ, ನೆರೆ ಪೀಡಿತರಿಗೆ ಸಾಂತ್ವನ ಹೇಳಲಿಲ್ಲ. ಪ್ರವಾಹವಾಗಿರುವ ಎಲ್ಲ ಜಿಲ್ಲೆಗಳಲ್ಲೂ ಬಿಜೆಪಿ ಸಂಸದರೇ ಇದ್ದಾರೆ. ಸವದಿ, ಜೋಶಿ ಎಲ್ಲರೂ ಇದ್ದಾರೆ, ಅವರು ಏನು ಮಾಡುತ್ತಿದ್ದಾರೆ. ಜನರ ಪ್ರತಿನಿಧಿಯಾಗೋಕೆ ಅವರು ಲಾಯಕ್ ಇಲ್ಲ. ಬಿಜೆಪಿಯು ಜನ ವಿರೋಧಿ ನೀತಿ ಒಳಗೊಂಡಿದೆ. ಹೀಗಾಗಿಯೇ ನಾಳೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಬೆಂಗಳೂರು: ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನ ಸುಪ್ರೀಂ ಕೋರ್ಟ್​ ಮುಂದೂಡಿದ್ದು, ನಮ್ಮ ವಕೀಲರು ವಾದ ಮಂಡಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ನಗರದಲ್ಲಿ ಸುಪ್ರೀಂ ಕೋರ್ಟ್​ನಿಂದ ಕಾಂಗ್ರೆಸ್​ ನಾಯಕರಿಗೆ ನೋಟಿಸ್ ನೀಡಲಾಗಿರುವ ವಿಚಾರವಾಗಿ ಮಾತನಾಡಿದ ಅವರು, ನಾವು ಕೇವಿಯೆಟ್ ಸಲ್ಲಿಸಿದ್ದೆವು. ಹೀಗಾಗಿ ನಮ್ಮ ವಕೀಲರು ಸ್ಪಷ್ಟ ವಾದ ಮಾಡಲಿದ್ದಾರೆ. ಅನರ್ಹರು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ. ಇದರ ಬಗ್ಗೆ ವಕೀಲರು ವಾದ ಮುಂದಿಡಲಿದ್ದಾರೆ. ಕಾಯ್ದೆಯ ನಿಯಮ ಅನುಷ್ಠಾನವಾಗಬೇಕು ಎಂದರು.

ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

ಉತ್ತಮ ಉದ್ದೇಶದಿಂದ ರಾಜೀವ್ ಗಾಂಧಿ ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದ್ದರು. ಈ ಕಾಯ್ದೆಯನ್ನ ಸ್ಪೀಕರ್ ಎತ್ತಿಹಿಡಿದಿದ್ದಾರೆ. ಜನ ಕೂಡ ಸ್ಪೀಕರ್ ಆದೇಶವನ್ನೇ ಬಯಸಿದ್ದರು. ಹೀಗಾಗಿ ಕೋರ್ಟ್ ಸ್ಪೀಕರ್ ಆದೇಶವನ್ನ ಎತ್ತಿಹಿಡಿಯಲಿದೆ ಎಂಬ ವಿಶ್ವಾಸವಿದೆ. ಚುನಾವಣೆ ಸ್ಪರ್ಧೆ ಬಗ್ಗೆ ಆಯೋಗ ಹೇಳಿರಬಹುದು. ಆದರೆ ಪ್ರಕರಣಕ್ಕೂ, ಆಯೋಗಕ್ಕೂ ಸಂಬಂಧವಿಲ್ಲ. ಆಯೋಗ ಮಧ್ಯಪ್ರವೇಶ ಮಾಡಿದ್ದು ಸರಿಯಲ್ಲ ಎಂದು ಹೇಳಿದರು.

ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರ ಮಾತನಾಡಿದ ಅವರು, ನಾವು ಚುನಾವಣೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇವತ್ತು ಈ ಸಂಬಂಧ ಸಭೆ ಕರೆದಿದ್ದೇವೆ. ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಅದಾದ ಬಳಿಕ ಅಭ್ಯರ್ಥಿ ಆಯ್ಕೆ ನಡೆಸುತ್ತೇವೆ ಎಂದರು.

ಬೆಳಗಾವಿಯಲ್ಲಿ ನಾಳೆ ಪ್ರತಿಭಟನೆ:

ಪ್ರವಾಹ ಸಂತ್ರಸ್ತರ ವಿಚಾರದಲ್ಲಿ ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾದ ಹ್ಯೂಸ್ಟನ್ ಕಾರ್ಯಕ್ರಮಕ್ಕೆ ಹೋಗ್ತಾರೆ. ಅಲ್ಲಿನ ಪ್ರವಾಹ ಸಂತ್ರಸ್ತರ ಬಗ್ಗೆ ಸಾಂತ್ವನ ಹೇಳುತ್ತಾರೆ. ಆದರೆ ನಮ್ಮ ರಾಜ್ಯದ ಪ್ರವಾಹ ಪೀಡಿತರ ಬಗ್ಗೆ ಮಾತನಾಡಿಲ್ಲ. ರಾಜ್ಯಕ್ಕೆ ಬರಲಿಲ್ಲ, ನೆರೆ ಪೀಡಿತರಿಗೆ ಸಾಂತ್ವನ ಹೇಳಲಿಲ್ಲ. ಪ್ರವಾಹವಾಗಿರುವ ಎಲ್ಲ ಜಿಲ್ಲೆಗಳಲ್ಲೂ ಬಿಜೆಪಿ ಸಂಸದರೇ ಇದ್ದಾರೆ. ಸವದಿ, ಜೋಶಿ ಎಲ್ಲರೂ ಇದ್ದಾರೆ, ಅವರು ಏನು ಮಾಡುತ್ತಿದ್ದಾರೆ. ಜನರ ಪ್ರತಿನಿಧಿಯಾಗೋಕೆ ಅವರು ಲಾಯಕ್ ಇಲ್ಲ. ಬಿಜೆಪಿಯು ಜನ ವಿರೋಧಿ ನೀತಿ ಒಳಗೊಂಡಿದೆ. ಹೀಗಾಗಿಯೇ ನಾಳೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

Intro:newsBody:ಸುಪ್ರೀಂಗೆ ನಾವು ಕೇವಿಯೆಟ್ ಸಲ್ಲಿಸಿದ್ದೇವೆ, ನಮ್ಮ ವಕೀಲರು ಸಮರ್ಥವಾದ ವಾದ ಮಂಡಿಸಲಿದ್ದಾರೆ: ದಿನೇಶ್ ಗುಂಡೂರಾವ್

ಬೆಂಗಳೂರು: ಅನರ್ಹ ಶಾಸಕರ ವಿಚಾರಣೆಯನ್ನ ಸುಪ್ರೀಂ ಮುಂದೂಡಿದೆ. ನಮ್ಮ ವಕೀಲರು ವಾದ ಮಂಡಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುಪ್ರೀಂನಿಂದ ಕೈ ನಾಯಕರಿಗೆ ನೊಟೀಸ್ ವಿಚಾರ ಮಾತನಾಡಿ, ನಾವು ಕೇವಿಯೆಟ್ ಸಲ್ಲಿಸಿದ್ದೆವು. ಹೀಗಾಗಿ ನಮ್ಮ ವಕೀಲರು ಸ್ಪಷ್ಟ ವಾದ ಮಾಡಲಿದ್ದಾರೆ. ಪಕ್ಷಾಂತರ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ. ಇದರ ಬಗ್ಗೆ ವಕೀಲರು ವಾದ ಮುಂದಿಡಲಿದ್ದಾರೆ. ಕಾಯ್ದೆಯ ನಿಯಮ ಅನುಷ್ಠಾನವಾಗಬೇಕು ಎಂದರು.
ಉತ್ತಮ ಉದ್ದೇಶದಿಂದ ರಾಜೀವ್ ಗಾಂಧಿ ಇದನ್ನ ತಂದಿದ್ದರು. ಈ ಕಾಯ್ದೆಯನ್ನ ಸ್ಪೀಕರ್ ಎತ್ತಿಹಿಡಿದಿದ್ದಾರೆ. ಜನ ಕೂಡ ಸ್ಪೀಕರ್ ಆದೇಶವನ್ನೇ ಬಯಸಿದ್ದರು. ಹೀಗಾಗಿ ಕೋರ್ಟ್ ಸ್ಪೀಕರ್ ಆದೇಶವನ್ನ ಎತ್ತಿಹಿಡಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಸ್ಪರ್ಧೆ ಬಗ್ಗೆ ಆಯೋಗ ಹೇಳಿರಬಹುದು. ಆದರೆ ಪ್ರಕರಣಕ್ಕೂ, ಆಯೋಗಕ್ಕೂ ಸಂಬಂಧವಿಲ್ಲ. ಆಯೋಗ ಮಧ್ಯಪ್ರವೇಶ ಮಾಡಿದ್ದು ಸರಿಯಲ್ಲ ಎಂದರು.
ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರ ಮಾತನಾಡಿ, ನಾವು ಚುನಾವಣೆ ಸಿದ್ಧತೆ ಮಾಡಿಕೊಳ್ತಿದ್ದೇವೆ. ಇವತ್ತು ಈ ಸಂಬಂಧ ಸಭೆ ಕರೆದಿದ್ದೇವೆ. ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಆದಾದ ಬಳಿಕ ಅಭ್ಯರ್ಥಿ ಆಯ್ಕೆ ನಡೆಸುತ್ತೇವೆ ಎಂದರು.
ಬೆಳಗಾವಿಯಲ್ಲಿ ನಾಳೆ ಪ್ರತಿಭಟನೆ
ಪ್ರವಾಹ ಸಂತ್ರಸ್ಥರ ವಿಚಾರದಲ್ಲಿ ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಪ್ರಧಾನಿ ಮೋದಿಯವರು ಅಮೆರಿಕಾದ ಹೂಸ್ಟನ್ ಕಾರ್ಯಕ್ರಮಕ್ಕೆ ಹೋಗ್ತಾರೆ. ಅಲ್ಲಿನ ಪ್ರವಾಹ ಸಂತ್ರಸ್ಥರ ಬಗ್ಗೆ ಸಾಂತ್ವನ ಹೇಳ್ತಾರೆ. ಆದರೆ ನಮ್ಮ ರಾಜ್ಯದ ಪ್ರವಾಹ ಸಂತ್ರಸ್ಥರ ಬಗ್ಗೆ ಮಾತನಾಡಿಲ್ಲ. ರಾಜ್ಯಕ್ಕೆ ಬರಲಿಲ್ಲ,ಸಂತ್ರಸ್ಥರಿಗೆ ಸಾಂತ್ವನ ಹೇಳಲಿಲ್ಲ. ಪ್ರವಾಹದ ಎಲ್ಲ ಜಿಲ್ಲೆಯವರು ಬಿಜೆಪಿ ಸಂಸದರೇ ಇದ್ದಾರೆ. ಸವದಿ, ಜೋಶಿ ಎಲ್ಲರೂ ಇದ್ದಾರೆ, ಏನ್ ಮಾಡ್ತಿದ್ದಾರೆ. ಜನರ ಪ್ರತಿನಿಧಿಯಾಗೋಕೆ ಲಾಯಕ್ ಇಲ್ಲ. ಜನ ವಿರೋಧಿ ನೀತಿಯನ್ನೇ ಬಿಜೆಪಿ ಒಳಗೊಂಡಿದೆ. ಹೀಗಾಗಿಯೇ ನಾಳೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.


Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.