ETV Bharat / state

ಜೆಡಿಎಸ್ ಬಿಜೆಪಿ ಮೈತ್ರಿ.. ಪಕ್ಷದೊಳಗೆ ಭುಗಿಲೆದ್ದ ಅಸಮಾಧಾನ ಶಮನಕ್ಕೆ ಮುಂದುವರಿದ ದಳಪತಿಗಳ ಕಸರತ್ತು

author img

By ETV Bharat Karnataka Team

Published : Oct 9, 2023, 5:25 PM IST

ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡಿದ್ದು, ಒಟ್ಟಾಗಿ ಚುನಾವಣೆ ಎದುರಿಸಲಿವೆ. ಆದರೆ ಈ ಸಂಬಂಧ ಜೆಡಿಎಸ್​ನಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ.

discontent-with-jds-and-bjp-alliance
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ : ಆರದ ಅಸಮಾಧಾನದ ಹೊಗೆ?

ಬೆಂಗಳೂರು : ಬಿಜೆಪಿ ಜೊತೆಗಿನ ಮೈತ್ರಿ ವಿಚಾರಕ್ಕೆ ಜೆಡಿಎಸ್​​ನಲ್ಲಿ ಸ್ಫೋಟಗೊಂಡಿರುವ ಅಸಮಾಧಾನದ ಹೊಗೆ ಇನ್ನೂ ಆರಿಲ್ಲ. ಇದು ಜೆಡಿಎಸ್ ನಾಯಕರಿಗೆ ತಲೆನೋವು ತಂದಿಟ್ಟಿದೆ. ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೂ ದಳಪತಿಗಳಿಗೆ ಖುಷಿಯಿಲ್ಲ. ಪಕ್ಷದ ಎಂಟತ್ತು ಶಾಸಕರಿಗೆ ಮೈತ್ರಿ ಇಷ್ಟವಿಲ್ಲ. ಹಾಗೆಂದುಕೊಂಡು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ವಿರೋಧ ಕಟ್ಟಿಕೊಳ್ಳಲೂ ಇಷ್ಟವಿಲ್ಲ. ಹಾಗಾಗಿ, ಅಸಮಾಧಾನ ಒಳಗೊಳಗೆ ಭುಗಿಲೇಳುತ್ತಲೇ ಇದೆ.

ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿಗೆ ಅಸಮಾಧಾನ : ಇದಕ್ಕಿಂತಲೂ ಮುಖ್ಯವಾಗಿ ಪಕ್ಷದಲ್ಲಿನ ಮುಸ್ಲಿಂ ನಾಯಕರು ಜೆಡಿಎಸ್‌ ಹೈಕಮಾಂಡ್​​ನೊಂದಿಗೆ ಮುನಿಸಿಕೊಂಡಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿಗೆ ಆ ನಾಯಕರು ಆಸಕ್ತಿ ತೋರುತ್ತಿಲ್ಲ. ಈ ಅಸಮಾಧಾನ ಶಮನಗೊಳಿಸುವುದು ಪಕ್ಷದ ನಾಯಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸಂಬಂಧ ಪಕ್ಷದ ಹಿರಿಯ ಮುಖಂಡರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾ ಪದಾಧಿಕಾರಿಗಳ ಮೂಲಕ ಪಕ್ಷದೊಳಗಿನ ಅಸಮಾಧಾನವನ್ನು ಶಮನ ಮಾಡುವ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ಪೂರಕ ಎಂಬಂತೆ ಹಾಸನದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಸಯ್ಯದ್‌ ಅಕ್ತರ್ ಜೆಡಿಎಸ್ ಎಂದಿಗೂ ಮುಸ್ಲಿಂರನ್ನು ಕಡೆಗಣಿಸಿಲ್ಲ ಎಂದು ಹೇಳುವ ಮೂಲಕ ಅಸಮಾಧಾನವನ್ನು ಶಮನ ಮಾಡಲು ಮುಂದಾಗಿದ್ದಾರೆ.

ವಿಜಯಪುರ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ದಿಲಾವರ್ ಖಾಜಿ, ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿಗೆ ಅಲ್ಪಸಂಖ್ಯಾತರ ಘಟಕದ ಸಹಮತವಿದೆ ಎಂದು ಸಮಜಾಯಿಶಿ ನೀಡಿದ್ದಾರೆ. ಆದರೆ ಕಲಬುರಗಿಯಲ್ಲಿ ಮುಸ್ಲಿಂ ಮುಖಂಡರು ಜೆಡಿಎಸ್‌ ವರಿಷ್ಠರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಅದೇ ರೀತಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಸಿ ಎಂ ಇಬ್ರಾಹಿಂ ಅ.16ರಂದು ಮೈತ್ರಿ ಬಗ್ಗೆ ಅಸಮಾಧಾನಗೊಂಡಿರುವ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಮುಖಂಡರು ಮತ್ತು ಮುಸ್ಲಿಂ ನಾಯಕರ ಸಭೆ ಆಯೋಜಿಸಿದ್ದಾರೆ. ಈ ಪ್ರತ್ಯೇಕ ಸಭೆಗೆ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಇಬ್ರಾಹಿಂ ಮನವೊಲಿಸುವ ಜವಾಬ್ದಾರಿಯನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೆಗೆದುಕೊಂಡಿದ್ದಾರೆ. ಹಾಗಾಗಿ, ಯಾವ ತಂತ್ರ ಬಳಸಿ ಅಸಮಾಧಾನ ಶಮನಗೊಳಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಜೆಡಿಎಸ್​ ಶಾಸಕರನ್ನು ಸೆಳೆಯಲು ಮುಂದಾಗಿರುವ ಕಾಂಗ್ರೆಸ್ : ಇದರ ಮಧ್ಯೆ ಕಾಂಗ್ರೆಸ್ ಪಕ್ಷ ಇದನ್ನು ಬಂಡವಾಳ ಮಾಡಿಕೊಂಡು ಜೆಡಿಎಸ್​ನ ಶಾಸಕರನ್ನು ಸೆಳೆಯಲು ಮುಂದಾಗಿದೆ. ಕಾಂಗ್ರೆಸ್ ನ ನಾಯಕರ ಜೊತೆ ಜೆಡಿಎಸ್​ನ ಏಳೆಂಟು ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದು, ತಮ್ಮ 19 ಶಾಸಕರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ತಂತ್ರದ ಭಾಗವಾಗಿದೆ ಎನ್ನಲಾಗಿದೆ.

ನನಗೆ ಹೂವಿನ ಹಾರ ಹಾಕಿ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ನನ್ನನ್ನು ಆಯ್ಕೆ ಮಾಡಿದರು. ನಿಷ್ಠೆಯಿಂದ ಇರುತ್ತೇನೆಂದು ಆವತ್ತೇ ನಾನು ಹೇಳಿದೆ. ಇವತ್ತಿಗೂ ಅದೇ ನಿಷ್ಠೆ ಇದೆ. ಮುಂದೆಯೂ ಇರುತ್ತದೆ. ಅಧಿಕಾರದ ಹಣೆ ಬರಹ ಬರೆಯುವವರು ದೇವೇಗೌಡರು ಅಲ್ಲ, ಕುಮಾರಸ್ವಾಮಿ ಅವರೂ ಅಲ್ಲ, ಯಾವ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಲ್ಲ. ನಾನೇನಾದರೂ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಒಳ್ಳೆಯದು ಮಾಡಬೇಕು. ಜನತೆಗೆ ಹೇಳುತ್ತಿರುವುದು, ಸಮುದಾಯಕ್ಕಲ್ಲ, ಜೆಡಿಎಸ್ ಸಿದ್ಧಾಂತ ಬಿಟ್ಟಿಲ್ಲ. ಮೈತ್ರಿ ಸಾವಿರಾರು ಮಂದಿ ಹತ್ತಿರ ಮಾಡಿಕೊಳ್ಳಬಹುದು. ಪಕ್ಷದ ಸಿದ್ದಾಂತಗಳೂ ಬದಲಾವಣೆ ಆಗಿಲ್ಲ. ದೇವೇಗೌಡರು ಸಿದ್ದಾಂತಗಳನ್ನು ಬಿಟ್ಟಿಲ್ಲ. ಎಲ್ಲರನ್ನೂ ಸಂಪರ್ಕಿಸಿದ್ದೇನೆ. ಒಂದಿಬ್ಬರು ಅಲ್ಲಿ, ಇಲ್ಲಿ ಅಂತಾರೆ, ಆ ಮುಖಂಡರನ್ನು ಕರೆದು ಸಮಾಧಾನ ಮಾಡುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಹೇಳಿದ್ದಾರೆ.

ನಾನು ಬದುಕಿರುವವರೆಗೂ ಮುಸ್ಲಿಂ ಸಮುದಾಯವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳುವ ಮೂಲಕ ಮುಖಂಡರ ಅತೃಪ್ತಿ ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ಇನ್ನೊಂದೆಡೆ ಮೈತ್ರಿ ವಿಚಾರದಲ್ಲಿ ಬಿಜೆಪಿ ದೆಹಲಿ ಹೈಕಮಾಂಡ್ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದು, ರಾಜ್ಯ ನಾಯಕರಲ್ಲಿ ಆ ಬಗ್ಗೆ ಅಸಮಾಧಾನವೂ ಎದ್ದಿದೆ. ಇದೆಲ್ಲವನ್ನೂ ಜೆಡಿಎಸ್ ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ : ಜೆಡಿಎಸ್‌ ಶಾಸಕರ ಜೊತೆ ಮಾತುಕತೆ ನಡೆಸಿದ ಬಳಿಕವೇ ಕುಮಾರಸ್ವಾಮಿ ಕೇಂದ್ರ ಗೃಹಮಂತ್ರಿಗಳನ್ನು ಭೇಟಿ ಮಾಡಿದ್ದಾರೆ : ಹೆಚ್ ಡಿ ದೇವೇಗೌಡ

ಬೆಂಗಳೂರು : ಬಿಜೆಪಿ ಜೊತೆಗಿನ ಮೈತ್ರಿ ವಿಚಾರಕ್ಕೆ ಜೆಡಿಎಸ್​​ನಲ್ಲಿ ಸ್ಫೋಟಗೊಂಡಿರುವ ಅಸಮಾಧಾನದ ಹೊಗೆ ಇನ್ನೂ ಆರಿಲ್ಲ. ಇದು ಜೆಡಿಎಸ್ ನಾಯಕರಿಗೆ ತಲೆನೋವು ತಂದಿಟ್ಟಿದೆ. ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೂ ದಳಪತಿಗಳಿಗೆ ಖುಷಿಯಿಲ್ಲ. ಪಕ್ಷದ ಎಂಟತ್ತು ಶಾಸಕರಿಗೆ ಮೈತ್ರಿ ಇಷ್ಟವಿಲ್ಲ. ಹಾಗೆಂದುಕೊಂಡು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ವಿರೋಧ ಕಟ್ಟಿಕೊಳ್ಳಲೂ ಇಷ್ಟವಿಲ್ಲ. ಹಾಗಾಗಿ, ಅಸಮಾಧಾನ ಒಳಗೊಳಗೆ ಭುಗಿಲೇಳುತ್ತಲೇ ಇದೆ.

ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿಗೆ ಅಸಮಾಧಾನ : ಇದಕ್ಕಿಂತಲೂ ಮುಖ್ಯವಾಗಿ ಪಕ್ಷದಲ್ಲಿನ ಮುಸ್ಲಿಂ ನಾಯಕರು ಜೆಡಿಎಸ್‌ ಹೈಕಮಾಂಡ್​​ನೊಂದಿಗೆ ಮುನಿಸಿಕೊಂಡಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿಗೆ ಆ ನಾಯಕರು ಆಸಕ್ತಿ ತೋರುತ್ತಿಲ್ಲ. ಈ ಅಸಮಾಧಾನ ಶಮನಗೊಳಿಸುವುದು ಪಕ್ಷದ ನಾಯಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸಂಬಂಧ ಪಕ್ಷದ ಹಿರಿಯ ಮುಖಂಡರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾ ಪದಾಧಿಕಾರಿಗಳ ಮೂಲಕ ಪಕ್ಷದೊಳಗಿನ ಅಸಮಾಧಾನವನ್ನು ಶಮನ ಮಾಡುವ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ಪೂರಕ ಎಂಬಂತೆ ಹಾಸನದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಸಯ್ಯದ್‌ ಅಕ್ತರ್ ಜೆಡಿಎಸ್ ಎಂದಿಗೂ ಮುಸ್ಲಿಂರನ್ನು ಕಡೆಗಣಿಸಿಲ್ಲ ಎಂದು ಹೇಳುವ ಮೂಲಕ ಅಸಮಾಧಾನವನ್ನು ಶಮನ ಮಾಡಲು ಮುಂದಾಗಿದ್ದಾರೆ.

ವಿಜಯಪುರ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ದಿಲಾವರ್ ಖಾಜಿ, ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿಗೆ ಅಲ್ಪಸಂಖ್ಯಾತರ ಘಟಕದ ಸಹಮತವಿದೆ ಎಂದು ಸಮಜಾಯಿಶಿ ನೀಡಿದ್ದಾರೆ. ಆದರೆ ಕಲಬುರಗಿಯಲ್ಲಿ ಮುಸ್ಲಿಂ ಮುಖಂಡರು ಜೆಡಿಎಸ್‌ ವರಿಷ್ಠರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಅದೇ ರೀತಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಸಿ ಎಂ ಇಬ್ರಾಹಿಂ ಅ.16ರಂದು ಮೈತ್ರಿ ಬಗ್ಗೆ ಅಸಮಾಧಾನಗೊಂಡಿರುವ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಮುಖಂಡರು ಮತ್ತು ಮುಸ್ಲಿಂ ನಾಯಕರ ಸಭೆ ಆಯೋಜಿಸಿದ್ದಾರೆ. ಈ ಪ್ರತ್ಯೇಕ ಸಭೆಗೆ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಇಬ್ರಾಹಿಂ ಮನವೊಲಿಸುವ ಜವಾಬ್ದಾರಿಯನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೆಗೆದುಕೊಂಡಿದ್ದಾರೆ. ಹಾಗಾಗಿ, ಯಾವ ತಂತ್ರ ಬಳಸಿ ಅಸಮಾಧಾನ ಶಮನಗೊಳಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಜೆಡಿಎಸ್​ ಶಾಸಕರನ್ನು ಸೆಳೆಯಲು ಮುಂದಾಗಿರುವ ಕಾಂಗ್ರೆಸ್ : ಇದರ ಮಧ್ಯೆ ಕಾಂಗ್ರೆಸ್ ಪಕ್ಷ ಇದನ್ನು ಬಂಡವಾಳ ಮಾಡಿಕೊಂಡು ಜೆಡಿಎಸ್​ನ ಶಾಸಕರನ್ನು ಸೆಳೆಯಲು ಮುಂದಾಗಿದೆ. ಕಾಂಗ್ರೆಸ್ ನ ನಾಯಕರ ಜೊತೆ ಜೆಡಿಎಸ್​ನ ಏಳೆಂಟು ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದು, ತಮ್ಮ 19 ಶಾಸಕರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ತಂತ್ರದ ಭಾಗವಾಗಿದೆ ಎನ್ನಲಾಗಿದೆ.

ನನಗೆ ಹೂವಿನ ಹಾರ ಹಾಕಿ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ನನ್ನನ್ನು ಆಯ್ಕೆ ಮಾಡಿದರು. ನಿಷ್ಠೆಯಿಂದ ಇರುತ್ತೇನೆಂದು ಆವತ್ತೇ ನಾನು ಹೇಳಿದೆ. ಇವತ್ತಿಗೂ ಅದೇ ನಿಷ್ಠೆ ಇದೆ. ಮುಂದೆಯೂ ಇರುತ್ತದೆ. ಅಧಿಕಾರದ ಹಣೆ ಬರಹ ಬರೆಯುವವರು ದೇವೇಗೌಡರು ಅಲ್ಲ, ಕುಮಾರಸ್ವಾಮಿ ಅವರೂ ಅಲ್ಲ, ಯಾವ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಲ್ಲ. ನಾನೇನಾದರೂ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಒಳ್ಳೆಯದು ಮಾಡಬೇಕು. ಜನತೆಗೆ ಹೇಳುತ್ತಿರುವುದು, ಸಮುದಾಯಕ್ಕಲ್ಲ, ಜೆಡಿಎಸ್ ಸಿದ್ಧಾಂತ ಬಿಟ್ಟಿಲ್ಲ. ಮೈತ್ರಿ ಸಾವಿರಾರು ಮಂದಿ ಹತ್ತಿರ ಮಾಡಿಕೊಳ್ಳಬಹುದು. ಪಕ್ಷದ ಸಿದ್ದಾಂತಗಳೂ ಬದಲಾವಣೆ ಆಗಿಲ್ಲ. ದೇವೇಗೌಡರು ಸಿದ್ದಾಂತಗಳನ್ನು ಬಿಟ್ಟಿಲ್ಲ. ಎಲ್ಲರನ್ನೂ ಸಂಪರ್ಕಿಸಿದ್ದೇನೆ. ಒಂದಿಬ್ಬರು ಅಲ್ಲಿ, ಇಲ್ಲಿ ಅಂತಾರೆ, ಆ ಮುಖಂಡರನ್ನು ಕರೆದು ಸಮಾಧಾನ ಮಾಡುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಹೇಳಿದ್ದಾರೆ.

ನಾನು ಬದುಕಿರುವವರೆಗೂ ಮುಸ್ಲಿಂ ಸಮುದಾಯವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳುವ ಮೂಲಕ ಮುಖಂಡರ ಅತೃಪ್ತಿ ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ. ಇನ್ನೊಂದೆಡೆ ಮೈತ್ರಿ ವಿಚಾರದಲ್ಲಿ ಬಿಜೆಪಿ ದೆಹಲಿ ಹೈಕಮಾಂಡ್ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದು, ರಾಜ್ಯ ನಾಯಕರಲ್ಲಿ ಆ ಬಗ್ಗೆ ಅಸಮಾಧಾನವೂ ಎದ್ದಿದೆ. ಇದೆಲ್ಲವನ್ನೂ ಜೆಡಿಎಸ್ ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ : ಜೆಡಿಎಸ್‌ ಶಾಸಕರ ಜೊತೆ ಮಾತುಕತೆ ನಡೆಸಿದ ಬಳಿಕವೇ ಕುಮಾರಸ್ವಾಮಿ ಕೇಂದ್ರ ಗೃಹಮಂತ್ರಿಗಳನ್ನು ಭೇಟಿ ಮಾಡಿದ್ದಾರೆ : ಹೆಚ್ ಡಿ ದೇವೇಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.