ETV Bharat / state

ಪಕ್ಷದ ಸಭೆಯಲ್ಲಿ ಅಗೌರವ ಆರೋಪ: ಜೆಡಿಎಸ್​​ ವಕ್ತಾರ ಕೆ.ಹೆಚ್​.ಕುಮಾರ್​​ ಅಮಾನತು - undefined

ನಿನ್ನೆ ಜೆಡಿಎಸ್​ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಅಗೌರವವನ್ನುಂಟು ಮಾಡಿದ ಆರೋಪದ ಮೇಲೆ ಜೆಡಿಎಸ್​ ವಕ್ತಾರ ಕೆ.ಹೆಚ್​.ಕುಮಾರ್​ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಜೆಡಿಎಸ್ ವಕ್ತಾರ ಕೆ.ಹೆಚ್. ಕುಮಾರ್ ಅಮಾನತು
author img

By

Published : Jul 1, 2019, 9:01 PM IST

ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಿನ್ನೆ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಅಗೌರವವನ್ನುಂಟು ಮಾಡಿದ ಆರೋಪದ ಮೇಲೆ ವಕ್ತಾರ ಕೆ.ಹೆಚ್.ಕುಮಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಜೆಡಿಎಸ್ ಕಚೇರಿಯಲ್ಲಿ ನಿನ್ನೆ ಬೆಂಗಳೂರು ನಗರದ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಸಭೆ ನಡೆಯುತ್ತಿದ್ದ ವೇಳೆ ಅನಗತ್ಯವಾಗಿ ಮಧ್ಯ ಪ್ರವೇಶಿಸಿ ಮೈಕ್​ನನ್ನು ಕಸಿದುಕೊಳ್ಳಲು ಕುಮಾರ್ ಪ್ರಯತ್ನಪಟ್ಟಿದ್ದು, ಈ ನಡವಳಿಕೆ ಕಾರ್ಯಕರ್ತರಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ಇದೆ. ಜೊತೆಗೆ ದೇವೇಗೌಡರು ಸೇರಿದಂತೆ ಇತರ ನಾಯಕರಿಗೆ ಅಗೌರವವನ್ನುಂಟು ಮಾಡಿದ್ದಾರೆ.

ಜೆಡಿಎಸ್ ವಕ್ತಾರ ಕೆ.ಹೆಚ್.ಕುಮಾರ್ ಅಮಾನತು

ಸಭೆ ಮುಗಿದ ಮೇಲೂ ಸಹ ಕುಮಾರ್ ಮಾಧ್ಯಮಗಳ ಸಮ್ಮುಖದಲ್ಲಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಅವರನ್ನು ಅಡ್ಡಗಟ್ಟಿ ತುಂಬಾ ಜೋರು ಧ್ವನಿಯಲ್ಲಿ ಅಸಂಬದ್ಧವಾದ ಪ್ರಶ್ನೆಗಳನ್ನು ಕೇಳಿ ಪಕ್ಷದ ಕಚೇರಿಯ ಇಡೀ ವಾತಾವರಣವನ್ನೇ ಕಲುಷಿತಗೊಳಿಸಿದ್ದರು ಎನ್ನಲಾಗಿದೆ.

ಈ ಎಲ್ಲ ನಡವಳಿಕೆಗಳನ್ನು ಖಂಡಿಸಿರುವ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಈ ಕೂಡಲೇ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಏಳು ದಿನಗಳೊಳಗೆ ನಿನ್ನೆಯ ಘಟನೆ ಕುರಿತು ಲಿಖಿತ ರೂಪದ ಮೂಲಕ ಸೂಕ್ತ ಸಮಜಾಯಿಷಿ ನೀಡಬೇಕೆಂದು ಸೂಚಿಸಿರುವ ಅವರು, ಇದಕ್ಕೆ ತಪ್ಪಿದ್ದಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಿನ್ನೆ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಅಗೌರವವನ್ನುಂಟು ಮಾಡಿದ ಆರೋಪದ ಮೇಲೆ ವಕ್ತಾರ ಕೆ.ಹೆಚ್.ಕುಮಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಜೆಡಿಎಸ್ ಕಚೇರಿಯಲ್ಲಿ ನಿನ್ನೆ ಬೆಂಗಳೂರು ನಗರದ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಸಭೆ ನಡೆಯುತ್ತಿದ್ದ ವೇಳೆ ಅನಗತ್ಯವಾಗಿ ಮಧ್ಯ ಪ್ರವೇಶಿಸಿ ಮೈಕ್​ನನ್ನು ಕಸಿದುಕೊಳ್ಳಲು ಕುಮಾರ್ ಪ್ರಯತ್ನಪಟ್ಟಿದ್ದು, ಈ ನಡವಳಿಕೆ ಕಾರ್ಯಕರ್ತರಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ಇದೆ. ಜೊತೆಗೆ ದೇವೇಗೌಡರು ಸೇರಿದಂತೆ ಇತರ ನಾಯಕರಿಗೆ ಅಗೌರವವನ್ನುಂಟು ಮಾಡಿದ್ದಾರೆ.

ಜೆಡಿಎಸ್ ವಕ್ತಾರ ಕೆ.ಹೆಚ್.ಕುಮಾರ್ ಅಮಾನತು

ಸಭೆ ಮುಗಿದ ಮೇಲೂ ಸಹ ಕುಮಾರ್ ಮಾಧ್ಯಮಗಳ ಸಮ್ಮುಖದಲ್ಲಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಅವರನ್ನು ಅಡ್ಡಗಟ್ಟಿ ತುಂಬಾ ಜೋರು ಧ್ವನಿಯಲ್ಲಿ ಅಸಂಬದ್ಧವಾದ ಪ್ರಶ್ನೆಗಳನ್ನು ಕೇಳಿ ಪಕ್ಷದ ಕಚೇರಿಯ ಇಡೀ ವಾತಾವರಣವನ್ನೇ ಕಲುಷಿತಗೊಳಿಸಿದ್ದರು ಎನ್ನಲಾಗಿದೆ.

ಈ ಎಲ್ಲ ನಡವಳಿಕೆಗಳನ್ನು ಖಂಡಿಸಿರುವ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಈ ಕೂಡಲೇ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಏಳು ದಿನಗಳೊಳಗೆ ನಿನ್ನೆಯ ಘಟನೆ ಕುರಿತು ಲಿಖಿತ ರೂಪದ ಮೂಲಕ ಸೂಕ್ತ ಸಮಜಾಯಿಷಿ ನೀಡಬೇಕೆಂದು ಸೂಚಿಸಿರುವ ಅವರು, ಇದಕ್ಕೆ ತಪ್ಪಿದ್ದಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Intro:ಬೆಂಗಳೂರು : ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಿನ್ನೆ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಅಗೌರವವನ್ನುಂಟು ಮಾಡಿದ ಆರೋಪದ ಮೇಲೆ ವಕ್ತಾರ ಕೆ.ಹೆಚ್. ಕುಮಾರ್ ಅವರನ್ನು ಪಕ್ಷದಿಂದ ಅಮಾನತ್ತು ಮಾಡಲಾಗಿದೆ. Body:ಜೆಡಿಎಸ್ ಕಚೇರಿಯಲ್ಲಿ ನಿನ್ನೆ ಬೆಂಗಳೂರು ನಗರದ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಸಭೆ ನಡೆಯುತ್ತಿದ್ದ ವೇಳೆ ಅನಗತ್ಯವಾಗಿ ಮಧ್ಯೆ ಪ್ರವೇಶಿಸಿ ಮೈಕ್ ಅನ್ನು ಕಸಿದುಕೊಂಡು ಕುಮಾರ್ ಪ್ರಯತ್ನಪಟ್ಟಿದ್ದು, ಈ ನಡವಳಿಕೆ ಕಾರ್ಯಕರ್ತರಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ವ್ಯಕ್ತವಾಗಿರುವುದರ ಜೊತೆಗೆ ದೇವೇಗೌಡರು ಸೇರಿದಂತೆ ಇತರ ನಾಯಕರಿಗೆ ಅಗೌರವವನ್ನುಂಟು ಮಾಡಿದ್ದಾರೆ.
ಸಭೆ ಮುಗಿದ ಮೇಲೂ ಸಹ ಕುಮಾರ್ ಮಾಧ್ಯಮಗಳ ಸಮ್ಮುಖದಲ್ಲಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಅವರನ್ನು ಅಡ್ಡಗಟ್ಟಿ ತುಂಬಾ ಜೋರು ಧ್ವನಿಯಲ್ಲಿ ಅಸಂಬದ್ಧವಾದ ಪ್ರಶ್ನೆಗಳನ್ನು ಕೇಳಿ ಪಕ್ಷದ ಕಚೇರಿಯ ಇಡೀ ವಾತಾವರಣವನ್ನೇ ಕಲುಷಿತಗೊಳಿಸಿ, ಅದು ಮಾಧ್ಯಮಗಳಲ್ಲಿ ವರದಿಯಾಗುವಂತೆ ಮಾಡಿ ಪಕ್ಷದ ಮರ್ಯಾದೆಯನ್ನು ಹಾಳು ಮಾಡಲು ಹಾಗೂ ನಾಯಕರುಗಳಿಗೆ ಕೆಟ್ಟ ಹೆಸರು ತರಲು ಸಂಚು ರೂಪಿಸಿರುವುದು ಕಂಡುಬಂದಿದೆ.
ಈ ಎಲ್ಲ ನಡವಳಿಕೆಗಳನ್ನು ಖಂಡಿಸಿರುವ ಬೆಂಳೂರು ಮಹಾನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಅವರು, ಈ ಕೂಡಲೇ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಏಳು ದಿನಗಳೊಳಗೆ ನಿನ್ನೆಯ ಘಟನೆ ಕುರಿತು ಲಿಖಿತ ಮೂಲಕ ಸೂಕ್ತ ಸಮಜಾಯಿಷಿ ನೀಡಬೇಕೆಂದು ಸೂಚಿಸಿರುವ ಅವರು, ಇದಕ್ಕೆ ತಪ್ಪಿದ್ದಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.