ETV Bharat / state

ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣ: ಸಂಪತ್ ರಾಜ್ ಬಂಧಿಸಲು ಸಿಸಿಬಿ ಸಿದ್ಧತೆ

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧಿಸಿದಂತೆ ತನಿಖೆಯನ್ನು ಎನ್​​ಐ‌ಎ ಚುರುಕುಗೊಳಿಸಿದ್ದು, ಮಾಜಿ ಮೇಯರ್ ಸಂಪತ್​​ ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಅಬ್ದುಲ್ ರಕೀಬ್ ಜಾಹೀರ್​​ನನ್ನು ಬಂಧಿಸಬೇಕೆಂದು ಸಿಸಿಬಿ ಸಿದ್ಧತೆ ನಡೆಸುತ್ತಿದೆ ಎನ್ನಲಾಗುತ್ತಿದೆ.

author img

By

Published : Oct 15, 2020, 9:29 AM IST

DJ-KG village case: CCB preparing to arrest Sampath Raj
ಡಿಜೆ-ಕಿಜಿ ಹಳ್ಳಿ ಗಲಭೆ ಪ್ರಕರಣ: ಸಂಪತ್ ರಾಜ್ ಬಂಧಿಸಲು ಸಿಸಿಬಿ ಸಿದ್ಧತೆ!

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್​​ ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಅಬ್ದುಲ್ ರಕೀಬ್ ಜಾಹೀರ್​​ನನ್ನು ಬಂಧಿಸಬೇಕೆಂದು ಸಿಸಿಬಿ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ‌ ದೋಷಾರೋಪ‌ ಪಟ್ಟಿ ಸಲ್ಲಿಸಿ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಸಂಬಂಧಿಸಿದ ತನಿಖೆಯ ವಿಚಾರವನ್ನು ಎಳೆ ಎಳೆಯಾಗಿ ಉಲ್ಲೇಖಿಸಿದ್ದಾರೆ. ಮತ್ತೊಂದೆಡೆ ಗಲಭೆಯ ಹಿಂದೆ ಎಸ್​​ಡಿಪಿಐ ಮುಖಂಡರು ಹಾಗೂ ಭಯೋತ್ಪಾದಕರ ನಂಟು ಇರುವ ಆರೋಪದ ಜಾಡಿನ ತನಿಖೆಯನ್ನು ಎನ್​​ಐ‌ಎ ಚುರುಕುಗೊಳಿದೆ.

ನಿನ್ನೆ ಶಾಸಕರಾದ ಜಮೀರ್ ಅಹಮ್ಮದ್ ಹಾಗೂ ರಿಜ್ವಾನ್ ಹರ್ಷದ್ ಅವರ ಹೇಳಿಕೆ ಪಡೆದಿದ್ದ ಎನ್​​ಐಎ ಗಲಭೆಯ ಕೆಲ ಮಾಹಿತಿಗಳನ್ನು ಕಲೆಹಾಕಿತ್ತು. ಸದ್ಯ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್​​​ ರಾಜ್ ಅವರ ಪಾತ್ರದ ಬಗ್ಗೆ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದಾರೆ. ಈ ಕಾರಣಕ್ಕಾಗಿ ತನಿಖೆ ನಡೆಸಿದ ಸಿಸಿಬಿ ಹೆಚ್ಚುವರಿ ಆಯುಕ್ತರು ಹಾಗೂ ಸಿಸಿಬಿ ಡಿಸಿಪಿಗಳ ಬಳಿಯಿಂದ ಕೂಡ ಎನ್​ಐಎ ಮಾಹಿತಿ ಪಡೆಯಲು ನಿರ್ಧಾರ ಮಾಡಿದೆ. ಈಗಾಗಲೇ ಘಟನೆ ನಡೆದ ವೇಳೆ ಇದ್ದ 18 ಪೊಲೀಸರ ಹೇಳಿಕೆಯನ್ನ ಕೂಡ ಎನ್​​ಐಎ ಪಡೆದಿದೆ.

ಹಾಗೆಯೇ ಸಿಸಿಬಿ ಪೊಲೀಸರು ಕೂಡ ಸದ್ಯ ಮಾಜಿ ಮೇಯರ್ ಸಂಪತ್​​ ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಅಬ್ದುಲ್ ರಕೀಬ್ ಜಾಹೀರ್​​ನನ್ನು ಬಂಧಿಸಬೇಕೆಂದು ನಿರ್ಧರಿಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ. ಸಂಪತ್​ ರಾಜ್ ಖಾಸಗಿ ಆಸ್ಪತ್ರೆಯಲ್ಲಿರುವ ಕಾರಣ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯರ ಬಳಿ‌ ಮಾಹಿತಿ ಪಡೆಯುತ್ತಿದ್ದು, ಆರೋಗ್ಯ ಚೇತರಿಕೆ ಕಂಡ ಕೂಡಲೇ ವಶಕ್ಕೆ ಪಡೆದು ತನಿಖೆ ನಡೆಸಲಿದ್ದಾರೆ. ಸಿಸಿಬಿ ಬಂಧನ ಬಳಿಕ ಸಂಪತ್​ ರಾಜ್​​​ ಎನ್​​ಐಎ ತನಿಖೆ ಎದುರಿಸುವುದು ಅನಿವಾರ್ಯವಾಗಿದೆ. ಸಂಪತ್​​ ಎಸ್​​ಡಿಪಿಐ ಮುಖಂಡರ ಜೊತೆ ನಿರಂತರ ಸಂಪರ್ಕದಲ್ಲಿರುವುದು ತನಿಖೆ ವೇಳೆ ಬಯಲಾಗಿದೆ‌. ಹಾಗಾಗಿ ತನಿಖೆ ಚುರುಕುಗೊಂಡಿದೆ.

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್​​ ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಅಬ್ದುಲ್ ರಕೀಬ್ ಜಾಹೀರ್​​ನನ್ನು ಬಂಧಿಸಬೇಕೆಂದು ಸಿಸಿಬಿ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ‌ ದೋಷಾರೋಪ‌ ಪಟ್ಟಿ ಸಲ್ಲಿಸಿ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಸಂಬಂಧಿಸಿದ ತನಿಖೆಯ ವಿಚಾರವನ್ನು ಎಳೆ ಎಳೆಯಾಗಿ ಉಲ್ಲೇಖಿಸಿದ್ದಾರೆ. ಮತ್ತೊಂದೆಡೆ ಗಲಭೆಯ ಹಿಂದೆ ಎಸ್​​ಡಿಪಿಐ ಮುಖಂಡರು ಹಾಗೂ ಭಯೋತ್ಪಾದಕರ ನಂಟು ಇರುವ ಆರೋಪದ ಜಾಡಿನ ತನಿಖೆಯನ್ನು ಎನ್​​ಐ‌ಎ ಚುರುಕುಗೊಳಿದೆ.

ನಿನ್ನೆ ಶಾಸಕರಾದ ಜಮೀರ್ ಅಹಮ್ಮದ್ ಹಾಗೂ ರಿಜ್ವಾನ್ ಹರ್ಷದ್ ಅವರ ಹೇಳಿಕೆ ಪಡೆದಿದ್ದ ಎನ್​​ಐಎ ಗಲಭೆಯ ಕೆಲ ಮಾಹಿತಿಗಳನ್ನು ಕಲೆಹಾಕಿತ್ತು. ಸದ್ಯ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್​​​ ರಾಜ್ ಅವರ ಪಾತ್ರದ ಬಗ್ಗೆ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದಾರೆ. ಈ ಕಾರಣಕ್ಕಾಗಿ ತನಿಖೆ ನಡೆಸಿದ ಸಿಸಿಬಿ ಹೆಚ್ಚುವರಿ ಆಯುಕ್ತರು ಹಾಗೂ ಸಿಸಿಬಿ ಡಿಸಿಪಿಗಳ ಬಳಿಯಿಂದ ಕೂಡ ಎನ್​ಐಎ ಮಾಹಿತಿ ಪಡೆಯಲು ನಿರ್ಧಾರ ಮಾಡಿದೆ. ಈಗಾಗಲೇ ಘಟನೆ ನಡೆದ ವೇಳೆ ಇದ್ದ 18 ಪೊಲೀಸರ ಹೇಳಿಕೆಯನ್ನ ಕೂಡ ಎನ್​​ಐಎ ಪಡೆದಿದೆ.

ಹಾಗೆಯೇ ಸಿಸಿಬಿ ಪೊಲೀಸರು ಕೂಡ ಸದ್ಯ ಮಾಜಿ ಮೇಯರ್ ಸಂಪತ್​​ ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಅಬ್ದುಲ್ ರಕೀಬ್ ಜಾಹೀರ್​​ನನ್ನು ಬಂಧಿಸಬೇಕೆಂದು ನಿರ್ಧರಿಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ. ಸಂಪತ್​ ರಾಜ್ ಖಾಸಗಿ ಆಸ್ಪತ್ರೆಯಲ್ಲಿರುವ ಕಾರಣ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯರ ಬಳಿ‌ ಮಾಹಿತಿ ಪಡೆಯುತ್ತಿದ್ದು, ಆರೋಗ್ಯ ಚೇತರಿಕೆ ಕಂಡ ಕೂಡಲೇ ವಶಕ್ಕೆ ಪಡೆದು ತನಿಖೆ ನಡೆಸಲಿದ್ದಾರೆ. ಸಿಸಿಬಿ ಬಂಧನ ಬಳಿಕ ಸಂಪತ್​ ರಾಜ್​​​ ಎನ್​​ಐಎ ತನಿಖೆ ಎದುರಿಸುವುದು ಅನಿವಾರ್ಯವಾಗಿದೆ. ಸಂಪತ್​​ ಎಸ್​​ಡಿಪಿಐ ಮುಖಂಡರ ಜೊತೆ ನಿರಂತರ ಸಂಪರ್ಕದಲ್ಲಿರುವುದು ತನಿಖೆ ವೇಳೆ ಬಯಲಾಗಿದೆ‌. ಹಾಗಾಗಿ ತನಿಖೆ ಚುರುಕುಗೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.