ETV Bharat / state

ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಎನ್ಐಎ ತನಿಖೆಗೆ : ಕೇಂದ್ರದಿಂದ ಹೈಕೋರ್ಟ್​ಗೆ ಮಾಹಿತಿ

author img

By

Published : Sep 11, 2020, 9:31 PM IST

ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಸಂಬಂಧ ದಾಖಲಿಸಿರುವ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

DJ , KG village violation
ಡಿ.ಜೆ ಹಳ್ಳಿ ಗಲಭೆ

ಬೆಂಗಳೂರು: ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಸಂಬಂಧ ದಾಖಲಿಸಿರುವ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ತಂಡ (ಎನ್‍ಐಎ)ಕ್ಕೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಎನ್‍ಐಎ ಪರ ವಕೀಲರು ಹೈಕೋರ್ಟ್‍ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸಲು ನಿರ್ದೇಶಿಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಮಾಹಿತಿ ನೀಡಲಾಗಿದೆ.
ವಿಚಾರಣೆ ವೇಳೆ ಎನ್‍ಐಎ ಪರ ವಕೀಲ ಪಿ. ಪ್ರಸನ್ನಕುಮಾರ್ ಅವರು ಪೀಠಕ್ಕೆ ಮಾಹಿತಿ ನೀಡಿ, ಗಲಭೆ ವೇಳೆ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ಸಂಬಂಧ ಯುಎಪಿಎ ಕಾಯ್ದೆಯಡಿ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಗಳಲ್ಲಿ ತಲಾ ಒಂದೊಂದು ಎಫ್‍ಐಆರ್‍ ದಾಖಲಿಸಿಕೊಳ್ಳಲಾಗಿದೆ.

(ಅಪರಾಧ ಸಂಖ್ಯೆ 195 ಮತ್ತು 219) ಈ ಪ್ರಕರಣಗಳನ್ನು ಎನ್‍ಐಎಗೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಮೌಖಿಕ ಸೂಚನೆ ಬಂದಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಪೀಠಕ್ಕೆ ತಿಳಿಸಿದರು.

ಇದೇ ವೇಳೆ ಸರ್ಕಾರದ ಪರ ವಕೀಲರು ಗಲಭೆ ಪ್ರಕರಣದ ಮೂರು ತನಿಖಾ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದರು. ವರದಿಗಳನ್ನು ಪರಿಶೀಲಿಸಿದ ಪೀಠ, ಮುಂದಿನ ವಿಚಾರಣೆ ವೇಳೆ ತನಿಖೆಯ ಪ್ರಗತಿ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಸೆ.21ಕ್ಕೆ ಮುಂದೂಡಿತು.

ಸರ್ಕಾರಕ್ಕೆ ನೋಟಿಸ್ : ಗಲಭೆಯನ್ನು ನಿಯಂತ್ರಿಸುವ ಹಾಗೂ ನಿರ್ವಹಿಸುವ ವಿಚಾರದಲ್ಲಿ ಮತ್ತು ನಂತರ ಕೈಗೊಂಡ ಕ್ರಮಗಳಲ್ಲಿ ಪೊಲೀಸರಿಂದ ಸಾಕಷ್ಟು ಲೋಪಗಳಾಗಿವೆ. ಆದ್ದರಿಂದ ಹೈಕೋರ್ಟ್ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ಮಂದಿಯನ್ನು ಬಂಧಿಸಲಾಗಿದೆ.

ತನಿಖಾ ವರದಿ, ಎಫ್‍ಐಆರ್, ತನಿಖಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು. ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಗೆ ನಿರ್ದೇಶನ ನೀಡಬೇಕು ಎಂದು ಕೋರಿ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಸಂಬಂಧ ದಾಖಲಿಸಿರುವ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ತಂಡ (ಎನ್‍ಐಎ)ಕ್ಕೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಎನ್‍ಐಎ ಪರ ವಕೀಲರು ಹೈಕೋರ್ಟ್‍ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸಲು ನಿರ್ದೇಶಿಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಮಾಹಿತಿ ನೀಡಲಾಗಿದೆ.
ವಿಚಾರಣೆ ವೇಳೆ ಎನ್‍ಐಎ ಪರ ವಕೀಲ ಪಿ. ಪ್ರಸನ್ನಕುಮಾರ್ ಅವರು ಪೀಠಕ್ಕೆ ಮಾಹಿತಿ ನೀಡಿ, ಗಲಭೆ ವೇಳೆ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ಸಂಬಂಧ ಯುಎಪಿಎ ಕಾಯ್ದೆಯಡಿ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಗಳಲ್ಲಿ ತಲಾ ಒಂದೊಂದು ಎಫ್‍ಐಆರ್‍ ದಾಖಲಿಸಿಕೊಳ್ಳಲಾಗಿದೆ.

(ಅಪರಾಧ ಸಂಖ್ಯೆ 195 ಮತ್ತು 219) ಈ ಪ್ರಕರಣಗಳನ್ನು ಎನ್‍ಐಎಗೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಮೌಖಿಕ ಸೂಚನೆ ಬಂದಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಪೀಠಕ್ಕೆ ತಿಳಿಸಿದರು.

ಇದೇ ವೇಳೆ ಸರ್ಕಾರದ ಪರ ವಕೀಲರು ಗಲಭೆ ಪ್ರಕರಣದ ಮೂರು ತನಿಖಾ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದರು. ವರದಿಗಳನ್ನು ಪರಿಶೀಲಿಸಿದ ಪೀಠ, ಮುಂದಿನ ವಿಚಾರಣೆ ವೇಳೆ ತನಿಖೆಯ ಪ್ರಗತಿ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಸೆ.21ಕ್ಕೆ ಮುಂದೂಡಿತು.

ಸರ್ಕಾರಕ್ಕೆ ನೋಟಿಸ್ : ಗಲಭೆಯನ್ನು ನಿಯಂತ್ರಿಸುವ ಹಾಗೂ ನಿರ್ವಹಿಸುವ ವಿಚಾರದಲ್ಲಿ ಮತ್ತು ನಂತರ ಕೈಗೊಂಡ ಕ್ರಮಗಳಲ್ಲಿ ಪೊಲೀಸರಿಂದ ಸಾಕಷ್ಟು ಲೋಪಗಳಾಗಿವೆ. ಆದ್ದರಿಂದ ಹೈಕೋರ್ಟ್ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಾರು ಮಂದಿಯನ್ನು ಬಂಧಿಸಲಾಗಿದೆ.

ತನಿಖಾ ವರದಿ, ಎಫ್‍ಐಆರ್, ತನಿಖಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು. ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಗೆ ನಿರ್ದೇಶನ ನೀಡಬೇಕು ಎಂದು ಕೋರಿ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.