ETV Bharat / state

ಒಕ್ಕಲಿಗ ಪರಿಷತ್ ಆಫ್ ಅಮೆರಿಕ ಸಮ್ಮೇಳನ: ವರ್ಚುವಲ್ ಮೂಲಕ ಡಿಸಿಎಂ ಡಿಕೆಶಿ ಭಾಗಿ

author img

By

Published : Jul 2, 2023, 8:03 AM IST

ಅಮೆರಿಕದಲ್ಲಿ ನಡೆದ ಒಕ್ಕಲಿಗ ಪರಿಷತ್ ಆಫ್ ಅಮೆರಿಕದ 17ನೇ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಡಿ.ಕೆ. ಶಿವಕುಮಾರ್, ಶ್ರೀ ನಿರ್ಮಲಾನಂದ ಸ್ವಾಮೀಜಿ ಮತ್ತು ರಾಜ್ಯ ಕೃಷಿ ಸಚಿವ ಚೆಲುವರಾಯಸ್ವಾಮಿ ಭಾಗವಹಿಸಿದ್ದರು.

ಒಕ್ಕಲಿಗ ಪರಿಷತ್ ಆಫ್ ಅಮೆರಿಕ
ಒಕ್ಕಲಿಗ ಪರಿಷತ್ ಆಫ್ ಅಮೆರಿಕ

ಬೆಂಗಳೂರು: "ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಪ್ರಗತಿ ಎಂಬ ಮಾತನ್ನು ಆಗಾಗ ಹೇಳುತ್ತೇನೆ. 1991ರಿಂದ ಒಕ್ಕಲಿಗ ಸಮುದಾಯದ ಜನ ಅಮೆರಿಕದಲ್ಲಿ ಸಂಘಟನೆ ಮಾಡಿಕೊಂಡು ಕೆಲಸ ಮಾಡುತ್ತಿದ್ದೀರಿ. ಈ ವಿಶಿಷ್ಟ ಪ್ರಯತ್ನಕ್ಕೆ ಮುಂದಾದವರಿಗೆ ನಾನು ಅಭಿನಂದಿಸುತ್ತೇನೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಒಕ್ಕಲಿಗ ಪರಿಷತ್ ಆಫ್ ಅಮೆರಿಕದ 17ನೇ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಶನಿವಾರ ಭಾಗವಹಿಸಿ ಅವರು ಮಾತನಾಡಿದರು. "ನೀವು ನಮ್ಮ ರಾಯಭಾರಿಗಳು. ಮನುಷ್ಯನಿಗೆ ನಂಬಿಕೆ ಬಹಳ ಮುಖ್ಯ. ನಮ್ಮ ಸಮಾಜ, ಮಠ, ಭಾಷೆ, ನೆಲ ಜಲ ಕಾಪಾಡಲು ಶ್ರಮಿಸಿ, ಹೊರ ದೇಶದಲ್ಲಿ ನಮಗೆ ಹೆಸರು ತಂದಿದ್ದೀರಿ. ಕೆಲ ದಿನಗಳಲ್ಲಿ ಅಧಿವೇಶನ ನಡೆಯಲಿದ್ದು, ಬಜೆಟ್ ಮಂಡನೆ ಆಗಲಿದೆ. ಹೀಗಾಗಿ ನಾನು ಈ ಕಾರ್ಯಕ್ರಮಕ್ಕೆ ನೇರವಾಗಿ ಭಾಗವಹಿಸಲು ಆಗಿಲ್ಲ" ಎಂದು ತಿಳಿಸಿದರು.

"ಜನ ನಮ್ಮ ಮೇಲೆ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಅವರ ನಂಬಿಕೆ ಉಳಿಸಿಕೊಂಡು ಕೆಲಸ ಮಾಡಬೇಕು. ನನಗೆ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ನೀಡಲಾಗಿದೆ. ಚೆಲುವರಾಯ ಸ್ವಾಮಿ ಅವರಿಗೆ ಕೃಷಿ ಇಲಾಖೆ ಜವಾಬ್ದಾರಿ ನೀಡಲಾಗಿದೆ. ಬೆಂಗಳೂರು ನಗರವನ್ನು ಇಡೀ ವಿಶ್ವ ಗಮನಿಸುತ್ತಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರಿನ ಬಗ್ಗೆ ಮಾತನಾಡುತ್ತಾ, ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು ನಂತರ ದೇಶದ ಬೇರೆ ಪ್ರದೇಶಗಳಿಗೆ ಹೋಗುತ್ತಿದ್ದರು. ಈಗ ಮೊದಲು ಬೆಂಗಳೂರಿಗೆ ಬಂದು ನಂತರ ದೇಶದ ಬೇರೆ ನಗರಗಳಿಗೆ ಹೋಗುತ್ತಿದ್ದಾರೆ. ಬೇರೆ ದೇಶಗಳು ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿವೆ" ಎಂದು ಬಣ್ಣಿಸಿದರು.

ಒಕ್ಕಲಿಗ ಪರಿಷತ್ ಆಫ್ ಅಮೆರಿಕದ 17ನೇ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಡಿಕೆಶಿ ಭಾಗಿ
ಒಕ್ಕಲಿಗ ಪರಿಷತ್ ಆಫ್ ಅಮೆರಿಕದ 17ನೇ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಭಾಗಿಯಾದ ಡಿಸಿಎಂ ಡಿಕೆಶಿ, ಸಚಿವ ಚಲುವನಾರಾಯಣ ಸ್ವಾಮಿ, ಶ್ರೀ ನಿರ್ಮಲಾನಂದ ಸ್ವಾಮೀಜಿ ಹಾಗು ಮತ್ತಿತರು.

"ಇಲ್ಲಿ ತಯಾರಾದ ವೈದ್ಯರು, ಇಂಜಿನಿಯರ್​​ಗಳು ವಿಶ್ವದ ಎಲ್ಲೆಡೆ ಸಾಧನೆ ಮಾಡುತ್ತಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ನಾವು ಒಟ್ಟಾಗಿ ಕೆಲಸ ಮಾಡಬೇಕು. ನೀವು ನಮ್ಮ ಮೇಲೆ ದೊಡ್ಡ ಮಟ್ಟದ ಪ್ರೀತಿ ಬಾಂಧವ್ಯ ಹೊಂದಿದ್ದೀರಿ. ಬೆಂಗಳೂರು ನಗರವನ್ನು ಗ್ಲೋಬಲ್ ಬೆಂಗಳೂರು ಆಗಿ ಪರಿವರ್ತಿಸಬೇಕಿದೆ. ಇದಕ್ಕಾಗಿ ನಾವು ಸಾರ್ವಜನಿಕರ ಸಲಹೆ ಕೇಳುತ್ತಿದ್ದು, ನೀವುಗಳು ಕೂಡ ನಿಮ್ಮ ಸಲಹೆಗಳನ್ನು ನೀಡಬೇಕು" ಎಂದು ಮನವಿ ಮಾಡಿದರು.

ಪಕ್ಷದಲ್ಲಿ ಎನ್‌ಆರ್‌ಐ ಘಟಕ ಸ್ಥಾಪಿಸಲು ಚರ್ಚೆ: "ನಾವು ಎಲ್ಲ ಸಮುದಾಯದ ಜೊತೆ ಸಾಮರಸ್ಯದಿಂದ ಬದುಕುತ್ತೇವೆ. ನನಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛೆ ಇತ್ತು. ನೀವು ಎಲ್ಲೇ ಇದ್ದರೂ ನಮ್ಮವರು. ನಿಮಗೆ ಯಾವುದೇ ಸಹಕಾರ ನೀಡಲು ನಾವು ಸಿದ್ಧರಿದ್ದೇವೆ. ನಮ್ಮ ಪಕ್ಷದಲ್ಲಿ ಎನ್‌ಆರ್‌ಐ ಘಟಕ ಸ್ಥಾಪಿಸಲು ಚರ್ಚೆ ಮಾಡುತ್ತಿದ್ದೇವೆ. ನೀವು ಮತ್ತೆ ನಿಮ್ಮ ಊರುಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ನಿರ್ಧರಿಸಿದರೆ ನಿಮಗೆ ನೆರವು ನೀಡುತ್ತೇವೆ" ಎಂದರು.

"ದೇವರು ನಮಗೆ ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಿಮಗೆ ಅವಕಾಶ ಸಿಕ್ಕಾಗ ನಿಮ್ಮ ಊರು, ಸಮಾಜ, ಮನೆ, ಕುಟುಂಬವನ್ನು ಮರೆಯಬೇಡಿ. ನನಗೆ ಉನ್ನತ ಸ್ಥಾನಮಾನ ಸಿಗಬೇಕು ಎಂದು ನಿಮ್ಮಲ್ಲಿ ಅನೇಕರು ನಿರೀಕ್ಷೆ ಮಾಡಿದ್ದೀರಿ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ನಮಗೆ ಸಿಕ್ಕಿರುವ ಅಧಿಕಾರದಲ್ಲಿ ತೃಪ್ತಿಪಟ್ಟು ಕೆಲಸ ಮಾಡಬೇಕಿದೆ" ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದ ಸ್ವಾಮೀಜಿ ವರ್ಚುವಲ್ ಮೂಲಕ ಭಾಗವಹಿಸಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ನ ಘೋಷಿತ ಎಲ್ಲಾ ಯೋಜನೆಗಳು ಜಾರಿಗೆ ಬರಲಿದೆ: ಡಿಸಿಎಂ ಡಿಕೆಶಿ

ಬೆಂಗಳೂರು: "ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಪ್ರಗತಿ ಎಂಬ ಮಾತನ್ನು ಆಗಾಗ ಹೇಳುತ್ತೇನೆ. 1991ರಿಂದ ಒಕ್ಕಲಿಗ ಸಮುದಾಯದ ಜನ ಅಮೆರಿಕದಲ್ಲಿ ಸಂಘಟನೆ ಮಾಡಿಕೊಂಡು ಕೆಲಸ ಮಾಡುತ್ತಿದ್ದೀರಿ. ಈ ವಿಶಿಷ್ಟ ಪ್ರಯತ್ನಕ್ಕೆ ಮುಂದಾದವರಿಗೆ ನಾನು ಅಭಿನಂದಿಸುತ್ತೇನೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಒಕ್ಕಲಿಗ ಪರಿಷತ್ ಆಫ್ ಅಮೆರಿಕದ 17ನೇ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಶನಿವಾರ ಭಾಗವಹಿಸಿ ಅವರು ಮಾತನಾಡಿದರು. "ನೀವು ನಮ್ಮ ರಾಯಭಾರಿಗಳು. ಮನುಷ್ಯನಿಗೆ ನಂಬಿಕೆ ಬಹಳ ಮುಖ್ಯ. ನಮ್ಮ ಸಮಾಜ, ಮಠ, ಭಾಷೆ, ನೆಲ ಜಲ ಕಾಪಾಡಲು ಶ್ರಮಿಸಿ, ಹೊರ ದೇಶದಲ್ಲಿ ನಮಗೆ ಹೆಸರು ತಂದಿದ್ದೀರಿ. ಕೆಲ ದಿನಗಳಲ್ಲಿ ಅಧಿವೇಶನ ನಡೆಯಲಿದ್ದು, ಬಜೆಟ್ ಮಂಡನೆ ಆಗಲಿದೆ. ಹೀಗಾಗಿ ನಾನು ಈ ಕಾರ್ಯಕ್ರಮಕ್ಕೆ ನೇರವಾಗಿ ಭಾಗವಹಿಸಲು ಆಗಿಲ್ಲ" ಎಂದು ತಿಳಿಸಿದರು.

"ಜನ ನಮ್ಮ ಮೇಲೆ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಅವರ ನಂಬಿಕೆ ಉಳಿಸಿಕೊಂಡು ಕೆಲಸ ಮಾಡಬೇಕು. ನನಗೆ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ನೀಡಲಾಗಿದೆ. ಚೆಲುವರಾಯ ಸ್ವಾಮಿ ಅವರಿಗೆ ಕೃಷಿ ಇಲಾಖೆ ಜವಾಬ್ದಾರಿ ನೀಡಲಾಗಿದೆ. ಬೆಂಗಳೂರು ನಗರವನ್ನು ಇಡೀ ವಿಶ್ವ ಗಮನಿಸುತ್ತಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರಿನ ಬಗ್ಗೆ ಮಾತನಾಡುತ್ತಾ, ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು ನಂತರ ದೇಶದ ಬೇರೆ ಪ್ರದೇಶಗಳಿಗೆ ಹೋಗುತ್ತಿದ್ದರು. ಈಗ ಮೊದಲು ಬೆಂಗಳೂರಿಗೆ ಬಂದು ನಂತರ ದೇಶದ ಬೇರೆ ನಗರಗಳಿಗೆ ಹೋಗುತ್ತಿದ್ದಾರೆ. ಬೇರೆ ದೇಶಗಳು ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿವೆ" ಎಂದು ಬಣ್ಣಿಸಿದರು.

ಒಕ್ಕಲಿಗ ಪರಿಷತ್ ಆಫ್ ಅಮೆರಿಕದ 17ನೇ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಡಿಕೆಶಿ ಭಾಗಿ
ಒಕ್ಕಲಿಗ ಪರಿಷತ್ ಆಫ್ ಅಮೆರಿಕದ 17ನೇ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಭಾಗಿಯಾದ ಡಿಸಿಎಂ ಡಿಕೆಶಿ, ಸಚಿವ ಚಲುವನಾರಾಯಣ ಸ್ವಾಮಿ, ಶ್ರೀ ನಿರ್ಮಲಾನಂದ ಸ್ವಾಮೀಜಿ ಹಾಗು ಮತ್ತಿತರು.

"ಇಲ್ಲಿ ತಯಾರಾದ ವೈದ್ಯರು, ಇಂಜಿನಿಯರ್​​ಗಳು ವಿಶ್ವದ ಎಲ್ಲೆಡೆ ಸಾಧನೆ ಮಾಡುತ್ತಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ನಾವು ಒಟ್ಟಾಗಿ ಕೆಲಸ ಮಾಡಬೇಕು. ನೀವು ನಮ್ಮ ಮೇಲೆ ದೊಡ್ಡ ಮಟ್ಟದ ಪ್ರೀತಿ ಬಾಂಧವ್ಯ ಹೊಂದಿದ್ದೀರಿ. ಬೆಂಗಳೂರು ನಗರವನ್ನು ಗ್ಲೋಬಲ್ ಬೆಂಗಳೂರು ಆಗಿ ಪರಿವರ್ತಿಸಬೇಕಿದೆ. ಇದಕ್ಕಾಗಿ ನಾವು ಸಾರ್ವಜನಿಕರ ಸಲಹೆ ಕೇಳುತ್ತಿದ್ದು, ನೀವುಗಳು ಕೂಡ ನಿಮ್ಮ ಸಲಹೆಗಳನ್ನು ನೀಡಬೇಕು" ಎಂದು ಮನವಿ ಮಾಡಿದರು.

ಪಕ್ಷದಲ್ಲಿ ಎನ್‌ಆರ್‌ಐ ಘಟಕ ಸ್ಥಾಪಿಸಲು ಚರ್ಚೆ: "ನಾವು ಎಲ್ಲ ಸಮುದಾಯದ ಜೊತೆ ಸಾಮರಸ್ಯದಿಂದ ಬದುಕುತ್ತೇವೆ. ನನಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛೆ ಇತ್ತು. ನೀವು ಎಲ್ಲೇ ಇದ್ದರೂ ನಮ್ಮವರು. ನಿಮಗೆ ಯಾವುದೇ ಸಹಕಾರ ನೀಡಲು ನಾವು ಸಿದ್ಧರಿದ್ದೇವೆ. ನಮ್ಮ ಪಕ್ಷದಲ್ಲಿ ಎನ್‌ಆರ್‌ಐ ಘಟಕ ಸ್ಥಾಪಿಸಲು ಚರ್ಚೆ ಮಾಡುತ್ತಿದ್ದೇವೆ. ನೀವು ಮತ್ತೆ ನಿಮ್ಮ ಊರುಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ನಿರ್ಧರಿಸಿದರೆ ನಿಮಗೆ ನೆರವು ನೀಡುತ್ತೇವೆ" ಎಂದರು.

"ದೇವರು ನಮಗೆ ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಿಮಗೆ ಅವಕಾಶ ಸಿಕ್ಕಾಗ ನಿಮ್ಮ ಊರು, ಸಮಾಜ, ಮನೆ, ಕುಟುಂಬವನ್ನು ಮರೆಯಬೇಡಿ. ನನಗೆ ಉನ್ನತ ಸ್ಥಾನಮಾನ ಸಿಗಬೇಕು ಎಂದು ನಿಮ್ಮಲ್ಲಿ ಅನೇಕರು ನಿರೀಕ್ಷೆ ಮಾಡಿದ್ದೀರಿ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ನಮಗೆ ಸಿಕ್ಕಿರುವ ಅಧಿಕಾರದಲ್ಲಿ ತೃಪ್ತಿಪಟ್ಟು ಕೆಲಸ ಮಾಡಬೇಕಿದೆ" ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದ ಸ್ವಾಮೀಜಿ ವರ್ಚುವಲ್ ಮೂಲಕ ಭಾಗವಹಿಸಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ನ ಘೋಷಿತ ಎಲ್ಲಾ ಯೋಜನೆಗಳು ಜಾರಿಗೆ ಬರಲಿದೆ: ಡಿಸಿಎಂ ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.