ETV Bharat / state

ಹಾಸಿಗೆ ಹೊಲಿಯುವ ಕಾರ್ಮಿಕರಿಗೆ ಪರಿಹಾರ ನೀಡಲು ಸಿಎಂಗೆ ಡಿಕೆಶಿ ಮನವಿ

author img

By

Published : Aug 3, 2020, 7:18 PM IST

ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಅಧಿಕ ಮಂದಿ ಹಾಸಿಗೆ ಹೊಲಿಯುವ ಕೆಲಸ ಮಾಡುತ್ತಿದ್ದು, ಇದರಿಂದ ಅವರ ಜೀವನ ನಿರ್ವಹಣೆ ನಡೆಯುತ್ತಿದೆ. ಲಾಕ್ ಡೌನ್ ಪರಿಸ್ಥಿತಿ ಹಾಗೂ ಜಾಗತಿಕ ಕಂಪನಿಗಳ ಭರಾಟೆಯಿಂದಾಗಿ ಉದ್ಯೋಗವಿಲ್ಲದೆ ದಿನದ ಜೀವನ ನಿರ್ವಹಣೆಗೂ ಪರಿತಪಿಸುವಂತಾಗಿದೆ. ಈ ಹಿನ್ನೆಲೆ ಅವರಿಗೆ ಪರಿಹಾರ ನೀಡಿ ಎಂದು ಸಿಎಂಗೆ ಡಿಕೆಶಿ ಮನವಿ ಮಾಡಿದ್ದಾರೆ.

DKS appeals to CM  for provide fund to bed sewing workers
ಹಾಸಿಗೆ ಹೊಲಿಯುವ ಕಾರ್ಮಿಕರಿಗೆ ಪರಿಹಾರ ನೀಡಲು ಸಿಎಂಗೆ ಡಿಕೆಶಿ ಮನವಿ

ಬೆಂಗಳೂರು: ಹಾಸಿಗೆ ಹೊಲಿಯುವ ಕಾರ್ಮಿಕರಿಗೆ ಮಾಸಿಕ 10 ಸಾವಿರ ರೂ. ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ಮನವಿ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಪ್ರವರ್ಗ 1 ರಲ್ಲಿ ಬರುವ ಸಮುದಾಯದ ನಾಗರಿಕರ ಅಹವಾಲು ಸ್ವೀಕರಿಸಿದ ನಂತರ ಅವರು, ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಅಧಿಕ ಮಂದಿ ಹಾಸಿಗೆ ಹೊಲಿಯುವ ಕೆಲಸ ಮಾಡುತ್ತಿದ್ದು, ಇದರಿಂದ ಅವರ ಜೀವನ ನಿರ್ವಹಣೆ ನಡೆಯುತ್ತಿದೆ. ಅವರನ್ನು ಪ್ರವರ್ಗ-1 ರಲ್ಲಿ ಬರುವ ಪಿಂಜಾರ, ನದಾಫ್, ಮನ್ಸೂರಿ, ದೂದೆಖುಲಾ ಲಾದನ್‌ ಹೆಸರಿನಿಂದ ಗುರುತಿಸಲಾಗಿದೆ. ಸದರಿ ಸಮುದಾಯದವರು ಕೋವಿಡ್ ಸಂಕಷ್ಟ, ಲಾಕ್ ಡೌನ್ ಪರಿಸ್ಥಿತಿ ಹಾಗೂ ಜಾಗತಿಕ ಕಂಪನಿಗಳ ಭರಾಟೆಯಿಂದಾಗಿ ಉದ್ಯೋಗವಿಲ್ಲದೆ ದಿನದ ಜೀವನ ನಿರ್ವಹಣೆಗೂ ಪರಿತಪಿಸುವಂತಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮನವಿ ಪತ್ರ
ಮನವಿ ಪತ್ರ

ಈ ಸಮುದಾಯದವರಿಗೆ ಮಾಸಿಕ ತಲಾ 10 ಸಾವಿರ ರೂಪಾಯಿಯಂತೆ ಪರಿಹಾರ ನೀಡಬೇಕು ಎಂದು ಪತ್ರದ ಮೂಲಕ ತಮ್ಮನ್ನು ಆಗ್ರಹಿಸುತ್ತಿದ್ದೇನೆ. ಜತೆಗೆ ಈ ಸಮಾಜದಒಕ್ಕೂಟ ಆಲ್ ಇಂಡಿಯಾ (ರಿ) ಜಮೀಯತುಲ್ ಮನ್ಸೂರ್ ಕರ್ನಾಟಕ ಸಂಘಟನೆ ಪದಾಧಿಕಾರಿಗಳನ್ನು ಕರೆದು ತಾವೇ ಖುದ್ದಾಗಿ ಅವರ ಅಹವಾಲುಗಳನ್ನು ಆಲಿಸಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಹಾಸಿಗೆ ಹೊಲಿಯುವ ಕಾರ್ಮಿಕರಿಗೆ ಮಾಸಿಕ 10 ಸಾವಿರ ರೂ. ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ಮನವಿ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಪ್ರವರ್ಗ 1 ರಲ್ಲಿ ಬರುವ ಸಮುದಾಯದ ನಾಗರಿಕರ ಅಹವಾಲು ಸ್ವೀಕರಿಸಿದ ನಂತರ ಅವರು, ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಅಧಿಕ ಮಂದಿ ಹಾಸಿಗೆ ಹೊಲಿಯುವ ಕೆಲಸ ಮಾಡುತ್ತಿದ್ದು, ಇದರಿಂದ ಅವರ ಜೀವನ ನಿರ್ವಹಣೆ ನಡೆಯುತ್ತಿದೆ. ಅವರನ್ನು ಪ್ರವರ್ಗ-1 ರಲ್ಲಿ ಬರುವ ಪಿಂಜಾರ, ನದಾಫ್, ಮನ್ಸೂರಿ, ದೂದೆಖುಲಾ ಲಾದನ್‌ ಹೆಸರಿನಿಂದ ಗುರುತಿಸಲಾಗಿದೆ. ಸದರಿ ಸಮುದಾಯದವರು ಕೋವಿಡ್ ಸಂಕಷ್ಟ, ಲಾಕ್ ಡೌನ್ ಪರಿಸ್ಥಿತಿ ಹಾಗೂ ಜಾಗತಿಕ ಕಂಪನಿಗಳ ಭರಾಟೆಯಿಂದಾಗಿ ಉದ್ಯೋಗವಿಲ್ಲದೆ ದಿನದ ಜೀವನ ನಿರ್ವಹಣೆಗೂ ಪರಿತಪಿಸುವಂತಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮನವಿ ಪತ್ರ
ಮನವಿ ಪತ್ರ

ಈ ಸಮುದಾಯದವರಿಗೆ ಮಾಸಿಕ ತಲಾ 10 ಸಾವಿರ ರೂಪಾಯಿಯಂತೆ ಪರಿಹಾರ ನೀಡಬೇಕು ಎಂದು ಪತ್ರದ ಮೂಲಕ ತಮ್ಮನ್ನು ಆಗ್ರಹಿಸುತ್ತಿದ್ದೇನೆ. ಜತೆಗೆ ಈ ಸಮಾಜದಒಕ್ಕೂಟ ಆಲ್ ಇಂಡಿಯಾ (ರಿ) ಜಮೀಯತುಲ್ ಮನ್ಸೂರ್ ಕರ್ನಾಟಕ ಸಂಘಟನೆ ಪದಾಧಿಕಾರಿಗಳನ್ನು ಕರೆದು ತಾವೇ ಖುದ್ದಾಗಿ ಅವರ ಅಹವಾಲುಗಳನ್ನು ಆಲಿಸಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.