ETV Bharat / state

ಮಹಿಳಾ ಕಾಂಗ್ರೆಸ್ ನಿಯೋಗದಿಂದ ಡಿಕೆಶಿ ಭೇಟಿ, ಚರ್ಚೆ - DKS news

ನಿನ್ನೆಯ ಪ್ರತಿಭಟನೆ ಹಾಗೂ ಅದನ್ನು ಹತ್ತಿಕ್ಕಲು ಸರ್ಕಾರ ಪೊಲೀಸರನ್ನು ಬಳಸಿಕೊಂಡ ರೀತಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಹೋರಾಟಗಳ ರೂಪುರೇಷೆ ಹಾಗೂ ಮಹಿಳಾ ಕಾಂಗ್ರೆಸ್​ನ ಸಿದ್ಧತೆಯ ಕುರಿತು ಪುಷ್ಪ ಅಮರನಾಥ್ ಡಿಕೆಶಿಗೆ ವಿವರಣೆ ನೀಡಿದರು.

DKS
ಮಹಿಳಾ ಕಾಂಗ್ರೆಸ್ ನಿಯೋಗದಿಂದ ಡಿಕೆಶಿ ಭೇಟಿ, ಚರ್ಚೆ
author img

By

Published : May 4, 2020, 8:47 PM IST

ಬೆಂಗಳೂರು: ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದರು.

ಆನೇಕಲ್​ನಲ್ಲಿ ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಉಚಿತವಾಗಿ ವಿತರಿಸುವ ರಾಜ್ಯ ಸರ್ಕಾರದ ಮುದ್ರೆಯ ಸಕ್ಕರೆ ಇತರೆ ಪದಾರ್ಥಗಳ ಪೊಟ್ಟಣ ಬದಲಿಸಿ, ಬಿಜೆಪಿ ಪಕ್ಷದ ಚಿನ್ನೆ ಇರುವ ಕವರ್ ಹಾಕಿ ಹಂಚಲು ತಯಾರಿ ನಡೆಸಿದ್ದನ್ನು ಖಂಡಿಸಿ ನಿನ್ನೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವ ಯತ್ನ ಮಾಡಲಾಗಿತ್ತು. ಬಿಜೆಪಿ ನಾಯಕರು ನಡೆಸುತ್ತಿರುವ ಅಕ್ರಮಗಳ ವಿರುದ್ಧ ಈಗಾಗಲೇ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರ ನಾಯಕರು ಹೋರಾಟ ನಡೆಸುತ್ತಿದ್ದು, ಮಹಿಳಾ ಕಾಂಗ್ರೆಸ್ ಕೂಡ ಇದಕ್ಕೆ ನಿನ್ನೆ ಸಾಥ್ ನೀಡಿತ್ತು. ಸರ್ಕಾರ ಕಾಂಗ್ರೆಸ್​ನ ಈ ಹೋರಾಟಕ್ಕೆ ಯಾವುದೇ ಬೆಲೆ ಕೊಡದ ಹಿನ್ನೆಲೆ ಹೋರಾಟವನ್ನು ಇನ್ನಾವ ರೀತಿಯಲ್ಲಿ ಮುಂದುವರಿಸಬಹುದು ಎಂಬ ಕುರಿತು ಚರ್ಚಿಸಲು ಶಿವಕುಮಾರ್ ವಿವಿಧ ನಾಯಕರ ಜೊತೆ ಸಭೆ ನಡೆಸುತ್ತಿದ್ದು, ಇದರ ಭಾಗವಾಗಿಯೇ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ನಿಯೋಗ ಇಂದು ಭೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿತು.

ನಿನ್ನೆಯ ಪ್ರತಿಭಟನೆ ಹಾಗೂ ಅದನ್ನು ಹತ್ತಿಕ್ಕಲು ಸರ್ಕಾರ ಪೊಲೀಸರನ್ನು ಬಳಸಿಕೊಂಡ ರೀತಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಹೋರಾಟಗಳ ರೂಪುರೇಷೆ ಹಾಗೂ ಮಹಿಳಾ ಕಾಂಗ್ರೆಸ್​ನ ಸಿದ್ಧತೆಯ ಕುರಿತು ಪುಷ್ಪ ಅಮರನಾಥ್ ಇದೇ ಸಂದರ್ಭ ಡಿಕೆಶಿಗೆ ವಿವರಣೆ ನೀಡಿದರು.

ಕಾಂಗ್ರೆಸ್ ಪಕ್ಷದ ಮಹಿಳಾ ವಿಭಾಗವು ರಾಜ್ಯಾದ್ಯಂತ ಮುಂಬರುವ ದಿನಗಳಲ್ಲಿ ನಡೆಸುವ ಹೋರಾಟದ ಕುರಿತು ಡಿಕೆಶಿ ಮಾರ್ಗದರ್ಶನ ನೀಡಿದರು. ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪ್ರಮುಖ ಪ್ರತಿಪಕ್ಷವಾಗಿ ಕಾಂಗ್ರೆಸ್​ನ ಜವಾಬ್ದಾರಿ ಹೆಚ್ಚಾಗಿದೆ. ಇದನ್ನರಿತು ಎಲ್ಲಾ ವಿಭಾಗಗಳು ತಮಗೆ ಸಹಕಾರ ನೀಡಬೇಕೆಂದು ಶಿವಕುಮಾರ್ ಕೋರಿದರು.

ಪಕ್ಷದ ಯಾವುದೇ ವಿಧದ ಹೋರಾಟ ಸಂದರ್ಭ ತಾವು ಸಕ್ರಿಯವಾಗಿ ಪಾಲ್ಗೊಳ್ಳುತ್ತೇವೆ. ತಮ್ಮಿಂದ ಬರುವ ಯಾವುದೇ ಆದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ ಎಂಬ ಭರವಸೆಯನ್ನು ಪುಷ್ಪ ಅಮರನಾಥ್ ಇದೇ ಸಂದರ್ಭ ನೀಡಿದರು.

ಬೆಂಗಳೂರು: ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದರು.

ಆನೇಕಲ್​ನಲ್ಲಿ ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಉಚಿತವಾಗಿ ವಿತರಿಸುವ ರಾಜ್ಯ ಸರ್ಕಾರದ ಮುದ್ರೆಯ ಸಕ್ಕರೆ ಇತರೆ ಪದಾರ್ಥಗಳ ಪೊಟ್ಟಣ ಬದಲಿಸಿ, ಬಿಜೆಪಿ ಪಕ್ಷದ ಚಿನ್ನೆ ಇರುವ ಕವರ್ ಹಾಕಿ ಹಂಚಲು ತಯಾರಿ ನಡೆಸಿದ್ದನ್ನು ಖಂಡಿಸಿ ನಿನ್ನೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವ ಯತ್ನ ಮಾಡಲಾಗಿತ್ತು. ಬಿಜೆಪಿ ನಾಯಕರು ನಡೆಸುತ್ತಿರುವ ಅಕ್ರಮಗಳ ವಿರುದ್ಧ ಈಗಾಗಲೇ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರ ನಾಯಕರು ಹೋರಾಟ ನಡೆಸುತ್ತಿದ್ದು, ಮಹಿಳಾ ಕಾಂಗ್ರೆಸ್ ಕೂಡ ಇದಕ್ಕೆ ನಿನ್ನೆ ಸಾಥ್ ನೀಡಿತ್ತು. ಸರ್ಕಾರ ಕಾಂಗ್ರೆಸ್​ನ ಈ ಹೋರಾಟಕ್ಕೆ ಯಾವುದೇ ಬೆಲೆ ಕೊಡದ ಹಿನ್ನೆಲೆ ಹೋರಾಟವನ್ನು ಇನ್ನಾವ ರೀತಿಯಲ್ಲಿ ಮುಂದುವರಿಸಬಹುದು ಎಂಬ ಕುರಿತು ಚರ್ಚಿಸಲು ಶಿವಕುಮಾರ್ ವಿವಿಧ ನಾಯಕರ ಜೊತೆ ಸಭೆ ನಡೆಸುತ್ತಿದ್ದು, ಇದರ ಭಾಗವಾಗಿಯೇ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ನಿಯೋಗ ಇಂದು ಭೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿತು.

ನಿನ್ನೆಯ ಪ್ರತಿಭಟನೆ ಹಾಗೂ ಅದನ್ನು ಹತ್ತಿಕ್ಕಲು ಸರ್ಕಾರ ಪೊಲೀಸರನ್ನು ಬಳಸಿಕೊಂಡ ರೀತಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಹೋರಾಟಗಳ ರೂಪುರೇಷೆ ಹಾಗೂ ಮಹಿಳಾ ಕಾಂಗ್ರೆಸ್​ನ ಸಿದ್ಧತೆಯ ಕುರಿತು ಪುಷ್ಪ ಅಮರನಾಥ್ ಇದೇ ಸಂದರ್ಭ ಡಿಕೆಶಿಗೆ ವಿವರಣೆ ನೀಡಿದರು.

ಕಾಂಗ್ರೆಸ್ ಪಕ್ಷದ ಮಹಿಳಾ ವಿಭಾಗವು ರಾಜ್ಯಾದ್ಯಂತ ಮುಂಬರುವ ದಿನಗಳಲ್ಲಿ ನಡೆಸುವ ಹೋರಾಟದ ಕುರಿತು ಡಿಕೆಶಿ ಮಾರ್ಗದರ್ಶನ ನೀಡಿದರು. ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪ್ರಮುಖ ಪ್ರತಿಪಕ್ಷವಾಗಿ ಕಾಂಗ್ರೆಸ್​ನ ಜವಾಬ್ದಾರಿ ಹೆಚ್ಚಾಗಿದೆ. ಇದನ್ನರಿತು ಎಲ್ಲಾ ವಿಭಾಗಗಳು ತಮಗೆ ಸಹಕಾರ ನೀಡಬೇಕೆಂದು ಶಿವಕುಮಾರ್ ಕೋರಿದರು.

ಪಕ್ಷದ ಯಾವುದೇ ವಿಧದ ಹೋರಾಟ ಸಂದರ್ಭ ತಾವು ಸಕ್ರಿಯವಾಗಿ ಪಾಲ್ಗೊಳ್ಳುತ್ತೇವೆ. ತಮ್ಮಿಂದ ಬರುವ ಯಾವುದೇ ಆದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ ಎಂಬ ಭರವಸೆಯನ್ನು ಪುಷ್ಪ ಅಮರನಾಥ್ ಇದೇ ಸಂದರ್ಭ ನೀಡಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.