ETV Bharat / state

ರಾಜ್ಯ ಸರ್ಕಾರ ಜನಸ್ಪಂದನ ಬದಲು ಜಲಸ್ಪಂದನ ಮಾಡಲಿ: ಡಿಕೆಶಿ ವ್ಯಂಗ್ಯ - ಬಿಜೆಪಿ ಜನಸ್ಪಂದನ ಕಾರ್ಯ

ರಾಜ್ಯ ಸರ್ಕಾರ ಜಲಸಂಚಾರಕ್ಕಾಗಿ ಬೋಟ್ ಫ್ಯಾಕ್ಟರಿ ತೆರೆಯುವುದು ಉತ್ತಮ ಹಾಗೇ ಜನಸ್ಪಂದನ ಕಾರ್ಯ ಬದಲು ಜಲಸ್ಪಂದನ ಕೆಲಸ ಮಾಡಲಿ ಎಂದು ಬಿಜೆಪಿ ವಿರುದ್ದ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

KN_BNG_06_D
ಬಿಜೆಪಿ ವಿರುದ್ದ ಡಿಕೆಶಿ ವಾಗ್ದಾಳಿ
author img

By

Published : Sep 8, 2022, 8:06 PM IST

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರಿನ ಐಟಿ ಕಾರಿಡಾರ್​ನಲ್ಲಿ ಜಲಸಂಚಾರಕ್ಕಾಗಿ ಬೋಟ್ ಫ್ಯಾಕ್ಟರಿ ಆರಂಭಿಸುವುದು ಉತ್ತಮ. ಬಿಜೆಪಿ ಜನಸ್ಪಂದನ ಕಾರ್ಯದ ಬದಲು ಜಲಸ್ಪಂದನ ಕೆಲಸ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ನಿರಂತರ ಮಳೆ ಬೀಳುತ್ತಿದೆ. ಈ ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಬೆಲೆ ತಿಳಿದಿಲ್ಲ. ಬೆಂಗಳೂರು ಎಷ್ಟು ಜನರಿಗೆ ಉದ್ಯೋಗ ನೀಡಿದೆ ಎಂಬುದು ಗೊತ್ತಿಲ್ಲ. ದೇಶದಲ್ಲಿ ರಾಜ್ಯದಿಂದಲೇ ಸುಮಾರು ಶೇ 30 ರಷ್ಟು ತೆರಿಗೆ ಕೇಂದ್ರಕ್ಕೆ ಹೋಗುತ್ತದೆ.

ನಾನು ಬೆಂಗಳೂರು ನಿವಾಸಿಯಾಗಿದ್ದು, ನಮಗೆ ಒಂದು ಅವಕಾಶ ನೀಡಿ. ನಾವು ನಿಮ್ಮ ಗೌರವ ಕಾಪಾಡಿ ಉತ್ತಮ ಬದುಕು ನೀಡುವಂತಹ ಆಡಳಿತ ನೀಡುತ್ತೇವೆ ಎಂದು ಜನರಿಗೆ ಮನವಿ ಮಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗುತ್ತಿರುವ ಬಗ್ಗೆ ಕೇಳಿದಾಗ, ನಮಗೆ ಅವಕಾಶ ಕೊಟ್ಟರೆ ನಾವು ಬೆಂಗಳೂರಿನ ಬ್ರ್ಯಾಂಡ್ ಅನ್ನು ಮರುಸ್ಥಾಪಿಸುತ್ತೇವೆ ಎಂದು ಉತ್ತರಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ನಿಂದ ಬ್ರ್ಯಾಂಡ್​ ಬೆಂಗಳೂರು ನಾಶ: ಸಂಸದ ತೇಜಸ್ವಿ ಸೂರ್ಯ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರಿನ ಐಟಿ ಕಾರಿಡಾರ್​ನಲ್ಲಿ ಜಲಸಂಚಾರಕ್ಕಾಗಿ ಬೋಟ್ ಫ್ಯಾಕ್ಟರಿ ಆರಂಭಿಸುವುದು ಉತ್ತಮ. ಬಿಜೆಪಿ ಜನಸ್ಪಂದನ ಕಾರ್ಯದ ಬದಲು ಜಲಸ್ಪಂದನ ಕೆಲಸ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ನಿರಂತರ ಮಳೆ ಬೀಳುತ್ತಿದೆ. ಈ ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಬೆಲೆ ತಿಳಿದಿಲ್ಲ. ಬೆಂಗಳೂರು ಎಷ್ಟು ಜನರಿಗೆ ಉದ್ಯೋಗ ನೀಡಿದೆ ಎಂಬುದು ಗೊತ್ತಿಲ್ಲ. ದೇಶದಲ್ಲಿ ರಾಜ್ಯದಿಂದಲೇ ಸುಮಾರು ಶೇ 30 ರಷ್ಟು ತೆರಿಗೆ ಕೇಂದ್ರಕ್ಕೆ ಹೋಗುತ್ತದೆ.

ನಾನು ಬೆಂಗಳೂರು ನಿವಾಸಿಯಾಗಿದ್ದು, ನಮಗೆ ಒಂದು ಅವಕಾಶ ನೀಡಿ. ನಾವು ನಿಮ್ಮ ಗೌರವ ಕಾಪಾಡಿ ಉತ್ತಮ ಬದುಕು ನೀಡುವಂತಹ ಆಡಳಿತ ನೀಡುತ್ತೇವೆ ಎಂದು ಜನರಿಗೆ ಮನವಿ ಮಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗುತ್ತಿರುವ ಬಗ್ಗೆ ಕೇಳಿದಾಗ, ನಮಗೆ ಅವಕಾಶ ಕೊಟ್ಟರೆ ನಾವು ಬೆಂಗಳೂರಿನ ಬ್ರ್ಯಾಂಡ್ ಅನ್ನು ಮರುಸ್ಥಾಪಿಸುತ್ತೇವೆ ಎಂದು ಉತ್ತರಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ನಿಂದ ಬ್ರ್ಯಾಂಡ್​ ಬೆಂಗಳೂರು ನಾಶ: ಸಂಸದ ತೇಜಸ್ವಿ ಸೂರ್ಯ ಆಕ್ರೋಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.