ETV Bharat / state

ಮೇಕೆದಾಟು ಹೋರಾಟದ ಹೆಸರಿನಲ್ಲಿ ಅಮಾಯಕರ ಪ್ರಾಣ ದಾಟಿಸಬೇಡಿ: ಕಾಂಗ್ರೆಸ್​​ಗೆ ಬಿಜೆಪಿ ಟಾಂಗ್ - mekedaatu padayatra by congress leaders

ಮೇಕೆದಾಟು ಪಾದಯಾತ್ರೆಯ ಬಗ್ಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ಅಗತ್ಯವಿತ್ತೇ ಎಂದು ಕೆಪಿಸಿಸಿಯನ್ನು ಪ್ರಶ್ನಿಸಿದೆ. ಸೂಪರ್ ಸ್ಪ್ರೆಡ್ಡರ್ ಕಾಂಗ್ರೆಸ್ ಎನ್ನುವ ಹ್ಯಾಷ್ ಟ್ಯಾಗ್ ಬಳಸಿ ಬಿಜೆಪಿ ಸರಣಿ ಟ್ವೀಟ್​ ಮಾಡಿದೆ.

Meekedaatu padayatra
ಕಾಂಗ್ರೆಸ್​​ಗೆ ಬಿಜೆಪಿ ಟಾಂಗ್
author img

By

Published : Jan 12, 2022, 5:11 PM IST

ಬೆಂಗಳೂರು: ನ್ಯಾಯಾಲಯ ಪಾದಯಾತ್ರೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕವೂ ಪ್ರತಿಭಟನೆ ನಮ್ಮ ಹಕ್ಕು ಎಂದು ಸಿದ್ದರಾಮಯ್ಯ ಹಠ ಮುಂದುವರಿಸುತ್ತಿದ್ದಾರೆ. ನ್ಯಾಯಾಲಯದ ಮೇಲೂ ಕಾಂಗ್ರೆಸ್ಸಿಗರಿಗೆ ಗೌರವ ಇಲ್ಲವೇ? ಕಾಂಗ್ರೆಸ್‌ ನಾಯಕರು ತಮ್ಮ ನೀಚ ರಾಜಕಾರಣಕ್ಕಾಗಿ ಸಂವಿಧಾನದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಸೂಪರ್ ಸ್ಪ್ರೆಡ್ಡರ್ ಕಾಂಗ್ರೆಸ್ ಎನ್ನುವ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್‌ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ನಿಲ್ಲಿಸುವಂತೆ ಸೋಂಕಿತರಾದ ಮಾಜಿ ಸಚಿವರಾದ ಎಚ್.‌ಎಂ. ರೇವಣ್ಣ, ಸಿ.ಎಂ. ಇಬ್ರಾಹಿಂ, ಎನ್.ಎಚ್. ಶಿವಶಂಕರ ರೆಡ್ಡಿ, ಕಾಂಗ್ರೆಸ್‌ ಹಿರಿಯ ನಾಯಕರೂ ಮನವಿ ಮಾಡುತ್ತಿದ್ದಾರೆ. ಆದರೆ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇದಕ್ಕೆ ಕಿಮ್ಮತ್ತು ನೀಡುತ್ತಿಲ್ಲ ಎಂದು ಟೀಕಿಸಿದೆ.

  • ಕಾಂಗ್ರೆಸ್‌ ಹಮ್ಮಿಕೊಂಡಿರುವ #ಕೋವಿಡ್‌ಯಾತ್ರೆ ಮತ್ತು ಕೋವಿಡ್‌ ಸೋಂಕಿತರು

    √ ಎಚ್.‌ಎಂ. ರೇವಣ್ಣ
    √ ಸಿ.ಎಂ. ಇಬ್ರಾಹಿಂ
    √ ಎನ್.ಎಚ್. ಶಿವಶಂಕರ ರೆಡ್ಡಿ

    ಕಾಂಗ್ರೆಸ್‌ ಹಿರಿಯ ನಾಯಕರೂ ಯಾತ್ರೆ ನಿಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ, ಆದರೂ @DKShivakumar ಮತ್ತು @siddaramaiah ಕಿಮ್ಮತ್ತು ನೀಡುತ್ತಿಲ್ಲ.#SuperSpreaderCONgress

    — BJP Karnataka (@BJP4Karnataka) January 12, 2022 " class="align-text-top noRightClick twitterSection" data=" ">

ಡಿ ಕೆ ಶಿವಕುಮಾರ್ ಅವರೇ, ನೀವು ಮೇಕೆದಾಟು ಹೋರಾಟ ನಡೆಸಿ. ಆದರೆ ಅದಕ್ಕೆ ಸಮಯ ಸಂದರ್ಭದ ಅರಿವು ಬೇಡವೇ? ಕೋವಿಡ್‌ ಯಾತ್ರೆಯಲ್ಲಿ ಭಾಗವಹಿಸಿದ ನಾಯಕರಿಗೆ ಸೋಂಕು ತಗಲುತ್ತಿದೆ. ಎಚ್ಚೆತ್ತುಕೊಳ್ಳಿ, ಮೇಕೆದಾಟು ಹೋರಾಟದ ಹೆಸರಿನಲ್ಲಿ ಅಮಾಯಕರ ಪ್ರಾಣದಾಟಿಸಬೇಡಿ ಎಂದು ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಪ್ರತಿಪಕ್ಷ, ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಮೇಕೆದಾಟು ಪಾದಯಾತ್ರೆಯ ಬಗ್ಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ಅಗತ್ಯವಿತ್ತೇ ಎಂದು ಕೆಪಿಸಿಸಿಯನ್ನು ಪ್ರಶ್ನಿಸಿದೆ. ಕಾಂಗ್ರೆಸ್ಸಿಗರೇ, ಜನರ ಭಾವನೆಯನ್ನು ಧಿಕ್ಕರಿಸದಿರಿ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರದಿರಿ, ನ್ಯಾಯಾಲಯಕ್ಕಾದರೂ ತಲೆಬಾಗುವಿರಾ? ಎಂದು ಪ್ರಶ್ನಿಸಿದೆ.

ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಪಾದಯಾತ್ರೆ ಬೇಡ ಎಂಬ ಸರ್ಕಾರದ ಮನವಿಗೆ ಕಾಂಗ್ರೆಸ್‌ ಒಪ್ಪುತ್ತಿಲ್ಲ. ನಿಮ್ಮ ವೈಯಕ್ತಿಕ ಹಠ ಸಾಧನೆಗಾಗಿ ಜನರನ್ನೇಕೆ ಸಂಕಷ್ಟಕ್ಕೆ ದೂಡುತ್ತಿದ್ದೀರಿ? ನ್ಯಾಯಾಲಯವೇ ಆಕ್ಷೇಪ ವ್ಯಕ್ತಪಡಿಸಿದೆ. ಈಗಲಾದರೂ ಸುಳ್ಳಿನಜಾತ್ರೆ ನಿಲ್ಲಿಸುತ್ತೀರೋ ಅಥವಾ SuperSpreaderCONgress ಎನಿಸಿಕೊಳ್ಳುತ್ತೀರಾ? ಎಂದು ಪಾದಯಾತ್ರೆ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ಬೆಂಗಳೂರು: ನ್ಯಾಯಾಲಯ ಪಾದಯಾತ್ರೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕವೂ ಪ್ರತಿಭಟನೆ ನಮ್ಮ ಹಕ್ಕು ಎಂದು ಸಿದ್ದರಾಮಯ್ಯ ಹಠ ಮುಂದುವರಿಸುತ್ತಿದ್ದಾರೆ. ನ್ಯಾಯಾಲಯದ ಮೇಲೂ ಕಾಂಗ್ರೆಸ್ಸಿಗರಿಗೆ ಗೌರವ ಇಲ್ಲವೇ? ಕಾಂಗ್ರೆಸ್‌ ನಾಯಕರು ತಮ್ಮ ನೀಚ ರಾಜಕಾರಣಕ್ಕಾಗಿ ಸಂವಿಧಾನದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಸೂಪರ್ ಸ್ಪ್ರೆಡ್ಡರ್ ಕಾಂಗ್ರೆಸ್ ಎನ್ನುವ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್‌ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ನಿಲ್ಲಿಸುವಂತೆ ಸೋಂಕಿತರಾದ ಮಾಜಿ ಸಚಿವರಾದ ಎಚ್.‌ಎಂ. ರೇವಣ್ಣ, ಸಿ.ಎಂ. ಇಬ್ರಾಹಿಂ, ಎನ್.ಎಚ್. ಶಿವಶಂಕರ ರೆಡ್ಡಿ, ಕಾಂಗ್ರೆಸ್‌ ಹಿರಿಯ ನಾಯಕರೂ ಮನವಿ ಮಾಡುತ್ತಿದ್ದಾರೆ. ಆದರೆ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇದಕ್ಕೆ ಕಿಮ್ಮತ್ತು ನೀಡುತ್ತಿಲ್ಲ ಎಂದು ಟೀಕಿಸಿದೆ.

  • ಕಾಂಗ್ರೆಸ್‌ ಹಮ್ಮಿಕೊಂಡಿರುವ #ಕೋವಿಡ್‌ಯಾತ್ರೆ ಮತ್ತು ಕೋವಿಡ್‌ ಸೋಂಕಿತರು

    √ ಎಚ್.‌ಎಂ. ರೇವಣ್ಣ
    √ ಸಿ.ಎಂ. ಇಬ್ರಾಹಿಂ
    √ ಎನ್.ಎಚ್. ಶಿವಶಂಕರ ರೆಡ್ಡಿ

    ಕಾಂಗ್ರೆಸ್‌ ಹಿರಿಯ ನಾಯಕರೂ ಯಾತ್ರೆ ನಿಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ, ಆದರೂ @DKShivakumar ಮತ್ತು @siddaramaiah ಕಿಮ್ಮತ್ತು ನೀಡುತ್ತಿಲ್ಲ.#SuperSpreaderCONgress

    — BJP Karnataka (@BJP4Karnataka) January 12, 2022 " class="align-text-top noRightClick twitterSection" data=" ">

ಡಿ ಕೆ ಶಿವಕುಮಾರ್ ಅವರೇ, ನೀವು ಮೇಕೆದಾಟು ಹೋರಾಟ ನಡೆಸಿ. ಆದರೆ ಅದಕ್ಕೆ ಸಮಯ ಸಂದರ್ಭದ ಅರಿವು ಬೇಡವೇ? ಕೋವಿಡ್‌ ಯಾತ್ರೆಯಲ್ಲಿ ಭಾಗವಹಿಸಿದ ನಾಯಕರಿಗೆ ಸೋಂಕು ತಗಲುತ್ತಿದೆ. ಎಚ್ಚೆತ್ತುಕೊಳ್ಳಿ, ಮೇಕೆದಾಟು ಹೋರಾಟದ ಹೆಸರಿನಲ್ಲಿ ಅಮಾಯಕರ ಪ್ರಾಣದಾಟಿಸಬೇಡಿ ಎಂದು ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಪ್ರತಿಪಕ್ಷ, ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಮೇಕೆದಾಟು ಪಾದಯಾತ್ರೆಯ ಬಗ್ಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ಅಗತ್ಯವಿತ್ತೇ ಎಂದು ಕೆಪಿಸಿಸಿಯನ್ನು ಪ್ರಶ್ನಿಸಿದೆ. ಕಾಂಗ್ರೆಸ್ಸಿಗರೇ, ಜನರ ಭಾವನೆಯನ್ನು ಧಿಕ್ಕರಿಸದಿರಿ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರದಿರಿ, ನ್ಯಾಯಾಲಯಕ್ಕಾದರೂ ತಲೆಬಾಗುವಿರಾ? ಎಂದು ಪ್ರಶ್ನಿಸಿದೆ.

ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಪಾದಯಾತ್ರೆ ಬೇಡ ಎಂಬ ಸರ್ಕಾರದ ಮನವಿಗೆ ಕಾಂಗ್ರೆಸ್‌ ಒಪ್ಪುತ್ತಿಲ್ಲ. ನಿಮ್ಮ ವೈಯಕ್ತಿಕ ಹಠ ಸಾಧನೆಗಾಗಿ ಜನರನ್ನೇಕೆ ಸಂಕಷ್ಟಕ್ಕೆ ದೂಡುತ್ತಿದ್ದೀರಿ? ನ್ಯಾಯಾಲಯವೇ ಆಕ್ಷೇಪ ವ್ಯಕ್ತಪಡಿಸಿದೆ. ಈಗಲಾದರೂ ಸುಳ್ಳಿನಜಾತ್ರೆ ನಿಲ್ಲಿಸುತ್ತೀರೋ ಅಥವಾ SuperSpreaderCONgress ಎನಿಸಿಕೊಳ್ಳುತ್ತೀರಾ? ಎಂದು ಪಾದಯಾತ್ರೆ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.