ಬೆಂಗಳೂರು: ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯ ಪ್ರತಿಷ್ಠಿತ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡದ ಕಾಮಗಾರಿ ಮುಂದಿನ ಸೆಪ್ಟೆಂಬರ್ ಒಳಗೆ ಪೂರ್ಣಗೊಳ್ಳಲಿದ್ದು, ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ನಾರಾಯಣ ಹೇಳಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.
"ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಾಯತ್ತ ಸಂಸ್ಥೆಯಾಗಿ ತಲೆ ಎತ್ತಲಿರುವ ಕಟ್ಟಡದ ಕಾಮಗಾರಿ ಶೇ. 90ರಷ್ಟು ಆಗಿದ್ದು, ಸೆಪ್ಟೆಂಬರ್ ಒಳಗೆ ಪೂರ್ಣಗೊಳ್ಳುವುದು. ಈಗಾಗಲೇ ಬೇರೆ ಕಡೆ ತರಗತಿಗಳು ಆರಂಭವಾಗಿವೆ. 166 ಕೋಟಿ ರೂ. ವೆಚ್ಚದಲ್ಲಿ 2 ವರ್ಷದಲ್ಲಿ ಕಟ್ಟಡ ಕಾಮಗಾರಿ ನಡೆಸುವ ಗುರಿ ಹೊಂದಲಾಗಿತ್ತು. ಅದರಂತೆ ಸೆಪ್ಟೆಂಬರ್ ವೇಳೆಗೆ ಕಾಮಗಾರಿ ಮುಗಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಕಟ್ಟಡವನ್ನು ದೇಶಕ್ಕೆ ಅರ್ಪಣೆ ಮಾಡಬೇಕು ಎಂಬುದು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ನಮ್ಮೆಲ್ಲರ ಇಚ್ಛೆಯಾಗಿದೆ," ಎಂದು ಸಚಿವರು ತಿಳಿಸಿದರು.
ಡಾ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಕಾಮಗಾರಿ ಸೆಪ್ಟೆಂಬರ್ಗೆ ಪೂರ್ಣ: ಡಿಸಿಎಂ ಅಶ್ವತ್ಥ್ನಾರಾಯಣ್ ಸ್ಪಷ್ಟನೆ
"ಐಐಎಂನಂತಹ ರಾಷ್ಟ್ರೀಯ ಸಂಸ್ಥೆ ಮಾದರಿಯಲ್ಲೇ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಸಂಸ್ಥೆಯನ್ನು ಅಭಿವೃದ್ಧಿ ಪಡಿಸಲಾಗುವುದು. ವಿಶ್ವಮಟ್ಟದಲ್ಲಿ ಸಂಸ್ಥೆ ಹೆಸರು ಮಾಡಬೇಕು ಎಂಬ ಗುರಿಯೊಂದಿಗೆ ರಾಜ್ಯ ಸರ್ಕಾರ ಇದಕ್ಕೆ ಆದ್ಯತೆ ನೀಡಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ನಾರಾಯಣ ತಿಳಿಸಿದರು.
ಬೆಂಗಳೂರು: ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯ ಪ್ರತಿಷ್ಠಿತ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡದ ಕಾಮಗಾರಿ ಮುಂದಿನ ಸೆಪ್ಟೆಂಬರ್ ಒಳಗೆ ಪೂರ್ಣಗೊಳ್ಳಲಿದ್ದು, ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ನಾರಾಯಣ ಹೇಳಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.
"ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಾಯತ್ತ ಸಂಸ್ಥೆಯಾಗಿ ತಲೆ ಎತ್ತಲಿರುವ ಕಟ್ಟಡದ ಕಾಮಗಾರಿ ಶೇ. 90ರಷ್ಟು ಆಗಿದ್ದು, ಸೆಪ್ಟೆಂಬರ್ ಒಳಗೆ ಪೂರ್ಣಗೊಳ್ಳುವುದು. ಈಗಾಗಲೇ ಬೇರೆ ಕಡೆ ತರಗತಿಗಳು ಆರಂಭವಾಗಿವೆ. 166 ಕೋಟಿ ರೂ. ವೆಚ್ಚದಲ್ಲಿ 2 ವರ್ಷದಲ್ಲಿ ಕಟ್ಟಡ ಕಾಮಗಾರಿ ನಡೆಸುವ ಗುರಿ ಹೊಂದಲಾಗಿತ್ತು. ಅದರಂತೆ ಸೆಪ್ಟೆಂಬರ್ ವೇಳೆಗೆ ಕಾಮಗಾರಿ ಮುಗಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಕಟ್ಟಡವನ್ನು ದೇಶಕ್ಕೆ ಅರ್ಪಣೆ ಮಾಡಬೇಕು ಎಂಬುದು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ನಮ್ಮೆಲ್ಲರ ಇಚ್ಛೆಯಾಗಿದೆ," ಎಂದು ಸಚಿವರು ತಿಳಿಸಿದರು.