ETV Bharat / state

ಸಿದ್ದರಾಮಯ್ಯರನ್ನು ಅಂಡಮಾನ್​ಗೆ ಕಳುಹಿಸಿ, ಅಲ್ಲಿನ ಜೈಲಿನ ಸ್ಥಿತಿ ನೋಡಿ ಬರಲಿ.. ಡಿವಿಎಸ್ ಟಾಂಗ್

ವೀರ ಸಾವರ್ಕರ್​ಗೆ ಭಾರತ ರತ್ನ ನೀಡುತ್ತಿರುವುದನ್ನು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರೋಧಿಸುತ್ತಿರುವ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಅವರು, ಸಾವರ್ಕರ್ ವಾಸವಿದ್ದ ಜೈಲಿನ ಕೋಣೆಯ ಸ್ಥಿತಿಗತಿ ನೋಡಿಕೊಂಡು ಸಿದ್ದರಾಮಯ್ಯ ಬರಬೇಕು. ಅವರನ್ನು ಹಡಗಿನಲ್ಲಿ ಅಂಡಮಾನ್ ನಿಕೋಬಾರ್​ಗೆ ಕಳುಹಿಸಿ ಎಂದು ಕಿಡಿಕಾರಿದರು.

author img

By

Published : Oct 20, 2019, 4:53 PM IST

ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಹಡಗಿನಲ್ಲಿ ಅಂಡಮಾನ್ ನಿಕೋಬಾರ್​ಗೆ ಕಳುಹಿಸಿ ಅಲ್ಲಿನ ಜೈಲಿನ ಸ್ಥಿತಿಗತಿ ನೋಡಿಕೊಂಡು ಬರಲಿ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಟಾಂಗ್ ನೀಡಿದ್ದಾರೆ.

ವೀರ ಸಾವರ್ಕರ್​ಗೆ ಭಾರತ ರತ್ನ ನೀಡುತ್ತಿರುವುದನ್ನು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರೋಧಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಸಾವರ್ಕರ್ ವಾಸವಿದ್ದ ಜೈಲಿನ ಕೋಣೆ ಸ್ಥಿತಿಗತಿ ನೋಡಿಕೊಂಡು ಸಿದ್ದರಾಮಯ್ಯ ಬರಬೇಕು. ಆವಾಗ ಸಿದ್ದರಾಮಯ್ಯರ ಕೆಟ್ಟ ಬುದ್ಧಿ ಸರಿ ಹೋಗುತ್ತದೆ. ಅಲ್ಲಿನ ವಾತಾವರಣ ನೋಡಿದರೆ ಸಿದ್ದರಾಮಯ್ಯಗೆ ವಾಸ್ತವದ ಅರಿವಾಗಬಹುದು ಎಂದು ಕಿಡಿಕಾರಿದರು.

ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ

ಸಿದ್ದರಾಮಯ್ಯ ಅವರು ಈ ರೀತಿಯ ಇತಿಹಾಸ ತಿರುಚುವ ಹೇಳಿಕೆ ನೀಡಿ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರನ್ನು ಸಹಿಸಿಕೊಂಡಿರುವುದೇ ದೊಡ್ಡ ವಿಚಾರ‌. ಚರಿತ್ರೆಯನ್ನು ಮತ್ತೆ ತಾನೇ ಬರೆಯುತ್ತೇನೆ ಎಂಬ ಹುಂಬುತನದ ಕೆಲಸ ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು. ಇಂದಿರಾ ಗಾಂಧಿ ಕಾಲದಲ್ಲಿ ಸಾವರ್ಕರ್ ಅಂಚೆ ಚೀಟಿ ಬಿಡುಗಡೆ ಮಾಡಿದ್ದಾರೆ. ಇಂದಿರಾ ಗಾಂಧಿ ಇವರ ನಾಯಕಿ ಅಲ್ಲವೇ?. ಸುಖಾಸುಮ್ಮನೆ ಅವರ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದ್ದರಾ? ಎಂದು ಪ್ರಶ್ನಿಸಿದರು.

ಇನ್ನು, ಇದೇ ವೇಳೆ ಎಸ್‌.ಟಿ.ಸೋಮಶೇಖರ್ ಬಿಜೆಪಿ ಸೇರ್ಪಡೆಗೆ ಯಶವಂತಪುರ ಬಿಜೆಪಿ ಘಟಕದ ಪರ-ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ. ಅವರಿಗೆ ಟಿಕೆಟ್ ನೀಡಬೇಕಾ ಅಥವಾ ಬೇಡ್ವಾ ಅನ್ನೋದು ವರಿಷ್ಠರು ತೀರ್ಮಾನಿಸುತ್ತಾರೆ. ವರಿಷ್ಠರು ತೀರ್ಮಾನ ಮಾಡಿದರೆ ನಾವು ಚಾಚೂ ತಪ್ಪದೇ ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಹಡಗಿನಲ್ಲಿ ಅಂಡಮಾನ್ ನಿಕೋಬಾರ್​ಗೆ ಕಳುಹಿಸಿ ಅಲ್ಲಿನ ಜೈಲಿನ ಸ್ಥಿತಿಗತಿ ನೋಡಿಕೊಂಡು ಬರಲಿ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಟಾಂಗ್ ನೀಡಿದ್ದಾರೆ.

ವೀರ ಸಾವರ್ಕರ್​ಗೆ ಭಾರತ ರತ್ನ ನೀಡುತ್ತಿರುವುದನ್ನು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರೋಧಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಸಾವರ್ಕರ್ ವಾಸವಿದ್ದ ಜೈಲಿನ ಕೋಣೆ ಸ್ಥಿತಿಗತಿ ನೋಡಿಕೊಂಡು ಸಿದ್ದರಾಮಯ್ಯ ಬರಬೇಕು. ಆವಾಗ ಸಿದ್ದರಾಮಯ್ಯರ ಕೆಟ್ಟ ಬುದ್ಧಿ ಸರಿ ಹೋಗುತ್ತದೆ. ಅಲ್ಲಿನ ವಾತಾವರಣ ನೋಡಿದರೆ ಸಿದ್ದರಾಮಯ್ಯಗೆ ವಾಸ್ತವದ ಅರಿವಾಗಬಹುದು ಎಂದು ಕಿಡಿಕಾರಿದರು.

ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ

ಸಿದ್ದರಾಮಯ್ಯ ಅವರು ಈ ರೀತಿಯ ಇತಿಹಾಸ ತಿರುಚುವ ಹೇಳಿಕೆ ನೀಡಿ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರನ್ನು ಸಹಿಸಿಕೊಂಡಿರುವುದೇ ದೊಡ್ಡ ವಿಚಾರ‌. ಚರಿತ್ರೆಯನ್ನು ಮತ್ತೆ ತಾನೇ ಬರೆಯುತ್ತೇನೆ ಎಂಬ ಹುಂಬುತನದ ಕೆಲಸ ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು. ಇಂದಿರಾ ಗಾಂಧಿ ಕಾಲದಲ್ಲಿ ಸಾವರ್ಕರ್ ಅಂಚೆ ಚೀಟಿ ಬಿಡುಗಡೆ ಮಾಡಿದ್ದಾರೆ. ಇಂದಿರಾ ಗಾಂಧಿ ಇವರ ನಾಯಕಿ ಅಲ್ಲವೇ?. ಸುಖಾಸುಮ್ಮನೆ ಅವರ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದ್ದರಾ? ಎಂದು ಪ್ರಶ್ನಿಸಿದರು.

ಇನ್ನು, ಇದೇ ವೇಳೆ ಎಸ್‌.ಟಿ.ಸೋಮಶೇಖರ್ ಬಿಜೆಪಿ ಸೇರ್ಪಡೆಗೆ ಯಶವಂತಪುರ ಬಿಜೆಪಿ ಘಟಕದ ಪರ-ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ. ಅವರಿಗೆ ಟಿಕೆಟ್ ನೀಡಬೇಕಾ ಅಥವಾ ಬೇಡ್ವಾ ಅನ್ನೋದು ವರಿಷ್ಠರು ತೀರ್ಮಾನಿಸುತ್ತಾರೆ. ವರಿಷ್ಠರು ತೀರ್ಮಾನ ಮಾಡಿದರೆ ನಾವು ಚಾಚೂ ತಪ್ಪದೇ ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

Intro:Body:KN_BNG_01_SADANADAGOWDA_BYTE_SCRIPT_7201951

ಸಿದ್ದರಾಮಯ್ಯರನ್ನು ಹಡಗಿನಲ್ಲಿ ಅಂಡಮಾನ್‌ ಗೆ ಕಳುಹಿಸಿಕೊಡಬೇಕು: ಕೇಂದ್ರ ಸಚಿವ ಡಿವಿಎಸ್

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಹಡಗಿನಲ್ಲಿ ಅಂಡಮಾನ್ ನಿಕೋಬಾರ್ ಗೆ ಕಳುಹಿಸಿ, ಅಲ್ಲಿನ ಜೈಲಿನ ಸ್ಥಿತಿಗತಿ ನೋಡಿಕೊಂಡು ಬರಲಿ ಎಂದು ಕೇಂದ್ರ ಸಚಿವ ಸದನಾಂದ ಗೌಡ ಟಾಂಗ್ ನೀಡಿದ್ದಾರೆ.

ವೀರ ಸಾವರ್ಕರ್ ಗೆ ಭಾರತ ರತ್ನ ನೀಡುತ್ತಿರುವುದಕ್ಕೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರೋಧಿಸುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾವರ್ಕರ್ ವಾಸವಿದ್ದ ಜೈಲಿನ ಕೋಣೆ ಸ್ಥಿತಿಗತಿ ನೋಡಿಕೊಂಡು ಸಿದ್ದರಾಮಯ್ಯ ಬರಬೇಕು. ಆವಾಗ ಸಿದ್ದರಾಮಯ್ಯ ಕೆಟ್ಟ ಬುದ್ದಿ ಸರಿ ಹೋಗುತ್ತದೆ. ಅಲ್ಲಿನ ವಾತಾವರಣ ನೋಡಿದರೆ ಸಿದ್ದರಾಮಯ್ಯಗೆ ವಾಸ್ತವದ ಅರ್ಥ ಆಗುತ್ತದೆ. ಸಿದ್ದರಾಮಯ್ಯಗೆ ಸದ್ಯ ಬೇರೆ ಏನು ಕೆಲಸ ಇಲ್ಲ. ರಾತ್ರಿಯೆಲ್ಲಾ ನಿದ್ದೆಗೆಟ್ಟು ಏನ್ಮಾಡಬೇಕು ಅಂತ ಯೋಚನೆಯಲ್ಲಿ ಇರುತ್ತಾರೆ ಎಂದು ಕಿಡಿ ಕಾರಿದರು.

ಇಂಥ ಸಮಯದಲ್ಲಿ ಈ ರೀತಿಯ ಇತಿಹಾಸ ತಿರುಚುವ ಹೇಳಿಕೆ ನೀಡಿ ಅಪಹಾಸ್ಯಕ್ಕೆ ಈಡಾಗ್ತಾರೆ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರನ್ನು ಸಹಿಸಿಕೊಂಡಿರುವುದೇ ದೊಡ್ಡ ವಿಚಾರ‌. ಚರಿತ್ರೆಯನ್ನು ಮತ್ತೆ ತಾನೇ ಬರೆಯುತ್ತೇನೆ ಎಂಬ ಹುಂಬುತನದ ಕೆಲಸ ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ಇಂದಿರಾ ಗಾಂಧಿ ಕಾಲದಲ್ಲಿ ಸಾವರ್ಕರ್ ಅಂಚೆ ಚೀಟಿಯನ್ನೂ ಬಿಡುಗಡೆ ಮಾಡಿದ್ದಾರೆ. ಇಂಧಿರಾ ಗಾಂಧಿ ಇವರ ನಾಯಕರಲ್ಲವೇ?. ಸುಮ್ಮನೆ ಅವರ ಅಂಚೆ ಚೀಟಿ ಮಾಡುತ್ತಿದ್ದರಾ? ಎಂದು ಪ್ರಶ್ನಿಸಿದರು.

ಎಸ್‌.ಟಿ.ಸೋಮಶೇಖರ್ ಬಿಜೆಪಿ ಸೇರ್ಪಡೆಗೆ ಯಶವಂತಪುರ ಬಿಜೆಪಿ ಘಟಕ ಪರ-ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪಕ್ಷದ ವರಿಷ್ಟರು ತೀರ್ಮಾನ ಮಾಡುತ್ತಾರೆ. ವರಿಷ್ಟರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ. ಅವರಿಗೆ ಟಿಕೆಟ್ ನೀಡಬೇಕಾ ಅಥವಾ ಬೇಡ್ವಾ ಅನ್ನೋದು ವರಿಷ್ಠರು ತೀರ್ಮಾನಿಸುತ್ತಾರೆ. ವರಿಷ್ಠರು ತೀರ್ಮಾನ ಮಾಡಿದರೆ ನಾವು ಚಾಚು ತಪ್ಪದೇ ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.