ETV Bharat / state

ಉಳಿದ ತರಗತಿಗಳ ಪುನಾರಂಭ ವಿಚಾರ: ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದ ಶಿಕ್ಷಣ ಇಲಾಖೆ‌

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಇಲಾಖೆಯ ಹಲವಾರು ವಿಷಯಗಳ ಮತ್ತು ಈಗಾಗಲೇ ಆರಂಭವಾಗಿರುವ ತರಗತಿಗಳ ಹಾಜರಾತಿ ಪ್ರಗತಿ ಪರಿಶೀಲಿಸಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​, ಉಳಿದ ತರಗತಿಗಳ ಆರಂಭ ಕುರಿತು ವ್ಯಾಪಕವಾದ ಒತ್ತಾಯ ಕೇಳಿಬರುತ್ತಿದೆ ಎಂದರು.

author img

By

Published : Feb 12, 2021, 7:58 PM IST

Education Dept calls meeting with Covid Technical Advisory Committee
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ

ಬೆಂಗಳೂರು : ಪೋಷಕರು ಮತ್ತು ವಿದ್ಯಾರ್ಥಿ ಸಮುದಾಯದ ಒತ್ತಾಯದ ಹಿನ್ನೆಲೆ, ಶಾಲಾರಂಭ ಕುರಿತಂತೆ ಫೆ. 16ರಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಇಲಾಖೆಯ ಹಲವಾರು ವಿಷಯಗಳ ಮತ್ತು ಈಗಾಗಲೇ ಆರಂಭವಾಗಿರುವ ತರಗತಿಗಳ ಹಾಜರಾತಿ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಉಳಿದ ತರಗತಿಗಳ ಆರಂಭ ಕುರಿತು ವ್ಯಾಪಕವಾದ ಒತ್ತಾಯ ಕೇಳಿಬರುತ್ತಿದೆ ಎಂದರು.

ಇತ್ತೀಚೆಗೆ ಭೇಟಿ ನೀಡಿದ 15 ಕ್ಕೂ ಹೆಚ್ಚು ಜಿಲ್ಲೆಗಳ ಹಲವಾರು ಶಾಲೆಗಳಲ್ಲಿ ಕೋವಿಡ್ ನಿಯಮಗಳ ಪಾಲನೆ ಮಾಡುತ್ತಿರುವುದನ್ನು ನಾನು ಖುದ್ದಾಗಿ ಪರಿಶೀಲಿಸಿದ್ದು, ಶಾಲೆಗಳು ತಡವಾಗಿ ಆರಂಭವಾಗಿರುವುದರಿಂದ ಬಹು ಆಸ್ಥೆಯಿಂದ ಬರುತ್ತಿದ್ದಾರೆ. ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಪಾಠ ಪ್ರವಚನ ಆಲಿಸುತ್ತಿರುವುದು ಕಂಡು ಬಂದಿದೆ ಎಂದರು.

ಶಾಲಾ ಸುರಕ್ಷತಾ ನಿಯಮಗಳ ಕುರಿತ ಸಭೆ: ಕಳೆದ ವಿಧಾನಪರಿಷತ್ ಅಧಿವೇಶನದಲ್ಲಿ ಪ್ರಸ್ತಾಪವಾದ ಖಾಸಗಿ ಶಾಲೆಗಳ ಸುರಕ್ಷತಾ ನಿಯಮಗಳ ಸರಳೀಕರಿಸಬೇಕೆಂಬ ಪ್ರಸ್ತಾವನೆಗಳ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪಿನ ವ್ಯಾಪ್ತಿಯಲ್ಲಿಯೇ ಮರು ಪರಿಶೀಲಿಸುವ ಕುರಿತು ಫೆ. 16ರಂದು ಅಗ್ನಿಶಾಮಕ ದಳ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗೃಹ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಕಡತ ವಿಲೇವಾರಿ ಯಜ್ಞ: ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಉಪನಿರ್ದೇಶಕರ ಕಚೇರಿಗಳಲ್ಲಿ ಕೆಲಸಗಳು ಸರಿಯಾಗಿ ಹಾಗೂ ಸಕಾಲದಲ್ಲಿ ಆಗುತ್ತಿಲ್ಲವೆಂದು ಪದೇ ಪದೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆ, ಕಡತ ವಿಲೇವಾರಿ ಯಜ್ಞಕ್ಕೆ ಚಾಲನೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಸುರೇಶ್ ಕುಮಾರ್, ತಂತ್ರಜ್ಞಾನಾಧಾರಿತವಾದ ಆಡಳಿತಕ್ಕೆ ಪ್ರಾಶಸ್ತ್ಯ ನೀಡಬೇಕೆಂದು ಹೇಳಿದರು. ಮಾರ್ಚ್ ಒಂದರಂದು ಧಾರವಾಡ ಅಪರ ಆಯುಕ್ತಾಲಯ ವಿಭಾಗ ವ್ಯಾಪ್ತಿಯಲ್ಲಿ ಕಡತ ವಿಲೇವಾರಿ ಆದಾಲತ್‍ನ್ನು ನನ್ನ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಅದೇ ಮಾದರಿಯಲ್ಲಿ ಉಳಿದ ಆಯುಕ್ತಾಲಯಗಳೂ ಕ್ರಮ ವಹಿಸಲು ಮುಂದಾಗಬೇಕೆಂದೂ ಸಚಿವರು ಸೂಚಿಸಿದರು.

ಪ್ರಸ್ತುತ ವರ್ಷದ ತರಗತಿ ಆರಂಭವಾಗಿರುವ ಹಿನ್ನೆಲೆ, 9 ರಿಂದ 12ನೇ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು 6 ರಿಂದ 9 ರವರೆಗಿನ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ವಿವರವನ್ನು ಪರಿಶೀಲಿಸಿ, ಶಾಲೆಗಳು ಕೋವಿಡ್ ನಿಯಮಗಳ ಪಾಲಿಸುವ ಕುರಿತು ವಿವರ ಪಡೆದುಕೊಂಡರು.

ಓದಿ : ದ್ವಿತೀಯ ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ: ಮೇ 24 ರಿಂದ ಎಕ್ಸಾಮ್

ಈಗಾಗಲೇ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಭೌತಿಕ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆ, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪರೀಕ್ಷಾಭಿಮುಖವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದು, ಅಧಿಕೃತ ಪರೀಕ್ಷಾ ವೇಳಾಪಟ್ಟಿಯತ್ತ ಮುಖ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಹಾಗೆಯೇ ಪರೀಕ್ಷೆಗಳ ದಿನಾಂಕ, ಮೌಲ್ಯಮಾಪನ, ಫಲಿತಾಂಶ ಪ್ರಕಟಣೆ ಸೇರಿದಂತೆ ಮುಂದಿನ ಶೈಕ್ಷಣಿಕ ವರ್ಷದ ಆರಂಭ ಕುರಿತಂತೆ ಸುದೀರ್ಘವಾಗಿ ಚರ್ಚೆ ನಡೆಸಿದ ಸಚಿವರು, 10 ಮತ್ತು 12ನೇ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶಗಳನ್ನು ಜೂನ್ ಅಂತ್ಯದೊಳಗೆ ಮತ್ತು ಉಳಿದ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶ ಘೊಷಣೆಯನ್ನು ಜೂ. 10ರೊಳಗೆ ಪೂರ್ಣಗೊಳಿಸಿ ಈ ಎಲ್ಲ ಪ್ರಕ್ರಿಯೆ ಮುಗಿದ ತಕ್ಷಣವೇ ಮಂದಿನ ಶೈಕ್ಷಣಿಕ ವರ್ಷದ ತರಗತಿಗಳನ್ನು ಏಕ ಕಾಲಕ್ಕೆ ಆರಂಭಗೊಳಿಸಲಾಗುವುದು ಎಂದರು.

ಶಿಕ್ಷಕರ ವರ್ಗಾವಣೆ ಕುರಿತ ಕೆಎಟಿ ತಡೆಯಾಜ್ಞೆ ತೆರವು, ಪಿಯು ಉಪನ್ಯಾಸಕರ ವರ್ಗಾವಣೆ ನಿಯಮ ರೂಪಿಸುತ್ತಿರುವುದರ ಪ್ರಗತಿ, ದಾಖಲಾತಿ ಪ್ರಕ್ರಿಯೆ, ಹೊಸ ಶಾಲೆ, ತರಗತಿಗಳಿಗೆ ಅನುಮತಿ, ವಿವಿಧ ಸಂಗತಿಗಳ ಪ್ರಕ್ರಿಯೆಗಳಲ್ಲಿನ ನಿಯಮ ಸರಳೀಕರಣ, ಪರಿಶೀಲನಾ ಹಂತಗಳ ಕಡಿತ ಮಾಡುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ - ಸೂಚನೆಗಳನ್ನು ನೀಡಿದರು.

ಬೆಂಗಳೂರು : ಪೋಷಕರು ಮತ್ತು ವಿದ್ಯಾರ್ಥಿ ಸಮುದಾಯದ ಒತ್ತಾಯದ ಹಿನ್ನೆಲೆ, ಶಾಲಾರಂಭ ಕುರಿತಂತೆ ಫೆ. 16ರಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಇಲಾಖೆಯ ಹಲವಾರು ವಿಷಯಗಳ ಮತ್ತು ಈಗಾಗಲೇ ಆರಂಭವಾಗಿರುವ ತರಗತಿಗಳ ಹಾಜರಾತಿ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಉಳಿದ ತರಗತಿಗಳ ಆರಂಭ ಕುರಿತು ವ್ಯಾಪಕವಾದ ಒತ್ತಾಯ ಕೇಳಿಬರುತ್ತಿದೆ ಎಂದರು.

ಇತ್ತೀಚೆಗೆ ಭೇಟಿ ನೀಡಿದ 15 ಕ್ಕೂ ಹೆಚ್ಚು ಜಿಲ್ಲೆಗಳ ಹಲವಾರು ಶಾಲೆಗಳಲ್ಲಿ ಕೋವಿಡ್ ನಿಯಮಗಳ ಪಾಲನೆ ಮಾಡುತ್ತಿರುವುದನ್ನು ನಾನು ಖುದ್ದಾಗಿ ಪರಿಶೀಲಿಸಿದ್ದು, ಶಾಲೆಗಳು ತಡವಾಗಿ ಆರಂಭವಾಗಿರುವುದರಿಂದ ಬಹು ಆಸ್ಥೆಯಿಂದ ಬರುತ್ತಿದ್ದಾರೆ. ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಪಾಠ ಪ್ರವಚನ ಆಲಿಸುತ್ತಿರುವುದು ಕಂಡು ಬಂದಿದೆ ಎಂದರು.

ಶಾಲಾ ಸುರಕ್ಷತಾ ನಿಯಮಗಳ ಕುರಿತ ಸಭೆ: ಕಳೆದ ವಿಧಾನಪರಿಷತ್ ಅಧಿವೇಶನದಲ್ಲಿ ಪ್ರಸ್ತಾಪವಾದ ಖಾಸಗಿ ಶಾಲೆಗಳ ಸುರಕ್ಷತಾ ನಿಯಮಗಳ ಸರಳೀಕರಿಸಬೇಕೆಂಬ ಪ್ರಸ್ತಾವನೆಗಳ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪಿನ ವ್ಯಾಪ್ತಿಯಲ್ಲಿಯೇ ಮರು ಪರಿಶೀಲಿಸುವ ಕುರಿತು ಫೆ. 16ರಂದು ಅಗ್ನಿಶಾಮಕ ದಳ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗೃಹ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಕಡತ ವಿಲೇವಾರಿ ಯಜ್ಞ: ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಉಪನಿರ್ದೇಶಕರ ಕಚೇರಿಗಳಲ್ಲಿ ಕೆಲಸಗಳು ಸರಿಯಾಗಿ ಹಾಗೂ ಸಕಾಲದಲ್ಲಿ ಆಗುತ್ತಿಲ್ಲವೆಂದು ಪದೇ ಪದೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆ, ಕಡತ ವಿಲೇವಾರಿ ಯಜ್ಞಕ್ಕೆ ಚಾಲನೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಸುರೇಶ್ ಕುಮಾರ್, ತಂತ್ರಜ್ಞಾನಾಧಾರಿತವಾದ ಆಡಳಿತಕ್ಕೆ ಪ್ರಾಶಸ್ತ್ಯ ನೀಡಬೇಕೆಂದು ಹೇಳಿದರು. ಮಾರ್ಚ್ ಒಂದರಂದು ಧಾರವಾಡ ಅಪರ ಆಯುಕ್ತಾಲಯ ವಿಭಾಗ ವ್ಯಾಪ್ತಿಯಲ್ಲಿ ಕಡತ ವಿಲೇವಾರಿ ಆದಾಲತ್‍ನ್ನು ನನ್ನ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಅದೇ ಮಾದರಿಯಲ್ಲಿ ಉಳಿದ ಆಯುಕ್ತಾಲಯಗಳೂ ಕ್ರಮ ವಹಿಸಲು ಮುಂದಾಗಬೇಕೆಂದೂ ಸಚಿವರು ಸೂಚಿಸಿದರು.

ಪ್ರಸ್ತುತ ವರ್ಷದ ತರಗತಿ ಆರಂಭವಾಗಿರುವ ಹಿನ್ನೆಲೆ, 9 ರಿಂದ 12ನೇ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು 6 ರಿಂದ 9 ರವರೆಗಿನ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ವಿವರವನ್ನು ಪರಿಶೀಲಿಸಿ, ಶಾಲೆಗಳು ಕೋವಿಡ್ ನಿಯಮಗಳ ಪಾಲಿಸುವ ಕುರಿತು ವಿವರ ಪಡೆದುಕೊಂಡರು.

ಓದಿ : ದ್ವಿತೀಯ ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ: ಮೇ 24 ರಿಂದ ಎಕ್ಸಾಮ್

ಈಗಾಗಲೇ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಭೌತಿಕ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆ, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪರೀಕ್ಷಾಭಿಮುಖವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದು, ಅಧಿಕೃತ ಪರೀಕ್ಷಾ ವೇಳಾಪಟ್ಟಿಯತ್ತ ಮುಖ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಹಾಗೆಯೇ ಪರೀಕ್ಷೆಗಳ ದಿನಾಂಕ, ಮೌಲ್ಯಮಾಪನ, ಫಲಿತಾಂಶ ಪ್ರಕಟಣೆ ಸೇರಿದಂತೆ ಮುಂದಿನ ಶೈಕ್ಷಣಿಕ ವರ್ಷದ ಆರಂಭ ಕುರಿತಂತೆ ಸುದೀರ್ಘವಾಗಿ ಚರ್ಚೆ ನಡೆಸಿದ ಸಚಿವರು, 10 ಮತ್ತು 12ನೇ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶಗಳನ್ನು ಜೂನ್ ಅಂತ್ಯದೊಳಗೆ ಮತ್ತು ಉಳಿದ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶ ಘೊಷಣೆಯನ್ನು ಜೂ. 10ರೊಳಗೆ ಪೂರ್ಣಗೊಳಿಸಿ ಈ ಎಲ್ಲ ಪ್ರಕ್ರಿಯೆ ಮುಗಿದ ತಕ್ಷಣವೇ ಮಂದಿನ ಶೈಕ್ಷಣಿಕ ವರ್ಷದ ತರಗತಿಗಳನ್ನು ಏಕ ಕಾಲಕ್ಕೆ ಆರಂಭಗೊಳಿಸಲಾಗುವುದು ಎಂದರು.

ಶಿಕ್ಷಕರ ವರ್ಗಾವಣೆ ಕುರಿತ ಕೆಎಟಿ ತಡೆಯಾಜ್ಞೆ ತೆರವು, ಪಿಯು ಉಪನ್ಯಾಸಕರ ವರ್ಗಾವಣೆ ನಿಯಮ ರೂಪಿಸುತ್ತಿರುವುದರ ಪ್ರಗತಿ, ದಾಖಲಾತಿ ಪ್ರಕ್ರಿಯೆ, ಹೊಸ ಶಾಲೆ, ತರಗತಿಗಳಿಗೆ ಅನುಮತಿ, ವಿವಿಧ ಸಂಗತಿಗಳ ಪ್ರಕ್ರಿಯೆಗಳಲ್ಲಿನ ನಿಯಮ ಸರಳೀಕರಣ, ಪರಿಶೀಲನಾ ಹಂತಗಳ ಕಡಿತ ಮಾಡುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ - ಸೂಚನೆಗಳನ್ನು ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.