ETV Bharat / state

ಚುನಾವಣಾ ಅಕ್ರಮ: 300 ಕೋಟಿ ರೂ.‌ಗಡಿ ತಲುಪುವತ್ತ ಒಟ್ಟು ನಗದು, ಮದ್ಯ, ವಸ್ತುಗಳ ಜಪ್ತಿ

author img

By

Published : Apr 28, 2023, 7:14 PM IST

ರಾಜ್ಯದಲ್ಲಿ ಚುನಾವಣಾ ಅಕ್ರಮದ ಅಬ್ಬರ ಜೋರಾಗಿದ್ದು, ಮತದಾರರನ್ನು ಸೆಳೆಯಲು ಭಾರಿ ಕಸರತ್ತು ನಡೆಸುತ್ತಿದ್ದಾರೆ.

Election Commission
ಚುನಾವಣಾ ಆಯೋಗ

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಅಕ್ರಮ ದಿನೇ ದಿನೆ ಹೆಚ್ಚಾಗುತ್ತಿದ್ದು, ಒಟ್ಟು ಜಪ್ತಿ ಮೌಲ್ಯ 300 ಕೋಟಿ ರೂ. ಗಡಿ ತಲುಪುವತ್ತ ಸಾಗಿದೆ. ಮತದಾರರನ್ನು ಸೆಳೆಯಲು ಮದ್ಯ, ನಗದು, ಉಡುಗೊರೆಗಳ ಮಹಾಪುರವನ್ನು ಹರಿಸುತ್ತಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗ ಈವರೆಗೆ ಒಟ್ಟು 292.06 ಕೋಟಿ ರೂ.‌ಮೌಲ್ಯದ ನಗದು, ಮದ್ಯ, ಡ್ರಗ್ಸ್, ಉಡುಗೊರೆಗಳನ್ನು ವಶಪಡಿಸಿದೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ಪಡೆ, ಐಟಿ, ಪೊಲೀಸ್ ಅಧಿಕಾರಿಗಳು ಈವೆರೆಗೆ ಒಟ್ಟು 102.90 ಕೋಟಿ ರೂ. ನಗದು ಜಪ್ತಿ ಮಾಡಿದ್ದಾರೆ. ಒಟ್ಟು 22.12 ಕೋಟಿ ಮೌಲ್ಯದ ಉಚಿತ ಉಡುಗೊರೆಗಳನ್ನು ವಶಪಡಿಸಿದ್ದಾರೆ.

ಈವೆರೆಗೆ ಒಟ್ಟು 68.69 ಕೋಟಿ ಮೌಲ್ಯದ 18,16,507 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. 17.88 ಕೋಟಿ ಮೌಲ್ಯದ 1,388 ಕೆ.ಜಿ. ಡ್ರಗ್ಸ್ ಜಪ್ತಿ ಮಾಡಲಾಗಿದೆ. ಹಾಗೂ ಒಟ್ಟು 76.01 ಕೋಟಿ ರೂ. ಬಂಗಾರ, 4.43 ಕೋಟಿ ರೂ.‌ಮೌಲ್ಯದ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ನಗದು, ಮದ್ಯ, ಮಾದಕ ದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆ ವಸ್ತುಗಳನ್ನು ವಶಪಡಿಸಿಕೊಂಡಿರುವ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 2,226 ಪ್ರಥಮ ತನಿಖಾ ವರದಿ (FIR) ದಾಖಲಿಸಿದ್ದಾರೆ.

ಇದನ್ನೂ ಓದಿ : ಅಥಣಿಯಲ್ಲಿ ಒಂದು ಕಡೆ ಚುನಾವಣೆ ಕಾವು, ಮತ್ತೊಂದು ಕಡೆ ಸಮಸ್ಯೆಗಳ ಸರಮಾಲೆ : ಸ್ಥಳೀಯರ ಅಭಿಪ್ರಾಯವೇನು?

ಚುನಾವಣೆ ಘೋಷಣೆಯಾದ ದಿನಾಂಕದಿಂದ ಇಲ್ಲಿಯವರೆಗೆ ಒಟ್ಟಾರೆ 69,805 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದ್ದು, 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಗಿ ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 5,329 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 9,569 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದ್ದು, ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ 14,885 ಜಾಮೀನು ರಹಿತ ವಾರಂಟ್​​​ಗಳನ್ನು ಜಾರಿಗೊಳಿಸಲಾಗಿದೆ.

ಅಬಕಾರಿ ಇಲಾಖೆ 2,853 ಗಂಭೀರ ಪ್ರಕರಣಗಳನ್ನು ಹಾಗೂ 2,549 ಮದ್ಯದ ಪರವಾನಗಿ ಉಲ್ಲಂಘಿಸಿದ ಪ್ರಕರಣಗಳು, 89 ಎನ್‌ಡಿಪಿಎಸ್‌ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1955ರ ಪರಿಚ್ಛೇದ 15 (ಎ) ಅನ್ವಯ ಒಟ್ಟು 28,127 ಪ್ರಕರಣಗಳನ್ನು ದಾಖಲಿಸಿದೆ. ಹಾಗೂ 1,962 ವಿವಿಧ ಮಾದರಿಯ ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

ವಿಚಕ್ಷಣ ದಳ ಬೆಂಗಳೂರು ನಗರದ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ 25,74,000 ಮೌಲ್ಯದ 50.461 ಡ್ರಗ್ಸ್ ನ್ನು ವಶಪಡಿಸಿಕೊಂಡಿದೆ. ಇನ್ನು ಸ್ಥಿರ ಕಣ್ಗಾವಲು ಪಡೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ರೂ. 93,50,000 ನಗದು ವಶಪಡಿಸಿಕೊಂಡಿದೆ. ಅದೇ ರೀತಿ ಸ್ಥಿರ ಕಣ್ಣಾವಲು ಪಡೆ ಬೆಳಗಾವಿ ಜಿಲ್ಲೆಯ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ರೂ. 50,00,000 ನಗದು ವಶಪಡಿಸಿಕೊಂಡಿದೆ.

ಇದನ್ನೂ ಓದಿ : ನಾಳೆ ರಾಜ್ಯ ರಾಜಧಾನಿಯಲ್ಲಿ ಪ್ರಧಾನಿ ಮೆಗಾ ರೋಡ್ ಶೋ: ಅಹಿತಕರ ಘಟನೆ ನಡೆಯದಂತೆ ಖಾಕಿ ಕಟ್ಟೆಚ್ಚರ

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಅಕ್ರಮ ದಿನೇ ದಿನೆ ಹೆಚ್ಚಾಗುತ್ತಿದ್ದು, ಒಟ್ಟು ಜಪ್ತಿ ಮೌಲ್ಯ 300 ಕೋಟಿ ರೂ. ಗಡಿ ತಲುಪುವತ್ತ ಸಾಗಿದೆ. ಮತದಾರರನ್ನು ಸೆಳೆಯಲು ಮದ್ಯ, ನಗದು, ಉಡುಗೊರೆಗಳ ಮಹಾಪುರವನ್ನು ಹರಿಸುತ್ತಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗ ಈವರೆಗೆ ಒಟ್ಟು 292.06 ಕೋಟಿ ರೂ.‌ಮೌಲ್ಯದ ನಗದು, ಮದ್ಯ, ಡ್ರಗ್ಸ್, ಉಡುಗೊರೆಗಳನ್ನು ವಶಪಡಿಸಿದೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ಪಡೆ, ಐಟಿ, ಪೊಲೀಸ್ ಅಧಿಕಾರಿಗಳು ಈವೆರೆಗೆ ಒಟ್ಟು 102.90 ಕೋಟಿ ರೂ. ನಗದು ಜಪ್ತಿ ಮಾಡಿದ್ದಾರೆ. ಒಟ್ಟು 22.12 ಕೋಟಿ ಮೌಲ್ಯದ ಉಚಿತ ಉಡುಗೊರೆಗಳನ್ನು ವಶಪಡಿಸಿದ್ದಾರೆ.

ಈವೆರೆಗೆ ಒಟ್ಟು 68.69 ಕೋಟಿ ಮೌಲ್ಯದ 18,16,507 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. 17.88 ಕೋಟಿ ಮೌಲ್ಯದ 1,388 ಕೆ.ಜಿ. ಡ್ರಗ್ಸ್ ಜಪ್ತಿ ಮಾಡಲಾಗಿದೆ. ಹಾಗೂ ಒಟ್ಟು 76.01 ಕೋಟಿ ರೂ. ಬಂಗಾರ, 4.43 ಕೋಟಿ ರೂ.‌ಮೌಲ್ಯದ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ನಗದು, ಮದ್ಯ, ಮಾದಕ ದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆ ವಸ್ತುಗಳನ್ನು ವಶಪಡಿಸಿಕೊಂಡಿರುವ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 2,226 ಪ್ರಥಮ ತನಿಖಾ ವರದಿ (FIR) ದಾಖಲಿಸಿದ್ದಾರೆ.

ಇದನ್ನೂ ಓದಿ : ಅಥಣಿಯಲ್ಲಿ ಒಂದು ಕಡೆ ಚುನಾವಣೆ ಕಾವು, ಮತ್ತೊಂದು ಕಡೆ ಸಮಸ್ಯೆಗಳ ಸರಮಾಲೆ : ಸ್ಥಳೀಯರ ಅಭಿಪ್ರಾಯವೇನು?

ಚುನಾವಣೆ ಘೋಷಣೆಯಾದ ದಿನಾಂಕದಿಂದ ಇಲ್ಲಿಯವರೆಗೆ ಒಟ್ಟಾರೆ 69,805 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದ್ದು, 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಗಿ ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 5,329 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 9,569 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದ್ದು, ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ 14,885 ಜಾಮೀನು ರಹಿತ ವಾರಂಟ್​​​ಗಳನ್ನು ಜಾರಿಗೊಳಿಸಲಾಗಿದೆ.

ಅಬಕಾರಿ ಇಲಾಖೆ 2,853 ಗಂಭೀರ ಪ್ರಕರಣಗಳನ್ನು ಹಾಗೂ 2,549 ಮದ್ಯದ ಪರವಾನಗಿ ಉಲ್ಲಂಘಿಸಿದ ಪ್ರಕರಣಗಳು, 89 ಎನ್‌ಡಿಪಿಎಸ್‌ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1955ರ ಪರಿಚ್ಛೇದ 15 (ಎ) ಅನ್ವಯ ಒಟ್ಟು 28,127 ಪ್ರಕರಣಗಳನ್ನು ದಾಖಲಿಸಿದೆ. ಹಾಗೂ 1,962 ವಿವಿಧ ಮಾದರಿಯ ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

ವಿಚಕ್ಷಣ ದಳ ಬೆಂಗಳೂರು ನಗರದ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ 25,74,000 ಮೌಲ್ಯದ 50.461 ಡ್ರಗ್ಸ್ ನ್ನು ವಶಪಡಿಸಿಕೊಂಡಿದೆ. ಇನ್ನು ಸ್ಥಿರ ಕಣ್ಗಾವಲು ಪಡೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ರೂ. 93,50,000 ನಗದು ವಶಪಡಿಸಿಕೊಂಡಿದೆ. ಅದೇ ರೀತಿ ಸ್ಥಿರ ಕಣ್ಣಾವಲು ಪಡೆ ಬೆಳಗಾವಿ ಜಿಲ್ಲೆಯ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ರೂ. 50,00,000 ನಗದು ವಶಪಡಿಸಿಕೊಂಡಿದೆ.

ಇದನ್ನೂ ಓದಿ : ನಾಳೆ ರಾಜ್ಯ ರಾಜಧಾನಿಯಲ್ಲಿ ಪ್ರಧಾನಿ ಮೆಗಾ ರೋಡ್ ಶೋ: ಅಹಿತಕರ ಘಟನೆ ನಡೆಯದಂತೆ ಖಾಕಿ ಕಟ್ಟೆಚ್ಚರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.