ETV Bharat / state

ಮಲ್ಲೇಶ್ವರಂನಲ್ಲಿ 10 ಲ್ಯಾಂಗ್ವೇಜ್ ಲ್ಯಾಬ್ ಸ್ಥಾಪನೆ: ಸಚಿವ ಅಶ್ವತ್ಥ ನಾರಾಯಣ

author img

By

Published : Feb 11, 2023, 2:29 PM IST

ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮಲ್ಲೇಶ್ವರಂನಲ್ಲಿ ಏರ್ಪಡಿಸಿದ್ದ ಉದ್ಯೋಗ ಮೇಳಕ್ಕೆ ಸಚಿವ ಅಶ್ವತ್ಥ ನಾರಾಯಣ ಚಾಲನೆ ನೀಡಿದರು.

Bengaluru
ಉದ್ಯೋಗ ಮೇಳ ಉದ್ಘಾಟಿಸಿದ ಸಚಿವ ಅಶ್ವತ್ಥ ನಾರಾಯಣ
ಉದ್ಯೋಗ ಮೇಳ ಉದ್ಘಾಟಿಸಿದ ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ಯುವ ಜನರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವ ನಿಟ್ಟಿನಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇನ್ನೂ 10 ಲ್ಯಾಂಗ್ವೇಜ್ ಲ್ಯಾಬ್​ಗಳನ್ನು ಸ್ಥಾಪಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಮತ್ತು ಸ್ಥಳೀಯ ಶಾಸಕ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಹೇಳಿದರು. ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಇಂದು (ಶನಿವಾರ) ಏರ್ಪಡಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

25 ಸಾವಿರ ಉದ್ಯೋಗ ನೇಮಕಾತಿಗೆ ಚಾಲನೆ: ಕರ್ನಾಟಕದಲ್ಲಿ ಉದ್ಯೋಗ ಅವಕಾಶಗಳಿಗೆ ಕೊರತೆ ಇಲ್ಲ. ಮುಖ್ಯಮಂತ್ರಿಗಳ ಮತ್ತು ಪ್ರಧಾನ ಮಂತ್ರಿಗಳ ಕೌಶಲ್ಯ ವಿಕಾಸ ಯೋಜನೆಯಡಿ 18 ರಿಂದ 35 ವರ್ಷಗಳ ಒಳಗಿನ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕೊಟ್ಟು, ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ ಎಂದು. ಸ್ಕಿಲ್ ಪೋರ್ಟಲ್ ವೇದಿಕೆಯಲ್ಲಿ ಈಗಾಗಲೇ 250 ಕಂಪನಿಗಳು ನೋಂದಣಿ ಆಗಿವೆ. ಹಾಗೆಯೇ ಸ್ಕಿಲ್ ಕನೆಕ್ಟ್ ಉಪಕ್ರಮದಡಿ 25 ಸಾವಿರ ಉದ್ಯೋಗ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಬೆಂಗಳೂರು ದೇಶದ ಜ್ಞಾನ, ಆರ್ಥಿಕ ರಾಜಧಾನಿ: ಬೆಂಗಳೂರು ಇಂದು ದೇಶದ ಜ್ಞಾನ, ಆರ್ಥಿಕ, ಸ್ಟಾರ್ಟಪ್ ಮತ್ತು ಅಗ್ರಿಟೆಕ್ ರಾಜಧಾನಿಯಾಗಿ ಹೊರಹೊಮ್ಮಿದೆ. ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿರುವ ಬೆಂಗಳೂರಿನಲ್ಲಿ ಯುವಜನರ ಉಜ್ವಲ ಭವಿಷ್ಯ ಅಡಗಿದೆ. ಹೀಗಾಗಿ ಈಗ ಲಕ್ಷಗಟ್ಟಲೆ ಜನರಿಗೆ ಕೌಶಲ್ಯಗಳನ್ನು ಕಲಿಸಲಾಗುತ್ತಿದೆ. ಇವೆಲ್ಲದರ ಪರಿಣಾಮವಾಗಿ ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಇಡೀ ದೇಶದಲ್ಲಿ ಕಡಿಮೆ ಪ್ರಮಾಣದಲ್ಲಿದೆ ಎಂದು ವಿವರಿಸಿದರು.

ಸರ್ವರಿಗೂ ಉದ್ಯೋಗ ನೀತಿ: ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಕೂಡ ಸರ್ಕಾರ ವಿಶೇಷ ತರಬೇತಿಗೆ ವ್ಯವಸ್ಥೆ ಮಾಡಿದೆ. 'ಸರ್ವರಿಗೂ ಉದ್ಯೋಗ' ಎನ್ನುವುದೇ ಸರ್ಕಾರ ಘೋಷ ವಾಕ್ಯ ಎಂದು ಪ್ರತಿಪಾದಿಸಿದರು.

Bengaluru
ಉದ್ಯೋಗ ಮೇಳ ಉದ್ಘಾಟಿಸಿದ ಸಚಿವ ಅಶ್ವತ್ಥ ನಾರಾಯಣ

125 ಕಂಪನಿಗಳು ಭಾಗಿ: ಇಂದಿನ ಉದ್ಯೋಗ ಮೇಳದಲ್ಲಿ 125 ಕಂಪನಿಗಳು ಪಾಲ್ಗೊಂಡಿದ್ದು, 28 ಸಾವಿರ ಉದ್ಯೋಗ ಅವಕಾಶಗಳು ಲಭ್ಯವಿವೆ. ಎಸ್​ಎಸ್​ಎಲ್​ಸಿಯಿಂದ ಹಿಡಿದು ಎಂಜಿನಿಯರಿಂಗ್ ಪದವೀಧರರವರೆಗೆ ಇಲ್ಲಿ ಅವಕಾಶ ಒದಗಿಸಲಾಗಿದೆ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ನಿಗಮದ ಕಾರ್ಯ ನಿರ್ವಾಹಕ ನಿರ್ದೇಶಕ ಕೃಷ್ಣಮೂರ್ತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರತಿಭಾ, ಉಪನಿರ್ದೇಶಕ ಶ್ರೀರಾಮ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

ಸ್ಯಾಮ್ಸಂಗ್‌ ಐಒಟಿ ಪ್ರಯೋಗಾಲಯ: ರಾಜ್ಯದ 35 ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಆಧುನಿಕ ತಂತ್ರಜ್ಞಾನವಾದ ಕೈಗಾರಿಕಾ ಐಒಟಿ (ಇಂಟರ್​ನೆಟ್‌ ಆಫ್‌ ಥಿಂಗ್ಸ್‌) ಪ್ರಯೋಗಾಲಯಗಳನ್ನು ಸ್ಥಾಪಿಸುವ ಗುರಿಯುಳ್ಳ ಮಹತ್ವದ ಒಡಂಬಡಿಕೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಸ್ಯಾಮ್ಸಂಗ್‌ ಸೆಮಿಕಂಡಕ್ಟರ್​ ಇಂಡಿಯಾ ರೀಸರ್ಚ್ ಇತ್ತೀಚೆಗೆ ಅಂಕಿತ ಹಾಕಿತ್ತು. ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌ ಅಶ್ವತ್ಥ ನಾರಾಯಣ ಅವರ ಸಮ್ಮುಖದಲ್ಲಿ ಈ ಮಹತ್ವಾಕಾಂಕ್ಷಿ ಒಪ್ಪಂದ ನೆರವೇರಿದೆ. ಇಲಾಖೆಯ ಆಯುಕ್ತ ಪಿ.ಪ್ರದೀಪ್‌ ಮತ್ತು ಸ್ಯಾಮ್ಸಂಗ್ ಸೆಮಿಕಂಡಕ್ಟರ್ ಇಂಡಿಯಾ ರಿಸರ್ಚ್​ನ ವ್ಯವಸ್ಥಾಪಕ ನಿರ್ದೇಶಕ ಬಾಲಾಜಿ ಸೌರಿರಾಜನ್‌ ಒಡಂಬಡಿಕೆಗೆ ಸಹಿ ಹಾಕಿದ್ದಾರೆ.

ಇದನ್ನು ಓದಿ: 35 ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಸ್ಯಾಮ್ಸಂಗ್‌ ಐಒಟಿ ಪ್ರಯೋಗಾಲಯ, ಒಡಂಬಡಿಕೆಗೆ ಸಹಿ

ಉದ್ಯೋಗ ಮೇಳ ಉದ್ಘಾಟಿಸಿದ ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ಯುವ ಜನರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವ ನಿಟ್ಟಿನಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇನ್ನೂ 10 ಲ್ಯಾಂಗ್ವೇಜ್ ಲ್ಯಾಬ್​ಗಳನ್ನು ಸ್ಥಾಪಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಮತ್ತು ಸ್ಥಳೀಯ ಶಾಸಕ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಹೇಳಿದರು. ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಇಂದು (ಶನಿವಾರ) ಏರ್ಪಡಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

25 ಸಾವಿರ ಉದ್ಯೋಗ ನೇಮಕಾತಿಗೆ ಚಾಲನೆ: ಕರ್ನಾಟಕದಲ್ಲಿ ಉದ್ಯೋಗ ಅವಕಾಶಗಳಿಗೆ ಕೊರತೆ ಇಲ್ಲ. ಮುಖ್ಯಮಂತ್ರಿಗಳ ಮತ್ತು ಪ್ರಧಾನ ಮಂತ್ರಿಗಳ ಕೌಶಲ್ಯ ವಿಕಾಸ ಯೋಜನೆಯಡಿ 18 ರಿಂದ 35 ವರ್ಷಗಳ ಒಳಗಿನ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕೊಟ್ಟು, ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ ಎಂದು. ಸ್ಕಿಲ್ ಪೋರ್ಟಲ್ ವೇದಿಕೆಯಲ್ಲಿ ಈಗಾಗಲೇ 250 ಕಂಪನಿಗಳು ನೋಂದಣಿ ಆಗಿವೆ. ಹಾಗೆಯೇ ಸ್ಕಿಲ್ ಕನೆಕ್ಟ್ ಉಪಕ್ರಮದಡಿ 25 ಸಾವಿರ ಉದ್ಯೋಗ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಬೆಂಗಳೂರು ದೇಶದ ಜ್ಞಾನ, ಆರ್ಥಿಕ ರಾಜಧಾನಿ: ಬೆಂಗಳೂರು ಇಂದು ದೇಶದ ಜ್ಞಾನ, ಆರ್ಥಿಕ, ಸ್ಟಾರ್ಟಪ್ ಮತ್ತು ಅಗ್ರಿಟೆಕ್ ರಾಜಧಾನಿಯಾಗಿ ಹೊರಹೊಮ್ಮಿದೆ. ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿರುವ ಬೆಂಗಳೂರಿನಲ್ಲಿ ಯುವಜನರ ಉಜ್ವಲ ಭವಿಷ್ಯ ಅಡಗಿದೆ. ಹೀಗಾಗಿ ಈಗ ಲಕ್ಷಗಟ್ಟಲೆ ಜನರಿಗೆ ಕೌಶಲ್ಯಗಳನ್ನು ಕಲಿಸಲಾಗುತ್ತಿದೆ. ಇವೆಲ್ಲದರ ಪರಿಣಾಮವಾಗಿ ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಇಡೀ ದೇಶದಲ್ಲಿ ಕಡಿಮೆ ಪ್ರಮಾಣದಲ್ಲಿದೆ ಎಂದು ವಿವರಿಸಿದರು.

ಸರ್ವರಿಗೂ ಉದ್ಯೋಗ ನೀತಿ: ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಕೂಡ ಸರ್ಕಾರ ವಿಶೇಷ ತರಬೇತಿಗೆ ವ್ಯವಸ್ಥೆ ಮಾಡಿದೆ. 'ಸರ್ವರಿಗೂ ಉದ್ಯೋಗ' ಎನ್ನುವುದೇ ಸರ್ಕಾರ ಘೋಷ ವಾಕ್ಯ ಎಂದು ಪ್ರತಿಪಾದಿಸಿದರು.

Bengaluru
ಉದ್ಯೋಗ ಮೇಳ ಉದ್ಘಾಟಿಸಿದ ಸಚಿವ ಅಶ್ವತ್ಥ ನಾರಾಯಣ

125 ಕಂಪನಿಗಳು ಭಾಗಿ: ಇಂದಿನ ಉದ್ಯೋಗ ಮೇಳದಲ್ಲಿ 125 ಕಂಪನಿಗಳು ಪಾಲ್ಗೊಂಡಿದ್ದು, 28 ಸಾವಿರ ಉದ್ಯೋಗ ಅವಕಾಶಗಳು ಲಭ್ಯವಿವೆ. ಎಸ್​ಎಸ್​ಎಲ್​ಸಿಯಿಂದ ಹಿಡಿದು ಎಂಜಿನಿಯರಿಂಗ್ ಪದವೀಧರರವರೆಗೆ ಇಲ್ಲಿ ಅವಕಾಶ ಒದಗಿಸಲಾಗಿದೆ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ನಿಗಮದ ಕಾರ್ಯ ನಿರ್ವಾಹಕ ನಿರ್ದೇಶಕ ಕೃಷ್ಣಮೂರ್ತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರತಿಭಾ, ಉಪನಿರ್ದೇಶಕ ಶ್ರೀರಾಮ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

ಸ್ಯಾಮ್ಸಂಗ್‌ ಐಒಟಿ ಪ್ರಯೋಗಾಲಯ: ರಾಜ್ಯದ 35 ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಆಧುನಿಕ ತಂತ್ರಜ್ಞಾನವಾದ ಕೈಗಾರಿಕಾ ಐಒಟಿ (ಇಂಟರ್​ನೆಟ್‌ ಆಫ್‌ ಥಿಂಗ್ಸ್‌) ಪ್ರಯೋಗಾಲಯಗಳನ್ನು ಸ್ಥಾಪಿಸುವ ಗುರಿಯುಳ್ಳ ಮಹತ್ವದ ಒಡಂಬಡಿಕೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಸ್ಯಾಮ್ಸಂಗ್‌ ಸೆಮಿಕಂಡಕ್ಟರ್​ ಇಂಡಿಯಾ ರೀಸರ್ಚ್ ಇತ್ತೀಚೆಗೆ ಅಂಕಿತ ಹಾಕಿತ್ತು. ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌ ಅಶ್ವತ್ಥ ನಾರಾಯಣ ಅವರ ಸಮ್ಮುಖದಲ್ಲಿ ಈ ಮಹತ್ವಾಕಾಂಕ್ಷಿ ಒಪ್ಪಂದ ನೆರವೇರಿದೆ. ಇಲಾಖೆಯ ಆಯುಕ್ತ ಪಿ.ಪ್ರದೀಪ್‌ ಮತ್ತು ಸ್ಯಾಮ್ಸಂಗ್ ಸೆಮಿಕಂಡಕ್ಟರ್ ಇಂಡಿಯಾ ರಿಸರ್ಚ್​ನ ವ್ಯವಸ್ಥಾಪಕ ನಿರ್ದೇಶಕ ಬಾಲಾಜಿ ಸೌರಿರಾಜನ್‌ ಒಡಂಬಡಿಕೆಗೆ ಸಹಿ ಹಾಕಿದ್ದಾರೆ.

ಇದನ್ನು ಓದಿ: 35 ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಸ್ಯಾಮ್ಸಂಗ್‌ ಐಒಟಿ ಪ್ರಯೋಗಾಲಯ, ಒಡಂಬಡಿಕೆಗೆ ಸಹಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.