ETV Bharat / state

ಸುಂದರ ನಗರ ನಿರ್ಮಾಣಕ್ಕೆ ಪೌರಕಾರ್ಮಿಕರಿಗೆ ಜನಪ್ರತಿನಿಧಿಗಳ ಸಹಕಾರ ಅಗತ್ಯ: ಮೇಯರ್​ ಗಂಗಾಂಬಿಕೆ

author img

By

Published : Sep 22, 2019, 2:56 AM IST

ಬಿಬಿಎಂಪಿ ವ್ಯಾಪ್ತಿಯ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಉದ್ದೇಶದಿಂದ ಶನಿವಾರ ಪ್ರತಿ ವಲಯದ ಒಂದು ವಾರ್ಡ್‌ನಲ್ಲಿ ಹಮ್ಮಿಕೊಳ್ಳುತ್ತಿರುವ ಸ್ವಚ್ಛತಾ ಅಭಿಯಾನದಲ್ಲಿ ಮೇಯರ್​ ಗಂಗಾಂಬಿಕೆ ಪಾಲ್ಗೊಂಡಿದ್ದರು.

every-saturday-swachhata-abiyana-program

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಉದ್ದೇಶದಿಂದ ಶನಿವಾರ ಪ್ರತಿ ವಲಯದ ಒಂದು ವಾರ್ಡ್‌ನಲ್ಲಿ ಹಮ್ಮಿಕೊಳ್ಳುತ್ತಿರುವ ಸ್ವಚ್ಛತಾ ಅಭಿಯಾನದಲ್ಲಿ ಮೇಯರ್​ ಗಂಗಾಂಬಿಕೆ ಪಾಲ್ಗೊಂಡಿದ್ದರು.

ಉಪ ಮೇಯರ್ ಭದ್ರೇಗೌಡ, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಹಾಗೂ ಪಾಲಿಕೆ ಆಯುಕ್ತ ಬಿ.ಹೆಚ್.ಅನಿಲ್​ ಕುಮಾರ್ ಸೇರಿದಂತೆ ಸ್ಥಳೀಯ ಪಾಲಿಕೆ ಸದಸ್ಯರು, ದಕ್ಷಿಣ ವಲಯದ ಜಂಟಿ ಆಯುಕ್ತರು, ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿಯಾನದಲ್ಲಿ ಭಾಗವಹಿಸಿದ್ದರು.

ಚಿಕ್ಕಪೇಟೆಯ ಧರ್ಮರಾಯ‌ಸ್ವಾಮಿ ದೇವಸ್ಥಾನ ವಾರ್ಡ್ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಅಭಿಯಾನದಲ್ಲಿ ಮಾತನಾಡಿದ ಮೇಯರ್, ಪೌರಕಾರ್ಮಿಕರ ಜೊತೆಗೆ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕೈ ಜೋಡಿಸಿ ವಾರ್ಡ್​​ನ ಅಭಿವೃದ್ಧಿಗೆ ಶ್ರಮಿಸಬೇಕು. ಎಲ್ಲಾ ವಾರ್ಡ್​ಗಳಲ್ಲೂ ಸಹಕಾರ ದೊರೆತರೆ ಬೆಂಗಳೂರು ಸುಂದರ ನಗರವಾಗುತ್ತದೆ. ಕೆ.ಆರ್.ಮಾರುಕಟ್ಟೆ, ಎಸ್.ಪಿ. ರಸ್ತೆ, ಅವೆನ್ಯು ರಸ್ತೆಯಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಿರುತ್ತದೆ. ಇದರಿಂದ ಇಲ್ಲಿ ತ್ಯಾಜ್ಯ ಉತ್ಪತ್ತಿ ಅಧಿಕವಾಗಿರುತ್ತದೆ. ಅದನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಎಂದರು.

ನಂತರ ಬಿ.ಹೆಚ್.ಅನಿಲ್ ​ಕುಮಾರ್ ಮಾತನಾಡಿ, ಈ ಪ್ರದೇಶದಲ್ಲಿ 500ಕ್ಕೂ ಅಧಿಕ ವಾಣಿಜ್ಯ ಮಳಿಗೆಗಳಿವೆ. ಅವುಗಳಿಂದ ಉತ್ಪತ್ತಿಯಾಗುವ ತ್ಯಾಜ್ಯವನ್ನು ರಾತ್ರಿ ವೇಳೆ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ವಸತಿ ಪ್ರದೇಶಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ಸಂಗ್ರಹಣೆಗೆ ಕಂಟೈನರ್ ಅಳವಡಿಸಲಾಗುವುದು. ಎಸ್.ಜೆ.ಪಿ ರಸ್ತೆಯಲ್ಲಿ ವಾಹನದ ಪಾರ್ಕಿಂಗ್ ಹಾವಳಿ ಹೆಚ್ಚಾಗಿದ್ದು, ಅದಕ್ಕೆ ಕಡಿವಾಣ ಹಾಕಲು ಸಂಚಾರಿ ಪೊಲೀಸರಿಗೆ ತಿಳಿಸುತ್ತೇವೆ ಎಂದರು.

ಇದೇ ವೇಳೆ ಕರ್ನಾಟಕ‌ ಹಾರ್ಡ್​ವೇರ್​​ ಮತ್ತು ಅಲೈಡ್ ಮರ್ಚೆಂಟ್ ಅಸೋಸಿಯೇಷನ್ ಅಧ್ಯಕ್ಷ ವಿಕ್ರಮ್ ಅಗರ್ ವಾಲ್, ಎಸ್.ಜೆ.ಪಿ. ರಸ್ತೆಯನ್ನು ದತ್ತು ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಉದ್ದೇಶದಿಂದ ಶನಿವಾರ ಪ್ರತಿ ವಲಯದ ಒಂದು ವಾರ್ಡ್‌ನಲ್ಲಿ ಹಮ್ಮಿಕೊಳ್ಳುತ್ತಿರುವ ಸ್ವಚ್ಛತಾ ಅಭಿಯಾನದಲ್ಲಿ ಮೇಯರ್​ ಗಂಗಾಂಬಿಕೆ ಪಾಲ್ಗೊಂಡಿದ್ದರು.

ಉಪ ಮೇಯರ್ ಭದ್ರೇಗೌಡ, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಹಾಗೂ ಪಾಲಿಕೆ ಆಯುಕ್ತ ಬಿ.ಹೆಚ್.ಅನಿಲ್​ ಕುಮಾರ್ ಸೇರಿದಂತೆ ಸ್ಥಳೀಯ ಪಾಲಿಕೆ ಸದಸ್ಯರು, ದಕ್ಷಿಣ ವಲಯದ ಜಂಟಿ ಆಯುಕ್ತರು, ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿಯಾನದಲ್ಲಿ ಭಾಗವಹಿಸಿದ್ದರು.

ಚಿಕ್ಕಪೇಟೆಯ ಧರ್ಮರಾಯ‌ಸ್ವಾಮಿ ದೇವಸ್ಥಾನ ವಾರ್ಡ್ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಅಭಿಯಾನದಲ್ಲಿ ಮಾತನಾಡಿದ ಮೇಯರ್, ಪೌರಕಾರ್ಮಿಕರ ಜೊತೆಗೆ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕೈ ಜೋಡಿಸಿ ವಾರ್ಡ್​​ನ ಅಭಿವೃದ್ಧಿಗೆ ಶ್ರಮಿಸಬೇಕು. ಎಲ್ಲಾ ವಾರ್ಡ್​ಗಳಲ್ಲೂ ಸಹಕಾರ ದೊರೆತರೆ ಬೆಂಗಳೂರು ಸುಂದರ ನಗರವಾಗುತ್ತದೆ. ಕೆ.ಆರ್.ಮಾರುಕಟ್ಟೆ, ಎಸ್.ಪಿ. ರಸ್ತೆ, ಅವೆನ್ಯು ರಸ್ತೆಯಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಿರುತ್ತದೆ. ಇದರಿಂದ ಇಲ್ಲಿ ತ್ಯಾಜ್ಯ ಉತ್ಪತ್ತಿ ಅಧಿಕವಾಗಿರುತ್ತದೆ. ಅದನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಎಂದರು.

ನಂತರ ಬಿ.ಹೆಚ್.ಅನಿಲ್ ​ಕುಮಾರ್ ಮಾತನಾಡಿ, ಈ ಪ್ರದೇಶದಲ್ಲಿ 500ಕ್ಕೂ ಅಧಿಕ ವಾಣಿಜ್ಯ ಮಳಿಗೆಗಳಿವೆ. ಅವುಗಳಿಂದ ಉತ್ಪತ್ತಿಯಾಗುವ ತ್ಯಾಜ್ಯವನ್ನು ರಾತ್ರಿ ವೇಳೆ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ವಸತಿ ಪ್ರದೇಶಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ಸಂಗ್ರಹಣೆಗೆ ಕಂಟೈನರ್ ಅಳವಡಿಸಲಾಗುವುದು. ಎಸ್.ಜೆ.ಪಿ ರಸ್ತೆಯಲ್ಲಿ ವಾಹನದ ಪಾರ್ಕಿಂಗ್ ಹಾವಳಿ ಹೆಚ್ಚಾಗಿದ್ದು, ಅದಕ್ಕೆ ಕಡಿವಾಣ ಹಾಕಲು ಸಂಚಾರಿ ಪೊಲೀಸರಿಗೆ ತಿಳಿಸುತ್ತೇವೆ ಎಂದರು.

ಇದೇ ವೇಳೆ ಕರ್ನಾಟಕ‌ ಹಾರ್ಡ್​ವೇರ್​​ ಮತ್ತು ಅಲೈಡ್ ಮರ್ಚೆಂಟ್ ಅಸೋಸಿಯೇಷನ್ ಅಧ್ಯಕ್ಷ ವಿಕ್ರಮ್ ಅಗರ್ ವಾಲ್, ಎಸ್.ಜೆ.ಪಿ. ರಸ್ತೆಯನ್ನು ದತ್ತು ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

Intro:ಸ್ವಚ್ಚತಾ ಅಭಿಯಾನದಲ್ಲಿ ಭಾಗಿತಾದ ಮೇಯರ್ ಗಂಗಾಬಿಕೆ..

ಬಿಬಿಎಂಪಿ ಕಡೆಯಿಂದ ಪ್ರತಿ‌ ಶನಿವಾರ ಹಮ್ಮಿಕೊಳ್ಳುತ್ತಿರುವ ಸ್ವಚ್ಛತಾ ಅಭಿಯಾದಲ್ಲಿ ಇಂದು ಮೇಯರ್ ಗಂಗಾಂಭಿಕೆ ಪಾಲ್ಗೊಂಡಿದ್ದರು. ನಗರದ ಕರ್ನಾಟಕ‌ ಹಾರ್ಡ್ವೇರ್ ಮತ್ತು ಅಲೈಡ್ ಮರ್ಚೆಂಟ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ನಗರದಲ್ಲಿ
ಸ್ವಚ್ಚತೆ ಕಾಪಾಡುವ ಹಿತದೃಷ್ಟಿಯಿಂದ ಬಿಬಿಎಂಪಿ ಪ್ರತಿ ಶನಿವಾರ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳುವ ಈ ಅಭಿಅಯಾನದಲ್ಲಿ‌ ಮೇಯರ್ ಗಂಗಾಂಭಿಕೆ.
,ಉಪಮೇಯರ್, ಚಿ್ಕಕ್ಕಪೇಟೆ ಶಾಸಕರಾದ ಉದಯ್ ಗರುಡಾಚಾರ್ ಹಾಗೂ ಪಾಲಿಕೆ ಆಯುಕ್ತರು ಸ್ಥಳೀಯ ಪಾಲಿಕೆ ಸದಸ್ಯರಾದ ಪ್ರತಿಭಾ ಧನರಾಜ್ , ದಕ್ಷಿಣ ವಲಯದ ಜಂಟಿ ಆಯುಕ್ತರು, ಪಾಲಿಕೆ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಚಚ್ಚತಾ ಅಭಿಯಾನದಲ್ಲಿಭಾಗಿಯಾಗಿದ್ರು.
ನಗರದ ಧರ್ಮರಾಯ‌ ಸ್ವಾಮಿ ದೇವಸ್ಥಾನ ವಾರ್ಡ್ ವ್ಯಾಪ್ತಿಯಎಸ್.ಜೆ.ಪಿರಸ್ತೆಯಲ್ಲಿಹಮ್ಮಿಕೊಂಡಿದ್ದ
ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿದ ಮೇಯರ್ ಸ್ವಚ್ಚತಾ ಅಭಿಯಾನದಲ್ಲಿ ಪೌರಕಾರ್ಮಿಕರ ಜೊತೆಗೆ ಅಧಿಕಾರಿಗಳು, ಜನಸಾಮಾನ್ಯರು ಹಾಗೂ ಜನಪ್ರತಿನಿಧಿಗಳು ಕೈಜೋಡಿಸಿದಾಗ ಸ್ವಚ್ಛತಾ ಆಂದೋಲನವು ಪರಿಣಾಮಕಾರಿಯಾಗಿ ಜಾರಿಯಾಗಲಿದೆ. ಇದರಿಂದ ನಗರವು ಸುಂದರ ನಗರವಾಗಿ ಬದಲಾಗುತ್ತದೆ ಎಂದು ಹೇಳಿದರು.ಇನ್ನೂ ಧರ್ಮರಾಯಸ್ವಾಮಿ‌ ವಾರ್ಡ್ ವ್ಯಾಪ್ತಿಯಲ್ಲಿ ಕೆ.ಆರ್.ಮಾರುಕಟ್ಟೆ, ಎಸ್.ಪಿ.ರಸ್ತೆ, ಅವೆನ್ಯು ರಸ್ತೆ ಸಾಕಷ್ಟು ವಹಿವಾಟು ನಡೆಯುತ್ತದೆ. ಜೊತೆಗೆ ಈ ಪ್ರದೇಶದಲ್ಲಿ ವಸತಿ ಪ್ರದೇಶ ಕೂಡಾ ಇದೆ. ಇದರಿಂದ ಪ್ರತಿನಿತ್ಯ ದೊಡ್ಡಪ್ರಮಾಣದಲ್ಲಿ ತ್ಯಾಜ್ಯ ಉತ್ಪತ್ತಿ ಆಗುತ್ತಿದ್ದು, ಅದನ್ನು ಸಮರ್ಪಕವಾಗಿವಾಗಿ ವಿಲೇವಾರಿ ಮಾಡಿದಾಗ ಮಾತ್ರ ಇಲ್ಲಿನ ಸಮಸ್ಯೆ ನಿವಾರಣೆ.ಆಗಲಿದೆ ಎಂದು ಹೇಳಿದ್ರು.Body:ನಂತರ ಮಾತನಾಡಿ, ಪಾಲಿಕೆ ಆಯುಕ್ತರು ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳ ಆಯ್ದ ವಾರ್ಡ್ ಗಳಲ್ಲಿ ಪ್ರತಿ ಶನಿವಾರ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಅದಕ್ಕೆ ಉತ್ತಮ‌ ಪ್ರತಿಕ್ರಿಯೆಯೂ ಬರುತ್ತಿದೆ. ಪಾಲಿಕೆ ಜೊತೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಕೈಜೋಡಿಸಿದರೆ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಬಹುದು.ಇದರಿಂದ ಬೆಂಗಳೂರು ಸುಂದರ
ನಗರವಾಗಿ ಬದಲಾಗುತ್ತದೆ. ಈ ಪ್ರದೇಶದಲ್ಲಿ ಸುಮಾರು 500 ವಾಣಿಜ್ಯ ಮಳಿಗೆಗಳಿದ್ದು, ಸಾಕಷ್ಟು ವಹಿವಾಟು ನಡೆಯುತ್ತದೆ. ಅವುಗಳಿಂದ ಉತ್ಪತ್ತಿಯಾಗುವ ಒಣ ತ್ಯಾಜ್ಯವನ್ನು ರಾತ್ರಿ ವೇಳೆ ಸಂಗ್ರಹಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.ಅಲ್ಲದೆ ಈ ಭಾಗದಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ವಿಂಗಡಣೆ‌ ಮಾಡಿ.
ಕೊಡುವಂತೆ ಕ್ರಮವಹಿಸಲು ಅಧಿಕಾರಿಗೆಸೂಚಿಸುತ್ತೇನೆ.
ವಸತಿ ಪ್ರದೇಶಗಳಿಂದ ಉತ್ಪತ್ತಿ ಆಗುವ ತ್ಯಾಜ್ಯ ಸಂಗ್ರಹಣೆಗೆ ಸ್ಥಳಾವಕಾಶವಿರುವ ಕಡೆ ಕಂಟೈನರ್ ಅಳವಡಿಸಲು ಕ್ರಮ ವಹಿಸಲಾಗುವುದು.ಅಲ್ಲದೆ
ಮಾರುಕಟ್ಟೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಮೂಲದಲ್ಲೇ ಸಂಸ್ಕರಣೆ ಮಾಡಲು ಕ್ರಮ
ಕೈಗೊಳ್ಳಲಾಗುವುದು .ಇದಲ್ಲದೆ ಎಸ್.ಜೆ.ಪಿ ರಸ್ತೆಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡದೇ ಇರುವಂತೆ ಕ್ರಮವಹಿಸಲು ಸಂಚಾರಿ ಪೊಲೀಸರಿಗೆ ಸೂಚನೆ ನೀಡಲಾಗುವುದು. ಒಳಚರಂಡಿಗಳಲ್ಲಿ ತುಂಬಿರುವ ತ್ಯಾಜ್ಯವನ್ನು ಕೂಡಲೆ ತೆಗೆಯಿವಂತೆ ಜಳಮಂಡಳಿ‌ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಹೇಳಿದರು.
ಅಲ್ಲದೆ ಇದೆ ವೇಳೆ ಎಸ್.ಜೆ.ಪಿ.ರಸ್ತೆಯನ್ನು ದತ್ತು ತೆಗೆದು ಕೊಳ್ಳುವುದಾಗಿ ಕರ್ನಾಟಕ‌ ಹಾರ್ಡ್ವೇರ್ ಮತ್ತು ಅಲೈಡ್ ಮರ್ಚೆಂಟ್ಅಸೋಸಿಯೇಷನ್ ಅಧ್ಯಕ್ಷರಾದ ವಿಕ್ರಮ್ ಅಗರ್ ವಾಲ್ ರವರು ಭರವಸೆ ನೀಡಿದರು.ಜೊತೆಗೆ ನಗರ ಸ್ವಚ್ಛವಾಗಿರುವಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ರು.

ಸತೀಶ ಎಂಬಿConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.